• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ನೆಚ್ಚಿನ ಶಾಸಕನಿಗೆ ಸಚಿವ ಸ್ಥಾನ ನೀಡುವಂತೆ ಅಭಿಮಾನಿಗಳಿಂದ ರಕ್ತದಲ್ಲಿ ಪತ್ರ

ಪ್ರತಿಧ್ವನಿ by ಪ್ರತಿಧ್ವನಿ
May 17, 2023
in ರಾಜಕೀಯ
0
ನೆಚ್ಚಿನ ಶಾಸಕನಿಗೆ ಸಚಿವ ಸ್ಥಾನ ನೀಡುವಂತೆ ಅಭಿಮಾನಿಗಳಿಂದ ರಕ್ತದಲ್ಲಿ ಪತ್ರ
Share on WhatsAppShare on FacebookShare on Telegram

ಕೋಲಾರ: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದ ಕಾಂಗ್ರೆಸ್​ ಪಕ್ಷದಲ್ಲಿ ಸದ್ಯ ಸಿಎಂ ಹಾಗೂ ಡಿಸಿಎಂ ಸ್ಥಾನದ ಜೊತೆಗೆ ಸಚಿವ ಸ್ಥಾನದ ಲಾಬಿಯೂ ಜೋರಾಗಿ ನಡೆಯುತ್ತಿದೆ. ಅದು ಎಷ್ಟರ ಮಟ್ಟಿಗೆ ಅಂದರೆ ಅಭಿಮಾನಿಗಳು ತಮ್ಮ ನೆಚ್ಚಿನ ಶಾಸಕನಿಗೆ ಸಚಿವ ಸ್ಥಾನ ನೀಡಬೇಕೆಂದು ರಕ್ತದಲ್ಲಿ ಪತ್ರ ಬರೆದಿದ್ದಾರೆ.

ADVERTISEMENT

ಸಚಿವ ಸ್ಥಾನಕ್ಕೆ ಒತ್ತಾಯಿಸಿ ಡಿಕೆಶಿ, ಸಿದ್ದರಾಮಯ್ಯ, ಖರ್ಗೆಗೆ ರಕ್ತದಲ್ಲಿ ಪತ್ರ:
ಹೌದು, ಕೋಲಾರ ಜಿಲ್ಲೆಯ ಬಂಗಾರಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್ಎನ್ ನಾರಾಯಣಸ್ವಾಮಿ ಅವರು ಸತತವಾಗಿ ಮೂರನೇ ಬಾರಿ ಭರ್ಜರಿ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ. ಹೀಗಾಗಿ ಇವರ ಅಪ್ಪಟ ಅಭಿಮಾನಿಯಾಗಿರುವ ಕ್ಷೇತ್ರದ ಹರೀಶ್ ಕುಮಾರ್ ಮತ್ತು ಆತನ ಸ್ನೇಹಿತರು ಶಾಸಕ ಎಸ್ಎನ್ ನಾರಾಯಣಸ್ವಾಮಿ ಅವರಿಗೆ ಸಚಿವ ಸ್ಥಾನ ನೀಡಲೇಬೇಕೆಂದು ಒತ್ತಾಯಿಸಿ ರಕ್ತದಲ್ಲಿ ಪತ್ರ ಬರೆದಿದ್ದಾರೆ.

ಸಚಿವ ಸ್ಥಾನ ನೀಡದಿದ್ದರೆ ಪ್ರತಿಭಟನೆಯ ಎಚ್ಚರಿಕೆ:
ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಹರೀಶ್ ಕುಮಾರ್ ಸೇರಿದಂತೆ 10ಕ್ಕೂ ಹೆಚ್ಚು ಅಭಿಮಾನಿಗಳು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಹರೀಶ್ ಕುಮಾರ್, ಶಾಸಕ ಎಸ್ಎನ್ ನಾರಾಯಣಸ್ವಾಮಿ ಅವರು ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ. ಕ್ಷೇತ್ರದಲ್ಲಿ ಶಾಸಕರು ಹಲವಾರು ಸೇವೆ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಹಾಗಾಗಿ ಇವರಿಗೆ ಸಚಿವ ಸ್ಥಾನ ನೀಡಬೇಕು. ಒಂದು ವೇಳೆ ಸಚಿವ ಸ್ಥಾನ ನೀಡದಿದ್ದರೆ ಮುಂದಿನ ದಿನಗಳಲ್ಲಿ ನಾವೆಲ್ಲರೂ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು.

ಜಿಲ್ಲೆಯಲ್ಲಿ ಗೆದ್ದಿರುವ ನಾಲ್ವರಲ್ಲಿ ನಾನೇ ಹಿರಿಯವನು:
ಇನ್ನು ಈ ಕುರಿತು ಪ್ರತಿಕ್ರಿಯೆ ನೀಡಿದ ಶಾಸಕ ಎಸ್ಎನ್ ನಾರಾಯಣಸ್ವಾಮಿ, ನಾನೂ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. ಕೋಲಾರ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ನಾಲ್ವರು ಗೆದ್ದಿದ್ದಾರೆ. ಆ ನಾಲ್ಕೂ ಜನರಲ್ಲಿ ನಾನು ಹಿರಿಯವನಾಗಿದ್ದೇನೆ. ಸತತವಾಗಿ ಮೂರು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬಂದಿದೆ. ಮೇಲ್ಜಾತಿಯವರು ಟಚಬಲ್ಸ್ ಗೆ ಮಾತ್ರವೇ ಅವಕಾಶ ನೀಡ್ತಾರೆ. ಅನ್ ಟಚಬಲ್ಸ್ ಮೂರು ಬಾರಿ ಗೆಲ್ಲುವುದು ಪ್ರಾಯಾಸವೇ ಸರಿ. ಹಿಂದೆ 40 ವರ್ಷಗಳ ಹಿಂದೆ ಚೆನ್ನಯ್ಯ ಎಂಬುವರು ಮಂತ್ರಿ ಆಗಿದ್ದರು. ಅದು ಬಿಟ್ರೆ ಜಿಲ್ಲೆಯಲ್ಲಿ ಬಲಗೈ ಸಮುದಾಯಕ್ಕೆ ಇದುವರೆಗೂ ಮಂತ್ರಿ ಸ್ಥಾನ ಕೊಟ್ಟಿಲ್ಲ.ಕೋಲಾರ ಜಿಲ್ಲೆಯಲ್ಲಿ ಬಲಗೈ ಸಮುದಾಯದವರು ಹೆಚ್ಚಾಗಿ ಇರುವುದರಿಂದ ನಮ್ಮ ಸಮುದಾಯಕ್ಕೆ ಅವಕಾಶ ಸಿಗಲಿ ಅಂತ ಒತ್ತಾಯ ಮಾಡ್ತಿದ್ದಾರೆ. ನಮ್ಮ ಬೆಂಬಲಿಗರು ಸಹ ಯಾವುದೇ ಹೋರಾಟಕ್ಕೆ ಸಿದ್ಧ ಎಂದು ಹೇಳ್ತಿದ್ದಾರೆ. ಸಿದ್ದರಾಮಯ್ಯ, ಡಿಕೆಶಿ, ಖರ್ಗೆ ಬಳಿ ಮನವಿ ಮಾಡಿದ್ದೇವೆ ಎಂದರು.

ಯಾರು ಸಿಎಂ ಆಗ್ತಾರೋ ಅವರ ಬಳಿ ಹೋಗಿ ಸಚಿವ ಸ್ಥಾನಕ್ಕೆ ಒತ್ತಾಯ:
ನನ್ನ ಮೇಲಿನ ಅಭಿಮಾನದಿಂದ ಸಚಿವ ಸ್ಥಾನಕ್ಕೆ ಒತ್ತಾಯಿಸಿ ಪತ್ರ ಬರೆದಿದ್ದಾರೆ. ನಿನ್ನೆ ಹಲವಾರು ಕಾರ್ಯಕರ್ತರು ಕಾಂಗ್ರೆಸ್ ಬಣ್ಣವನ್ನು ತನ್ನ ಮೈಗೆ ಬಳಿದುಕೊಂಡಿದ್ದರು. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಎರಡು ಕಣ್ಣಗಳು ಇದ್ದಂತೆ. ಬಹುಮತ ಸರ್ಕಾರ ಬರವು ಇವರಿಬ್ಬರೂ ಕಾರಣ. ಇವರಿಬ್ಬರಲ್ಲಿ ಯಾರು ಸಿಎಂ ಆಗಬೇಕೆಂದು ಹೈಕಮಾಂಡ್ ತೀರ್ಮಾನ ಮಾಡುತ್ತೆ. ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲಾ ಬದ್ಧರಾಗಿದ್ದೇವೆ. ಯಾರು ಸಿಎಂ ಆಗ್ತಾರೋ ಅವರ ಬಳಿ ಹೋಗಿ ಸಚಿವ ಸ್ಥಾನಕ್ಕೆ ಒತ್ತಾಯ ಮಾಡುತ್ತೇನೆ‌ ‌ಎಂದು ಬಂಗಾರಪೇಟೆ ಶಾಸಕ ಎಸ್ಎನ್ ನಾರಾಯಣಸ್ವಾಮಿ ಹೇಳಿದರು.

Tags: bangarapetHarish KumarKolarlegislator SN Narayanaswamyletter in blood from fansಅಭಿಮಾನಿಗಳಿಂದ ರಕ್ತದಲ್ಲಿ ಪತ್ರಕಾಂಗ್ರೆಸ್​ಕೋಲಾರಬಂಗಾರಪೇಟೆಶಾಸಕ ಎಸ್​ಎನ್​ ನಾರಾಯಣಸ್ವಾಮಿಹರೀಶ್​ ಕುಮಾರ್​
Previous Post

ಸಿದ್ದರಾಮಯ್ಯ ವರ್ಸಸ್​ ಡಿಕೆ ಶಿವಕುಮಾರ್​.. ಗೆಲ್ಲೋದ್ಯಾರು ಗೊತ್ತಾ..?

Next Post

ಕಾಂಗ್ರೆಸ್​ನಲ್ಲಿ ಕಗ್ಗಂಟಾಯ್ತು ಸಿಎಂ ಆಯ್ಕೆ : ದಲಿತ ಸಿಎಂಗಾಗಿ ಹೆಚ್ಚಿದ ಕೂಗು

Related Posts

Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
0

ಹಾಸನದ ಹೊಳೆನರಸೀಪುರದ ಮನೆಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal revanna) ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ (Karnataka High Court) ಇತ್ಯರ್ಥಗೊಳಿಸಿದೆ. ಮನೆ ಕೆಲಸದಾಕೆ...

Read moreDetails

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

July 9, 2025

CM Siddaramaiah: ರಕ್ಷಣಾ ಸಚಿವ ರಾಜನಾಥಸಿಂಗ್‌ ಅವರನ್ನು ಬೇಟಿ ಮಾಡಿದ ಸಿಎಂ ಸಿದ್ದರಾಮಯ್ಯ..

July 9, 2025
Next Post
ಕಾಂಗ್ರೆಸ್​ನಲ್ಲಿ ಕಗ್ಗಂಟಾಯ್ತು ಸಿಎಂ ಆಯ್ಕೆ : ದಲಿತ ಸಿಎಂಗಾಗಿ ಹೆಚ್ಚಿದ ಕೂಗು

ಕಾಂಗ್ರೆಸ್​ನಲ್ಲಿ ಕಗ್ಗಂಟಾಯ್ತು ಸಿಎಂ ಆಯ್ಕೆ : ದಲಿತ ಸಿಎಂಗಾಗಿ ಹೆಚ್ಚಿದ ಕೂಗು

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada