• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ತಾಲೂಕು -ಜಿಲ್ಲಾ ಆಸ್ಪತ್ರೆಗಳಲ್ಲಿ ಅಳವಡಿಕೆಯಾಗದ MRI ಮತ್ತು ಡಯಾಲಿಸಿಸ್ ಯಂತ್ರ : ಸಿಎಂ ಗರಂ

Any Mind by Any Mind
June 13, 2023
in ಕರ್ನಾಟಕ
0
ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಜಯದೇವ ಆಸ್ಪತ್ರೆ ಮಾದರಿಯಾಗಲಿ : ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ಬೆಂಗಳೂರು, ಜೂನ್ 13: ರಾಷ್ಟ್ರೀಯ ಆರೋಗ್ಯ ಅಭಿಯಾನದ ಉದ್ದೇಶ ಸಮರ್ಪಕವಾಗಿ ಜಾರಿಯಾಗದೆ ತಜ್ಞ ವೈದ್ಯರ ಕೊರತೆ ಮತ್ತು ಎಂಆರ್ ಐ ಹಾಗೂ ಡಯಾಲಿಸಿಸ್ ಯಂತ್ರಗಳನ್ನು ತಾಲ್ಲೂಕಾ ಆಸ್ಪತ್ತೆಗಳಲ್ಲಿ ಸಮರ್ಪಕವಾಗಿ ಅಳವಡಿಸದಿರುವುದಕ್ಕೆ ಮುಖ್ಯಮಂತ್ರಿಗಳು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ADVERTISEMENT

ದಿನಾಂಕ 13-6-2023 `ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಭಿಯಾನದ ಕೊರತೆಗಳನ್ನು ಗುರುತಿಸಿ ಮುಂದಿನ ಸಭೆ ವೇಳೆಗೆ ಲೋಪಗಳನ್ನು ಸರಿಪಡಿಸಿರಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು.

ರಾಷ್ಟ್ರೀಯ ಆರೋಗ್ಯ ಅಭಿಯಾನ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌, ಆರೋಗ್ಯ ಸೇವೆಯ ಲಭ್ಯತೆ ಕುರಿತಂತೆ ಪ್ರತ್ಯೇಕವಾಗಿ ಪ್ರಗತಿ ಪರಿಶೀಲನೆ ನಡೆಸಿದರು.

ರಾಷ್ಟ್ರೀಯ ಆರೋಗ್ಯ ಮಿಷನ್ ನ ಅನುದಾನ ಸಕಾಲದಲ್ಲಿ ವೆಚ್ಚವಾಗದಿರುವುದನ್ನು ಗುರುತಿಸಿದರು. ಬಳಿಕ, ರಾಷ್ಟ್ರೀಯ ಆರೋಗ್ಯ ಮಿಷನ್‌ ನಡಿ ಆರೋಗ್ಯ ವ್ಯವಸ್ಥೆ ಬಲಪಡಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು. ಈ ಯೋಜನೆಯಡಿ ಶೇ. 52 ರಷ್ಟು ತಜ್ಞ ವೈದ್ಯರ ಕೊರತೆ ಇದೆ, ಶೇ. 31 ರಷ್ಟು ಎಂಬಿಬಿಎಸ್‌ ವೈದ್ಯರ ಕೊರತೆ ಹಾಗೂ ಶೆ. 18 ರಷ್ಟು ನರ್ಸ್‌ ಸಿಬ್ಬಂದಿ ಕೊರತೆ ಇರುವುದನ್ನು ಗಮನಿಸಿದ ಮುಖ್ಯಮಂತ್ರಿಗಳು, ಇವರಿಗೆ ವೇತನ ಹೆಚ್ಚಳ ಮಾಡುವ ಬಗ್ಗೆ ಪರಿಶೀಲಿಸಿ, ಈ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ನಿರಂತರವಾಗಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಪ್ರಗತಿ ಪರಿಶೀಲನೆ ಮಾಡಬೇಕು. ನಿಗದಿತ ಗುರಿ ಸಾಧನೆಯನ್ನು ಖಾತರಿ ಪಡಿಸಬೇಕು ಹಾಗೂ ಅನುದಾನ ಸಕಾಲದಲ್ಲಿ ವೆಚ್ಚ ಮಾಡಬೇಕು ಎಂದು ಮುಖ್ಯಮಂತ್ರಿಗಳು ಇಲಾಖೆಯ ಆಯುಕ್ತರಿಗೆ ಸೂಚಿಸಿದರು.

ಕಳೆದ ಒಂದು ವರ್ಷದಲ್ಲಿ ನಿಗಮಕ್ಕೆ 5 ಎಂ.ಡಿ. ನೇಮಕ ಮಾಡಿರುವುದರಿಂದ ಸಮಸ್ಯೆ ಆಗಿರುವುದನ್ನು ಅಧಿಕಾರಿಗಳಿಂದ ಕೇಳಿ ತಿಳಿದ ಮುಖ್ಯಮಂತ್ರಿಗಳು, ನಮ್ಮ ಸರ್ಕಾರದ ಅವಧಿಯಲ್ಲಿ ಈ ರೀತಿ ಆಗುವುದಿಲ್ಲ ಎಂದು ಭರವಸೆ ನೀಡಿದ್ದಲ್ಲದೆ, ನಿಗಮದ ವ್ಯವಸ್ಥಾಪಕ ನಿರ್ದೇಶಕರು ಕನಿಷ್ಠ 2 ವರ್ಷ ಸೇವೆ ಸಲ್ಲಿಸಬೇಕು ಎಂದು ಸೂಚಿಸಿದರು.

ಎಲ್ಲ ತಾಲ್ಲೂಕು ಆಸ್ಪತ್ರೆಗಳಲ್ಲಿ ಎಂ.ಆರ್.ಐ. ಸ್ಕ್ಯಾನಿಂಗ್ ಹಾಗೂ ಡಯಾಲಿಸಿಸ್‌ ಯಂತ್ರಗಳನ್ನು ಅಳವಡಿಸಬೇಕು ಹಾಗೂ ಈ ಎಲ್ಲ ಸೇವೆಗಳನ್ನು ಒದಗಿಸಲು ತಂತ್ರಜ್ಞರನ್ನು ನೇಮಕ ಮಾಡಬೇಕು ಎಂದು ಸೂಚಿಸಿದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಬಡಜನರಿಗೆ ಈ ವಿಶೇಷ ಸೇವೆಗಳನ್ನು ಒದಗಿಸದಿದ್ದರೆ ಅವರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ಹೇಗೆ ಸಾದ್ಯ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, ಮೂರು ತಿಂಗಳಲ್ಲಿ ವ್ಯವಸ್ಥೆ ಸರಿಪಡಿಸಬೇಕು. ಸರ್ಕಾರಿ ಆಸ್ಪತ್ರೆಗಳಿಗೆ ಜನ ಬರಬೇಕು.

ಮೂರು ತಿಂಗಳಲ್ಲಿ ಮತ್ತೊಮ್ಮೆ ಪರಿಶೀಲನೆ ನಡೆಸುತ್ತೇನೆ. ಇದೇ ಪರಿಸ್ಥಿತಿ ಮುಂದುವರೆದರೆ ಅಧಿಕಾರಿಗಳೇ ಜವಾಬ್ದಾರರು ಎಂದು ಎಚ್ಚರಿಸಿದರು.

ಗ್ರಾಮೀಣ ಪ್ರದೇಶದಲ್ಲಿ ವೈದ್ಯರಿಗೆ ಕಟ್ಟಿಸಿರುವ ವಸತಿಗೃಹದಲಿ ಯಾವ ವೈದ್ಯರೂ ಉಳಿದುಕೊಳ್ಳುತ್ತಿಲ್ಲ. ಈ ಲೋಪ ಸರಿಪಡಿಸುವಂತೆ ಆಯುಕ್ತರಿಗೆ ಸೂಚಿಸಿದರು.

ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಕಾರ್ಯಕ್ಷಮತೆ ಬಳಿಕ ಸಿಎಂ ಕೊಟ್ಟ ಸೂಚನೆಗಳು

  1. ಆಯುಷ್ಮಾನ್‌ ಭಾರತ್- ಆರೋಗ್ಯ ಕರ್ನಾಟಕ ಯೋಜನೆಯು Assurance Mode ನಲ್ಲಿದೆ. ತಮಿಳುನಾಡು ಹಾಗೂ ರಾಜಸ್ಥಾನದಲ್ಲಿ ಜಾರಿಯಲ್ಲಿರುವ ಇನ್ಷೂರೆನ್ಸ್‌ ಮಾದರಿಯನ್ನು ಅಧ್ಯಯನ ಮಾಡಿ ವರದಿ ಕೊಡಬೇಕು ಎಂದರು.
  2. ಪ್ರಗತಿ ಪರಿಶೀಲನೆ ಮಾಡಿ, ಕಟ್ಟುನಿಟ್ಟಿನ ಸೂಚನೆ ನೀಡಬೇಕು ಎಂದು ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಆಯುಕ್ತರಿಗೆ ಸೂಚಿಸಿದರು.
  3. ಮನುಷ್ಯರಿಗೆ ಸಹಾಯ ಮಾಡಬೇಕು ಆಗ ನಾವೂ ಮನುಷ್ಯರಾಗ್ತೀವಿ. ರೋಗಿಗಳಿಗೆ ಕಾಯಿಲೆ ವಾಸಿ ಮಾಡಲು ನಮ್ಮ ಪ್ರಯತ್ನ ಮಾಡಬೇಕು. ಪಾವತಿಯ ಅವಧಿ 14 ದಿನಕ್ಕೆ ಇಳಿಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆ ಗಳ ಎಂಪ್ಯಾನೆಲ್‌ ಮೆಂಟ್‌ ಸುಧಾರಿಸುವ ನಿರೀಕ್ಷೆ ಇದೆ ಎಂದರು.
  4. ಲ್ಯಾಬ್‌ ಟೆಕ್ನಿಷಿಯನ್‌ ಮತ್ತಿತರ ಅತಿ ಅಗತ್ಯವಿರುವ ಅರೆ ವೈದ್ಯಕೀಯ ಸಿಬ್ಬಂದಿ ನೇಮಕಕ್ಕೆ ಆದ್ಯತೆ ನೀಡುವಂತೆ ಹಣಕಾಸು ಇಲಾಖೆಗೆ ಸೂಚಿಸಿದರು.
  5. ಔಷಧ ಖರೀದಿ ಪ್ರಕ್ರಿಯೆ ನಿರಂತರವಾಗಿ ನಡೆಯಲು ಅನುವಾಗುವಂತೆ ಎರಡು ವರ್ಷಕ್ಕೊಮ್ಮೆ ಟೆಂಡರ್‌ ಕರೆಯಲು ಇಲಾಖೆಯು ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್‌ ಕುಮಾರ್‌, ಆರ್ಥಿಕ ಇಲಾಖೆ ಕಾರ್ಯದರ್ಶಿ ಪಿ.ಸಿ. ಜಾಫರ್‌, ಮುಖ್ಯಮಂತ್ರಿಯವರ ಕಾರ್ಯದರ್ಶಿ ಎನ್. ಜಯರಾಂ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Tags: BangaloreCM SiddaramaiahDialysis MachineDistrict HospitalMRI MachineTaluk Hospital
Previous Post

ಸಪ್ತಪದಿ ತುಳಿಯಲು ಸಜ್ಜಾದ ಒಳ್ಳೆ ಹುಡ್ಗ ಪ್ರಥಮ್​ : ಸಿಂಪಲ್​ ಆಗಿ ನಡೆದ ನಿಶ್ಚಿತಾರ್ಥ

Next Post

ನನ್ನ ಸೋಲಿಗೆ ಮುಸ್ಲಿಮರೇ ಕಾರಣ , ಅವರನ್ನು ಅಲ್ಲಾ ಬಿಡಲ್ಲ : ಎಂಟಿಬಿ ನಾಗರಾಜು

Related Posts

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
0

ರಾಜ್ಯ ರಾಜಕಾರಣದಲ್ಲಿ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ ಎಂಬ ಸಚಿವ ಕೆ‌. ಎನ್. ರಾಜಣ್ಣ (KN Rajanna) ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಡಿಸಿಎಂ ಡಿಕೆ ಶಿವಕುಮಾರ್ (Dcm Dk...

Read moreDetails
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

June 26, 2025
Next Post
ನನ್ನ ಸೋಲಿಗೆ ಮುಸ್ಲಿಮರೇ ಕಾರಣ , ಅವರನ್ನು ಅಲ್ಲಾ ಬಿಡಲ್ಲ : ಎಂಟಿಬಿ ನಾಗರಾಜು

ನನ್ನ ಸೋಲಿಗೆ ಮುಸ್ಲಿಮರೇ ಕಾರಣ , ಅವರನ್ನು ಅಲ್ಲಾ ಬಿಡಲ್ಲ : ಎಂಟಿಬಿ ನಾಗರಾಜು

Please login to join discussion

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada