• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

5 Years Siddaramaiah CM | ಡಿಕೆಶಿ ಕನಸು ಭಗ್ನ.. 5 ವರ್ಷ ಸಿದ್ದರಾಮಯ್ಯ ಸಿಎಂ.. ಆಪ್ತ ಬಿಚ್ಚಿಟ್ಟ ಅಸಲಿ ಕಥೆ..!

ಕೃಷ್ಣ ಮಣಿ by ಕೃಷ್ಣ ಮಣಿ
May 23, 2023
in Top Story, ಇತರೆ / Others, ಇದೀಗ, ಕರ್ನಾಟಕ, ರಾಜಕೀಯ
0
5 Years Siddaramaiah CM | ಡಿಕೆಶಿ ಕನಸು ಭಗ್ನ.. 5 ವರ್ಷ ಸಿದ್ದರಾಮಯ್ಯ ಸಿಎಂ.. ಆಪ್ತ ಬಿಚ್ಚಿಟ್ಟ ಅಸಲಿ ಕಥೆ..!
Share on WhatsAppShare on FacebookShare on Telegram

ADVERTISEMENT

ಕಾಂಗ್ರೆಸ್​ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನ ಗಿಟ್ಟಿಸಲು ಡಿ.ಕೆ ಶಿವಕುಮಾರ್​​ ಹಾಗು ಸಿದ್ದರಾಮಯ್ಯ ನಡುವೆ ಭಾರೀ ದೊಡ್ಡ ಪ್ರಮಾಣದಲ್ಲಿ ಪೈಪೋಟಿ ಏರ್ಪಟ್ಟಿತ್ತು. ದೆಹಲಿಯಲ್ಲಿ ಇಬ್ಬರೂ ನಾಯಕರು ಮೊಕ್ಕಾಂ ಹೂಡಿ, ಹೈಕಮಾಂಡ್​ ನಾಯಕರ ಜೊತೆಗೆ ಸತತ ಸಭೆಗಳನ್ನು ಮಾಡುವ ಮೂಲಕ ಅಧಿಕಾರ ಹಿಡಿಯದೆ ವಿರೋಧ ಪಕ್ಷಗಳ ಟೀಕೆಗೂ ಕಾರಣವಾಗಿದ್ದರು. ಕೊನೆಗೆ ಹೈಕಮಾಮಡ್​ ರೂಪಿಸಿದ ಸೂತ್ರಕ್ಕೆ ಒಪ್ಪಿಗೆ ಕೊಟ್ಟಿದ್ದೇನೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲಿದ್ದು, ನಾನು ಉಪಮುಖ್ಯಮಂತ್ರಿ ಆಗುತ್ತೇನೆ ಎಂದು ಮಾಧ್ಯಮಗಳ ಎದುರು ಬಹಿರಂಗವಾಗಿ ಹೇಳಿಕೆ ನೀಡಿದ್ದರು. ಆ ಬಳಿಕ ಎರಡೂವರೆ ವರ್ಷ ಸಿದ್ದರಾಮಯ್ಯ ಸಿಎಂ ಆಗಲಿದ್ದು, ಆ ಬಳಿಕ ಉಳಿಕೆ ಎರಡೂವರೆ ವರ್ಷಗಳ ಕಾಲ ಡಿ.ಕೆ ಶಿವಕುಮಾರ್​ ಅವರು ಮುಖ್ಯಮಂತ್ರಿ ಆಗಲಿದ್ದಾರೆ ಎನ್ನುವ ಸುಳಿವನ್ನು ಡಿಕೆ ಶಿವಕುಮಾರ್​ ಆಪ್ತರು ಮಾಹಿತಿ ನೀಡಿದ್ದರು. ಆದರೀಗ ಉಲ್ಟಾ ಹೊಡೆದಂತೆ ಕಾಣಿಸುತ್ತಿದೆ.

ಮುಂದಿನ ಐದು ವರ್ಷಕ್ಕೂ ಸಿದ್ದರಾಮಯ್ಯ ಸಿಎಂ..!

ರಾಜ್ಯದಲ್ಲಿ ಸಿದ್ದರಾಮಯ್ಯ 5 ವರ್ಷಗಳ ಕಾಲ ಪೂರ್ಣಾವಧಿ ಸಿಎಂ ಆಗಲಿದ್ದಾರೆ ಎಂದು ಸಚಿವ ಎಂ.ಬಿ ಪಾಟೀಲ್​ ಕಿಚ್ಚು ಹಚ್ಚಿದ್ದಾರೆ. ಸಿದ್ದರಾಮಯ್ಯ ಹಾಗು ಡಿ.ಕೆ ಶಿವಕುಮಾರ್​ ನಡುವೆ ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದಿರುವ ಎಂಬಿ ಪಾಟೀಲ್​, ಡಿ.ಕೆ ಶಿವಕುಮಾರ್​ ಮುಖ್ಯಮಂತ್ರಿ ಕನಸಿಗೆ ತಣ್ನೀರು ಸುರಿದಂತಾಗಿದೆ. ಸೋಮವಾರ ಸಂಜೆ ಮೈಸೂರಿನ ಸುತ್ತೂರು ಮಠದ ಬಳಿ ಮಾತನಾಡಿದ ಎಂ.ಬಿ ಪಾಟೀಲ್​, ಸಿಎಂ ಸಿದ್ದರಾಮಯ್ಯ ಪರವಾಗಿ ಬ್ಯಾಟ್ ಬೀಸಿದ್ದಾರೆ. ಲೋಕಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ಯಾವುದೇ ಬದಲಾವಣೆ ಇಲ್ಲ. ಸಿಎಂ ಬದಲಾವಣೆ ಬಗ್ಗೆ ಎಐಸಿಸಿ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಸಿದ್ದರಾಮಯ್ಯ ಮುಂದಿನ ಐದು ವರ್ಷವೂ ಸಿಎಂ ಆಗಿರಲಿದ್ದಾರೆ ಎಂದು ಎಐಸಿಸಿ ಕಾರ್ಯದರ್ಶಿ ವೇಣುಗೋಪಾಲ್ ಸ್ಪಷ್ಟಪಡಿಸಿದ್ದಾರೆ ಎಂದಿದ್ದಾರೆ.

ಒಂದೇ ಡಿಸಿಎಂ ಘೋಷಣೆಗೆ ಡಿಕೆಶಿ ಪಟ್ಟು.. ಎಂಬಿ ಪಾಟೀಲ್​ ಸಿಟ್ಟು..!

ರಾಜ್ಯ ಸರ್ಕಾರದಲ್ಲಿ ಡಿಸಿಎಂ ಪೋಸ್ಟ್​ಗೆ ಯಾವುದೇ ಮಾನ್ಯತೆ ಇಲ್ಲ. ಆದರೂ ಪ್ರಮುಖ ನಿರ್ಧಾರ ತೆಗೆದುಕೊಳ್ಳುವಾಗ ಸಿಎಂ ಹಾಗು ಡಿಸಿಎಂ ಇಬ್ಬರೂ ಒಟ್ಟಿಗೆ ಸೇರಿ ನಿರ್ಧಾರ ತೆಗೆದುಕೊಳ್ಳುವುದು ನಡೆದುಕೊಂಡು ಬಂದಿರುವ ರೂಢಿ. ಇದೇ ಕಾರಣಕ್ಕೆ ಸಿದ್ದರಾಮಯ್ಯ ಜೊತೆಗೆ ಅಧಿಕಾರ ಹಂಚಿಕೆಯಲ್ಲಿ ಪೈಪೋಟಿ ನಡೆಸಿದ್ದ ಡಿ.ಕೆ ಶಿವಕುಮಾರ್​, ಒಂದೇ ಡಿಸಿಎಂ ಹುದ್ದೆ ಎಂದು ಹೈಕಮಾಂಡ್​ ನಾಯಕರ ಬಾಯಲ್ಲೇ ಘೋಷಣೆ ಮಾಡಿಸಿದ್ದರು. ಇಲ್ಲದಿದ್ದರೆ ಡಿ.ಕೆ ಶಿವಕುಮಾರ್​ಗೆ ಸರಿಸಮಾನವಾಗಿ ಇನ್ನೂ ಇಬ್ಬರನ್ನು ಡಿಸಿಎಂ ಮಾಡಲು ಸಿದ್ದರಾಮಯ್ಯ ಮನಸ್ಸು ಮಾಡಿದ್ದರು ಎನ್ನಲಾಗಿದೆ. ಸಿದ್ದರಾಮಯ್ಯ ಬಿಟ್ಟರೆ ಕಾಂಗ್ರೆಸ್​ನಲ್ಲಿ ನಾನೇ ಎರಡನೇ ನಾಯಕ ಎಂದು ತೋರಿಸಿಕೊಳ್ಳುವ ಉದ್ದೇಶದಿಂದ ಒಂದೇ ಡಿಸಿಎಂ ಹುದ್ದೆಗೆ ಹಠ ಹಿಡಿದು ಯಶಸ್ವಿಯಾಗಿದ್ದ ಎಂಬಿ ಪಾಟೀಲ್​ ಸಿಟ್ಟಾಗಿದ್ದು, ಸುಲಭವಾಗಿ ಸಿಗುತ್ತಿದ್ದ ಡಿಸಿಎಂ ಕೈ ತಪ್ಪಿಸಿದ ಸಿಟ್ಟನ್ನು ಈ ರೀತಿ ತೀರಿಸಿಕೊಂಡಿದ್ದಾರೆ ಎನ್ನಲಾಗ್ತಿದೆ.

ಎರಡೂವರೆ ವರ್ಷ ಇನ್ನೂ ದೂರ.. ಡಿಕೆಶಿ ಕನಸೂ ದೂರ..!

ಎರಡೂವರೆ ವರ್ಷಗಳ ಕಾಲ ಇನ್ನೂ ಬಹಳ ದೂರವಿದೆ. ಅಷ್ಟರಲ್ಲಿ ಏನು ಬೇಕಿದ್ದರೂ ಆಗಬಹುದು ಎನ್ನುವುದು ಸಿದ್ದರಾಮಯ್ಯ ಆಪ್ತರು ನೀಡುವ ಮಾಹಿತಿ. ಸಿದ್ದರಾಮಯ್ಯ ಜೊತೆಗೆ ಅಧಿಕಾರ ಹಂಚಿಕೆಗೆ ಪಟ್ಟು ಹಿಡಿದಿರುವ ಕನಕಪುರ ಬಂಡೆ ಮೇಲೆ ಹತ್ತಾರು ಕೇಸ್​ಗಳಿದ್ದು, ಈಗಾಗಲೇ ಒಮ್ಮೆ ಜೈಲಿಗೂ ಹೋಗಿ ಬಂದಿದ್ದಾರೆ. ಜಾಮೀನು ಪಡೆದು ರಾಜಕೀಯ ಮಾಡುತ್ತಿರುವ ಡಿ.ಕೆ ಶಿವಕುಮಾರ್​ಗೆ ಯಾವಾಗ ಬೇಕಿದ್ದರೂ ಕಾನೂನು ಸಂಕಷ್ಟ ಎದುರಾಗಬಹುದು. ಒಂದು ವೇಳೆ ಎರಡೂ ವರ್ಷಕ್ಕೂ ಮುನ್ನವೇ ಕಾನೂನು ಸಂಕಷ್ಟ ಎದುರಾದರೆ ಮುಖ್ಯಮಂತ್ರಿ ಆಗುವುದು ಇರಲಿ, ಇರುವ ಡಿಸಿಎಂ ಸ್ಥಾನಕ್ಕೂ ಕೊಕ್ಕೆ ಬೀಳುತ್ತದೆ. ಇನ್ನೆಲ್ಲಿಂದ ಡಿ.ಕೆ ಶಿವಕುಮಾರ್​ ಮುಖ್ಯಮಂತ್ರಿ ಆಗುತ್ತಾರೆ ಎನ್ನುವುದು ಸಿದ್ದರಾಮಯ್ಯ ಆಪ್ತರ ಪ್ರಶ್ನೆ. ಇದೀಗ ಕ್ಯಾಬಿನೆಟ್​ ಸೇರುವ ಸಚಿವರ ಪಟ್ಟಿಗೆ ಗುದ್ದಾಡಬೇಕಿದ್ದ ನಾಯಕರು, ಸಿಎಂ-ಡಿಸಿಎಂ ವಿಚಾರವಾಗಿ ಬಹಿರಂಗ ಹೇಳಿಕೆ ನೀಡಿರುವುದು ಕಾಂಗ್ರೆಸ್​ನಲ್ಲಿ ಆಂತರಿಕ ಕಲಹ ಹುಟ್ಟುಹಾಕುವ ಸಾಧ್ಯತೆ ಇದೆ ಎನ್ನಬಹುದು.

ಕೃಷ್ಣಮಣಿ

Tags: cmsiddaramiahCongress Partydcm dkshivakumarDKShivakumarmbpatilsiddaramaiahಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

CM Siddaramaiah Cabinet | ಸಂಪುಟದಲ್ಲಿ ಬೆಂಬಲಿಗರ ಸೇರ್ಪಡೆಗೆ ಸಿದ್ದು-ಡಿಕೆಶಿ ಸರ್ಕಸ್..!

Next Post

Secondary PUC Supplementary Exam | ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ, ಸಂಪೂರ್ಣ ಮಾಹಿತಿ ಇಲ್ಲಿದೆ

Related Posts

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
0

ತರುಣ್‌ ಸುಧೀರ್‌ ನಿರ್ಮಾಣದ ಹೊಸ ಚಿತ್ರಕ್ಕೆ ಶಿವಣ್ಣ-ಪ್ರೇಮ್‌ ಸಾಥ್..ʼಏಳುಮಲೆʼ ಟೈಟಲ್‌ ಟೀಸರ್‌ನಲ್ಲಿ ಮಿಂಚಿದ ರಕ್ಷಿತಾ ಸಹೋದರ ರಾಣಾ. ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ...

Read moreDetails

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

July 9, 2025
Next Post
Secondary PUC Supplementary Exam | ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ, ಸಂಪೂರ್ಣ ಮಾಹಿತಿ ಇಲ್ಲಿದೆ

Secondary PUC Supplementary Exam | ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ, ಸಂಪೂರ್ಣ ಮಾಹಿತಿ ಇಲ್ಲಿದೆ

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada