ಚಾಮರಾಜನಗರ : ವರುಣ ಹಾಗೂ ಚಾಮರಾಜನಗರ ಕ್ಷೇತ್ರಗಳಿಂದ ಕಣಕ್ಕಿಳಿದಿರುವ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಶತಾಯಗತಾಯ ಗೆಲುವನ್ನು ಪಡೆದುಕೊಳ್ಳಲು ಇನ್ನಿಲ್ಲದ ಹರಸಾಹಸಪಡ್ತಿದ್ದಾರೆ. ಕಾಂಗ್ರೆಸ್ ಭದ್ರಕೋಟೆ ಎನಿಸಿರುವ ವರುಣದಲ್ಲಿ ಸಿದ್ದರಾಮಯ್ಯ ವಿರುದ್ಧ ಗೆಲುವು ಕಷ್ಟ ಎಂದೆನಿಸಿದ ಹಿನ್ನೆಲೆಯಲ್ಲಿ ಸೋಮಣ್ಣ ಚಾಮರಾಜನಗರದಲ್ಲಿ ಮ್ಯಾಚ್ ಫಿಕ್ಸಿಂಗ್ ಮಾಡೋಕೆ ಮುಂದಾದ್ರಾ ಎಂಬ ಅನುಮಾನ ಕಾಡಿದೆ. ಈ ಮಾತಿಗೆ ಪುಷ್ಠಿ ಎಂಬಂತಹ ಆಡಿಯೋವೊಂದು ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ.

ಚಾಮರಾಜನಗರ ಜೆಡಿಎಸ್ ಅಭ್ಯರ್ಥಿಯೊಂದಿಗೆ ಸಚಿವ ವಿ.ಸೋಮಣ್ಣ ಮಾತನಾಡಿದ್ದಾರೆ ಎನ್ನಲಾಗಿದ್ದು ಈ ದೂರವಾಣಿ ಸಂಭಾಷಣೆಯಲ್ಲಿ ಮಲ್ಲಿಕಾರ್ಜುನ ಸ್ವಾಮಿ ಅಲಿಯಾಸ್ ಆಲೂರು ಮಲ್ಲುಗೆ ಸೋಮಣ್ಣ ನೀನು ನಾಮಪತ್ರ ವಾಪಸ್ ತೆಗೆದುಕೊಂಡರೆ ನಿನಗೆ ಅನುಕೂಲ ಮಾಡಿಕೊಡ್ತೇನೆ ಎಂದು ಹೇಳುತ್ತಿರೋದನ್ನು ಕೇಳಬಹುದಾಗಿದೆ.
ತೊಟ್ಟಿ ನನ್ನ ಮಗನ ಮಾತು ಕೇಳಿ ಎಲೆಕ್ಷನ್ಗೆ ನಿಂತಿದ್ದೀಯಾ ? ಆಮೇಲೆ ಎಲ್ಲ ಮಾತನಾಡೋಣ. ನಿನ್ನ ಬದುಕಿಗೆ ಏನು ಬೇಕೋ ಅದು ಮಾಡ್ತೇನೆ ಎಂದು ಆಡಿಯೋದಲ್ಲಿ ವಿ.ಸೋಮಣ್ಣ ಹೇಳುತ್ತಿರೋದನ್ನು ಕೇಳಬಹುದಾಗಿದೆ.