ಬೆಂಗಳೂರು : ಜೂ.೨. ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections) ವೇಳೆಲ್ಲಿ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳನ್ನು (Five Guarantees) ಸಿಎಂ ಸಿದ್ದರಾಮಯ್ಯ (Siddaramaiah) ಅಧಿಕೃತವಾಗಿ ಜಾರಿ ಮಾಡಿ ಘೋಷಣೆ ಮಾಡಿದರು. ಜನ ವಿಶ್ವಾಸ ಇಟ್ಟು ಅಧಿಕಾರ ಕೊಟ್ಟಿದ್ದಾರೆ. ನಾವು ಬಸವಣ್ಣನ ನಾಡಿನವರು. ಕೊಟ್ಟ ಮಾತಿಗೆ ಬದ್ಧ. 5 ಗ್ಯಾರಂಟಿಗಳನ್ನು ನೀಡಲು ತೀರ್ಮಾನ ಮಾಡಿದ್ದೇವೆ ಎಂದು ಸಂಪುಟ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಗೃಹಜ್ಯೋತಿ: 200 ಯೂನಿಟ್ ಉಚಿತ ವಿದ್ಯುತ್. 12 ತಿಂಗಳ ಸರಾಸರಿ ಆಧರಿಸಿ, ಅದಕ್ಕೆ ಶೇಕಡಾ 10 ರಷ್ಟು ಸೇರಿಸಿ, ಅದಕ್ಕೆ ಸಂಪೂರ್ಣ ಶುಲ್ಕ ವಿನಾಯಿತಿ. ಜುಲೈ ತಿಂಗಳ ವಿದ್ಯುತ್ ಬಳಕೆಗೆ ಆಗಸ್ಟ್ ನಿಂದ ಅನ್ವಯ. ಬಾಡಿಗೆದಾರರಿಗೂ ಅನ್ವಯವಾಗಲಿದೆ.

ಗೃಹಲಕ್ಷ್ಮಿ: ಆಧಾರ್ ಕಾರ್ಡ್, ಅಕೌಂಟ್ ಡೀಟೇಲ್ಸ್, ಆನ್ಲೈನ್ ಆಫ್ ಲೈನ್ ಅರ್ಜಿ ಆಧರಿಸಿ ಆಗಸ್ಟ್ 15 ರಿಂದ ಜಾರಿ. ಜೂನ್ 15 ರಿಂದ ಜುಲೈ 15 ರೊಳಗೆ ಡೀಟೇಲ್ಸ್ ಜತೆ ಅರ್ಜಿ ಸಲ್ಲಿಸಬೇಕು. ಬಿಪಿಎಲ್ ಅಂಡ್ ಎಪಿಎಲ್ ಕಾರ್ಡ್ ದಾರರಿಗೆ ಸಿಗುತ್ತೆ. ಮನೆ ಯಜಮಾನಿಯನ್ನು ಕುಟುಂಬದವರೇ ತೀರ್ಮಾನ ಮಾಡಬೇಕು. ಸಾಮಾಜಿಕ ಭದ್ರತೆ ಪಿಂಚಣಿದಾರರಿಗೂ 2000 ರೂ. ಕೊಡುತ್ತೇವೆ ಎಂದ ಸಿಎಂ ಹೇಳಿದ್ದಾರೆ.
ಅನ್ನಭಾಗ್ಯ: ಜುಲೈ 1 ರಿಂದ ಎಲ್ಲ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ದಾರರಿಗೆ ತಲಾ 10 ಕೆಜಿ ಆಹಾರಧಾನ್ಯ ನೀಡುತ್ತೇವೆ.

ಉಚಿತ ಬಸ್ ಪ್ರಯಾಣ: ವಿದ್ಯಾರ್ಥಿನಿಯರು ಸೇರಿದಂತೆ ಕರ್ನಾಟಕದ ಎಲ್ಲ ಮಹಿಳೆಯರಿಗೆ ಜೂನ್ 11 ರಿಂದ ಕರ್ನಾಟಕ ರಾಜ್ಯದೊಳಗೆ ಉಚಿತ ಪ್ರಯಾಣ ಅವಕಾಶ.
ಬಿಎಂಟಿಸಿ ಬಸ್ ಸೇವೆಯನ್ನು ಬಳಸಬಹುದು. ಎಸಿ ಮತ್ತು ಲಕ್ಸುರಿ ಬಸ್ ಹೊರತುಪಡಿಸಿ ಸಾಮಾನ್ಯ ಬಸ್ ಗಳಿಗೆ ಮಾತ್ರ ಅನ್ವಯ.
ಕೆಎಸ್ ಆರ್ಟಿಸಿಯಲ್ಲಿ 50 % ಸೀಟು ಪುರುಷರಿಗೆ ಮೀಸಲು. ಐರಾವತ, ರಾಜಹಂಸ ಸೇರಿ ಎಲ್ಲ ರೀತಿಯ ಲಕ್ಸ್ಯೂರಿ ಬಸ್, ಎಸಿ ಮತ್ತು ನಾನ್ ಎಸಿ ಸ್ಲೀಪರ್ ಬಸ್ ಗಳಿಗೆ ಇದು ಅನ್ವಯ ಆಗದು.

ಯುವನಿಧಿ: 2023 ರಲ್ಲಿ ಪದವಿ ಪಾಸ್ ಮಾಡಿದವರಿಗೆ 24 ತಿಂಗಳು ಪ್ರತಿ ತಿಂಗಳು 3000, ಡಿಪ್ಲೋಮದಾರರಿಗೆ 1500 ರು ಭತ್ಯೆ. ತೃತೀಯ ಲಿಂಗಿಗಳಿಗೂ ಅನ್ವಯ. 18 ವರ್ಷದಿಂದ 25 ವರ್ಷದವರಿಗೆ ಅನ್ವಯ. ಅವರು ಅರ್ಜಿ ಹಾಕಬೇಕು. ಅರ್ಜಿ ಕೊಟ್ಟಾಗಿಂದ ಜಾರಿ. ಅರ್ಜಿ ಸಲ್ಲಿಸಲು 6 ತಿಂಗಳು ಕಾಲವಕಾಶ.






