ಮೈಸೂರು : ಹೆಚ್ಡಿ ಕೋಟೆ ಹಾಗೂ ಜಿಲ್ಲಾ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದು 25 ಕೋಟಿ ರೂಪಾಯಿ ಬೆಲೆಬಾಳುವ ತಿಮಿಂಗಲದ ಅಪರೂಪದ ಅಂಬರ್ ಗ್ರೀಸ್ ವಶಕ್ಕೆ ಪಡೆದಿದ್ದಾರೆ. ಕೇರಳ ಮೂಲದ ಮೂವರನ್ನು ಬಂಧಿಸಲಾಗಿದ್ದು ಮಾರಾಟಕ್ಕೆಂದು ಕಾರಿನಲ್ಲಿ ಇಟ್ಟುಕೊಂಡಿದ್ದ ಒಂಬತ್ತುವರೆ ಕೆಜಿ ಅಂಬರ್ ಗ್ರೀಸ್ ವಶಕ್ಕೆ ಪಡೆದಿದ್ದಾರೆ .

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಟ್ಕರ್, ಅಡಿಷಿನಲ್ ಎಸ್ಪಿ ನಂದಿನಿ ಡಿವೈಎಸ್ ಪಿ ಮಹೇಶ್ ಮಾರ್ಗದರ್ಶನದಲ್ಲಿ ತಂಡ ರಚಿಸಲಾಗಿದ್ದು ಹೆಚ್.ಡಿ.ಕೋಟೆ ಇನ್ಸ್ ಪಕ್ಟರ್ ಶಭ್ಬೀರ್ ಹುಸೇನ್ ಮೈಸೂರು ಕ್ರೈಂಬ್ರಾಚ್ ಇನ್ಸ್ ಪೆಕ್ಟರ್ ಪುರುಷೋತ್ತಮ ತಂಡದಿಂದ ಕಾರ್ಯಾಚರಣೆ ನಡೆಸಲಾಗಿತ್ತು.

ಹೆಚ್.ಡಿ.ಕೋಟೆ ಹ್ಯಾಂಡ್ ಪೋಸ್ಟ್ ನಲ್ಲಿ ಸಮವಸ್ತ್ರ ಧರಿಸದೆ ಸಾಧಾರಣ ವ್ಯಕ್ತಿಗಳಂತೆ ಇದ್ದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಕೇರಳದ ಕೊಚ್ಚಿನ ಸಮುದ್ರದಿಂದ ತಿಮಿಂಗಲದ ಅಂಬರ್ ಗ್ರೀಸ್ ತಂದಿದ್ದಾರೆ ಎನ್ನಲಾಗಿದೆ.
ವಶಕ್ಕೆ ಪಡೆಯಲಾದ ವಸ್ತು ತಿಮಿಂಗಲದ ಅಂಬರ್ ಗ್ರೀಸ್ ಎಂಬುದನ್ನು ಅರಣ್ಯಾಧಿಕಾರಿಗಳ ತಂಡ ವಶಕ್ಕೆ ಪಡೆದಿದೆ. ಅಂಬರ್ ಗ್ರೀಸ್ಗೆ ವಿದೇಶದಲ್ಲಿಯೂ ಅಪಾರವಾದ ಬೇಡಿಕೆಯಿದೆ. ಸದ್ಯ ಆರೋಪಿಗಳನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ .