ಬೆಳಗಾವಿ : ಬಿಜೆಪಿಯಿಂದ ಟಿಕೆಟ್ ಸಿಗದೇ ಕಾಂಗ್ರೆಸ್ಗೆ ಪಲಾಯನ ಮಾಡಿದ್ದ ಲಕ್ಷ್ಮಣ ಸವದಿ ಭರ್ಜರಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಲಕ್ಷ್ಮಣ ಸವದಿ ರಾಜಕೀಯ ಜೀವನ ಅಂತ್ಯಗೊಳಿಸಬೇಕೆಂದುಕೊಂಡಿದ್ದ ರಮೇಶ್ ಜಾರಕಿಹೊಳಿಗೆ ಭಾರೀ ಮುಖಭಂಗವಾಗಿದೆ.

ಹೇಗಾದರೂ ಮಾಡಿ ಅಥಣಿಯಲ್ಲಿ ಲಕ್ಷ್ಮಣ ಸವದಿಯನ್ನು ಸೋಲಿಸಬೇಕೆಂದು ಅಥಣಿಯಲ್ಲಿ ಪರಮಾಪ್ತ ಮಹೇಶ್ ಕುಮಟಳ್ಳಿಗೆ ರಮೇಶ್ ಜಾರಕಿಹೊಳಿ ಬಿಜೆಪಿ ಟಿಕೆಟ್ ಕೊಡಿಸಿದ್ದರು. ಗೋಕಾಕ್ ಕ್ಷೇತ್ರಕ್ಕಿಂತಲೂ ಹೆಚ್ಚಾಗಿ ಈ ಬಾರಿ ಅಥಣಿ ಕ್ಷೇತ್ರಕ್ಕೆ ರಮೇಶ್ ಜಾರಕಿಹೊಳಿ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದರು.
ಆದರೆ ಇದೀಗ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು ಲಕ್ಷ್ಮಣ ಸವದಿ 50 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದು ಬಿಜೆಪಿ ವಿರುದ್ಧ ಸೇಡು ತೀರಿಸಿಕೊಂಡಿದ್ದಾರೆ.