• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

ಪ್ರತಿ ಬಾರಿ ರಕ್ಷಣಾ ಕಾರ್ಯಾಚರಣೆಗೆ ಸಂತೋಷ್​ ಲಾಡ್​ ಹೋಗೋದ್ಯಾಕೆ..?

Any Mind by Any Mind
June 5, 2023
in ಅಂಕಣ
0
ಪ್ರತಿ ಬಾರಿ ರಕ್ಷಣಾ ಕಾರ್ಯಾಚರಣೆಗೆ ಸಂತೋಷ್​ ಲಾಡ್​ ಹೋಗೋದ್ಯಾಕೆ..?
Share on WhatsAppShare on FacebookShare on Telegram

ಒಡಿಶಾದ ಬಾಲಸೋರ್​ನ ಬಹನಾಗ್​ನಲ್ಲಿ ರೈಲ್ವೆ ಅಪಘಾತ ನಡೆದು ಸುಮಾರು 290 ಜನ ಪ್ರಯಾಣಿಕರು ದುರ್ಮರಣ ಹೊಂದಿದ್ದಾರೆ. ಕೇಂದ್ರ ಸರ್ಕಾರ ರೈಲ್ವೆ ಅಪಘಾತಕ್ಕೆ ಕಾರಣ ಏನು ಎನ್ನುವುದನ್ನು ಪತ್ತೆ ಹಚ್ಚಲು ಸಿಬಿಐ ತನಿಖೆಗೆ ಆದೇಶ ಮಾಡಿದ್ದಾರೆ. ಬೆಂಗಳೂರಿನಿಂದ ಹೊರಟಿದ್ದ ಹೌರಾ ಎಕ್ಸ್​ಪ್ರೆಸ್​​ನಲ್ಲಿ ನೂರಾರು ಕನ್ನಡಿಗರು ಪ್ರಯಾಣ ಮಾಡಿದ್ದರು. ಅದೃಷ್ಟವಶಾತ್​ ಕನ್ನಡಿಗರು ಯಾವುದೇ ಸಮಸ್ಯೆ ಇಲ್ಲದೆ ಪಾರಾಗಿದ್ದರು. ಆದರೂ ಕರ್ನಾಟಕದಿಂದ ಹೊರಟಿದ್ದ ರೈಲು ಆಗಿದ್ದರಿಂದ ಟಿಕೆಟ್​ ಬುಕ್ಕಿಂಗ್​ ಮಾಡದೆ ಸಾಮಾನ್ಯ ಟಿಕೆಟ್​ ಖರೀದಿ ಮಾಡಿಕೊಂಡು ಹೋಗಿದ್ದವರಲ್ಲಿ ಕನ್ನಡಿಗರು ಏನಾದರೂ ಹೋಗಿ, ಅಪಘಾತದಲ್ಲಿ ಸಮಸ್ಯೆಗೆ ಒಳಗಾಗಿದ್ದರೆ ರಕ್ಷಣೆ ಮಾಡಬೇಕು ಅನ್ನೋ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಸಚಿವ ಸಂತೋಷ್​ ಲಾಡ್​​ ಅವರನ್ನು ಒಡಿಶಾಗೆ ಕಳುಹಿಸಿದ್ದರು. ಆದರೆ ಪ್ರತಿ ಬಾರಿಯೂ ಸಂತೋಷ್​ ಲಾಡ್​ರನ್ನು ಕಳಿಸುವುದು ಯಾಕೆ ಅನ್ನೋ ಪ್ರಶ್ನೆ ಬಹುತೇಕ ಜನರಲ್ಲಿ ಕಾಡುವುದಕ್ಕೆ ಶುರುವಾಗಿದೆ.

ADVERTISEMENT

2013ರಲ್ಲಿಯೂ ಸಂತೋಷ್​ ಲಾಡ್​ ರಕ್ಷಣಾ ಕಾರ್ಯ..

2013ರಲ್ಲಿ ಸಿದ್ದರಾಮಯ್ಯ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿರುವಾಗಲೇ ಉತ್ತರಾಖಂಡ್​​ನಲ್ಲಿ ಜಲಪ್ರಳಯ ನಡೆದಿತ್ತು. ತೀರ್ಥಯಾತ್ರೆಗೆ ತೆರಳಿದ್ದ ನೂರಾರು ಕನ್ನಡಿಗರೂ ಸೇರಿದಂತೆ ಸಾವಿರ ಸಾವಿರ ಜನರು ಉತ್ತರಾಖಂಡ್​ನಲ್ಲಿ ಸಿಲುಕಿದ್ದರು. ಆಗಷ್ಟೇ ಅಧಿಕಾರಕ್ಕೆ ಬಂದಿದ್ದ ಸಿದ್ದರಾಮಯ್ಯ, ಕಾರ್ಮಿಕ ಸಚಿವರಾಗಿದ್ದ ಸಂತೋಷ್​ ಲಾಡ್​ ಅವರನ್ನು ಕಳುಹಿಸಿಕೊಟ್ಟಿದ್ದರು. ಸಂಪೂರ್ಣ ಅಧಿಕಾರಿಗಳ ತಂಡದ ಜೊತೆಗೆ ಹೋಗಿದ್ದ ಸಚಿವ ಸಂತೋಷ್​ ಲಾಡ್​ ಎಲ್ಲರನ್ನೂ ಸುರಕ್ಷಿತವಾಗಿ ಕರೆದುಕೊಂಡು ಬರುವುದರಲ್ಲಿ ಯಶಸ್ವಿಯಾಗಿದ್ದರು. ಇದೀಗ ಮತ್ತೆ ಸಿದ್ದರಾಮಯ್ಯ ಸರ್ಕಾರವೇ ಅಸ್ತಿತ್ವದಲ್ಲಿದ್ದು, ಒಡಿಶಾದಲ್ಲಿ ರೈಲು ದುರಂತ ನಡೆದಿದ್ದು, ಸಚಿವರಾಗಿರುವ ಸಂತೋಷ್​ ಲಾಡ್​ ರಕ್ಷಣಾ ಕಾರ್ಯಾಚರಣೆಗೆ ಹೋಗಿದ್ದಾರೆ. ಇದು ಹೇಗೆ ಸಾಧ್ಯ..? ಎಲ್ಲಾ ಸಮಯದಲ್ಲೂ ಸಂತೋಷ್​ ಲಾಡ್​​ ಅವರನ್ನೇ ಕಳುಹಿಸುವುದು ಯಾಕೆ..? ಅನ್ನೋ ಕುತೂಹಲ ಹೆಚ್ಚಾಗಿದೆ.

ಕನ್ನಡಿಗರನ್ನು ರಕ್ಷಣೆ ಮಾಡಿದ್ರಾ ಸಚಿವ ಸಂತೋಷ್ ಲಾಡ್​..?

ಬಹುತೇಕ ಕನ್ನಡಿಗ ಪ್ರಯಾಣಿಕರು ಯಾವುದೇ ಸಮಸ್ಯೆಗೆ ಒಳಗಾಗಿಲ್ಲ ಅನ್ನೋದು ಸರ್ಕಾರಕ್ಕೂ ಗೊತ್ತಿತ್ತು. ಆದರೆ ಟಿಕೆಟ್​ ಪಡೆಯದೆ ಯಾರಾದರೂ ಹೋಗಿದ್ದರೆ..! ಅಥವಾ ರಿಸರ್ವೇಷನ್​​ ಮಾಡದೆ, ಸಾಮಾನ್ಯ ಟಿಕೆಟ್ ಖರೀದಿ ಮಾಡಿ, ಹೌರಾ ಎಕ್ಸ್​ಪ್ರೆಸ್​ನಲ್ಲಿ ಪ್ರಯಾಣ ಮಾಡಿ ಸಂಕಷ್ಟಕ್ಕೆ ಸಿಲುಕಿದ್ದರೆ ರಕ್ಷಣೆ ಮಾಡುವ ಉದ್ದೇಶದಿಂದ ಸಂತೋಷ್​ ಲಾಡ್​​ ಅವರನ್ನು ಕಳಹಿಸಲಾಗಿತ್ತು. ಸರ್ಕಾರಿ ಹಾಗು ಖಾಸಗಿ ಆಸ್ಪತ್ರೆಗಳಿಗೆ ಅಧಿಕಾರಿಗಳ ತಂಡದ ಜೊತೆಗೆ ಭೇಟಿ ನೀಡಿದ್ದ ಸಂತೋಷ್​ ಲಾಡ್​​, ಶವಾಗಾರದಲ್ಲೂ ಪರಿಶೀಲನೆ ನಡೆಸಿದ್ದಾರೆ. ಆದರೆ ರೈಲು ದುರಂತದಲ್ಲಿ ಕನ್ನಡಿಗರು ನೇರವಾಗಿ ಸಂಕಷ್ಟಕ್ಕೆ ಒಳಗಾಗದಿದ್ದರೂ ರೈಲುಗಳ ಸಂಚಾರ ಅಸ್ತವ್ಯಸ್ತ ಆಗಿದ್ರಿಂದ ಕೆಲವು ಪ್ರಯಾಣಿಕರು ಕರ್ನಾಟಕಕ್ಕೆ ಬರಲು ಸಾಧ್ಯವಾಗದೆ ಸಂಕಷ್ಟಕ್ಕೆ ಸಿಲುಕಿದ್ದವರ ರಕ್ಷಣೆಗೆ ಸರ್ಕಾರ ಕೈ ಚಾಚಿದೆ. ಗುಂಡ್ಲುಪೇಟೆ ತಾಲೂಕು ಬೊಮ್ಮಲಾಪುರದ ಇಬ್ಬರು ಯುವಕರಿಗೆ 20 ಸಾವಿರ ಆರ್ಥಿಕ ಸಹಾಯ ನೀಡಿದ್ದರು. ಇನ್ನು ವಾಲಿಬಾಲ್​ 32 ಆಟಗಾರರಿಗೆ ವಿಮಾನದ ಮೂಲಕ ಕರ್ನಾಟಕಕ್ಕೆ ವಾಪಸ್​ ಆಗಲು ಸರ್ಕಾರ ವ್ಯವಸ್ಥೆ ಮಾಡಿಕೊಟ್ಟಿತ್ತು.

ಸಂತೋಷ್​ ಲಾಡ್​​​ ಆಯ್ಕೆ ಹಿಂದಿರುವ ಮರ್ಮ ಏನು..?

ಧಾರವಾಡದ ಕಲಘಟಗಿ ಕ್ಷೇತ್ರದ ಶಾಸಕರಾಗಿರುವ ಸಚಿವ ಸಂತೋಷ್​ ಲಾಡ್​​, ಉತ್ತಮ ಸಂವಹನಕಾರ ಆಗಿದ್ದಾರೆ. ಇನ್ನು ಮರಾಠಿ ಸಮುದಾಯಕ್ಕೆ ಸೇರಿರುವ ಸಂತೋಷ್​ ಲಾಡ್​​ ಕನ್ನಡ, ಇಂಗ್ಲಿಷ್​, ಹಿಂದಿ, ಮರಾಠಿ ಸೇರಿದಂತೆ ಹಲವಾರು ಭಾಷೆಗಳ ಮೇಲೆ ಹಿಡಿತ ಸಾಧಿಸಿದ್ದಾರೆ. ಇನ್ನು ಸಂತೋಷ್​ ಲಾಡ್​​ ರಾಜ್ಯಮಟ್ಟದಲ್ಲಿ ಬಹುದೊಡ್ಡ ನಾಯಕ ಅಲ್ಲದೆ ಇದ್ದರೂ ಗೆದ್ದ ಕೂಡಲೇ ಸಚಿವ ಸ್ಥಾನ ಫಿಕ್ಸ್​ ಆಗುತ್ತದೆ ಅಂದರೆ ನಾಯಕರಿಗೆ ಆತ್ಮೀಯರು ಎನ್ನಬಹುದು. ಅದೇ ರೀತಿ ಸಂತೋಷ್​ ಲಾಡ್ ಮುಖ್ಯಮಂತ್ರಿ​​ ಸಿದ್ದರಾಮಯ್ಯ ಅವರಿಗೆ ಆತ್ಮೀಯರಾಗಿದ್ದಾರೆ ಎನ್ನುವುದೇ ಆಗಿದೆ ಎನ್ನಬಹುದು. ಇನ್ನು ಸಂತೋಷ್​ ಲಾಡ್​​ ಕೊಟ್ಟ ಕೆಲಸವನ್ನು ಉತ್ತಮ ರೀತಿಯಲ್ಲಿ ನಿಭಾಯಿಸಿಕೊಂಡು ಬರ್ತಾರೆ ಎನ್ನುವುದು ಆಗಿದೆ. ಇದೀಗ ಒಡಿಶಾ ರೈಲು ದುರಂತದ ಬಳಿಕವೂ ಕೊಟ್ಟ ಕೆಲಸ ಉತ್ತಮವಾಗಿ ನಿರ್ವಹಿಸಿದ್ದಾರೆ. ಭುವನೇಶ್ವರದಲ್ಲಿ ಸಭೆ ನಡೆಸಿದ ಸಚಿವ ಸಂತೋಷ್ ಲಾಡ್, ಸಿಎಂ ಸಿದ್ದರಾಮಯ್ಯಗೆ ಕಂಪ್ಲೀಟ್​ ಮಾಹಿತಿ ಕೊಟ್ಟು ವಾಪಸ್​ ಬಂದಿದ್ದಾರೆ.

ಕೃಷ್ಣಮಣಿ

Tags: BalasoreOdishasanthosh ladTrain Tragedyಒಡಿಶಾಬಾಲಾಸೋರ್​ರೈಲು ದುರಂತಸಂತೋಷ್​ ಲಾಡ್​
Previous Post

ಕಡಿಮೆ ಬಂಡವಾಳದಲ್ಲಿ ಹೆಚ್ಚು ಆದಾಯ ತರಬಲ್ಲ ಮಹಿಳೆಯರಿಗೆ ಹೇಳಿ ಮಾಡಿಸಿದ ಬ್ಯುಸಿನೆಸ್​ ಐಡಿಯಾ ಇಲ್ಲಿದೆ

Next Post

ವೈವಾಹಿಕ ಜೀವನಕ್ಕೆ ಕಾಲಿಟ್ಟ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ಜೋಡಿ

Related Posts

Top Story

Anil Shetty: ಸ್ಟಾರ್ಟಪ್ ಉದ್ಯಮಿ ಹಾಗೂ ಯುವರಾಜಕಾರಣಿ ಅನಿಲ್ ಶೆಟ್ಟಿ ನಾಯಕ ನಟನಾಗಿ ಚಲನ ಚಿತ್ರರಂಗಕ್ಕೆ ಪಾದಾರ್ಪಣೆ

by Pratidhvani
June 26, 2025
0

ವಾಣಿಜ್ಯೋದ್ಯಮದಲ್ಲಿ ಹಲವಾರು ಯಶಸ್ವಿ ಯೋಜನೆಗಳನ್ನು ರೂಪಿಸಿರುವಂತಹ ಅನಿಲ್ ಶೆಟ್ಟಿ (Anil Shetty) ರವರು ಈಗ ಚಿತ್ರೋದ್ಯಮದಲ್ಲೂ ತಮ್ಮ ಛಾಪನ್ನು ಮೂಡಿಸಲು ಮುಂದಾಗಿದ್ದಾರೆ. ಸ್ಟಾರ್ಟಪ್ ಉದ್ಯಮಿ ಆಗಿರುವುದರ ಜೊತೆಗೆ...

Read moreDetails

Santosh Lad: ಅನ್ನದಾತನಿಗೆ ಜೋಡಿ ಎತ್ತು ಕೊಡಿಸಿ ಮಾನವೀಯತೆ ಮೆರೆದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

June 26, 2025

Tamil Hero Surya: ತಮಿಳು ನಟ ಸೂರ್ಯ ಹೊಸ ಸಿನಿಮಾ ʼಕರುಪ್ಪುʼ..ಡ್ರೀಮ್ ವಾರಿಯರ್ ಪಿಕ್ಚರ್ಸ್ ನಿರ್ಮಾಣದಲ್ಲಿ ಚಿತ್ರ

June 26, 2025

DK Shivakumar: ಎರಡು ಮೂರು ದಿನಗಳಲ್ಲಿ ಕಾವೇರಿ ಆರತಿ ಕಾರ್ಯಕ್ರಮದ ಸ್ವರೂಪ ಪ್ರಕಟಣೆ: ಡಿಸಿಎಂ ಡಿ.ಕೆ. ಶಿವಕುಮಾರ್

June 25, 2025

N.S Bhosaraju: ಭಾರತದ ಮೊದಲ ಹಾಗೂ ಶಕ್ತಿಶಾಲಿ ಕ್ವಾಂಟಮ್ ಕಂಪ್ಯೂಟರ್” ಕೇಂದ್ರಕ್ಕೆ ಭೇಟಿ ನೀಡಿದ ಸಚಿವ ಎನ್‌ ಎಸ್‌ ಭೋಸರಾಜು..

June 25, 2025
Next Post
ವೈವಾಹಿಕ ಜೀವನಕ್ಕೆ ಕಾಲಿಟ್ಟ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ಜೋಡಿ

ವೈವಾಹಿಕ ಜೀವನಕ್ಕೆ ಕಾಲಿಟ್ಟ ಅಭಿಷೇಕ್ ಅಂಬರೀಷ್ - ಅವಿವಾ ಬಿದ್ದಪ್ಪ ಜೋಡಿ

Please login to join discussion

Recent News

Top Story

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada