• Home
  • About Us
  • ಕರ್ನಾಟಕ
Tuesday, November 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

why-is-the-high-command-so-angry-with-the-state-bjp-ರಾಜ್ಯ ಬಿಜೆಪಿ ನಾಯಕರ ಮೇಲೆ ಹೈಕಮಾಂಡ್​ಗೆ ಇಷ್ಟೊಂದು ಕೋಪ ಯಾಕೆ..?

ಕೃಷ್ಣ ಮಣಿ by ಕೃಷ್ಣ ಮಣಿ
June 2, 2023
in Top Story, ಇದೀಗ, ರಾಜಕೀಯ
0
why-is-the-high-command-so-angry-with-the-state-bjp-ರಾಜ್ಯ ಬಿಜೆಪಿ ನಾಯಕರ ಮೇಲೆ ಹೈಕಮಾಂಡ್​ಗೆ ಇಷ್ಟೊಂದು ಕೋಪ ಯಾಕೆ..?
Share on WhatsAppShare on FacebookShare on Telegram

ರಾಜ್ಯ ರಾಜಕಾರಣದಲ್ಲಿ ಅಬ್ಬರಿಸಿದ್ದ ಬಿಜೆಪಿ ಹಿನಾಯ ಸೋಲು ಕಂಡಿದೆ. ಕಾಂಗ್ರೆಸ್​ ಜಯಭೇರಿ ಬಾರಿ ಅಧಿಕಾರ ಹಿಡಿದಿದೆ. ಚುನಾವಣೆ ಎಂದ ಮೇಲೆ ಸೋಲು ಗೆಲುವು ಆರೋಪ ಪ್ರತ್ಯಾರೋಪ ಸಹಜ. ಒಂದು ಪಕ್ಷ ಅಧಿಕಾರ ಹಿಡಿದರೆ ಇನ್ನೊಂದು ಪಕ್ಷ ವಿರೋಧ ಪಕ್ಷದ ಸ್ಥಾನದಲ್ಲಿ ಕೂರುವುದು ನಿಶ್ಚಿತ. ಆದರೆ ರಾಜ್ಯದಲ್ಲಿ ಸೋಲು ಅನುಭವಿಸಿದ ಕಾರಣಕ್ಕಾಗಿ ಬಿಜೆಪಿ ಹೈಕಮಾಂಡ್​ ರಾಜ್ಯ ನಾಯಕರ ಮೇಲೆ ಕೆಂಗಣ್ಣು ಬೀರಿದೆ ಎನ್ನಲಾಗ್ತಿದೆ. ಇದೇ ಕಾರಣಕ್ಕೆ ಹೈಕಮಾಂಡ್​ ನಾಯಕರು ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಆಯ್ಕೆ ಮಾಡಲು ಯಾವುದೇ ಸಲಹೆ ಸೂಚನೆಯನ್ನೂ ನೀಡಿಲ್ಲ. ರಾಜ್ಯ ಬಿಜೆಪಿ ಕಚೇರಿಯಿಂದ ಹೋಗಿರುವ ಮನವಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಿಲ್ಲ ಎನ್ನುವ ಮಾಹಿತಿ ಹೊರಬಿದ್ದಿದೆ. ಅಂತಿಮವಾಗಿ ವಿರೋಧ ಪಕ್ಷದ ನಾಯಕನಿಲ್ಲದೆ ವಿಶೇಷ ಅಧಿವೇಶ ಮುಗಿದಿದ್ದು, ಮುಂದಿನ ದಿನಗಳಲ್ಲಿ ಆದರೂ ಅಧಿಕೃತ ವಿರೋಧ ಪಕ್ಷದ ನಾಯಕ ಇಲ್ಲದೆ ಕಾಂಗ್ರೆಸ್​ ಸರ್ಕಾರವನ್ನು ಎದುರಿಸಿಲು ಕಷ್ಟ ಎನ್ನುವುದು ಬಿಜೆಪಿ ನಾಯಕರ ಮಾತು.

ADVERTISEMENT

ರಾಜ್ಯ ಬಿಜೆಪಿ ನಾಯಕರ ಮೇಲಿನ ಸಿಟ್ಟಿಗೆ ಕಾರಣ..

ಪ್ರಧಾನಿ ನರೇಂದ್ರ ಮೋದಿ ಈ ಬಾರಿ ಚುನಾವಣೆಯಲ್ಲಿ ಸಾಕಷ್ಟು ಬೆವರು ಹರಿಸಿದ್ದರು. ಬೆಂಗಳೂರಿನ 28 ಕ್ಷೇತ್ರಗಳ ಪೈಕಿ ಸುಮಾರು ಅರ್ಧಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ರೋಡ್​ ಶೋ ನಡೆಸಿದ್ದರು. ರಾಜ್ಯದ ಪ್ರತಿ ಜಿಲ್ಲೆಗಳಲ್ಲೂ ಅಬ್ಬರದ ಪ್ರಚಾರ ಮಾಡಿದ್ದರು. ಆದರೂ ಕರ್ನಾಟಕದ ಜನರು ಬಿಜೆಪಿಯನ್ನು ತಿರಸ್ಕರಿಸಿ ಕಾಂಗ್ರೆಸ್​ಗೆ ಬಹುದೊಡ್ಡ ಜಯ ತಂದುಕೊಟ್ಟಿದ್ದು, ರಾಷ್ಟ್ರಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಮುಖಭಂಗ ಆದಂತೆ ಆಗಿದೆ. ರಾಹುಲ್​ ಗಾಂಧಿ ಪ್ರಚಾರ ಮಾಡಿದ ಕಡೆಯಲ್ಲಾ ಕಾಂಗ್ರೆಸ್​ ಸೋಲುತ್ತದೆ ಎಂದು ಬಿಜೆಪಿ ಮಾಡಿದ್ದ ಟೀಕೆ ಇದೀಗ ಬಿಜೆಪಿ ಪಾಲಿಗೆ ಸರಿಹೊಂದುವಂತಾಗಿದೆ. ನರೇಂದ್ರ ಮೋದಿಯೇ ಸ್ವತಃ ರಾಜ್ಯ ರಾಜಕಾರಣದ ಬಗ್ಗೆ ಟೀಕಾಪ್ರಹಾರ ನಡೆಸಿ ಕಾಂಗ್ರೆಸ್​, ಜೆಡಿಎಸ್​ ವಿರುದ್ಧ ಹರಿಹಾಯ್ದಿದ್ದರು. ಪ್ರಧಾನಿ ಅನ್ನೋದನ್ನು ಮರೆತು ಪಕ್ಷದ ನಾಯಕರಂತೆ ಅಬ್ಬರಿಸಿದ್ದರು. ಆದರೂ ಸೋಲನ್ನು ತಪ್ಪಿಸಲಾಗಲಿಲ್ಲ. ಇದು ಕಾಂಗ್ರೆಸ್​​ಗೆ ಬೂಸ್ಟ್​ ಆಗುವ ಭೀತಿ ಬಿಜೆಪಿ ಹೈಕಮಾಂಡ್​ ಕೋಪಕ್ಕೆ ಕಾರಣವಾಗಿದೆ.

ರಾಜಸ್ಥಾನ, ಮಧ್ಯಪ್ರದೇಶದಲ್ಲೂ ಮೋದಿಗೆ ಹಿನ್ನಡೆ..!?

ರಾಜಸ್ಥಾನ ಹಾಗು ಮಧ್ಯಪ್ರದೇಶ ವಿಧಾನಸಭಾ ಚುನಾವಣೆ ಈ ವರ್ಷದ ಅಂತ್ಯಕ್ಕೆ ನಡೆಯಲಿದ್ದು, ಕರ್ನಾಟಕದ ಚುನಾವಣೆ ಭಾರೀ ಪರಿಣಾಮ ಬೀರುವ ಆತಂಕ ಕೇಸರಿ ಪಾಳಯದಲ್ಲಿ ಮನೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಮಾಡಿದರೆ ದೊಡ್ಡ ಮಟ್ಟದಲ್ಲಿ ಗೆಲುವು ತಂದುಕೊಡುತ್ತಾರೆ ಎಂದು ಕಾರ್ಯಕರ್ತರನ್ನು ನಂಬಿಸಿದ್ದ ಬಿಜೆಪಿ, ಈ ಮೂಲಕ ಕಾಂರ್ಯಕರ್ತರು ಹುಮ್ಮಸ್ಸಿನಿಂದ ಕೆಲಸ ಮಾಡುವಂತೆ ನೋಡಿಕೊಂಡಿತ್ತು. ಇದೀಗ ಕರ್ನಾಟಕದಲ್ಲಿ ಸ್ವತಃ ನರೇಂದ್ರ ಮೋದಿ ಅವರೇ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಸುತ್ತಾಡಿದರೂ ಸೋಲಾಗಿರುವುದು, ಮಧ್ಯಪ್ರದೇಶ ಹಾಗು ರಾಜಸ್ಥಾನದಲ್ಲಿ ಕಾರ್ಯಕರ್ತರನ್ನು ಆಕರ್ಷಿಸಲು ಸಂಕಷ್ಟ ಆಗಲಿದೆ. ಪ್ರಧಾನಿ ಮೋದಿ ಬಂದರೂ ಗೆಲ್ಲಿಸಲು ಸಾಧ್ಯವಿಲ್ಲ ಎನ್ನುವ ಹುಂಬ ಧೈರ್ಯ ಕಾಂಗ್ರೆಸ್​ಗೆ ಹೆಚ್ಚಾಗುವ ಕಾರಣ ಜಯ ಅಂದುಕೊಂಡಷ್ಟು ಸುಲಭ ಆಗಿರುವುದಿಲ್ಲ. ಇನ್ನು ಮುಂದಿನ ಎಲ್ಲಾ ಚುನಾವಣೆಗೂ ಕರ್ನಾಟಕವೇ ಕಾಂಗ್ರೆಸ್​ ಪಾಲಿಗೆ ಮಾದರಿ ಆಗುವುದರಿಂದ ಬಿಜೆಪಿಗೆ ಸಂಕಷ್ಟ ಎನ್ನಲಾಗ್ತಿದೆ.

ಕಾಂಗ್ರೆಸ್​ ಪಾಲಿಗೆ ಕರ್ನಾಟಕವೇ ಕಾಮಧೇನು..!

ಕಾಂಗ್ರೆಸ್​ ಸರ್ಕಾರ ಅಸ್ತಿತ್ವದಲ್ಲಿ ಇರುವ ಕಾರಣಕ್ಕೆ ಕಾಂಗ್ರೆಸ್​ ಒಳ್ಳೆಯ ಶಕ್ತಿ ಬರುತ್ತದೆ ಎನ್ನುವುದನ್ನು ಯಾರೂ ಕೂಡ ಅಲ್ಲಗಳೆಯಲು ಸಾಧ್ಯವಿಲ್ಲ. ಆದರೆ ಕರ್ನಾಟಕದಲ್ಲಿ ಚುನಾವಣೆ ಪೂರ್ವದಲ್ಲಿ ಘೋಷಣೆ ಮಾಡಿದ್ದ ಗ್ಯಾರಂಟಿಗಳನ್ನು ಶೀಘ್ರದಲ್ಲೇ ಜಾರಿ ಮಾಡುತ್ತಿರುವುದು ಕಾಂಗ್ರೆಸ್​ ಪಾಲಿಗೆ ದಿವ್ಯಾಔಷಧ ಎನ್ನಬಹುದು. ಕರ್ನಾಟಕದಲ್ಲಿ ಕಾಂಗ್ರೆಸ್​ ನುಡಿದಂತೆ ನಡೆದಿದೆ ಎಂದು ಅಬ್ಬರದ ಪ್ರಚಾರ ಮಾಡುವ ಮೂಲಕ ಮಧ್ಯಮ ಹಾಗು ಬಡ ವರ್ಗದ ಜನರ ಸಂಕಷ್ಟ ದೂರ ಮಾಡುವ ಭರವಸೆ ನೀಡುವುದು ಸುಲಭ. ಇನ್ನು ಕಾಂಗ್ರೆಸ್​ ಹೇಗೆ ಕೆಲಸ ಮಾಡುತ್ತದೆ ಎನ್ನುವುದಕ್ಕೆ ಕರ್ನಾಟಕವನ್ನು ನೋಡಿ ಎಂದು ತೋರಿಸಬಹುದು. ಸಿದ್ದರಾಮಯ್ಯ ನೇತೃತ್ವದಲ್ಲಿ ಉತ್ತಮ ಆಡಳಿತ ನೀಡುತ್ತಿರುವುದನ್ನು ರಾಷ್ಟ್ರ ಮಟ್ಟದಲ್ಲಿ ಕೊಂಡಾಡುವ ಮೂಲಕ ಮುಸ್ಲಿಂ ಮತಗಳನ್ನು ಒಟ್ಟು ಮಾಡಬಹುದು. ಕರ್ನಾಟಕದಲ್ಲಿ ಶೇಕಡ 83 ಮುಸ್ಲಿಂ ಮತಗಳು ಕಾಂಗ್ರೆಸ್​ಗೆ ಸಿಕ್ಕಿರುವುದು, ಬಿಜೆಪಿಯ ರಾಜಕೀಯ ತಂತ್ರಗಾರಿಕೆ ತಲೆಕೆಳಗಾಗುವಂತೆ ಮಾಡಿದೆ. ಈ ಎಲ್ಲಾ ಕಾರಣಗಳಿಂದ ಬಿಜೆಪಿ ಹೈಕಮಾಂಡ್​ ಕರ್ನಾಟಕದಿಂದ ಅಂತರ ಕಾಯ್ದುಕೊಂಡಿದೆ ಎನ್ನುವ ಮಾಹಿತಿ ಬಿಜೆಪಿ ಪಾಳಯದಲ್ಲೇ ಹರಿದಾಡ್ತಿದೆ.

ಕೃಷ್ಣಮಣಿ

Tags: amithshahBJPbjpkarnatakabsbommaibsyediyurappaCMSiddaramaiahcmsiddaramiahcongressvsbjpctravi eswarappaDK ShivakumarDKShivakumarDr SudhakarHD DevegowdaHdKumaraswamyJDS KarnatakakseshwarappaModi GovernmentModi GovtPM Modiಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

The organ of this mummy has been preserved for 2000 years : ಈ ಮಮ್ಮಿಯ ಅಂಗಾಂಗ 2000 ವರ್ಷಗಳಿಂದ‌ ಸಂರಕ್ಷಿಸಲ್ಪಟ್ಟಿದೆಯಂತೆ..!

Next Post

ರಾಜ್ಯದ ಹಲವೆಡೆ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
Next Post
ರಾಜ್ಯದ ಹಲವೆಡೆ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ

Please login to join discussion

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada