• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

School Text Book Row ; ಮತ್ತೆ ಪರಿಷ್ಕರಣೆ ಆಗುತ್ತಾ ಶಾಲಾ ಪಠ್ಯ ಪುಸ್ತಕ : ಸಿಎಂ ಸಿದ್ದು ಏನಂದ್ರು ಗೊತ್ತಾ?

Any Mind by Any Mind
May 24, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
School Text Book Row ; ಮತ್ತೆ ಪರಿಷ್ಕರಣೆ ಆಗುತ್ತಾ ಶಾಲಾ ಪಠ್ಯ ಪುಸ್ತಕ : ಸಿಎಂ ಸಿದ್ದು ಏನಂದ್ರು ಗೊತ್ತಾ?
Share on WhatsAppShare on FacebookShare on Telegram

ADVERTISEMENT

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಸಿದ್ದಪಡಿಸಿದ್ದ ಶಾಲಾ ಪಠ್ಯ ಪುಸ್ತಕದ ಪರಿಷ್ಕರಣೆ ವಿಚಾರವನ್ನ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು: ಬಿಜೆಪಿ ಸರ್ಕಾರದ ಆಡಳಿತದಲ್ಲಿ ಸಿದ್ಧಪಡಿಸಲಾಗಿರುವ ಪಠ್ಯ ಪುಸ್ತಕದ (Text Book) ಪರಿಷ್ಕರಣೆ ವಿಚಾರವಾಗಿ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಂಗಳವಾರ ತಿಳಿಸಿದರು. ವಿಧಾನಸೌಧದಲ್ಲಿ ಹಿರಿಯ ಐಎಎಸ್ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಪಠ್ಯ ಪುಸ್ತಕ ವಿಚಾರವಾಗಿ ಸಚಿವ ಸಂಪುಟ ಸಭೆಯಲ್ಲೇ ತೀರ್ಮಾನ ಕೈಗೊಳ್ಳುತ್ತೇವೆ ಎಂದರು. ಬಿಜೆಪಿ ಆಡಳಿತದ ಅವಧಿಯಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿದ್ದು ರಾಜ್ಯದಲ್ಲಿ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು.
ಆಡಳಿತದಲ್ಲಿ ಸುಧಾರಣೆ, ಪಾರದರ್ಶಕ ಆಡಳಿತ ನೀಡಲು ಅಧಿಕಾರಿಗಳ ಸಹಕಾರ ಕೋರಿದ್ದೇವೆ. ಉತ್ತಮ ಆಡಳಿತ ನೀಡಲು ತ್ವರಿತವಾಗಿ ಕಡತ ವಿಲೇವಾರಿ ಮಾಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ನಿಗದಿತ ಸಮಯ ಮಿತಿಯೊಳಗೆ ಕಡತಗಳನ್ನು ವಿಲೇವಾರಿ ಮಾಡುವಂತೆ ಸೂಚಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಜನರಿಗೆ ಸರ್ಕಾರಿ ಯೋಜನೆಗಳನ್ನು ತಲುಪಿಸಲು ಕ್ರಮವಹಿಸುವಂತೆ ಸೂಚನೆ ನೀಡಲಾಗಿದೆ. ಸರ್ಕಾರದ ಯೋಜನೆಗಳನ್ನು ನಿಗದಿತ ಕಾಲಾವಧಿಯೊಳಗೆ ಅನುಷ್ಠಾನಗೊಳಿಸಬೇಕು. ತಡವಾದರೆ ಭ್ರಷ್ಟಾಚಾರಕ್ಕೆ ಆಸ್ಪದವಾಗುತ್ತದೆ. ಜೊತೆಗೆ ಯೋಜನೆಯ ಅನುದಾನ ವೆಚ್ಚ ಹೆಚ್ಚಳವಾಗುತ್ತದೆ. ಹಾಗಾಗಿ ಸೂಕ್ತ ಸಮಯಕ್ಕೆ ಯೋಜನೆಯನ್ನು ಜನರಿಗೆ ತಲುಪಿಸಿ ಆಡಳತದಲ್ಲಿ ಪಾರದರ್ಶಕತೆ ತಂದು ಉತ್ತಮ ಆಡಳಿತ ನೀಡಲು ಕ್ರಮವಹಿಸಿ ಎಂದು ಸೂಚನೆ ನೀಡಿದ್ದೇನೆ ಎಂದು ಅವರು ತಿಳಿಸಿದರು.


