• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BREAKING : ಗ್ಯಾರಂಟಿ ಬೆನ್ನಲ್ಲೇ ಮತ್ತೊಂದು ಬೇಡಿಕೆ ಈಡೇರಿಕೆಗೆ ಹೆಚ್ಚಾಯಿತು ಒತ್ತಡ.!

Any Mind by Any Mind
June 6, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
BREAKING : ಗ್ಯಾರಂಟಿ ಬೆನ್ನಲ್ಲೇ ಮತ್ತೊಂದು ಬೇಡಿಕೆ ಈಡೇರಿಕೆಗೆ ಹೆಚ್ಚಾಯಿತು ಒತ್ತಡ.!
Share on WhatsAppShare on FacebookShare on Telegram

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ (congress) ಅಧಿಕಾರಕ್ಕೆ ಬಂದು, ನೂತನ ಸರ್ಕಾರ ರಚನೆಯ ನಂತರ, ಚುನಾವಣೆಗೂ ಮುನ್ನ ಘೋಷಿಸಿದ್ದ ಗ್ಯಾರಂಟಿ (congress Gurantee) ಯೋಜನೆಗಳನ್ನ ಜಾರಿಗೆ ತಂದಿದೆ. ಈ ವಿಚಾರ ಇದೀಗ ರಾಜ್ಯದಲ್ಲಿ ಪರ ವಿರೋಧದ ಚರ್ಚೆಗಳ ಜೊತೆಗೆ ಹಲವು ವಿವಾದಕ್ಕೆ ಕೂಡ ಕಾರಣವಾಗಿದೆ. ಇನ್ನು ಈ ಘೋಷಣೆ ತಡವಾಗಿದ್ದಕ್ಕೆ ಬಿಜೆಪಿ ಬೃಹತ್ ಮಟ್ಟದಲ್ಲಿ ಪ್ರತಿಭಟನೆ (bjp protest) ನಡೆಸೋದಕ್ಕೆ ಕೂಡ ತಯಾರಾಗಿತ್ತು.

ADVERTISEMENT

ಆದ್ರೆ ಈಗ ಈ ಗ್ಯಾರಂಟಿ ಯೋಜನೆಯಲ್ಲಿ ಕೆಲವು ಕಂಡಿಷನ್ಸ್ಗಳನ್ನ (Conditions) ಕಾಂಗ್ರೆಸ್ ಹಾಕಿದೆ ಅನ್ನೋ ವಿಚಾರವನ್ನ ಹೊತ್ತುಕೊಂಡು ಬಿಜೆಪಿ ಪ್ರತಿಭಟಿಸುವ ಸಾಧ್ಯತೆ ಕೂಡ ಇದೆ. ಹೀಗಾಗಿ ಗ್ಯಾರಂಟಿ ಯೋಜನೆ ಅನ್ನೋದು ಕಾಂಗ್ರೆಸ್ಗೆ ಒಂದು ರೀತಿಯಲ್ಲಿ ತಲೆನೋವಿನ ಹಾಗೆ ಕಾಡ್ತಾ ಇದೆ. ಇದರ ಮಧ್ಯದಲ್ಲಿ ಇದೀಗ ಕಾಂಗ್ರೆಸ್ಗೆ ಮತ್ತೊಂದು ಭರವಸೆಯ ತಲೆನೋವು ಕಾಡುವ ಸಾಧ್ಯತೆ ಇದೆ.

ಹೌದು.. ಈ ಹಿಂದೆ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ವಿವಿಧ ಭರವಸೆಗಳನ್ನ ಕಾರ್ಮಿಕ ವರ್ಗ (labor) ಹಾಗೂ ರೈತ ವರ್ಗಕ್ಕೆ (farmer) ನೀಡಿತ್ತು ಅದರಲ್ಲಿ ಪ್ರಮುಖವಾಗಿ ಅಂಗನಾಡಿ ಕಾರ್ಯಕರ್ತರಿಗೆ ತಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಅಂಗನವಾಡಿ (Anganwadi) ಕಾರ್ಯಕರ್ತರಿಗೆ ಎಲ್ಲಾ ರೀತಿಯಾದ ಸಹಕಾರವನ್ನ ನೀಡುವ ಭರವಸೆಯನ್ನ ಕೂಡ ಕಾಂಗ್ರೆಸ್ ನೀಡಿತ್ತು ಇದೀಗ ಇದೇ ವಿಚಾರ ಕಾಂಗ್ರೆಸ್ಗೆ ಹೊಸದೊಂದು ಸಂಕಷ್ಟವನ್ನ ತಂದಿದೆ.

ಹೌದು.. ಗ್ಯಾರಂಟಿ ಭರವಸೆಯನ್ನ ಈಡೇರಿಸಿದ ಬೆನ್ನಲ್ಲೇ ಸರ್ಕಾರಕ್ಕೆ ಇದೀಗ ಅಂಗನವಾಡಿ (Anganwadi) ಕಾರ್ಯಕರ್ತರ ಬೇಡಿಕೆ ಈಡೇರಿಸುವ ಕೆಲಸಕ್ಕೆ ಕೈ ಹಾಕಬೇಕಾಗಿದೆ. ಈ ಕುರಿತು ಅಂಗನವಾಡಿ ಕಾರ್ಯಕರ್ತೆಯರು ಸರ್ಕಾರವನ್ನ ಮನವಿ ಮಾಡಿಕೊಂಡಿದ್ದು, ನಮ್ಮ ಬೇಡಿಕೆಯನ್ನ ಸರ್ಕಾರ ಈಡೇರಿಸಬೇಕು, ಈ ಹಿಂದೆ ಖಾನಪುರದಲ್ಲಿ ನಡೆದ ಸಮಾವೇಷದಲ್ಲಿ ಕಾಂಗ್ರೆಸ್ ನಮ್ಮ ಭರವಸೆಗಳನ್ನ ಈಡೇರಿಸುವುದಾಗಿ ಹೇಳಿತ್ತು, ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಕೆ ಮಾಡುತ್ತೇವೆ ಅಂತ ಹೇಳಿತ್ತು. ಅದರಲ್ಲೂ ಗೌರವಧನ 11,500 ರಿಂದ 15 ಸಾವಿರಕ್ಕೆ ಏರಿಕೆ ಮಾಡುವ ಭರವಸೆಯನ್ನ ಸ್ವತಃ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಅವರೇ ಘೋಷಣೆ ಮಾಡಿದ್ರು ಹಾಗಾಗಿ ಕಾಂಗ್ರೆಸ್ ಕಾಂಗ್ರೆಸ್ ಸರ್ಕಾರ ನಮ್ಮ ಬೇಡಿಕೆಯನ್ನ ಈಡೇರಿಸ ಬೇಕು, ಅಂತ ಅಂಗನವಾಡಿ ಕಾರ್ಯಕರ್ತೆಯರು ಮನವಿ ಮಾಡಿಕೊಂಡಿದ್ದಾರೆ.

ಒಟ್ಟಾರೆಯಾಗಿ ಇದೀಗ ಗ್ಯಾರಂಟಿ ಯೋಜನೆಗಳನ್ನ ಘೋಷಿಸಿದ್ದ ಕಾಂಗ್ರೆಸ್ಗೆ, ಇದೀಗ ಚುನಾವಣೆಗೂ ಮುನ್ನ ಘೋಷಣೆ ಮಾಡಿದ್ದ ಹಲವು ವಿವಿಧ ಯೋಜನೆಗಳನ್ನ ಜಾರಿಗೆ ತರುವ ತಲೆಬಿಸಿ ಕೂಡ ಆರಂಭವಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಯಾವ ರೀತಿಯಾದ ನಡೆಯನ್ನ ಅನುಸರಿಸಲಿದೆ ಅನ್ನೋದನ್ನ ಕಾದು ನೋಡಬೇಕಾಗಿದೆ.

Tags: BJPbjpkarnatakabjpvscongressBreaking NewsbsbommaibsyediyurappacmsiddaramiahCongress GuaranteeCongress PartyDCM DK Shivakumarlatestnews
Previous Post

ಎಲೆಕ್ಟ್ರಾನಿಕ್ ತೊಟ್ಟಿಲಿನಲ್ಲಿ ಮಗುವನ್ನ ಮಲಗಿಸಿದ ಪೋಷಕರು, ಬೆಚ್ಚಿಬಿದ್ದ ನೆಟ್ಟಿಗರು..!

Next Post

ನನ್ನ ಮೇಲಿನ ಆರೋಪ ಸಾಬೀತಾದ್ರೆ ರಾಜಕೀಯ ನಿವೃತ್ತಿ : ಸಚಿವ ಚೆಲುವರಾಯಸ್ವಾಮಿಗೆ ಸುರೇಶ್​ ಗೌಡ ಸವಾಲು

Related Posts

ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ
Top Story

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

by ಪ್ರತಿಧ್ವನಿ
April 30, 2026
0

ಬೆಂಗಳೂರು, ಏ. 29: ನಗರದಲ್ಲಿ ಸಂಭವಿಸಿದ ಕಾಂಪೌಂಡ್ ಗೋಡೆ ಕುಸಿತ ದುರಂತದ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. “ಏಳು ಮಂದಿ...

Read moreDetails
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

April 29, 2026
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

April 29, 2026
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
Next Post
ನನ್ನ ಮೇಲಿನ ಆರೋಪ ಸಾಬೀತಾದ್ರೆ ರಾಜಕೀಯ ನಿವೃತ್ತಿ : ಸಚಿವ ಚೆಲುವರಾಯಸ್ವಾಮಿಗೆ ಸುರೇಶ್​ ಗೌಡ ಸವಾಲು

ನನ್ನ ಮೇಲಿನ ಆರೋಪ ಸಾಬೀತಾದ್ರೆ ರಾಜಕೀಯ ನಿವೃತ್ತಿ : ಸಚಿವ ಚೆಲುವರಾಯಸ್ವಾಮಿಗೆ ಸುರೇಶ್​ ಗೌಡ ಸವಾಲು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada