ಸಿಎಂ ಸಿದ್ದರಾಮಯ್ಯ ರಾಷ್ಟ್ರ ರಾಜಧಾನಿಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾರನ್ನ ಭೇಟಿಯಾಗಿದ್ದಾರೆ. ಸಿಎಂ ಜೊತೆ ರಾಜ್ಯ ಸಚಿವ ಬಿ.ಝಡ್ ಜಮೀರ್ ಅಹಮದ್ ಖಾನ್, ಶಾಸಕ ಬೈರತಿ ಸುರೇಶ್ ಕೂಡ ಉಪಸ್ಥಿತರಿದ್ರು.
ಈ ಕುರಿತು ಟ್ವಿಟ್ ಮಾಡಿರುವ ಎಂ.ಬಿ ಪಾಟೀಲ್ “ನವದೆಹಲಿಯಲ್ಲಿ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರೊಂದಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ರಾಬರ್ಟ್ ವಾದ್ರಾ ಅವರನ್ನು ಭೇಟಿ ಮಾಡಲಾಯಿತು. ಈ ವೇಳೆ ಸಚಿವರಾದ ಜಮೀರ್ ಅಹಮದ್ ಖಾನ್, ಶಾಸಕರಾದ ಬೈರತಿ ಸುರೇಶ್ ಇದ್ದರು” ಎಂದು ತಿಳಿಸಿದ್ದಾರೆ.
![](https://pratidhvani.com/wp-content/uploads/2023/05/WhatsApp-Image-2023-05-26-at-4.54.28-PM-edited.jpeg)
ಸದ್ಯದ ಮಟ್ಟಿಗೆ ಸಿಎಂ ಸಿದ್ದು ಸಚಿವ ಸಂಪುಟದಲ್ಲಿ ಯಾರೆಲ್ಲ ಇರಲಿದ್ದಾರೆ ಅನ್ನೋ ಕುತೂಹಲ ಎಲ್ಲೆಡೆ ಮನೆ ಮಾಡಿದ್ದು ಈಗಾಗಲೇ ಸಾಕಷ್ಟು ಮಂದಿ ಶಾಸಕರು ದೆಹಲಿಗೆ ಭೇಟಿ ನೀಡಿ ತಮಗೂ ಸಚಿವ ಸ್ಥಾನ ನೀಡುವಂತೆ ಹೈಕಮಾಂಡ್ ನ ಬಳಿ ಲಾಭಿಯನ್ನ ಮಾಡಿದ್ದಾರೆ.
![](https://pratidhvani.com/wp-content/uploads/2023/05/WhatsApp-Image-2023-05-26-at-4.54.27-PM-1.jpeg)
ಇನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಕೂಡ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಈಗಾಗಲೇ ಸಚಿವ ಸಂಪುಟದಲ್ಲಿ ಯಾರೆಲ್ಲಾ ಇರಬೇಕು ಎಂಬುದರ ಕುರಿತು ಚರ್ಚೆಯನ್ನು ನಡೆಸಿದ್ದಾರೆ ಎನ್ನಲಾಗುತ್ತಿದೆ.
![](https://pratidhvani.com/wp-content/uploads/2023/05/WhatsApp-Image-2023-05-26-at-5.06.20-PM-713x1024.jpeg)
ಆದರೆ ಈ ಬಾರಿಯ ಸಚಿವ ಸಂಪುಟದಲ್ಲಿ ಸಿಎಂ ಸಿದ್ದರಾಮಯ್ಯನವರ ಬಣದ ನಾಯಕರುಗಳು ಸಚಿವರಾಗ್ತಾರಾ? ಅಥವಾ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಬಣದ ಶಾಸಕರುಗಳು ಸಚಿವರಾಗುತ್ತಾರಾ? ಎಂಬ ಹಲವು ಪ್ರಶ್ನೆಗಳಿಗೆ ಇನ್ನೆಷ್ಟೇ ಉತ್ತರ ಸಿಗಬೇಕಾಗಿದೆ