• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

We will prepare a master plan : ಬೆಂಗಳೂರು ಬದಲಾವಣೆಗೆ ಮಾಸ್ಟರ್ ಪ್ಲಾನ್ ಶೀಘ್ರ ರೂಪಿಸುತ್ತೇವೆ : ಡಿಸಿಎಂ

ಪ್ರತಿಧ್ವನಿ by ಪ್ರತಿಧ್ವನಿ
May 29, 2023
in Top Story, ಕರ್ನಾಟಕ, ರಾಜಕೀಯ
0
We will prepare a master plan : ಬೆಂಗಳೂರು ಬದಲಾವಣೆಗೆ ಮಾಸ್ಟರ್ ಪ್ಲಾನ್ ಶೀಘ್ರ ರೂಪಿಸುತ್ತೇವೆ : ಡಿಸಿಎಂ
Share on WhatsAppShare on FacebookShare on Telegram

ಕರಪ್ಷನ್ ಫ್ರೀ ಕಾರ್ಪೋರೇಶನ್, ಜನಸ್ನೇಹಿ ಕಾರ್ಪೋರೇಶನ್ ನಿರ್ಮಾಣ ನಮ್ಮ ಸಂಕಲ್ಪ. ಬೆಂಗಳೂರು ಅಭಿವೃದ್ಧಿ (Bengaluru development) ಆಗಬೇಕು. ಅದಕ್ಕೆ ಶ್ರಮಿಸಬೇಕು. ಮುಂದಿನ ನಾಲ್ಕು ತಿಂಗಳು ಮಳೆಗಾಲದಲ್ಲಿ ಜನರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದ್ದೇನೆ. ಒಂದೇ ದಿನದಲ್ಲಿ ಎಲ್ಲ ಮಾಡ್ತೀನಿ ಅನ್ನೋ ಭ್ರಮೆ ನನಗಿಲ್ಲ. ಇದಕ್ಕೆ ಸಮಯ ಬೇಕು. ನಾನು ಗ್ರಾಮೀಣ ಪ್ರದೇಶದಿಂದ ಪ್ರತಿನಿಧಿಸಿದ್ದರು, ಬೆಂಗಳೂರು ನಗರದ ಜತೆಗೆ ಹೆಚ್ಚಿನ ಒಡನಾಟವಿದೆ.

ADVERTISEMENT

ಬೆಂಗಳೂರು ಕಟ್ಟಿದ ಕೆಂಪೇಗೌಡರು, (KempeGowda) ನಂತರ ಕೆಂಗಲ್ ಹನುಮಂತಯ್ಯನವರು ಸೇರಿದಂತೆ ಅನೇಕ ನಾಯಕರು ಬೆಂಗಳೂರು ಅಭಿವೃದ್ಧಿಗೆ (BDA) ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡಿದ್ದಾರೆ. ಇವರು ಕೊಟ್ಟಿರುವ ಬೆಂಗಳೂರನ್ನು ನಾವು ಉಳಿಸಿಕೊಂಡು, ಬೆಳೆಸಿಕೊಂಡು ಹೋಗಬೇಕು. ಬೆಂಗಳೂರಿನಲ್ಲಿ ಒಂದು ಕೋಟಿಗೂ ಹೆಚ್ಚು ಮಂದಿ ವಾಸಿಸುತ್ತಿದ್ದಾರೆ. 40-50 ಲಕ್ಷ ಮಂದಿ ಹೊರಗಿನಿಂದ ಬಂದು ಸಂಚಾರ ಮಾಡುತ್ತಿದ್ದಾರೆ. ಇವರೆಲ್ಲರಿಗೂ ನಾವು ಉತ್ತಮ ಸವಲತ್ತು ಒದಗಿಸಬೇಕಾಗಿದೆ. ಕಳೆದ ಎರಡು ದಶಕಗಳಿಂದ ವಿಶ್ವವೇ ಬೆಂಗಳೂರಿನ ಮೂಲಕ ಭಾರತವನ್ನು ನೋಡುತ್ತಿದೆ. ಬೆಂಗಳೂರು ಅಭಿವೃದ್ಧಿ ಕುರಿತು ಎಲ್ಲಾ ಅಧಿಕಾರಿಗಳು ನನಗೆ ಮಾಹಿತಿ ನೀಡಿದ್ದಾರೆ. ಬೆಂಗಳೂರು ಬಗ್ಗೆ ಕಾಳಜಿ ಹೊಂದಿರುವ ಇತರೆ ಕ್ಷೇತ್ರದ ಪ್ರಮುಖರ ಜತೆ ಚರ್ಚೆ ಮಾಡುತ್ತೇನೆ. ಅವರ ಸಲಹೆ ಪಡೆಯುತ್ತೇನೆ.

ಕೆಲವು ಕಾಮಗಾರಿಗಳಲ್ಲಿ ನಕಲಿ ಬಿಲ್, ಕೆಲವು ಕಾಮಗಾರಿಗಳಲ್ಲಿ ಕೆಲಸ ಮಾಡದೆ ಬಿಲ್ ಪಡೆಯಲಾಗಿದೆ. ಮತ್ತೆ ಕೆಲವು ಕಡೆಗಳಲ್ಲಿ ಎರಡು ಬಿಲ್ ಪಡೆಯಲಾಗಿದೆ. ಎಲ್ಲೆಲ್ಲಿ ಇಂತಹ ಅಕ್ರಮ ಆಗಿದೆ ಎಂದು ನನಗೆ ಮಾಹಿತಿ ಇದೆ. ಆದರೂ ನೀವೇ ತನಿಖೆ ಮಾಡಿ ವರದಿ ನೀಡಿ ಎಂದು ಹೇಳಿದ್ದೇನೆ. ಸರ್ಕಾರದ ಮೇಲೆ ಬಿಬಿಎಂಪಿ ಹೆಚ್ಚು ಅವಲಂಬನೆ ಆಗದೆ ತಮ್ಮ ಸಂಪನ್ಮೂಲ ತಾವೇ ಸಂಗ್ರಹಿಸಬೇಕು. ಸಂಪನ್ಮೂಲ ಸೋರಿಕೆ ತಡೆದು ಅಭಿವೃದ್ಧಿ ಮಾಡಬೇಕು. ಈ ಹಿಂದೆ ನರ್ಮ್ ಯೋಜನೆ ಮೂಲಕ ಕೇಂದ್ರದಿಂದ ಹಣಕಾಸಿನ ನೆರವು ನೀಡಲಾಗುತ್ತಿತ್ತು. ಆದರೆ ಈಗ ಯಾವುದೇ ಸಹಾಯ ಸಿಗುತ್ತಿಲ್ಲ ಎಂದು ಹೇಳಿದ್ದಾರೆ.

ಬೆಂಗಳೂರು ಬದಲಾವಣೆಗೆ ಮಾಸ್ಟರ್

ಪಾಲಿಕೆ ಜನಸ್ನೆಹಿಯಾಗಿ ಜನರ ಕಷ್ಟಕ್ಕೆ ಸ್ಪಂದಿಸಬೇಕು. ಶೀಘ್ರ ಪಾಲಿಕೆ ಚುನಾವಣೆ ಮಾಡುತ್ತೇವೆ. ಅದಕ್ಕೆ ಸಿದ್ಧವಾಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ತೆರಿಗೆ ಹೆಚ್ಚಳದ ಬಗ್ಗೆ ಪ್ರಶ್ನೆ ಕೇಳಿದಾಗ, “ಚುನಾವಣೆಗೂ ಮುನ್ನ ಈ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿದೆ. ಇದನ್ನು ನಾನು ಖುದ್ದಾಗಿ ಪರಿಶೀಲನೆ ಮಾಡುತ್ತೇನೆ. ಏಕಾಏಕಿ ತೀರ್ಮಾನ ಮಾಡುವುದಿಲ್ಲ. ಬೆಂಗಳೂರು ಅಭಿವೃದ್ಧಿ ಆಗಬೇಕು” ಎಂದು ತಿಳಿಸಿದರು. ಬಿಬಿಎಂಪಿಯಲ್ಲಿ 40% ಕಮಿಷನ್ ಕುರಿತು ಕೇಳಿದ ಪ್ರಶ್ನೆಗೆ, “ನಾನು ಗುತ್ತಿಗೆದಾರರ ಜತೆ ಚರ್ಚೆ ಮಾಡುತ್ತೇನೆ. ಎಲ್ಲಾ ವರ್ಗದ ಜನರ ಜತೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ” ಎಂದು ತಿಳಿಸಿದರು. ರಸ್ತೆ ಗುಂಡಿ ಹಾಗೂ ಮಳೆ ವಿಚಾರವಾಗಿ ನಿಮ್ಮ ಕ್ರಮಗಳೇನು ಎಂಬ ಪ್ರಶ್ನೆಗೆ, “ಪ್ರತಿ ಕೆಲಸ ಮಾಡುವ ಮುನ್ನ ಹಾಗೂ ಕಾಮಗಾರಿ ನಂತರ ಡ್ರೋನ್ ವಿಡಿಯೋ ಆಗಬೇಕು. ಕೇವಲ ಫೋಟೋ ಸಾಲುವುದಿಲ್ಲ. ಮಳೆ ನೀರು ಸರಾಗವಾಗಿ ಹರಿಯಲು ವ್ಯವಸ್ಥೆ ಕಲ್ಪಿಸಬೇಕು” ಎಂದು ತಿಳಿಸಿದರು. ರಾಜಕಾಲುವೆ ತೆರವು ಕಾರ್ಯಾಚರಣೆ ಬಗ್ಗೆ ಕೇಳಿದಾಗ, “ನಾನು ಅಧಿಕಾರಿಗಳ ಜತೆ ಸುದೀರ್ಘ ಚರ್ಚೆ ಮಾಡಿದ್ದೇನೆ. ಈ ಬಗ್ಗೆ ಪರಿಶೀಲನೆ ಮಾಡುತ್ತೇವೆ” ಎಂದು ತಿಳಿಸಿದರು. ಬಿಬಿಎಂಪಿ ವಾರ್ಡ್ ಗಳ ಮರುವಿಂಗಡನೆ ಕುರಿತು ಕೇಳಿದ ಪ್ರಶ್ನೆಗೆ, ರಾಮಲಿಂಗಾ ರೆಡ್ಡಿ ಅವರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದ್ದೇವೆ. ವಾರ್ಡ್ ಮರುವಿಂಗಡನೆ ಪರಿಶೀಲನೆ ಮಾಡುತ್ತೇವೆ” ಎಂದು ತಿಳಿಸಿದರು.

Tags: BBMP OfficersBJP GovernmentbjpvscongressBreaking NewsbsbommaicmsiddaramiahcongressvsbjpdcmDCM DK ShivakumardcmmeetingHdKumaraswamyJDS Karnatakalatestnewstodayಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿ
Previous Post

9th May Sahitya Mela Successfully Concluded : ಯಶಸ್ವಿಯಾಗಿ ಮುಕ್ತಾಯವಾದ ೯ ನೇ ಮೇ ಸಾಹಿತ್ಯ ಮೇಳ..!

Next Post

Chikkaballapur News : ‘ಚಿಕ್ಕಬಳ್ಳಾಪುರ ನಗರದಲ್ಲಿ ನನ್ನ ಫ್ಲೆಕ್ಸ್ ಇರಬಾರದು’ ; ಶಾಸಕ ಪ್ರದೀಪ್‌ ಈಶ್ವರ್‌

Related Posts

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?
Top Story

ಮಿತವ್ಯಯಕ್ಕೆ ಮೋದಿ ಹೊಸ ಹೆಜ್ಜೆ; ಪ್ರಧಾನಿ ಬೆಂಗಾವಲು ವಾಹನಗಳ ಸಂಖ್ಯೆ ಇಳಿಕೆ

by ಪ್ರತಿಧ್ವನಿ
May 13, 2026
0

ನವದೆಹಲಿ: ಇಂಧನ ಉಳಿತಾಯ ಮತ್ತು ಮಿತವ್ಯಯ ಕ್ರಮಗಳ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕೃತ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿತಗೊಳಿಸಿರುವುದು ಇದೀಗ ದೇಶಾದ್ಯಂತ ಚರ್ಚೆಗೆ...

Read moreDetails
ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

May 13, 2026
BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

May 13, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
Next Post
Chikkaballapur News :  ‘ಚಿಕ್ಕಬಳ್ಳಾಪುರ ನಗರದಲ್ಲಿ ನನ್ನ ಫ್ಲೆಕ್ಸ್ ಇರಬಾರದು’ ; ಶಾಸಕ ಪ್ರದೀಪ್‌ ಈಶ್ವರ್‌

Chikkaballapur News : ‘ಚಿಕ್ಕಬಳ್ಳಾಪುರ ನಗರದಲ್ಲಿ ನನ್ನ ಫ್ಲೆಕ್ಸ್ ಇರಬಾರದು’ ; ಶಾಸಕ ಪ್ರದೀಪ್‌ ಈಶ್ವರ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada