• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಪ್ರಧಾನಿ ಮೋದಿಯವರಿಗೆ ನಾಲಾಯಕ್ ಎಂದವರಿಗೆ ತಕ್ಕ ಪಾಠ ಕಲಿಸಿ ; ಸಿಎಂ ಬೊಮ್ಮಾಯಿ‌

ಪ್ರತಿಧ್ವನಿ by ಪ್ರತಿಧ್ವನಿ
May 2, 2023
in Top Story, ಇತರೆ / Others, ಇದೀಗ, ಕರ್ನಾಟಕ
0
ಪ್ರಧಾನಿ ಮೋದಿಯವರಿಗೆ ನಾಲಾಯಕ್ ಎಂದವರಿಗೆ ತಕ್ಕ ಪಾಠ ಕಲಿಸಿ ; ಸಿಎಂ ಬೊಮ್ಮಾಯಿ‌
Share on WhatsAppShare on FacebookShare on Telegram

ADVERTISEMENT

ಮೈಸೂರು: ಮೇ.01: ಸೋಲಿನ ಹತಾಶೆಯಿಂದ ಕಾಂಗ್ರೆಸ್ ಕೀಳು ಮಟ್ಟದ ಮಾತುಗಳನ್ನು ಆಡುತ್ತಿದೆ. ನರೇಂದ್ರ ಮೋದಿಯವರಿಗೆ ಪ್ರಿಯಾಂಕಾ ಖರ್ಗೆ ಅವರು ನಾಲಾಯಕ್ ಎಂದಿದ್ದಾರೆ. ಅವರನ್ನು ನೀವು ಕ್ಷಮಿಸುತ್ತಿರಾ? ಅವರಿಗೆ ತಕ್ಕ ಪಾಠವನ್ನು ಕಲಿಸಲು ಬಿಜೆಪಿಗೆ ಮತ ನೀಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು. ಇಂದು ಮೈಸೂರಿನ ಕೃಷ್ಣರಾಜ ಕ್ಷೇತ್ರದ ಅಭ್ಯರ್ಥಿ ಶ್ರೀವತ್ಸ ಪರ ಪ್ರಚಾರ ನಡೆಸಿ ಮಾತನಾಡಿದ ಅವರು, ಮೈಸೂರು ಐತಿಹಾಸಿಕ, ಪಾರಂಪರಿಕ, ಜಗತ್ಪ್ರಸಿದ್ಧ ನಗರ. ಈ ನಗರದಲ್ಲಿ ಕಳೆದ ಮೂರು ದಶಕಗಳಿಂದ ಬಿಜೆಪಿಯ ಪ್ರಾಬಲ್ಯವಿದೆ. ಇಲ್ಲಿಂದ ಶಾಸಕರು, ಸಂಸದರ ಆಯ್ಕೆ ಮಾಡಿದ್ದೀರಿ. ಇಷ್ಟು ದೊಡ್ಡ ಸಂಖ್ಯೆಯಲ್ಲಿ ನೀವು ಸೇರಿರುವುದನ್ನು ನೋಡಿದರೆ, ಇಲ್ಲಿ ಶ್ರೀವತ್ಸ ಅವರು ಅತ್ಯಧಿಕ ಮತದಿಂದ ಆಯ್ಕೆ ಆಗುತ್ತಾರೆ ಎಂದು ನನಗೆ ಅನಿಸುತ್ತದೆ.

ನಾವು ನಮ್ಮ ಡಬಲ್ ಇಂಜಿನ್ ಸರ್ಕಾರದ ಕಾರ್ಯಕ್ರಮಗಳ ಮೂಲಕ ಸಕಾರಾತ್ಮಕ ಮತಗಳ ಪಡೆಯುವ ಪ್ರಯತ್ನ ಮಾಡುತ್ತಿದ್ದೇವೆ.‌ ಆದರೆ, ವಿರೋಧ ಪಕ್ಷ ತಳಮಟ್ಟದ ಮಾತುಗಳನ್ನಾಡಿ, ಹತಾಶರಾಗಿ ನಕಾರಾತ್ಮಕ ಚುನಾವಣೆ ಮಾಡುತ್ತಿದ್ದಾರೆ. ಯಾರು ಕೆಲಸ ಮಾಡಿದ್ದಾರೆ ಅವರಿಗೆ ಜನರು ಬೆಂಬಲ ಕೊಡುತ್ತಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಹಲವಾರು ಯೋಜನೆಗಳನ್ನು ಮಾಡಿದ್ದೇವೆ. ರೈತರಿಗಾಗಿ ಕಿಸಾನ್ ಸಮ್ಮಾನ್ ಯೋಜನೆ, ಸಾರ್ವಜನಿಕರ ಆರೋಗ್ಯಕ್ಕಾಗಿ ಆಯುಷ್ಮಾನ್ ಭಾರತ ಯೋಜನೆ, ನಗರ ಮತ್ತು ಗ್ರಾಮೀಣ ಭಾಗದಲ್ಲಿ ಮನೆ ಕಟ್ಟಲು ಪ್ರಧಾನಮಂತ್ರಿ ಆವಾಸ್ ಯೋಜನೆ ಮಾಡಿದ್ದೇವೆ. ರೈತರು ಮತ್ತು ಕೂಲಿಕಾರರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ತಂದಿದ್ದೇವೆ. ಸ್ಮಾರ್ಟ್ ಸಿಟಿ ಯೋಜನೆಯ ಮೂಲಕ ಮೈಸೂರು ನಗರ ಅಭಿವೃದ್ಧಿ ಮಾಡಿದ್ದೇವೆ. ನರೇಂದ್ರ ಮೋದಿಯವರಿಗೆ ಮತ್ತು ಮೈಸೂರಿಗೆ ಬಹಳ ಒಲವು ಇದೆ. ಇಡೀ ಭಾರತದಲ್ಲಿ ಅವರು ಯೋಗ ದಿನಾಚರಣೆಗೆ ಆಯ್ಕೆ ಮಾಡಿದ್ದು ಮೈಸೂರು. ನರೇಂದ್ರ ಮೋದಿಯವರ ಮೈಸೂರಿನ ಮೇಲಿನ ಪ್ರೀತಿಗೆ ಶ್ರೀವತ್ಸವಗೆ ಮತ ನೀಡಬೇಕು ಎಂದರು.

ನಾನು ಮುಖ್ಯಮಂತ್ರಿಯಾದ ಬಳಿಕ 250 ಕೋಟಿಗೂ ಅಧಿಕ ಅನುದಾನ ಕೊಟ್ಟಿದ್ದೇನೆ. ಮೈಸೂರು ದಸರಾಗೆ ವಿಶೇಷ ಅನುದಾನ 5 ಕೋಟಿ ಕೊಡುವ ವೇಳೆಯಲ್ಲಿ 25 ಕೋಟಿ ನೀಡಿ ಈ ಬಾರಿಯ ದಸರಾ ಆಚರಣೆ ಮಾಡಿದ್ದೇವೆ. ಮೈಸೂರು ಅಂತರಾಷ್ಟ್ರೀಯ ಯಾತ್ರಾ ಕೇಂದ್ರವಾಗಿದೆ. ಮೈಸೂರು ಸರ್ಕಿಟ್ ಮಾಡಿ ಇಲ್ಲಿ ವಿಶೇಷವಾದ ಪ್ರವಾಸೋದ್ಯಮ ಮಾಡಲು ಮುಂದಾಗಿದ್ದೇವೆ. ಈಗಾಗಲೇ ಆ ಯೋಜನೆ ಕಾರ್ಯಗತಿಯಲ್ಲಿದ್ದು, ಮುಂದಿಬ ವರ್ಷ ಮೈಸೂರಿಗೆ ಬರುವ ಯಾತ್ರಾರ್ಥಿಗಳ ಸಂಖ್ಯೆ ದ್ವಿಗುಣ ಆಗಲಿದೆ ಎಂದರು.

ಮೈಸೂರಿನ ಆಸ್ಪತ್ರೆ ಪುನರ್ ನಿರ್ಮಾಣ ಮಾಡಲು 80 ಕೋಟಿ ಕೊಟ್ಟಿದ್ದೇವೆ. ನಮ್ಮ ಬಜೆಟ್ ನಲ್ಲಿ ಮಹಿಳೆಯರಿಗೆ ಹೆಚ್ಚಿನ ಒತ್ತು ಕೊಟ್ಟಿದ್ದೇವೆ. ಎಲ್ಲ ವಿದ್ಯಾರ್ಥಿಗಳಿಗೆ, ದುಡಿಯುವ ಮಹಿಳೆಯರಿಗೆ ಉಚಿತ ಬಸ್ ಪಾಸ್ ನೀಡುತ್ತಿದ್ದೇವೆ.‌ ವಿದ್ಯಾರ್ಥಿಗಳಿಗೆ ಡಿಗ್ರಿವರೆಗೂ ಉಚಿತ ಶಿಕ್ಷಣ ನೀಡುತ್ತಿದ್ದೇವೆ. ಇಲ್ಲಿನ 50 ಸಾವಿರ ಕುಟುಂಬಕ್ಕೆ ಸರ್ಕಾರದ ಯೋಜನೆಗಳ ಲಾಭ ಸಿಕ್ಕಿದೆ. ಅವರೆಲ್ಲರೂ ಬಿಜೆಪಿ ಮತ ನೀಡಲು ತೀರ್ಮಾನ ಮಾಡಿದ್ದಾರೆ ಎಂದರು.

ಕಾಂಗ್ರೆಸ್ ಪಕ್ಷ ಹತಾಶೆಗೊಂಡು ಹತ್ತು ಕೆ.ಜಿ ಅಕ್ಕಿ ಕೊಡುವ ಗ್ಯಾರೆಂಟಿ ಕೊಡುತ್ತಿದ್ದಾರೆ. 2013 ರಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಿದ್ದಾಗ 10 ಕೆ.ಜಿ ಅಕ್ಕಿ ಕೊಡುತ್ತಿದ್ದೇವು. ಇವರು ಅಧಿಕಾರಕ್ಕೆ ಬಂದ ಮೇಲೆ 5 ಕೆ.ಜಿ ಗೆ ಇಳಿಸಿದರು. ಕಾಂಗ್ರೆಸ್ ಚುನಾವಣೆಗಾಗಿ ಜನರನ್ನು ಯಾಮಾರಿಸುವ ಕೆಲಸ ಮಾಡುತ್ತಿದ್ದಾರೆ. ಇವತ್ತು ನಮ್ಮ ಪ್ರಣಾಳಿಕೆ ಬಿಡುಗಡೆ ಮಾಡಿದ್ದೇವೆ. ಆಯುಷ್ಮಾನ್ ಯೋಜನೆಯ ವಿಮೆ ಹಣ 5 ಲಕ್ಷ ರೂ ಇರುವುದನ್ನು 10 ಲಕ್ಷ ರೂ ಹೆಚ್ಚಳ ಮಾಡಿದ್ದೇವೆ. ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಮನೆ ಕಟ್ಟಲು ನೀಡಲಾಗುತ್ತಿದ್ದ 2 ಲಕ್ಷ ರೂ. ವನ್ನು 5 ಲಕ್ಷಕ್ಕೆ ಹೆಚ್ಚಿಸುತ್ತಿದ್ದೇವೆ. ಕಾಂಗ್ರೆಸ್ ನವರು ಸುಳ್ಳು ಹೇಳಿ, ರಾಜ್ಯವನ್ನು ದಿವಾಳಿ ಮಾಡುತ್ತಾರೆ. ಅವರು ಅಧಿಕಾರಕ್ಕೆ ಬರುವುದಿಲ್ಲ ಎಂದರು.

ಸೋಲಿನ ಹತಾಶೆಯಿಂದ ಕೀಳು ಮಟ್ಟದ ಮಾತುಗಳನ್ನು ಕಾಂಗ್ರೆಸ್ ಆಡುತ್ತಿದೆ. ನರೇಂದ್ರ ಮೋದಿಯವರಿಗೆ ಪ್ರಿಯಾಂಕಾ ಖರ್ಗೆ ಅವರು ನಾಲಾಯಕ್ ಎಂದಿದ್ದಾರೆ. ಅವರನ್ನು ನೀವು ಕ್ಷಮಿಸುತ್ತಿರಾ? ಅವರಿಗೆ ತಕ್ಕ ಪಾಠವನ್ನು ಕಲಿಸಲು ಶ್ರೀವತ್ಸ ಅವರಿಗೆ 25 ಸಾವಿರ ಮತ ಕೊಟ್ಟು ಗೆಲ್ಲಿಸಿಕೊಡಿ ಎಂದರು.

Tags: BJP Governmentbjpkarnatakacmbommaicongressvsbjplatest news digitallatestnewslivenewsModiPMModiPriyank Khargesiddaramaiah
Previous Post

ಪ್ರಣಾಳಿಕೆಗೂ ಮೊದಲು ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡಲಿ : ಬಿಜೆಪಿ ಪ್ರಣಾಳಿಕೆ ಬಗ್ಗೆ ಸಿದ್ದರಾಮಯ್ಯ ಟೀಕೆ

Next Post

ನಮ್ಮ ಸರ್ಕಾರದ ಯೋಜನೆಗಳನ್ನೇ ಕಾಂಗ್ರೆಸ್ ಕಾಪಿ ಮಾಡಿದೆ ; ಸಿಎಂ ಬೊಮ್ಮಾಯಿ

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
0

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ...

Read moreDetails
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
Next Post
ನಮ್ಮ ಸರ್ಕಾರದ ಯೋಜನೆಗಳನ್ನೇ ಕಾಂಗ್ರೆಸ್ ಕಾಪಿ ಮಾಡಿದೆ ; ಸಿಎಂ ಬೊಮ್ಮಾಯಿ

ನಮ್ಮ ಸರ್ಕಾರದ ಯೋಜನೆಗಳನ್ನೇ ಕಾಂಗ್ರೆಸ್ ಕಾಪಿ ಮಾಡಿದೆ ; ಸಿಎಂ ಬೊಮ್ಮಾಯಿ

Please login to join discussion

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada