• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮಣಿಪುರದ ಆಯ್ದ ಪ್ರದೇಶಗಳಲ್ಲಿ ಇಂಟರ್ನೆಟ್ ಸಂಪರ್ಕ ಮರುಸ್ಥಾಪನೆಗೆ ಸರ್ಕಾರಕ್ಕೆ ಸೂಚನೆ ನೀಡಿದ ಹೈಕೋರ್ಟ್

Any Mind by Any Mind
June 22, 2023
in Top Story, ದೇಶ, ರಾಜಕೀಯ
0
ಮಣಿಪುರದ ಆಯ್ದ ಪ್ರದೇಶಗಳಲ್ಲಿ ಇಂಟರ್ನೆಟ್ ಸಂಪರ್ಕ ಮರುಸ್ಥಾಪನೆಗೆ ಸರ್ಕಾರಕ್ಕೆ ಸೂಚನೆ ನೀಡಿದ ಹೈಕೋರ್ಟ್
Share on WhatsAppShare on FacebookShare on Telegram

ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ದ್ವಿಸದಸ್ಯ ಪೀಠ ನಕಾರ

ADVERTISEMENT

ನವದೆಹಲಿ: ಮಣಿಪುರದ ನಿರ್ಧಿಷ್ಟ ಪ್ರದೇಶಗಳಲ್ಲಿ ನಿರ್ಬಂಧನಾತ್ಮಕ ಸ್ವರೂಪದ ಇಂಟರ್ನೆಟ್ ಸೇವೆಗಳನ್ನು ಮರುಸ್ಥಾಪಿಸಲು ಅವಕಾಶ ನೀಡುವಂತೆ ಇಲ್ಲಿನ ಹೈಕೋರ್ಟ್ ರಾಜ್ಯ ಸರಕಾರಕ್ಕೆ ಜೂನ್ 16ರ ಶುಕ್ರವಾರದಂದೇ ಆದೇಶಿಸಿರುವ ವಿಚಾರ ಜೂನ್ 20ರಂದು ಬೆಳಕಿಗೆ ಬಂದಿದೆ. ರಾಜ್ಯದಲ್ಲಿ ಇಂಟರ್ನೆಟ್ ಸಂಪರ್ಕವನ್ನು ಮರುಸ್ಥಾಪಿಸುವಂತೆ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆಂತೆಮ್ ಬಿಮಲ್ ಸಿಂಗ್ ಮತ್ತು ಎ. ಗುಣೇಶ್ವರ ಶರ್ಮ ಅವರಿದ್ದ ಪೀಠವು ಸರಕಾರಕ್ಕೆ ಈ ನಿರ್ದೇಶನವನ್ನು ನೀಡಿದೆ, ಜೂನ್ 20ರವರೆಗೆ ರಾಜ್ಯ ಸರಕಾರವು ಮಣಿಪುರದಲ್ಲಿ ಇಂಟರ್ನೆಟ್ ಸೇವೆಗಳನ್ನು ನಿಷೇಧಿಸಿತ್ತು ಮತ್ತು ಅದನ್ನು ಮುಂದಿನ ಇನ್ನಷ್ಟು ದಿನಗಳವರೆಗೆ ವಿಸ್ತರಿಸಲಿದೆಯೇ ಎಂಬುದು ಸದ್ಯದ ಮಟ್ಟಿಗೆ ಸ್ಪಷ್ಟವಾಗಿಲ್ಲ.

ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆಯನ್ನು ಮುಂದುವರೆಸುವಂತಹ ‘ತುರ್ತು ಮತ್ತು ಪ್ರಮುಖ ಕಾರ್ಯಗಳಿಗೆ’ ಇಂಟರ್ನೆಟ್ ಅಗತ್ಯ ಎಂಬ ಅಭಿಪ್ರಾಯವನ್ನು ಹೈಕೋರ್ಟಿನ ದ್ವಿಸದಸ್ಯ ಪೀಠ ಈ ಸಂದರ್ಭದಲ್ಲಿ ವ್ಯಕ್ತಪಡಿಸಿದೆ.

ಅರ್ಜಿಯ ತುರ್ತು ವಿಚಾರಣೆಗೆ ‘ನೋ’ ಎಂದ ಸುಪ್ರೀಂ ಕೋರ್ಟ್!
ಇನ್ನೊಂದೆಡೆ ಮಣಿಪುರದಲ್ಲಿ ಹಿಂಸಾಚಾರವನ್ನು ಮಟ್ಟಹಾಕಲು ಸೇನೆಯನ್ನು ನಿಯೋಜಿಸುವಂತೆ ಕೋರಿ ಮಣಿಪುರ ಬುಡಕಟ್ಟು ವೇದಿಕೆ ಸಲ್ಲಿಸಿದ್ದ ಮಧ್ಯಸ್ಥಿಕೆ ಅರ್ಜಿಯನ್ನು ತುರ್ತು ವಿಚಾರಣೆಗೆ ಪರಿಗಣಸಲು ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಎಂ ಎಂ ಸುಂದರೇಶ್ ಅವರಿದ್ದ ಸುಪ್ರೀಂ ಕೋರ್ಟಿನ ರಜಾಕಾಲದ ಪೀಠವು ನಿರಾಕರಿಸಿದೆ ಮತ್ತು ಈ ವಿಷಯದ ಕುರಿತಾಗಿರುವ ವಿಚಾರಣೆ ಜುಲೈ 3ರಂದು ನಡೆಯಲಿದೆ.

ಭದ್ರತಾ ಪಡೆಗಳ ಆಶ್ವಾಸನೆಯ ಹೊರತಾಗಿಯೂ, 70 ಬುಡಕಟ್ಟು ಜನರನ್ನು ಉದ್ದೇಶಪೂರ್ವಕವಾಗಿ ಕೊಲ್ಲಲಾಗಿದೆ. ಇದೀಗ ಉಚ್ಛನ್ಯಾಯಲಯವೊಂದೇ ಈ ಬುಡಕಟ್ಟು ಜನರ ಕೊನೆಯ ಆಶಾಕಿರಣವಾಗಿದೆ, ಎಂದು ಹಿರಿಯ ನ್ಯಾಯವಾದಿ ಕೊಲಿನ್ ಗೊನ್ಸಾಲ್ವೇಸ್ ಅವರು ಪೀಠದ ಗಮನ ಸೆಳೆದು ಅರ್ಜಿಯ ತುರ್ತು ವಿಚಾರಣೆಗೆ ಕೇಳಿಕೊಂಡರು.

ಈ ಅರ್ಜಿಯಲ್ಲಿ, ಚುರಾಚನ್ ಪುರ್, ಚಾಂದೇಲ್, ಕಂಗ್ ಪೋಕ್ಪಿ, ಇಂಫಾಲ್ ಈಸ್ಟ್ ಮತ್ತು ಇಂಫಾಲ್ ವೆಸ್ಟ್ ಜಿಲ್ಲೆಗಳಲ್ಲಿ ತುರ್ತಾಗಿ ಸೇನಾ ಪಡೆಗಳನ್ನು ನಿಯೋಜಿಸುವಂತೆ ಹಾಗೂ ಹಿಂಸಾಚಾರವನ್ನು ಮತ್ತು ಇದಕ್ಕೆ ಕಾರಣರಾದವರನ್ನು ಪತ್ತೆಹಚ್ಚಲು ಒಂದು ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಕೋರಲಾಗಿತ್ತು ಮಾತ್ರವಲ್ಲದೇ ಪ್ರಾಥಮಿಕ ಮಾಹಿತಿ ವರದಿಗಳನ್ನು ಅರಂಭಾಯ್ ತೆಂಗೋಳ್ ಪಂಗಡದ ಕೌರುನ್ ಗಂಭ ಖುಮಾನ್ ಮತ್ತು ಮೆಯಿಟಾಯ್ ಲೀಪುನ್ ಗುಂಪಿನ ಅಧ್ಯಕ್ಷ ಎಂ ಪ್ರಮೋತ್ ಸಿಂಗ್ ಮುಂದೆ ಇರಿಸುವಂತೆಯೂ ಈ ಅರ್ಜಿಯಲ್ಲಿ ಆಗ್ರಹಿಸಲಾಗಿತ್ತು.

ಮೈಟಿ-ಎಸ್.ಟಿ ಆದೇಶ ಪರಿಶೀಲನೆ ಬಗ್ಗೆ ಸರಕಾರದ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್
ಇದೇ ಸಂದರ್ಭದಲ್ಲಿ, ಮೈಟಿ ಸಮುದಾಯವನ್ನು ಬುಡಕಟ್ಟು ಪಂಗಡಕ್ಕೆ (ಎಸ್.ಟಿ) ಸೇರ್ಪಡೆಗೊಳಿಸುವ ರಾಜ್ಯ ಸರ್ಕಾರದ ಮೇ 27ರ ವಿವಾದಾತ್ಮಕ ಪ್ರಸ್ತಾವನೆಗೆ ತಿದ್ದುಪಡಿ ಕೋರಿ ಸಲ್ಲಿಸಲಾದ ಪರಿಶೀಲನಾತ್ಮಕ ದೂರು ಅರ್ಜಿಯನ್ನು ಪರಿಶೀಲಿಸಲು ಮಣಿಪುರ ಹೈಕೋರ್ಟ್ ಒಪ್ಪಿಗೆ ಸೂಚಿಸಿದೆ.

Tags: areas of Manipurhigh courtmajority communityManipurManipur's Violencemilitantminority groupsPower Equationsrestore internet
Previous Post

ಅಕ್ಕಿ ವಿತರಣೆಯಲ್ಲಿ ರಾಜಕೀಯ ಬೇಡ..ಕೇಂದ್ರ ಗೃಹ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಮನವಿ

Next Post

ಅಪ್ಪು ಕಪ್ ಸೀಸನ್-2 ಸ್ಯಾಂಡಲ್ವುಡ್ ಬ್ಯಾಡ್ಮಿಂಟನ್ ಲೀಗ್ ಲೋಗೋ ಅನಾವರಣ ಮಾಡಿದ ಪ್ರಕಾಶ್ ಪಡುಕೋಣೆ..

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಅಪ್ಪು ಕಪ್ ಸೀಸನ್-2 ಸ್ಯಾಂಡಲ್ವುಡ್ ಬ್ಯಾಡ್ಮಿಂಟನ್ ಲೀಗ್ ಲೋಗೋ ಅನಾವರಣ ಮಾಡಿದ ಪ್ರಕಾಶ್ ಪಡುಕೋಣೆ..

ಅಪ್ಪು ಕಪ್ ಸೀಸನ್-2 ಸ್ಯಾಂಡಲ್ವುಡ್ ಬ್ಯಾಡ್ಮಿಂಟನ್ ಲೀಗ್ ಲೋಗೋ ಅನಾವರಣ ಮಾಡಿದ ಪ್ರಕಾಶ್ ಪಡುಕೋಣೆ..

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada