• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಕಾಂಗ್ರೆಸ್‌ಗೆ ಗ್ಯಾರಂಟಿಯೇ ಸವಾಲು.. ಸಮಯವಿದೆ.. ಸಂಕಷ್ಟ ಗ್ಯಾರಂಟಿ..!

Any Mind by Any Mind
May 26, 2023
in Uncategorized
0
ಕಾಂಗ್ರೆಸ್‌ಗೆ ಗ್ಯಾರಂಟಿಯೇ ಸವಾಲು.. ಸಮಯವಿದೆ.. ಸಂಕಷ್ಟ ಗ್ಯಾರಂಟಿ..!
Share on WhatsAppShare on FacebookShare on Telegram

ಕಾಂಗ್ರೆಸ್‌ ಪಕ್ಷ 5 ಗ್ಯಾರಂಟಿಗಳನ್ನು ರಾಜ್ಯದ ಜನರ ಮುಂದಿಟ್ಟು ಮತ ಕೇಳಿತ್ತು. ಜನರು ಪಕ್ಷಾತೀತವಾಗಿ ಕಾಂಗ್ರೆಸ್‌ ಗ್ಯಾರಂಟಿಗಳಿಗೆ ಮಾರು ಹೋಗಿ ಮತ ಹಾಕಿದ ಪರಿಣಾಮವೇ ಇಂದಿನ ಅಭೂತಪೂರ್ವ ಗೆಲುವು. ಬರೋಬ್ಬರಿ 135 ಸ್ಥಾನಗಳಲ್ಲಿ ಗೆದ್ದು ಬೀಗಿರುವ ಕಾಂಗ್ರೆಸ್‌ ಸರ್ಕಾರ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದೆ. ಕ್ಯಾಬಿನೆಟ್‌ ಕಸರತ್ತು ಕೂಡ ನಡೆದಿದೆ. ಅಧಿಕಾರ ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್‌ ಇನ್ನು ಜೇಡರ ಬಲೆ ಬಿಡಿಸುವ ಕೆಲಸ ಮಾಡುತ್ತಿರುವಾಗಲೇ ಸಮಯ ಓಡುತ್ತಿದೆ. ಕಾಂಗ್ರೆಸ್‌ ಪಕ್ಷ ಚುನಾವಣೆಗೂ ಮುನ್ನ ಮೊದಲ ಕ್ಯಾಬಿನೆಟ್‌ನಲ್ಲೇ ಜಾರಿ ಮಾಡ್ತೇವೆ ಎಂದಿತ್ತು. ಹೇಳಿದಂತೆ ಸಂಪುಟ ಒಪ್ಪಿಗೆ ಕೊಟ್ಟಾಗಿದೆ. ಆದರೆ ಆದೇಶ ಆಗುವುದು ಮುಂದಿನ ಕ್ಯಾಬಿನೆಟ್‌ ಸಭೆಯಲ್ಲಿ ಅನ್ನೋದನ್ನು ಸ್ವತಃ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ಜೂನ್‌ ಒಂದರಿಂದ ಜಾರಿಯಾಗುವ ನಿರೀಕ್ಷೆ ಕಾಂಗ್ರೆಸ್‌ಗೆ ಸಂಕಷ್ಟ ತರುವ ಮುನ್ಸೂಚನೆ ನೀಡುತ್ತಿದೆ.

ADVERTISEMENT

ಜೂನ್‌ 1 ರಿಂದ ಜಾರಿ ಆಗುತ್ತಾ ಕಾಂಗ್ರೆಸ್‌ ಗ್ಯಾರಂಟಿ..?

ಮೊದಲ ಕ್ಯಾಬಿನೆಟ್‌ನಲ್ಲಿ ಘೋಷಣೆ ಅಂದಿದ್ದ ಸರ್ಕಾರ ಒಪ್ಪಿಗೆ ಕೊಟ್ಟಿದ್ದೇವೆ. ಮುಂದಿನ ಕ್ಯಾಬಿನೆಟ್‌ನಲ್ಲಿ ಆದೇಶ ಮಾಡುತ್ತೇವೆ ಎಂದಿದ್ದಾರೆ. ಸ್ವತಃ ಸಿಎಂ ಹೇಳಿದಾಗ ಮಾಧ್ಯಮದವರು ಪ್ರಶ್ನೆಗೆ ಗರಂ ಆಗಿ ಉತ್ತರಿಸಿದ್ದ ಸಿಎಂ ಸಿದ್ದರಾಮಯ್ಯ, ಮುಂದಿನ ಕ್ಯಾಬಿನೆಟ್‌ ಮುಂದಿನ ತಿಂಗಳು ಆಗೋದಿಲ್ಲ, ಮುಂದಿನ ವಾರವೇ ಆಗುತ್ತೆ ಅಂದಿದ್ದರು. ಶನಿವಾರ ಮತ್ತೆ ಬಂದಿದೆ. ಕ್ಯಾಬಿನೆಟ್‌ ವಿಸ್ತರಣೆ ಕಸರತ್ತು ನಡೀತಾ ಇದೆ. ವಿಸ್ತರಣೆ ಆದ ಬಳಿಕ ಕ್ಯಾಬಿನೆಟ್‌ ಮೀಟಿಂಗ್‌ನಲ್ಲಿ ಎಲ್ಲಾ 5 ಗ್ಯಾರಂಟಿಗಳನ್ನು ಜಾರಿಗೆ ಆದೇಶ ಮಾಡಿ ಕೊಟ್ಟ ಮಾತಿನಂತೆ ನಡೆದುಕೊಳ್ತಾರಾ..? ಅನ್ನೋ ಕುತೂಹಲ ಕಾಂಗ್ರೆಸ್‌ ಕಾರ್ಯಕರ್ತರಲ್ಲಿದೆ. ಆದರೆ ಕಾಂಗ್ರೆಸ್‌ ಕೊಟ್ಟ ಮಾತು ತಪ್ಪಿದ ಕೂಡಲೇ ಬೀದಿಗಿಳಿದು ಪ್ರತಿಭಟನೆ ಮಾಡೋದಕ್ಕೆ ವಿರೋಧ ಪಕ್ಷಗಳು ಸಜ್ಜಾಗಿವೆ. ಅಷ್ಟೇ ಅಲ್ಲ, ಹೊಸದಾಗಿ ರಚನೆ ಆಗಿರುವ ಸರ್ಕಾರಕ್ಕೆ ಸಮಯವನ್ನೂ ಕೊಡದ ವಿಪಕ್ಷಗಳು, ಮೊದಲ ಕ್ಯಾಬಿನೆಟ್‌ನಲ್ಲೇ ಜಾರಿ ಅಂದಿದ್ದು ನಾವಲ್ಲ, ಅವರೇ ಹೇಳಿದ್ದರು. ಜನರಿಗೆ ಈಗ ಕೊಡಿ ಎಂದು ಮೊಕ್ಕಾಂ ಕುಳಿತಿದ್ದಾರೆ.

ಷರತ್ತುಗಳನ್ನು ಹಾಕಿದರೂ ವಿರೋಧಕ್ಕೆ ತಯಾರಿ..!

ಕಾಂಗ್ರೆಸ್‌ ಪಕ್ಷ 5 ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು. ಆದರೆ ಯಾವುದೇ ಷರತ್ತುಗಳ ಬಗ್ಗೆ ಏನನ್ನೂ ಹೇಳಿರಲಿಲ್ಲ. ಆದರೆ ಇದೀಗ ಕಾಂಗ್ರೆಸ್‌ ಪಕ್ಷ ಎಲ್ಲಾ 5 ಗ್ಯಾರಂಟಿಗಳನ್ನೂ ಜಾರಿ ಮಾಡಲು ಕೆಲವೊಂದು ನಿಯಮಗಳನ್ನು ಹಾಕುವುದು ಅನಿವಾರ್ಯ ಎನ್ನಲಾಗ್ತಿದೆ. ಪದವೀಧರರಿಗೆ 3 ಸಾವಿರ ರೂಪಾಯಿ ಮಾಸಿಕ ಭತ್ಯೆ ಎಂದು ಮಾತ್ರ ಹೇಳಿದ್ದರು. ಆದರೆ ಕಳೆದ ಸಾಲಿನಲ್ಲಿ ಪಾಸ್‌ ಆಗಿರುವ ಯುವಕ, ಯುವತಿಯರಿಗೆ ಮಾತ್ರ ಎನ್ನುವುದು ಕಣ್ಣು ಕೆಂಪಾಗುವಂತೆ ಮಾಡಿದೆ. ಯಾವುದೇ ಷರತ್ತು ಹಾಕದೆ ಎಲ್ಲರಿಗೂ ಯೋಜನೆಯ ಲಾಭ ಸಿಗಬೇಕು ಎಂದು ವಿರೋಧ ಪಕ್ಷಗಳು ಸರ್ಕಾರವನ್ನು ಜೇಡರ ಬಲೆಯಲ್ಲಿ ಸಿಲುಕಿಸುವ ಕೆಲಸ ಮಾಡಲಾಗ್ತಿದೆ. ಒಂದು ವೇಳೆ ಕಾಂಗ್ರೆಸ್‌ ಎಲ್ಲಾ ಯೋಜನೆಗಳಿಗೂ ಕೆಲವೊಂದು ಷರತ್ತುಗಳನ್ನು ವಿಧಿಸಿದರೆ ವಿರೋಧ ಪಕ್ಷಗಳು ಯೋಜನೆಯ ಲಾಭ ವಂಚಿತ ಜನರನ್ನು ಸೆಳೆಯುವ ಸಾಧ್ಯತೆ ಹೆಚ್ಚಾಗಿದೆ. ಈಗ ಲಾಭ ಆಗುವ ರೀತಿಯಲ್ಲಿ ಕಾಂಗ್ರೆಸ್‌ ಲೆಕ್ಕಾಚಾರ ಮಾಡ್ತಿದೆ.

ಕಾಂಗ್ರೆಸ್‌ ಕಣ್ಣ ಮುಂದಿರುವುದು ಲೋಕಸಭಾ ಚುನಾವಣೆ..!

ಎಲ್ಲಾ 5 ಯೋಜನೆಗಳನ್ನು ಜಾರಿ ಮಾಡಲು ಕಾಂಗ್ರೆಸ್‌ ಸರ್ಕಾರ ಕೆಲವೊಂದು ಷರತ್ತು ವಿಧಿಸುವುದು ಖಂಡಿತ. ಆದರೆ ಷರತ್ತುಗಳು ಲೋಕಸಭಾ ಚುನಾವಣೆ ಮೇಲೆ ಪರಿಣಾಮ ಬೀರದಂತೆ ಲೆಕ್ಕಾಚಾರ ಹಾಕಲಾಗ್ತಿದೆ. ಎಷ್ಟು ಷರತ್ತುಗಳನ್ನು ಹಾಕಿದರೆ ಎಷ್ಟು ಮಂದಿ ಹೊರಗೆ ಉಳಿಯುತ್ತಾರೆ ಅನ್ನೋ ಲೆಕ್ಕಾಚಾರದ ಜೊತೆಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಯೋಜನೆ ವಂಚಿತರು ಬೇರೆ ಪಕ್ಷಗಳಿಗೆ ಮತ ಹಾಕಿದರೆ ಆಗುವ ಪರಿಣಾಮ ಏನು ಅನ್ನೋ ಬಗ್ಗೆಯೂ ನೋಡಲಾಗ್ತಿದೆ. ಬಲ್ಲ ಮೂಲಗಳ ಮಾಹಿತಿ ಪ್ರಕಾರ ಮೊದಲು ಜಾರಿ ಮಾಡುವಾಗ ಎಲ್ಲರಿಗೂ ಯೋಜನೆಯ ಲಾಭ ಸಿಗುವಂತೆ ಮಾಡಿ, ಕಾಲಕ್ರಮೇಣ ಲೋಕಸಭಾ ಚುನಾವಣೆ ಬಳಿಕ ಕೆಲವೊಂದು ಜನರಿಗೆ ಲಾಭ ಸಿಗದಂತೆ ಮಾಡುವ ಮೂಲಕ ಸರ್ಕಾರದ ಬೊಕ್ಕಸಕ್ಕೆ ಆಗುವ ನಷ್ಟವನ್ನು ತಡೆಯುವುದಕ್ಕೆ ಯೋಜನೆ ಸಿದ್ಧವಾಗ್ತಿದೆ ಎನ್ನಲಾಗಿದೆ. ಅದೇನೇ ಇರಲಿ, ಜೂನ್‌ 1 ರಿಂದ ಗ್ಯಾರಂಟಿ ಯೋಜನೆಗಳ ಜಾರಿಗೆ ಜನ ಕಾಯುತ್ತಿದ್ದಾರೆ. ಒಂದು ವೇಳೆ ತಡವಾದರೆ ಸಂಕಷ್ಟ ಗ್ಯಾರಂಟಿ..

ಕೃಷ್ಣಮಣಿ

Tags: BJP GovernmentbsbommaicmsiddaramiahCongress GuaranteeCongress Guarantee CardCongress PartycongressvsbjpdcmDKShivakumarKPCC presidentlatest newspratapsimha
Previous Post

CM Siddaramaiah Cabinet : ಸಚಿವ ಸಂಪುಟದಲ್ಲಿ ಪ್ರಾದೇಶಿಕ, ಸಾಮಾಜಿಕ ನ್ಯಾಯ ಎತ್ತಿ ಹಿಡಿದ CM ಸಿದ್ದರಾಮಯ್ಯ

Next Post

Atmanirbha Bharat Abhiyan | ಆತ್ಮನಿರ್ಭ ಭಾರತ ಅಭಿಯಾನ ಆರಂಭವಾಗಿದ್ದು 1950ರಷ್ಟು ಹಿಂದೆ..!

Related Posts

ಆಯುರ್ವೇದಿಕ್ ಚಿಕಿತ್ಸೆ ಟೆಂಟ್: 40 ಲಕ್ಷ ವಂಚಿಸಿದ್ದ ನಕಲಿ ಸ್ವಾಮೀಜಿ ಬಂಧನ
Uncategorized

ಆಯುರ್ವೇದಿಕ್ ಚಿಕಿತ್ಸೆ ಟೆಂಟ್: 40 ಲಕ್ಷ ವಂಚಿಸಿದ್ದ ನಕಲಿ ಸ್ವಾಮೀಜಿ ಬಂಧನ

by ಪ್ರತಿಧ್ವನಿ
December 10, 2025
0

ಬೆಂಗಳೂರು: ಲೈಂಗಿಕ ಸಮಸ್ಯೆಗೆ ಪರಿಹಾರ ನೀಡುತ್ತೇವೆ ಎಂದು ಐಟಿ ಕಂಪನಿಯ ಉದ್ಯೋಗಿಗೆ ಬರೋಬ್ಬರಿ 40 ಲಕ್ಷ ವಂಚಿಸಿದ್ದ ನಕಲಿ ಸ್ವಾಮೀಜಿ ವಿನಯ್ ಗುರೂಜಿ ಸೇರಿ ಇಬ್ಬರನ್ನ ಜ್ಞಾನಭಾರತಿ...

Read moreDetails
Belagavi Politics: ಲಕ್ಷ್ಮಣ್‌ ಸವದಿಗೆ ತೀವ್ರ ನಿರಾಸೆ ತಂದಿಟ್ಟ ಜಾರಕಿಹೊಳಿ ಬ್ರದರ್ಸ್‌ ತಂತ್ರ

Belagavi Politics: ಲಕ್ಷ್ಮಣ್‌ ಸವದಿಗೆ ತೀವ್ರ ನಿರಾಸೆ ತಂದಿಟ್ಟ ಜಾರಕಿಹೊಳಿ ಬ್ರದರ್ಸ್‌ ತಂತ್ರ

December 13, 2025
*ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಆರ್.ವಿ. ದೇವರಾಜ್ ಮೈಸೂರಿನಲ್ಲಿ ವಿಧಿವಶರಾಗಿದ್ದಾರೆ*

*ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಆರ್.ವಿ. ದೇವರಾಜ್ ಮೈಸೂರಿನಲ್ಲಿ ವಿಧಿವಶರಾಗಿದ್ದಾರೆ*

December 2, 2025
ಬೆಂಗಳೂರಲ್ಲಿ ದೇಶದ ಅತಿದೊಡ್ಡ ಸೈಬರ್ ವಂಚನೆ ಬಯಲು

ಬೆಂಗಳೂರಲ್ಲಿ ದೇಶದ ಅತಿದೊಡ್ಡ ಸೈಬರ್ ವಂಚನೆ ಬಯಲು

November 17, 2025

ಜಪಾನಿನ ನೈಡೆಕ್ ಕಂಪನಿಯ ಆರ್ಚರ್ಡ್ ಹಬ್ ಗೆ ಚಾಲನೆ ನೀಡಿದ ಸಚಿವ ಎಂ ಬಿ ಪಾಟೀಲ್..

November 15, 2025
Next Post
Atmanirbha Bharat Abhiyan | ಆತ್ಮನಿರ್ಭ ಭಾರತ ಅಭಿಯಾನ ಆರಂಭವಾಗಿದ್ದು 1950ರಷ್ಟು ಹಿಂದೆ..!

Atmanirbha Bharat Abhiyan | ಆತ್ಮನಿರ್ಭ ಭಾರತ ಅಭಿಯಾನ ಆರಂಭವಾಗಿದ್ದು 1950ರಷ್ಟು ಹಿಂದೆ..!

Please login to join discussion

Recent News

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್
Top Story

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 14, 2025
ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ
Top Story

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

by ಪ್ರತಿಧ್ವನಿ
December 14, 2025
ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ
Top Story

ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ

by ಪ್ರತಿಧ್ವನಿ
December 14, 2025
Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!
Top Story

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

by ಪ್ರತಿಧ್ವನಿ
December 14, 2025
“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

December 14, 2025
ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

December 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada