ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆಯನ್ನು ಬಿಡುಗಡೆ ಮಾಡಲಾಗಿದೆ.
ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆಯು ಭೌತಿಕ ಅರ್ಜಿ ಸಲ್ಲಿಕೆಯ ಅರ್ಜಿಯನ್ನು ಇಂದು ಬಿಡುಗಡೆ ಮಾಡಿದೆ. ಈ ಅರ್ಜಿ ನಮೂನೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಮಹಿಳಾ & ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾವಚಿತ್ರವನ್ನು ಇರಿಸಲಾಗಿದೆ.
ಗೃಹಲಕ್ಷ್ಮೀಯನ್ನು ಅರ್ಜಿ ಸಲ್ಲಿಸುವವರು ಪತಿಯ ಆಧಾರ್ ಕಾರ್ಡ್ ವೋಟರ್ ಐಡಿಯ ಪ್ರತಿಯನ್ನೂ ನೀಡಬೇಕು ಎಂದು ಅರ್ಜಿಯಲ್ಲಿ ನಮೂದಿಸಲಾಗಿದೆ.