• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Pushpa Amarnath : ದೇಶದಲ್ಲಿ ಬಿಜೆಪಿ ಸರ್ಕಾರದ ಆಳ್ವಿಕೆಯಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ ; ಪುಷ್ಪಾ ಅಮರನಾಥ್

Any Mind by Any Mind
June 1, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
Pushpa Amarnath : ದೇಶದಲ್ಲಿ ಬಿಜೆಪಿ ಸರ್ಕಾರದ ಆಳ್ವಿಕೆಯಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ ; ಪುಷ್ಪಾ ಅಮರನಾಥ್
Share on WhatsAppShare on FacebookShare on Telegram

ರಾಜ್ಯದ ಮಹಿಳೆಯರು ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಕೈ ಹಿಡಿದಿದ್ದು ಅವರಿಗೆ ಈ ಸಂದರ್ಭದಲ್ಲಿ ನಾವು ಅಭಿನಂದನೆ ಸಲ್ಲಿಸಲು ಬಯಸುತ್ತೇನೆ. ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಕೂಡ ಬೂತ್ ಮಟ್ಟದಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ದೇಶದಲ್ಲಿ ಬಿಜೆಪಿ ಸರ್ಕಾರದ ಆಳ್ವಿಕೆಯಲ್ಲಿ ಮಹಿಳೆಯರ ರಕ್ಷಣೆ ಇಲ್ಲವಾಗಿದೆ. ಭೇಟಿ ಬಚಾವೋ ಭೇಟಿ ಎನ್ನುತ್ತಾ ಅಧಿಕಾರಕ್ಕೆ ಬಂದ ಬಿಜೆಪಿ ಈಗ ಮಹಿಳೆಯರ ರಕ್ಷಣೆ ಬಗ್ಗೆ ನಿರ್,ಕ್ಷ್ಯ ವಹಿಸಿದೆ.

ADVERTISEMENT

ದೇಶದ ಹೆಮ್ಮೆಯ ಮಹಿಳಾ ಕುಸ್ತಿಪಟುಗಳು ತಮ್ಮ ಮೇಲಿನ ಲೈಂಗಿಕ ದೌರ್ಜನ್ಯದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದು, ಅವರ ಮೇಲೆ ದಬ್ಬಾಳಿಕೆ ಮಾಡಲಾಗುತ್ತಿದೆ. ಪ್ರಧಾನಮಂತ್ರಿಗಳು ಇದುವರೆಗೂ ಒಂದು ಬಾರಿಯೂ ಪ್ರತಿಭಟನಾ ನಿರತ ಮಹಿಳಾ ಕುಸ್ತಿಪಟುಗಳನ್ನು ಭೇಟಿ ಮಾಡುತ್ತಿಲ್ಲ. ಈ ಮಹಿಳಾ ಕುಸ್ತಿಪಟುಗಳನ್ನು ಹೀನಾಯವಾಗಿ ನಡೆಸಿಕೊಳ್ಳುತ್ತಿಲ್ಲ. ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ, ಸಂಸದೆ ಮಿನಾಕ್ಷಿ ಲೇಖಿ, ಕೇಂದ್ರದ ಸಚಿವೆ ನಿರ್ಮಲಾ ಸೀತರಾಮನ್ ಅವರಿಗೆ ಈ ಹೋರಾಟ ಕಣ್ಣಿಗೆ ಕಾಣುತ್ತಿಲ್ಲವೇ? ದೇಶದ ರಾಷ್ಟ್ರಪತಿ ಮಹಿಳೆಯಾಗಿದ್ದು, ಅವರನ್ನು ಸರ್ಕಾರ ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ.

ಭಾರತೀಯ ಕುಸ್ತಿ ಸಂಸ್ಥೆ ಅಧ್ಯಕ್ಷ ಬ್ರಿಜ್ ಭೂಷಣ್ ಅವರು ಸಂಸದರಾಗಿದ್ದು, ಅವರ ಮೇಲೆ ಲೈಂಗಿಕ ಕಿರುಕುಳದ ಆರೋಪವಿದ್ದು, ಅವರ ರಕ್ಷಣೆಗೆ ಇಡೀ ಬಿಜೆಪಿ ಸರ್ಕಾರ ಮುಂದಾಗಿದೆ. ಈ ಪ್ರಕರಣದ ನಂತರ ಅಂತಾರಾಷ್ಟ್ರೀಯ ಕುಸ್ತಿ ಸಂಸ್ಥೆ ಭಾರತವನ್ನು ನಿಷೇಧಿಸುವ ಎಚ್ಚರಿಕೆಯನ್ನು ನೀಡಿದೆ. ಆದರೂ ಬಿಜೆಪಿ ಸರ್ಕಾರ ಹಾಗೂ ಪ್ರಧಾನಮಂತ್ರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ.

ಮಹಿಳಾ ಕಾಂಗ್ರೆಸ್ ವತಿಯಿಂದ ನಮ್ಮ ಮಹಿಳಾ ಕುಸ್ತಿಪಟುಗಳ ಪರವಾಗಿ ಧ್ವನಿ ಎತ್ತುತ್ತಿದ್ದು, ರಾಜ್ಯ ಮಹಿಳಾ ಕಾಂಗ್ರೆಸ್ ವತಿಯಿಂದ ನಾಳೆ ಜಿಲ್ಲಾ ಕೇಂದ್ರಗಳಲ್ಲಿ ಈ ವಿಚಾರವಾಗಿ ಧ್ವನಿ ಎತ್ತಲಾಗುವುದು. ಮಹಿಳಾ ಕುಸ್ತಿಪಟುಗಳ ಜತೆ ನಾವು ಇದ್ದೇವೆ ಎಂದು ಸಂದೇಶ ರವಾನಿಸಲಾಗುವುದು.

ಮಹಿಳಾ ಕುಸ್ತಿಪಟುಗಳ ಪರವಾಗಿ ಅನಿಲ್ ಕುಂಬ್ಳೆ ಸೇರಿದಂತೆ ಅನೇಕ ಕ್ರೀಡಾ ತಾರೆಯರು ಧ್ವನಿ ಎತ್ತುತ್ತಿದ್ದಾರೆ. ಶಾಂತಿಯುತ ಪ್ರತಿಭಟನೆ ಮಾಡುತ್ತಿದ್ದರೂ ಪೊಲೀಸರ ಮೂಲಕ ಅವರ ಮೇಲೆ ದಬ್ಬಾಳಿಕೆ ಮಾಡಿ ಬಂಧಿಸಲಾಗಿದೆ. ಈ ಮಹಿಳಾ ವಿರೋಧಿ ಬಿಜೆಪಿ ಸರ್ಕಾರ ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಅವರನ್ನು ಜೈಲಿಗೆ ಕಳುಹಿಸುವ ಬದಲು, ಹೋರಾಟನಿರತ ಮಹಿಳಾ ಕುಸ್ತಿಪಟುಗಳನ್ನು ಬಂಧಿಸಿದೆ. ಸರ್ಕಾರದ ಈ ಕ್ರಮವನ್ನು ಖಂಡಿಸುತ್ತೇವೆ.

ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಅವರನ್ನು ಇಟ್ಟುಕೊಂಡು ನೂತನ ಸಂಸತ್ ಭವನ ಉದ್ಘಾಟನೆ ಮಾಡಿರುವುದು ದೇಶದ ಮಹಿಳಾ ಕುಲಕ್ಕೆ ಮಾಡಿರುವ ಅತಿದೊಡ್ಡ ಅಪಮಾನ. ಬಿಜೆಪಿ ನಾಯಕರು ಬಾಯಿ ಮಾತಿಗೆ ಭಾರತ ಮಾತಾಕಿ ಜೈ ಎಂದರೆ ಸಾಲದು. ನಮ್ಮ ದೇಶಕ್ಕೆ ಕೀರ್ತಿ ತಂದಿರುವ ಮಹಿಳೆಯರ ರಕ್ಷಣೆ ಮಾಡಬೇಕು. ಕೇಂದ್ರ ಸರ್ಕಾರ ಜೀವಂತವಾಗಿದ್ದರೆ ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಸಂಸದ ಸ್ಥಾನದಿಂದ ವಜಾಗೊಳಿಸಬೇಕು.

ಸರ್ಕಾರದ ಈ ದಬ್ಬಾಳಿಕೆಗೆ ಬೇಸತ್ತು ಮಹಿಳಾ ಕುಸ್ತಿಪಟುಗಳು ತಾವು ಗೆದ್ದಿರುವ ಪದಕಗಳನ್ನು ಗಂಗಾನದಿಗೆ ಎಸೆಯಲು ಮುಂದಾಗಿದ್ದಾರೆ. ಇದಕ್ಕಿಂತ ದೊಡ್ಡ ಅಪಮಾನ ಬೇರೆ ಇಲ್ಲ. ಈ ಮಹಿಳಾ ಕುಸ್ತಿಪಟುಗಳಿಗೆ ನ್ಯಾಯ ಸಿಗಬೇಕು ಎಂದು ನಾವು ಆಗ್ರಹಿಸುತ್ತೇವೆ. ಈ ವಿಚಾರದಲ್ಲಿ ರಾಷ್ಟ್ರೀಯ ಮಹಿಳಾ ಆಯೋಗ ಸುಮೋಟೋ ಪ್ರಕರಣ ದಾಖಲಿಸಿಕೊಳ್ಳಬೇಕು.

ಮಾಜಿ ಸಚಿವೆ ರಾಣಿ ಸತೀಶ್:

ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ದೇಶದಾದ್ಯಂತ ದೊಡ್ಡ ಪ್ರಮಾಣದಲ್ಲಿ ಸುದ್ದಿಯಾಗುತ್ತಿದೆ. ಈ ಕುಸ್ತಿಪಟುಗಳು ಪದಕ ಗೆದ್ದಾಗ ಅವರ ಜತೆ ಫೋಟೋ ತೆಗೆಸಿಕೊಂಡು ಪ್ರಧಾನಮಂತ್ರಿಗಳು ಪ್ರಚಾರ ಪಡೆಯುತ್ತಾರೆ. ಅದೇ ಕ್ರೀಡಾಪಟುಗಳು ದೌರ್ಜನ್ಯಕ್ಕೆ ಒಳಾಗಾಗಿರುವಾಗ ಅವರಿಗೆ ಸಾಂತ್ವಾನ ಹೇಳುವುದಿರಲಿ, ಈ ಪ್ರಕರಣದಲ್ಲಿ ಪಾರದರ್ಶಕ ತನಿಖೆ ಕೂಡ ಮಾಡುತ್ತಿಲ್ಲ. ಇದು ದೇಶಕ್ಕೆ ಕಪ್ಪುಚುಕ್ಕೆಯಾಗಿದೆ. ಮೋದಿ ಅವರು ಮಹಿಳೆ ಹಾಗೂ ಮಕ್ಕಳ ವಿಚಾರವಾಗಿ ಮಾತನಾಡುತ್ತಾರೆ. ಆದರೆ ಇವರು ಪ್ರತಿಭಟನೆ ಆರಂಭಿಸಿ ನೂರು ದಿನಗಳಾದರೂ ಯಾವುದೇ ಕ್ರಮ ಕೈಗೊಳ್ಳದಿರುವುದು ಅವರು ಗೊಂದಲದಲ್ಲಿರುವುದಕ್ಕೆ ಸಾಕ್ಷಿ. ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳಿಗೆ ಇಂತಹ ದೌರ್ಜನ್ಯ ನಡೆಯುತ್ತಿರುವುದು ಶೋಚನೀಯ ಪರಿಸ್ಥಿತಿ.

Tags: BJP GovernmentBJP PartybjpkarnatakacmsiddaramiahDCM DK Shivakumar
Previous Post

Australian Consulate in Bangalore : ಬೆಂಗಳೂರಿನಲ್ಲಿ ಆಸ್ಟ್ರೇಲಿಯನ್‌ ಕಾನ್ಸುಲೇಟ್‌ ಕಚೇರಿ ಶೀಘ್ರ ಪ್ರಾರಂಭ

Next Post

CM Mamata Banerjee ; ಕುಸ್ತಿಪಟುಗಳ ಬೆಂಬಲಕ್ಕೆ ನಿಂತ ಸಿಎಂ ಮಮತಾ ಬ್ಯಾನರ್ಜಿ

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
Next Post
CM Mamata Banerjee ; ಕುಸ್ತಿಪಟುಗಳ ಬೆಂಬಲಕ್ಕೆ ನಿಂತ ಸಿಎಂ ಮಮತಾ ಬ್ಯಾನರ್ಜಿ

CM Mamata Banerjee ; ಕುಸ್ತಿಪಟುಗಳ ಬೆಂಬಲಕ್ಕೆ ನಿಂತ ಸಿಎಂ ಮಮತಾ ಬ್ಯಾನರ್ಜಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada