• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಜನ ಶಕ್ತಿ ವಿರೋಧಿಗಳು ಮಣ್ಣು ಮುಕ್ಕುತ್ತಾರೆ : ಸಿಎಂ ಬಸವರಾಜ ಬೊಮ್ಮಾಯಿ

Any Mind by Any Mind
April 20, 2023
in ರಾಜಕೀಯ
0
ಜನ ಶಕ್ತಿ ವಿರೋಧಿಗಳು ಮಣ್ಣು ಮುಕ್ಕುತ್ತಾರೆ : ಸಿಎಂ ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

ಭಾಲ್ಕಿಯಲ್ಲಿಂದು ಬಿಜೆಪಿ ಅಭ್ಯರ್ಥಿ ಪ್ರಕಾಶ ಖಂಡ್ರೆಯವರು ನಾಮಪತ್ರ ಸಲ್ಲಿಸಿದ ನಂತರ, ಸಿಎಂ ಬಸವರಾಜ ಬೊಮ್ಮಾಯಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ʻಜನ ಶಕ್ತಿ ಮತ್ತು ದರ್ಪದ ಶಕ್ತಿ ಮಾಧ್ಯೆ ಸ್ಪರ್ಧೆ ನಡೆಯುತ್ತಿದ್ದು,  ಜನ ಶಕ್ತಿ ವಿರೋಧಿಗಳು ಮಣ್ಣು ಮುಕ್ಕುತ್ತಾರೆʼ ಅಂತ ಸಿಎಂ ಬೊಮ್ಮಾಯಿ ಹೇಳಿದರು. ಬೀದರ್‌ನಲ್ಲಿ 6 ಶಾಸಕರು ಆಯ್ಕೆಯಾಗುತ್ತಾರೆ. ವಿಶೇಷವಾಗಿ ಭಾಲ್ಕಿಯಲ್ಲಿ ಬಿಜೆಪಿ ಆಯ್ಕೆಯಾಗಲಿದ್ದು,  ಯಾರು ಜನರ ವಿರುದ್ದ ಆಡಳಿತ ನಡೆಸುತ್ತಿದ್ದಾರೊ ಅವರು ಅವನತಿ ಹೊಂದುವ ಕಾಲ ಬಂದಿದೆ. ಜನರ ಜೋಶ್ ನಮಗೆ ವಿಜಯದ ಪತಾಕೆ ಹಾರಿಸಲು ಅನುಕೂಲ.  ರಾಜ್ಯದಲ್ಲಿ  ಕಮಲವನ್ನು ಅರಳಿಸಲು  ಬಸವಣ್ಣನ ನಾಡು, ಭಾಲ್ಕಿ ಪಟ್ಟಣ  ದೇವರ ನಾಡಿಗೆ ಬಂದಿರುವುದ್ದೇವೆ. ಪ್ರಕಾಶ ಖಂಡ್ರೆ ಅವರು ಯಾರಿಗೂ ಅನ್ಯಾಯವನ್ನ ಬಯಸುವುದಿಲ್ಲ. ಅವರು ಈ ಭಾಗದ ಪ್ರಥಮ ಬಿಜೆಪಿ ಶಾಸಕರು, ಅವರೊಂದಿಗೆ ಟಿಕೆಟ್ ಆಕಾಂಕ್ಷಿಗಳು ಎಲ್ಲರೂ ಒಗ್ಗಟ್ಟಾಗಿ ಅವರನ್ನು ಗೆಲ್ಲಿಸಿಕೊಂಡು ಬರಲು ತೀರ್ಮಾನಿಸಿದ್ದಾರೆ ಅಂತ ಬಸವರಾಜ ಬೊಮ್ಮಾಯಿ ಹೇಳಿದರು. ಬಳಿಕ ಮಾತನಾಡಿದ ಅವರು, ಪ್ರಕಾಶ ಖಂಡ್ರೆ ಸಜ್ಜನ ವ್ಯಕ್ತಿ.  ಇನ್ನೊಬ್ಬರು ಈಶ್ವರ ಖಂಡ್ರೆ ಇದ್ದಾರೆ. ಅವರು ಸ್ವಾರ್ಥ ರಾಜಕಾರಣ ಮಾಡಿದ್ದಾರೆ. ಎಲ್ಲರನ್ನು ‌ಎಲ್ಲಾ ಸಮಯದಲ್ಲಿ ಮೋಸ ಮಾಡಲು ಸಾಧ್ಯವಿಲ್ಲ. ಈ ಬಾರಿ ಸಜ್ಜನರು ಮತ್ತು ದುರ್ಜನರ ನಡುವೆ ಸಂಘರ್ಷ ನಡೆದಿದೆ. ಈ ಬಾರಿ ಸಜ್ಜನರ ಗೆಲುವಾಗಲಿದೆ ಎಂದರು. ಈ ಭಾಗದಲ್ಲಿ ರಸ್ತೆ, ನೀರಾವರಿಗೆ ಮೂಲ ಸೌಕರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದೇವೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ 1000 ಕೋಟಿ ರೂ ಮೀಸಲಿಟ್ಟು, ಕೇವಲ 300 ಕೋಟಿ ಖರ್ಚು ಮಾಡುತ್ತಾರೆ.

ADVERTISEMENT

  ಕಾಂಗ್ರೆಸ್‌ನವರು ಚುನಾವಣೆಗೂ ಮುನ್ನ ಭರವಸೆಗಳನ್ನು ನೀಡುತ್ತ ಗ್ಯಾರಂಟಿ ಕಾರ್ಡ್ ಕೊಡುತ್ತಿದ್ದಾರೆ. ವಿಜಿಟಿಂಗ್ ಕಾರ್ಡ್ ಕೊಡುತ್ತಿದ್ದಾರೆ. ಅದಕ್ಕೆ ಯಾವುದೇ ಬೆಲೆ ಇಲ್ಲ. ಇವರು ಕೊಡುತ್ತಿರುವುದು ಬೋಗಸ್ ಕಾರ್ಡ್, 200 ಯುನಿಟ್ ವಿದ್ಯುತ್ ಉಚಿವಾಗಿ ನೀಡುವುದಾಗಿ ಹೇಳುತ್ತಾರೆ. ಜನರು ಬಳಕೆ ಮಾಡುವುದೇ 70-80 ಯುನಿಟ್. ಇವರು 200 ಯುನಿಟ್ ಕೊಡುವುದಾಗಿ ಸುಳ್ಳು ಭರವಸೆ ನೀಡುತ್ತಿದ್ದಾರೆ ಅಂತ ಸಿಎಂ ಬೊಮ್ಮಾಯಿ ಕಾಂಗ್ರೆಸ್‌ ಪಕ್ಷವನ್ನ ಟೀಕಿಸಿದರು. ನರೇಂದ್ರ ಮೋದಿಯವರ 30 ರೂ. ಕೆಜಿ ಅಕ್ಕಿಗೆ ಸಿದ್ದರಾಮಯ್ಯ ಅವರ 3 ರೂ. ಸಿದ್ದರಾಮಯ್ಯ  ಚೀಲ ಮಾತ್ರ. ಕಾಂಗ್ರೆಸ್‌ ಮುಳುಗುವ ಹಡಗು, ಅದರಲ್ಲಿ ನಮ್ಮವರಿಬ್ಬರು ಹತ್ತುತ್ತಿದ್ದಾರೆ.‌ ಕಾಂಗ್ರೆಸ್ ನವರು ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುತ್ತಾರೆ.

ನಾವು ದಲಿತರ ಮೀಸಲಾತಿ ಹೆಚ್ಚಳ ಮಾಡಿದೆವು. ಕಾಂಗ್ರೆಸ್ ನವರು ಯಾಕೆ ಮಾಡಲಿಲ್ಲ. ಒಳ ಮೀಸಲಾಯಿಯನ್ನು ಮೂವತ್ತು ವರ್ಷದಿಂದ ಕೇಳುತ್ತ ಬಂದರೂ ಕಾಂಗ್ರೆಸ್ ಮಾಡಿರಲಿಲ್ಲ. ಈಗ ನಾವು ಒಳ ಮೀಸಲಾತಿ ನೀಡಿದರೆ ಅದಕ್ಕೆ ವಿರೋಧ ಮಾಡುತ್ತಿದ್ದಾರೆ. ದಲಿತರಿಗೆ ಒಳ ಮೀಸಲಾತಿಯ ಬಗ್ಗೆ ಕಾಂಗ್ರೆಸ್ ನಿಲುವು ಏನು ಎಂದು ಸ್ಪಷ್ಟಪಡಿಸಬೇಕು ಎಂದರು ನಾವು ಬಹಳ ವರ್ಷಗಳ ಈ ಜನಾಂಗದ ಬೇಡಿಕೆಯನ್ನು ಈಡೇರಿಸುವ ಮೂಲಕ ಯುವಕರಿಗೆ ಉದ್ಯೋಗ ಕೊಡಿಸುವ ಕೆಲಸ ಮಾಡಿದ್ದೇವೆ. ನಾವು ಬಸವ ಪಥದಲ್ಲಿ ಮುನ್ನಡೆಯುತ್ತಿದ್ದೇವೆ. ನಾವು ಎಲ್ಲಾ ವರ್ಗದವರಿಗಾಗಿ ಕಾರ್ಯಕ್ರಮ  ಮಾಡಿದ್ದೇವೆ. ಯಾವುದೋ ಒಂದು ವರ್ಗಕ್ಕೆ ಮಾಡಿಲ್ಲ.

ನಮ್ಮ ನಾಯಕ ಯಡಿಯೂರಪ್ಪ ಅವರು ರೂಪಿಸಿದ ಭಾಗ್ಯಲಕ್ಷ್ಮಿ ಯೋಜನೆಯ ಲಾಭವನ್ನು  ಎಲ್ಲಾ  ಸಮುದಾಯಗಳೂ ಪಡೆದುಕೊಂಡಿವೆ.  ದುಡಿಯುವ ವರ್ಗಕ್ಕೆ ಶಕ್ತಿ ತುಂಬಲು ಕಾಯಕ ಯೋಜನೆ ಜಾರಿಗೆ ತಂದಿದ್ದೇವೆ. ಮೂರು ಲಕ್ಷ ಉದ್ಯೋಗ ನೀಡುವ ಸ್ತ್ರೀಸಾಮರ್ಥ್ಯ ಯೋಜನೆ ಜಾರಿಗೆ ತಂದಿದ್ದೇವೆ.‌ ಯುವಕರಿಗೆ ಯುವ ಶಕ್ತಿ ಯೋಜನೆ ಜಾರಿಗೆ ತಂದಿದ್ದೇವೆ. ಬೆಹರಕರ್ ಏತನೀರಾವರಿ ಯೋಜನೆ 750 ಕೋಟಿ ಯೋಜನೆ ಮುಂದೆ ನಾವೇ ಅಧಿಕಾರಕ್ಕೆ ಬಂದು ಜಾರಿಗೊಳಿಸುತ್ತೇವೆ. ಔರಾದ್ ಏತ ನೀರಾವರಿ ಯೊಜನೆ 650 ಕೋಟ, ನಾರಂಜಾ ಸಕ್ಕರೆ ಕಾರ್ಖಾನೆಗೆ 25 ಕೋಟಿ, ಬೀದರ್ ಸಕ್ಕರೆ ಕಾರ್ಖಾನೆಗೆ 20 ಕೋಟಿ ರೂ. ನೀಡಿ ರೈತರಿಗೆ ಅನುಕೂಲ ಮಾಡಿಕೊಟ್ಟಿದ್ದೇವೆ. ಬಸವ ಕಲ್ಯಾಣದಲ್ಲಿ ಜಗತ್ತಿನ ಮೊದಲ ಸಂಸತ್ತು ಅನುಭವ ಮಂಟಪ ಸ್ಥಾಪನೆ ಮಾಡಿದ್ದೇವೆ ಅಂತ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಭಾಲ್ಕಿಯಲ್ಲಿ ದೊಡ್ಡ ದೊಡ್ಡ ಸಮಾಜದ ಮುಖಂಡರು ರಾಜ್ಯಾದ್ಯಂತ ತಿರುಗಾಡುತ್ತಾರೆ. ನಿಮಗೆ ಐದು ವರ್ಷ ಅಧಿಕಾರ ಇದ್ದಾಗ ಯಾಕೆ ಅನುಭವ ಮಂಟಪ ಸ್ಥಾಪನೆ ಮಾಡಲಿಲ್ಲ. ಟಿಪ್ಪು ಸುಲ್ತಾನ ನೆನಪಾಗುತ್ತಾನೆ. ಕನಕದಾಸರ ಕ್ಷೇತ್ರ ಅಭಿವೃದ್ದಿ ವಾಲ್ಮೀಕಿ ಜಯಂತಿಯನ್ನು ನಮ್ಮ ಯಡಿಯೂರಪ್ಪ ಅವರು ಜಾರಿಗೆ ತಂದರು. ಈ ಬಾರಿ ಭಾಲ್ಕಿಯಲ್ಲಿ ಬಿಜೆಪಿ ಆಯ್ಕೆಯಾಗಬೇಕು.  ಇಲ್ಲಿ ಎಲ್ಲಾ ಸಮುದಾಯದವರು ಒಂದಾಗಬೇಕು. ಲಿಂಗಾಯತ ಅಭಿವೃದ್ಧಿ , ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ, ಗಂಗಾ ಕಲ್ಯಾಣ ಯೋಜನೆ ಜಾರಿಗೊಳಿಸಿದ್ದೇವೆ. ಈ ಬಾರಿ ಬಿಜೆಪಿ ಗೆಲ್ಲಿಸಬೇಕು ಅಂತ ಸಿಎಂ ಬೊಮ್ಮಾಯಿ ಜನರಲ್ಲಿ ಮನವಿ ಮಾಡಿಕೊಂಡರು.

Tags: #karnatakaassemblyelection #election2023 #cm #basavarajabommai #statement #pratidhvani #pratidhvanidigital #pratidhvaninews
Previous Post

ಕನಕಪುರ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಡಿ.ಕೆ.ಸುರೇಶ್‌

Next Post

ಬಿಜೆಪಿ ಕಾರ್ಯಕರ್ತರ ಆಧಾರಿತ ಪಕ್ಷ, ಇಲ್ಲಿ ಕಾರ್ಯಕರ್ತರೇ ನಾಯಕ : ಅರುಣ್​ ಸಿಂಗ್​

Related Posts

Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
0

ಹಾಸನದ ಹೊಳೆನರಸೀಪುರದ ಮನೆಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal revanna) ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ (Karnataka High Court) ಇತ್ಯರ್ಥಗೊಳಿಸಿದೆ. ಮನೆ ಕೆಲಸದಾಕೆ...

Read moreDetails

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

July 9, 2025

CM Siddaramaiah: ರಕ್ಷಣಾ ಸಚಿವ ರಾಜನಾಥಸಿಂಗ್‌ ಅವರನ್ನು ಬೇಟಿ ಮಾಡಿದ ಸಿಎಂ ಸಿದ್ದರಾಮಯ್ಯ..

July 9, 2025
Next Post
ಬಿಜೆಪಿ ಕಾರ್ಯಕರ್ತರ ಆಧಾರಿತ ಪಕ್ಷ, ಇಲ್ಲಿ ಕಾರ್ಯಕರ್ತರೇ ನಾಯಕ : ಅರುಣ್​ ಸಿಂಗ್​

ಬಿಜೆಪಿ ಕಾರ್ಯಕರ್ತರ ಆಧಾರಿತ ಪಕ್ಷ, ಇಲ್ಲಿ ಕಾರ್ಯಕರ್ತರೇ ನಾಯಕ : ಅರುಣ್​ ಸಿಂಗ್​

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada