ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಸಚಿವ ಅಶ್ವಥ್ ನಾರಾಯಣ ವಾಗ್ದಾಳಿ ನಡೆಸಿದ್ದು, ವರುಣ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸೋಲ್ತಾರೆ ಅಂತ ಮಂಡ್ಯದಲ್ಲಿ ಅಶ್ವಥ್ ನಾರಾಯಣ ಹೇಳಿಕೆ ನೀಡಿದ್ರು. ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಪರ ಅಲೆ ಎದ್ದಿದೆ. ಮಂಡ್ಯಕ್ಕೆ ಪ್ರಧಾನಿ ಮೋದಿ ಭೇಟಿ ಕೊಟ್ಟಾಗ ಬೆಂಬಲ ಎದ್ದು ಕಾಣುತ್ತಿತ್ತು.ಕೆ.ಆರ್ ಪೇಟೆಯಲ್ಲಿ ಬಿಜೆಪಿ ಖಾತೆ ತೆರೆದಿದ್ದೇವೆ. ರಾಜ್ಯದಲ್ಲಿ ಬಿಜೆಪಿ ಸಾಕಷ್ಟು ಅಭಿವೃದ್ಧಿ ಮಾಡಿದೆ. ಮೀಸಲಾತಿ ನೀತಿಯನ್ನು ಬಿಜೆಪಿ ಕೊಟ್ಟಿದೆ.ಎಲ್ಲರೂ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು ಪಣ ತೊಟ್ಟಿದ್ದಾರೆ.

ಮಂಡ್ಯದಲ್ಲಿ ನಮಗೆ ಎದುರಾಳಿ ಜೆಡಿಎಸ್. ಜೆಡಿಎಸ್ ಪಕ್ಷ ಮಂಡ್ಯ ಜಿಲ್ಲೆಯಲ್ಲಿ ಪ್ರಬಲವಾಗಿದೆ. ಮಂಡ್ಯ ಜಿಲ್ಲೆ ಸಂಪೂರ್ಣ ಅಭಿವೃದ್ಧಿಗೆ ಬಿಜೆಪಿ ಮತ ಕೊಡಿ. ಮಂಡ್ಯ ಜಿಲ್ಲೆ ದೇಶದಲ್ಲೇ ಉತ್ತಮವಾಗಿ ಬೆಳೆಯಬೇಕು. ಅದಕ್ಕೆ ಬಿಜೆಪಿ ಪಕ್ಷವನ್ನು ಗೆಲ್ಲಿಸಬೇಕು ಅಂತ ಸಚಿವ ಅಶ್ವಥ್ ನಾರಾಯಣ್ ಹೇಳಿದರು. ಇನ್ನು ಪದ್ಮನಾಭನಗರ ಕ್ಷೇತ್ರಕ್ಕೆ ಡಿಕೆ ಸುರೇಶ್ ನಾಮ ಪತ್ರ ಸಲ್ಲಿಕೆ ವಿಚಾರವಾಗಿ ಮಾತನಾಡಿದ ಸಚಿವರು, ಅವರ ಸ್ಟ್ರಾಟಜಿ ಏನಿದೆ ಅಂತ ಗೊತ್ತಿಲ್ಲ. ಇತ್ತೀಚೆಗೆ ಸಮೃದ್ಧಿ ನಾಡನ್ನು ಬಿಜೆಪಿ ಕಟ್ಟಿದೆ ಅಂತ ಹೇಳಿದರು. ಅಲ್ಲದೇ ವರುಣ ಹಾಗೂ ಕನಕಪುರ ಕಾಂಗ್ರೆಸ್ ಕಟ್ಟು ಹಾಕಲು ಬಿಜೆಪಿ ರಣತಂತ್ರ ವಿಚಾರವಾಗಿ ಮಾತನಾಡಿದ ಅವರು, ಯಾರನ್ನೂ ಕಟ್ಟಿ ಹಾಕೋಕೆ ಹೋಗಿಲ್ಲ ಗೆಲ್ಲುವುದಕ್ಕೆ ಹೋಗಿರೋದು. ಬಿಜೆಪಿ ಪಕ್ಷ ಜನರ ಪರ ಇರುವ ಪಕ್ಷ . ಕರ್ನಾಟಕ ಅಭಿವೃದ್ಧಿ ಆಗಬೇಕಾದರೆ ಬಿಜೆಪಿಯೇ ಪರಿಹಾರ.

ಮಂಡ್ಯ ಜಿಲ್ಲೆ ಅಭಿವೃದ್ಧಿ ಆಗಬೇಕಾದ್ರೆ ಬಿಜೆಪಿಯನ್ನೇ ಆಯ್ಕೆ ಮಾಡಬೇಕು. ವರುಣ ಕನಕಪುರದಲ್ಲಿ ಬಿಜೆಪಿ ಅಭ್ಯರ್ಥಿನೇ ಗೆಲ್ತಾರೆ. ಕನಕಪುರದ ಜೆಡಿಎಸ್ ವೋಟ್ ಸಂಪೂರ್ಣವಾಗಿ ಬಿಜೆಪಿಗೆ ಟರ್ನ್ ಆಗುತ್ತೆ. ವರುಣದಲ್ಲಿ ಸಿದ್ದರಾಮಯ್ಯ 1 ಲಕ್ಷ ಮತಗಳಿಂದ ಸೋಲಬಹುದು. ಯಾರ್ ಜೊತೆನೂ ಹೊಂದಾಣಿಕೆ ಪ್ರಶ್ನೆ ಇಲ್ಲ. ಗೆಲ್ಲೋದೊಂದೆ ಬಿಜೆಪಿ ಗುರಿ. ಈ ಬಾರಿ ಬಿಜೆಪಿಗೆ ಸಂಪೂರ್ಣ ಬಹುಮತ ಬಂದು ರಾಜ್ಯ ಅಭಿವೃದ್ಧಿ ಕಾಣುತ್ತೆ ಅಂತ ಹೇಳಿದರು. ಹಾಗೆಯೇ ಬಿಜೆಪಿ ಪಕ್ಷ ಬಿಟ್ಟು ಹೋದ ಶಾಸಕರ ಟಾರ್ಗೆಟ್ ವಿಚಾರವಾಗಿ ಮಾತನಾಡಿದ ಸಚಿವ ಅಶ್ವಥ್ ನಾರಾಯಾಣ, ಬಿಜೆಪಿ ಪಕ್ಷ ಗಟ್ಟಿ ಪಕ್ಷ ಶಕ್ತಿ ಇರೋದಿಕ್ಕೆ ಟಿಕೆಟ್ ಕೊಟ್ಟಿಲ್ಲ.ಯಾರಿಗೆ ಕೊಡಬೇಕು ಯಾರಿಗೆ ಬಿಡಬೇಕು ಎಂಬ ಸ್ಪಷ್ಟ ನಿಲುವನ್ನು ನಮ್ಮ ಪಕ್ಷ ತೆಗೆದುಕೊಳ್ಳುತ್ತೆ. ಕಾಂಗ್ರೆಸ್ ಪಕ್ಷದ ರೀತಿ ಅಸಹಾಯಕ ಪಕ್ಷವಲ್ಲ. ತುಂಬಾ ಜನಕ್ಕೆ ಇವತ್ತು ಟಿಕೆಟ್ ಕೊಟ್ಟಿಲ್ಲ. ಸದೃಢ ಪಕ್ಷವನ್ನು ಜನರು ಬಯಸುತ್ತಿದ್ದಾರೆ. ಲೀಡರ್ ಗೆ ಮಣೆ ಹಾಕದೆ ಜನರಿಗೆ ಮಣೆ ಹಾಕುವ ಪಕ್ಷ ಬಿಜೆಪಿ ಪಕ್ಷ. ಬಿಜೆಪಿ ಗೆ ಮತ್ತಷ್ಟು ಶಕ್ತಿ ಬಂದಿದೆ. ರಾಜ್ಯದಲ್ಲಿ 150 ಸ್ಥಾನ ಗೆಲ್ಲುತ್ತೇವೆ ಅಂತ ಸಚಿವ ಅಶ್ವಥ್ ನಾರಾಣಯಣ ವಿಶ್ವಾಸ ವ್ಯಕ್ತಪಡಿಸಿದರು.






