• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ವಿಧಾನಪರಿಷತ್ತಿನ ಚುನಾವಣೆ ನಾಮಪತ್ರ ಸಲ್ಲಿಕೆ ; ಕಾಂಗ್ರೆಸ್ ನ ಮೂರೂ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸ – CM ಸಿದ್ದರಾಮಯ್ಯ

Any Mind by Any Mind
June 20, 2023
in Top Story, ಕರ್ನಾಟಕ, ರಾಜಕೀಯ
0
ವಿಧಾನಪರಿಷತ್ತಿನ ಚುನಾವಣೆ ನಾಮಪತ್ರ ಸಲ್ಲಿಕೆ ; ಕಾಂಗ್ರೆಸ್ ನ ಮೂರೂ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸ – CM ಸಿದ್ದರಾಮಯ್ಯ
Share on WhatsAppShare on FacebookShare on Telegram

ಬೆಂಗಳೂರು, ಜೂನ್ 20 : ವಿಧಾನಪರಿಷತ್ತಿನ ತೆರವಾದ ಸ್ಥಾನಗಳ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಜಗದೀಶ್ ಶೆಟ್ಟರ್, ಎನ್.ಎಸ್.ಬೋಸರಾಜು, ತಿಪ್ಪಣ್ಣಪ್ಪ ಕಮಕನೂರು ನಾಮಪತ್ರ ಸಲ್ಲಿಸಿದ್ದಾರೆ. ಇಂದು ನಾಮಪತ್ರ ಸಲ್ಲಿಸಿರುವ ಕಾಂಗ್ರೆಸ್ ಪಕ್ಷದ ಈ ಮೂರು ಸದಸ್ಯರು ಚುನಾವಣೆಯಲ್ಲಿ ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ. ಇವರು ಚುನಾವಣೆಯಾದರೂ ಗೆಲ್ಲುತ್ತಾರೆ, ಆಗದಿದ್ದರೂ ಗೆಲ್ಲುತ್ತಾರೆ ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

ಇಂದು ವಿಧಾನಪರಿಷತ್ತಿನ ಚುನಾವಣೆಗೆ ಅಭ್ಯರ್ಥಿಗಳೊಂದಿಗೆ ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಳೆ ದೆಹಲಿಯಲ್ಲಿ ರಾಷ್ಟ್ರಪತಿಗಳನ್ನು ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡುತ್ತಿದ್ದು, ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಕೇಂದ್ರ ಆಹಾರ ಸಚಿವರನ್ನು ಭೇಟಿ ಮಾಡಿ ಅಕ್ಕಿ ನೀಡುವಂತೆ ಮನವಿ ಮಾಡಲಿದ್ದಾರೆ ಎಂದರು. ಮುಖ್ಯಮಂತ್ರಿಯಾದ ನಂತರ ಕೇಂದ್ರ ಸಚಿವರೊಂದಿಗೆ ಸೌಜನ್ಯದ ಭೇಟಿ ಮಾಡಲಿರುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು

ಅಕ್ಕಿ ಖರೀದಿಗೆ ಪ್ರಯತ್ನ:
ಪಶ್ಚಿಮ ಬಂಗಾಳ, ಆಂಧ್ರಪ್ರದೇಶ, ತೆಲಂಗಾಣ ಛತ್ತೀಸಗಢ ರಾಜ್ಯದೊಂದಿಗೆ ಅಕ್ಕಿ ಖರೀದಿ ಬಗ್ಗೆ ಚರ್ಚಿಸಲಾಗಿದೆ. ರಾಜ್ಯಕ್ಕೆ 2,28,000 ಮೆಟ್ರಿಕ್ ಟನ್ ಅಕ್ಕಿ ದಾಸ್ತಾನು ಬೇಕಾಗಿದೆ. ಛತ್ತೀಸಗಢ ದಿಂದ ಅಕ್ಕಿ ಖರೀದಿಸಿದರೆ ಸಾಗಾಣಿಕೆಯೂ ಸೇರಿ, ಎಫ್ ಸಿ ಐ ಗಿಂತ ದರ ಹೆಚ್ಚಾಗುತ್ತದೆ. ತೆಲಂಗಾಣದಲ್ಲಿ ಅಕ್ಕಿ ದಾಸ್ತಾನು ಲಭ್ಯವಿಲ್ಲವೆಂದು ತಿಳಿಸಿದ್ದು, ಆಂಧ್ರಪ್ರದೇಶದೊಂದಿಗೆ ನಮ್ಮ ರಾಜ್ಯದ ಅಧಿಕಾರಿಗಳು ಚರ್ಚಿಸುತ್ತಿದ್ದಾರೆ. ಭಾರತ ಸರ್ಕಾರದ ಮೂರು ಸಂಸ್ಥೆಗಳಾದ ಎನ್ ಸಿ ಸಿಎಫ್, ನಾಫೆಡ್ ಹಾಗೂ ಕೇಂದ್ರೀಯ ಭಂಡಾರಗಳಿಂದ ಅಕ್ಕಿ ಖರೀದಿಗೆ ದರಪಟ್ಟಿ ಕರೆಯಲಾಗಿದೆ. ಅಕ್ಕಿ ಖರೀದಿ ಬಗ್ಗೆ ಎಫ್ ಸಿ ಐ ಗೆ ಜೂನ್ 9 ರಂದು ಪತ್ರ ಬರೆಯಲಾಗಿದ್ದು, ಎಫ್ ಸಿ ಐ ಅವರು ತಮ್ಮಲ್ಲಿ 7 ಲಕ್ಷ ಮೆಟ್ರಿ ಟನ್ ಅಕ್ಕಿ ದಾಸ್ತಾನು ಇದ್ದು, ರಾಜ್ಯಕ್ಕೆ ಸರಬರಾಜು ಮಾಡಲಾಗುವುದು ಎಂದು ಜೂನ್ 12 ರಂದು ತಿಳಿಸಿದ್ದಾರೆ.

ಬಡವರ ವಿರೋಧಿ ಕ್ರಮ
ಎಫ್.ಸಿ.ಐ ಉಪ ವ್ಯವಸ್ಥಾಪಕರೊಂದಿಗೂ ಮಾತನಾಡಿದ್ದು, ಅವರೂ ಅಕ್ಕಿ ನೀಡುವುದಾಗಿ ಹೇಳಿದ್ದರು. ಇದಾದ ನಂತರ ಕೇಂದ್ರ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಯವರು ಹಸ್ತಕ್ಷೇಪ ಮಾಡಿ ಜೂನ್ 13 ರಂದು ಎಫ್.ಸಿ.ಐ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರು ಪತ್ರ ಬರೆದು ರಾಜ್ಯಗಳಿಗೆ ಅಕ್ಕಿ ನೀಡುವುದನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ನಂತರ ನಮಗೆ ¥ಪತ್ರ ಬರೆದು ಅಕ್ಕಿ ನೀಡಲಾಗುವುದಿಲ್ಲ ಎಂದು ತಿಳಿಸಿದ್ದಾರೆ. ಇದು ದ್ವೇಷದ ರಾಜಕಾರಣ, ಬಡವರ ವಿರೋಧಿ ಕ್ರಮವಲ್ಲವೇ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ವಿಳಂಬವಾದರೂ ಅಕ್ಕಿ ಕೊಟ್ಟೇ ಕೊಡುತ್ತೇವೆ
ದ್ವೇಷದ ರಾಜಕಾರಣ ಮಾಡುವ ಇವರಿಗೆ ಮಾನವೀಯತೆ, ಇದೆಯೇ? ದ್ವೇಷದ ರಾಜಕೀಯ ಮಾಡುತ್ತಾರಲ್ಲ ಎಂದು ಪ್ರಶ್ನಿಸಿದರು. ಕೇಂದ್ರದ ಈ ನಡೆಯನ್ನು ಖಂಡಿಸಿ ನಮ್ಮ ಪಕ್ಷದ ವತಿಯಿಂದ ಎಲ್ಲೆಡೆ ಪ್ರತಿಭಟನೆ ಮಾಡಲಾಗಿದೆ. ದುರುದ್ದೇಶದಿಂದ ಈ. ಕೆಲಸ ಮಾಡಿದ್ದಾರೆ. ಹಣ ನೀಡಿ ಅಕ್ಕಿಯನ್ನು ಪಡೆಯುತ್ತೇವೆ. ನಾವು ಸಹಕಾರಿ ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಯಾವಾಗಲೂ ಹೇಳುತ್ತಾರೆ. ಇದೇ ಇವರ ಸಹಕಾರಿ ಒಕ್ಕೂಟ ವ್ಯವಸ್ಥೆಯೇ? ಎಂದು ಪ್ರಶ್ನಿಸಿದರು. ಬಿಜೆಪಿ ಸರ್ಕಾರ ಸರ್ವಾಧಿಕಾರಿಯಲ್ಲ. ಇದೊಂದು ಪ್ರಜಾಪ್ರಭುತ್ವದ ವ್ಯವಸ್ಥೆ, ಒಕ್ಕೂಟ ರಚನೆಯನ್ನು ಹೊಂದಿದ್ದೇವೆ. ಕೇಂದ್ರ ಸರ್ಕಾರವೇ ಭತ್ತ ಬೆಳೆಯುತ್ತದೆಯೇ. ಎಲ್ಲೆಲ್ಲಿ ಭತ್ತ ಬೆಳೆಯುತ್ತಾರೋ ಅಲ್ಲಿಂದ ಅಕ್ಕಿಯನ್ನು ಪಡೆಯುತ್ತಾರೆ. ಮಾತೆತ್ತಿದರೆ ಆಹಾರ ಭದ್ರತಾ ಕಾಯ್ದೆ ಎನ್ನುವ ಕೇಂದ್ರ ಸರ್ಕಾರ, ಆಹಾರ ಭದ್ರತಾ ಕಾಯ್ದೆಯನ್ನು ಜಾರಿಗೆ ತಂದಿದ್ದು ಯು.ಪಿ.ಎ ಸರ್ಕಾರದಲ್ಲಿ ಮನ್ ಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಎನ್ನುವುದನ್ನು ಮರೆಯುತ್ತಿದೆ ಎಂದರು. ಈ ಕಾಯ್ದೆ ಬದಿದ್ದರಿಂದ 5 ಕೆಜಿ ಅಕ್ಕಿ ಕೊಡುವುದು ಮುಂದುವರೆದಿದೆ. ಅಕ್ಕಿ ಕೊಡಿ ಎಂದು ಕೇಳಿದ್ದೇವೆ. ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ನೀಡುವುದಾಗಿ ಘೋಷಿಸಿದ್ದೇವೆ. ನಾವು ಕೊಟ್ಟೇ ಕೊಡುತ್ತೇವೆ. ಸ್ವಲ್ಪ ವಿಳಂಬವಾಗಬಹುದು ಅಷ್ಟೇ ಎಂದರು.

Tags: BJPbjpkarnatakabrakingnewscmsiddaramiahCongress PartycongressmlcDCM DK ShivakumarJagadeesha ShettarlatestnewsMLC e3lctionMLC Election
Previous Post

ಕರೆಂಟ್​ ಫ್ರೀ.. ವಿರೋಧಿಗಳ ಮಾತು ಬಿಟ್ಟುಬಿಡಿ.. ಅರ್ಜಿ ಹಾಕೋದು ಇಷ್ಟು ಸುಲಭ..!

Next Post

ಬ್ರಾಹ್ಮಣ ಸಮಾಜದ ಜತೆ ನನ್ನ ಸಂಬಂಧ ಮಧುರವಾಗಿದೆ : ಎಂ.ಬಿ.ಪಾಟೀಲ

Related Posts

Ajit Pawar: ಅಜಿತ್ ಪವಾರ್ ದುರ್ಮರಣ: ಸಿಎಂ ಸಿದ್ದರಾಮಯ್ಯ ಸಂತಾಪ
ಇದೀಗ

Ajit Pawar: ಅಜಿತ್ ಪವಾರ್ ದುರ್ಮರಣ: ಸಿಎಂ ಸಿದ್ದರಾಮಯ್ಯ ಸಂತಾಪ

by ಪ್ರತಿಧ್ವನಿ
January 28, 2026
0

ಮಹಾರಾಷ್ಟ್ರ: ವಿಮಾನ ಪತನದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್(Ajit Pawar) ಅಸುನೀಗಿದ್ದಾರೆ. ಮಹಾರಾಷ್ಟ್ರ ಉಪಮುಖ್ಯಮಂತ್ರಿಗಳ ಈ ದಿಢೀರ್‌ ನಿಧನಕ್ಕೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. https://youtu.be/G_hMa9k4JV8?si=rONUrktRvUC1TH_Z...

Read moreDetails
BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

January 28, 2026
ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

January 28, 2026
Next Post
ಬ್ರಾಹ್ಮಣ ಸಮಾಜದ ಜತೆ ನನ್ನ ಸಂಬಂಧ ಮಧುರವಾಗಿದೆ : ಎಂ.ಬಿ.ಪಾಟೀಲ

ಬ್ರಾಹ್ಮಣ ಸಮಾಜದ ಜತೆ ನನ್ನ ಸಂಬಂಧ ಮಧುರವಾಗಿದೆ : ಎಂ.ಬಿ.ಪಾಟೀಲ

Please login to join discussion

Recent News

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?
Top Story

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

by ಪ್ರತಿಧ್ವನಿ
January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Ajit Pawar: ಅಜಿತ್ ಪವಾರ್ ದುರ್ಮರಣ: ಸಿಎಂ ಸಿದ್ದರಾಮಯ್ಯ ಸಂತಾಪ

Ajit Pawar: ಅಜಿತ್ ಪವಾರ್ ದುರ್ಮರಣ: ಸಿಎಂ ಸಿದ್ದರಾಮಯ್ಯ ಸಂತಾಪ

January 28, 2026
BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada