ಮೈಸೂರು : ಮೇ.26: ತೋಟಗಾರಿಕೆ ಇಲಾಖೆ ಮತ್ತು ಜಿಲ್ಲಾ ಪಂಚಾಯತ್ ಜಂಟಿಯಾಗಿ ಮೈಸೂರಿನಲ್ಲಿ ಮಾವು ಮೇಳ ಆಯೋಜಿಸಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಹೇಳಿದ್ದಾರೆ. ರೈತರು ಮತ್ತು ಗ್ರಾಹಕರ ನಡುವೆ ನೇರವಾಗಿ ಸಂಪರ್ಕ ಕಲ್ಪಿಸಬೇಕೆನ್ನುವ ಉದ್ದೇಶದಿಂದ ಈ ಮಾವುಮೇಳ ಪ್ರಾರಂಭಿಸಿದ್ದೇವೆ. ಮೈಸೂರು, ಚಾಮರಾಜನಗರ, ಮಂಡ್ಯ ಸೇರಿದಂತೆ ಇತರೆ ಜಿಲ್ಲೆಗಳಿಂದ ಮಾವು ಮೇಳಕ್ಕೆ ನೂರಾರು ಜನ ರೈತರು ಬಂದಿದ್ದಾರೆ. ಯಾವುದೇ ಕೆಮಿಕಲ್ ಬಳಸದೇ ಬೆಳೆದಿರುವ ಮಾವಿನಹಣ್ಣು ಹಣ್ಣುಗಳನ್ನು ಮಾರಾಟ ಮಾಡುತ್ತಿದ್ದೇವೆ.



ನೈಸರ್ಗಿಕವಾಗಿ ಬೆಳೆದಿರುವ ವಿವಿಧ ಬಗ್ಗೆಯ ಮಾವಿನ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳ. ಮಾವು ಮೇಳದಲ್ಲಿ ಒಟ್ಟು 28 ಮಳಿಗೆಗಳಲ್ಲಿ ಮಾವು ಮಾರಾಟ, ಮೈಸೂರು, ಮಂಡ್ಯ, ರಾಮನಗರ ಜಿಲ್ಲೆಗಳಿಂದ ಮಾವು ಮಾರಾಟಕ್ಕೆ ಬಂದಿರುವ ರೈತರು. ಮಾವು ಮೇಳದಲ್ಲಿ ಬಾದಾಮಿ, ರಸಪುರಿ, ಮಲ್ಲಿಕಾ, ಸಿಂಧೂರ, ತೋತಾಪುರಿ, ಮಲಗೋವಾ, ಹಿಮಾಮ್ ಪಸಂದ್, ಸಕ್ಕರೆ ಗುತ್ತಿ, ಭಾಗನ ಪಲ್ಲಿ, ಧಶೇರಿ ಸೇರಿದಂತೆ ವಿವಿಧ ಬಗೆಯ ಮಾವು ಮಾರಾಟಕ್ಕೆ ವ್ಯವಸ್ಥೆ. ಮೊದಲ ದಿನವೇ ಮಾವು ಮೇಳಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.


ಇತ್ತೀಚೆಗೆ ಸುರಿದ ಮಳೆಯಿಂದ ಮೈಸೂರು ಜಿಲ್ಲೆಯಾದ್ಯಂತ ಕೃಷಿ ಕ್ಷೇತ್ರಕ್ಕೆ ಅಷ್ಟೊಂದು ನಷ್ಟವಾಗಿಲ್ಲ. ತೋಟಗಾರಿಕೆ ಬೆಳೆಗಳ ಪೈಕಿ ಬಾಳೆ ತೋಟಗಳಿಗೆ ನಷ್ಟ ಉಂಟಾಗಿದೆ. ಭಾರೀ ಮಳೆ, ಗಾಳಿಯಿಂದ ಮೈಸೂರು ಜಿಲ್ಲೆಯಲ್ಲಿ 3 ಜನ ಸಾವನ್ನಪ್ಪಿದ್ದಾರೆ. 10 ಜಾನುವಾರುಗಳು ಸಾವನ್ನಪ್ಪಿದೆ. ಇದರ ಜೊತೆಗೆ ಹಲವೆಡೆ ಮನೆಗಳಿಗೆ ಹಾನಿಯಾಗಿದೆ. ಈ ಸಂಬಂಧ ಕಂದಾಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ಕೊಡಲು ಸೂಚಿಸಿದ್ದೇವೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ನಮ್ಮಲ್ಲಿ ರಸಗೊಬ್ಬರ ಮತ್ತು ಬಿತ್ತನೆ ಬೀಜಕ್ಕೆ ಯಾವುದೇ ರೀತಿಯ ಕೊರತೆಯಿಲ್ಲ ಎಂದರು.