ಬೆಂಗಳೂರು : ರಾಜ್ಯದಲ್ಲಿ ಚುನಾವಣಾ ಕಣಾ ರಂಗೇರಿದ್ದು ರಾಜಕೀಯ ನಾಯಕರಿಂದ ಆರೋಪ – ಪ್ರತ್ಯಾರೋಪಗಳ ಸುರಿಮಳೆ ಜೋರಾಗಿದೆ. ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿ ನಾಯಕರ ಜೊತೆ ಸೇರಿಕೊಂಡು ಸಂಸದೆ ಶೋಭಾ ಕರಂದ್ಲಾಜೆ ಮಾಜಿ ಸಿಎಂ ಯಡಿಯೂರಪ್ಪರನ್ನು ಮುಗಿಸಲು ಮುಂದಾಗಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ .
ಇಂತಹದ್ದೊಂದು ಗಂಭೀರ ಆರೋಪಕ್ಕೆ ನಿಮ್ಮ ಬಳಿ ಸಾಕ್ಷಿ ಇದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೂ ಇದೇ ವೇಳೆ ಉತ್ತರಿಸಿದ ಅವರು, ನನ್ನ ಮೇಲೆ ಶೋಭಾ ಕರಂದ್ಲಾಜೆ ಮಾಡಿರುವ ಎಲ್ಲಾ ಆರೋಪಗಳಿಗೆ ಮೊದಲು ಸಾಕ್ಷ್ಯ ನೀಡಲಿ. ಬಳಿಕ ಈ ಆರೋಪಕ್ಕೆ ನಾನು ಸಾಕ್ಷ್ಯ ನೀಡುತ್ತೇನೆ ಎಂದಿದ್ದಾರೆ.