ಕಳೆದ ಬಾರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಇದ್ದಾಗ ಪ್ರೊ. ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದಲ್ಲಿ ಪಠ್ಯಪುಸ್ತಕ ರಚನಾ ಸಮಿತಿ ಮಾಡಲಾಗಿತ್ತು. ಆ ಸಮಿತಿ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿತ್ತು. ಬರಗೂರು ರಾಮಚಂದ್ರಪ್ಪ ಸಮಿತಿಯು ಪಠ್ಯ ಪರಿಷ್ಕರಣೆ ವೇಳೆ ಕೆಲವೊಂದು ಲೋಪ ದೋಷಗಳನ್ನು ಮಾಡಿದೆ ಎಂದು ನಂತರ ಅಧಿಕಾರಕ್ಕೆ ಬಂದಿದ್ದ ಬಿಜೆಪಿ ಸರ್ಕಾರ ಆಕ್ಷೇಪಿಸಿತ್ತು. ಅಲ್ಲದೆ, ರೋಹಿತ್ ಚಕ್ರತೀರ್ಥ ನೇತೃತ್ವದಲ್ಲಿ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ ರಚಿಸಿತ್ತು. ಚಕ್ರತೀರ್ಥ ನೇತೃತ್ವದ ಸಮಿತಿ 6 ರಿಂದ 10ನೇ ತರಗತಿವರೆಗಿನ ಸಮಾಜ ವಿಜ್ಞಾನ ಪಠ್ಯ ಪುಸ್ತಕ, 6 ರಿಂದ 10ನೇ ತರಗತಿವರೆಗಿನ ಕನ್ನಡ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿತ್ತು. 3ನೇ ತರಗತಿಯ ಪರಿಸರ ಅಧ್ಯಯನ ಪಠ್ಯ ಪುಸ್ತಕಗಳ ಪರಿಷ್ಕರಣೆಯನ್ನೂ ಮಾಡಿತ್ತು.


ಚಕ್ರತೀರ್ಥ ಸಮಿತಿ ಮಾಡಿರುವ ಪರಿಷ್ಕರಣೆಗೆ ಚಿಂತಕರು, ಬುದ್ಧಿಜೀವಿಗಳು ಹಾಗೂ ಪ್ರತಿಪಕ್ಷಗಳಿಂದ ವ್ಯಾಪಕ ಆಕ್ಷೇಪ ವ್ಯಕ್ತವಾಗಿತ್ತು. ದೊಡ್ಡ ಮಟ್ಟದ ವಿವಾದವೇ ಸೃಷ್ಟಿಯಾಗಿತ್ತು. ಆದಾಗ್ಯೂ ತನ್ನ ನಿಲುವಿಗೆ ಅಂಟಿಕೊಂಡ ಬಿಜೆಪಿ ಸರ್ಕಾರ ಪಠ್ಯ ಪುಸ್ತಕ ಪರಿಷ್ಕರಣೆಯನ್ನು ಸಮರ್ಥಿಸಿಕೊಂಡಿತ್ತು. ಇದೀಗ ಮತ್ತೆ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿರುವುದರಿಂದ ಪಠ್ಯ ಪುಸ್ತಕ ಮರು ಪರಿಷ್ಕರಣೆ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Tags: BJPcmsiddaramiahCongress Leader’sCongress PartyDCM DK ShivakumarKPCCPoliceSCHOOLTextBook RowsiddaramaiahsidduTextBook Rowಸಿದ್ದರಾಮಯ್ಯ
Previous Post

ಉದ್ಯೋಗಾಕಾಂಕ್ಷಿಗಳ ಗಮನಕ್ಕೆ : ಖಾಲಿ ಇದೆ ಪ್ರೊಫೆಸರ್​ ಹುದ್ದೆ, ಮಾಸಿಕ 1.20 ಲಕ್ಷ ರೂ. ಸಂಬಳ

Next Post

DCM DK Shivakumar | ಆಯುಧಪೂಜೆ ವೇಳೆ ಕೇಸರಿ ಹಾಕಿದ್ದ ಖಾಕಿಪಡೆ..! ಬಡ್ಡಿ ಸಮೇತ ಕೊಟ್ಟ ಡಿಸಿಎಂ..!

Related Posts

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು
Top Story

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

by ಪ್ರತಿಧ್ವನಿ
November 19, 2025
0

ಉಡುಪಿ: ವಿದ್ಯಾರ್ಥಿಗಳ ಜನಿವಾರ ತೆಗೆಯುವಂತೆ ಒತ್ತಾಯಿಸಿ ಕಾರಣವಿಲ್ಲದೇ ಮನಸೋ ಇಚ್ಛೆ ಬಸ್ಕಿ ಹೊಡೆಸಿರುವ ಶಿಕ್ಷಕನನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ. ಕಾರ್ಕಳದ ಮೊರಾರ್ಜಿ ದೇಸಾಯಿ ಇಂಗ್ಲಿಷ್ ಮಾಧ್ಯಮ ವಸತಿ...

Read moreDetails
ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

November 19, 2025
ರಾಜ್ಯದ ʼಶಕ್ತಿ ಕೇಂದ್ರʼದ ಮುಂದೆ ಡಕಾಯಿತಿ ಮತ್ತು ಗುಂಪು ಗಲಾಟೆ

ರಾಜ್ಯದ ʼಶಕ್ತಿ ಕೇಂದ್ರʼದ ಮುಂದೆ ಡಕಾಯಿತಿ ಮತ್ತು ಗುಂಪು ಗಲಾಟೆ

November 19, 2025
ಚಳಿ ತಡಿಯೋಕೆ ಆಗ್ತಿಲ್ಲ ಕಂಬಳಿ ನೀಡಿ: ಕೋರ್ಟ್‌ಗೆ ನಟ ದರ್ಶನ್‌ ಮನವಿ..!

ಚಳಿ ತಡಿಯೋಕೆ ಆಗ್ತಿಲ್ಲ ಕಂಬಳಿ ನೀಡಿ: ಕೋರ್ಟ್‌ಗೆ ನಟ ದರ್ಶನ್‌ ಮನವಿ..!

November 19, 2025
ಇಂದಿರಾ ಗಾಂಧಿ 108ನೇ ಜನ್ಮದಿನ: ಕಾಂಗ್ರೆಸ್‌ ನಾಯಕರಿಂದ ಗೌರವ ನಮನ

ಇಂದಿರಾ ಗಾಂಧಿ 108ನೇ ಜನ್ಮದಿನ: ಕಾಂಗ್ರೆಸ್‌ ನಾಯಕರಿಂದ ಗೌರವ ನಮನ

November 19, 2025
Next Post
DCM DK Shivakumar | ಆಯುಧಪೂಜೆ ವೇಳೆ ಕೇಸರಿ ಹಾಕಿದ್ದ ಖಾಕಿಪಡೆ..! ಬಡ್ಡಿ ಸಮೇತ ಕೊಟ್ಟ ಡಿಸಿಎಂ..!

DCM DK Shivakumar | ಆಯುಧಪೂಜೆ ವೇಳೆ ಕೇಸರಿ ಹಾಕಿದ್ದ ಖಾಕಿಪಡೆ..! ಬಡ್ಡಿ ಸಮೇತ ಕೊಟ್ಟ ಡಿಸಿಎಂ..!

Please login to join discussion

Recent News

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು
Top Story

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

by ಪ್ರತಿಧ್ವನಿ
November 19, 2025
ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌
Top Story

ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

by ಪ್ರತಿಧ್ವನಿ
November 19, 2025
ರಾಜ್ಯದ ʼಶಕ್ತಿ ಕೇಂದ್ರʼದ ಮುಂದೆ ಡಕಾಯಿತಿ ಮತ್ತು ಗುಂಪು ಗಲಾಟೆ
Top Story

ರಾಜ್ಯದ ʼಶಕ್ತಿ ಕೇಂದ್ರʼದ ಮುಂದೆ ಡಕಾಯಿತಿ ಮತ್ತು ಗುಂಪು ಗಲಾಟೆ

by ಪ್ರತಿಧ್ವನಿ
November 19, 2025
ಇಂದಿರಾ ಗಾಂಧಿ 108ನೇ ಜನ್ಮದಿನ: ಕಾಂಗ್ರೆಸ್‌ ನಾಯಕರಿಂದ ಗೌರವ ನಮನ
Top Story

ಇಂದಿರಾ ಗಾಂಧಿ 108ನೇ ಜನ್ಮದಿನ: ಕಾಂಗ್ರೆಸ್‌ ನಾಯಕರಿಂದ ಗೌರವ ನಮನ

by ಪ್ರತಿಧ್ವನಿ
November 19, 2025
ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು-ಪುರುಷೋತ್ತಮ ಬಿಳಿಮಲೆ
Top Story

ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು-ಪುರುಷೋತ್ತಮ ಬಿಳಿಮಲೆ

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

November 19, 2025
ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

November 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada