• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ನಿಯಂತ್ರಣ ಮಾತು.. ಅಧಿಕಾರಿ ಬಳಿ 500 ಕೋಟಿ..!!

ಕೃಷ್ಣ ಮಣಿ by ಕೃಷ್ಣ ಮಣಿ
July 2, 2023
in ಅಂಕಣ, ಅಭಿಮತ
0
ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ನಿಯಂತ್ರಣ ಮಾತು.. ಅಧಿಕಾರಿ ಬಳಿ 500 ಕೋಟಿ..!!
Share on WhatsAppShare on FacebookShare on Telegram

ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ಸರ್ಕಾರ, ಭ್ರಷ್ಟಾಚಾರ ನಿಯಂತ್ರಣ ಮಾಡುವ ಮಾತನ್ನಾಡುತ್ತಿದೆ. ಆದರೆ ರಾಜ್ಯ ಸರ್ಕಾರದ ಅಡಿಯಲ್ಲಿ ಕೆಲಸ ಮಾಡುವ ಓರ್ವ ತಹಶೀಲ್ದಾರ್‌ 500 ಕೋಟಿ ರೂಪಾಯಿ ಆಸ್ತಿಯ ಒಡೆಯ ಅಂದ್ರೆ ನೀವು ನಂಬಲೇ ಬೇಕು. ಇತ್ತೀಚಿಗೆ ಲೋಕಾಯುಕ್ತ ದಾಳಿಯಲ್ಲಿ ಸಿಕ್ಕಿ ಬಿದ್ದ ಕೆ.ಆರ್‌ ಪುರ ತಹಶೀಲ್ದಾರ್‌ ಆಗಿದ್ದ ಅಜಿತ್‌ ರೈ, ದೇವನಹಳ್ಳಿ ಸುತ್ತಮುತ್ತ 150ಕ್ಕೂ ಹೆಚ್ಚು ಎಕರೆ ಭೂಮಿಯ ಮಾಲೀಕ. ಬರೋಬ್ಬರಿ 500 ಕೋಟಿ ರೂಪಾಯಿ ಆಸ್ತಿ ಹೊಂದಿರುವ ಅಜಿತ್‌ ರೈ, ದೇವನಹಳ್ಳಿ ಬಳಿ F-1 ರೇಸ್‌ ಟ್ರ್ಯಾಕ್‌ ನಿರ್ಮಾಣ ಮಾಡುವ ಚಿಂತನೆಯಲ್ಲಿದ್ದ ಎನ್ನುವ ಮಾಹಿತಿ ಹೊರಬಿದ್ದಿದೆ. ಲೋಕಾಯುಕ್ತರು ಬಂಧಿಸಿದ ಬಳಿಕ ಅಜಿತ್‌ ರೈನನ್ನು ಅಮಾನತು ಮಾಡಿದ್ದು, ತಹಶೀಲ್ದಾರ್ ಗ್ರೇಡ್‌-1 ಹುದ್ದೆಯಿಂದ ಗ್ರೇಡ್‌-2 ಹುದ್ದೆಗೆ ಹಿಂಬಡ್ತಿ ಜೊತೆಗೆ ರಾಯಚೂರಿನ ಸಿರವಾರಕ್ಕೆ ವರ್ಗಾವಣೆ ಮಾಡಲಾಗಿದೆ.

ADVERTISEMENT

ಭಕ್ತಿ, ಭವಿಷ್ಯ, ಸಂಖ್ಯಾ ಶಾಸ್ತ್ರದ ಮೇಲೆ ಅಜಿತ್‌ ರೈ ಕೆಲಸ..!?

ಅಜಿತ್‌ ರೈ ಮನೆಯಲ್ಲಿ ಬಂಗಾರ ಸೇರಿದಂತೆ ಚಿನ್ನಾಭರಣ, ಕಾಸ್ಟ್ಲಿ ವಾಚ್‌ಗಳು, ಮದ್ಯದ ಬಾಟಲ್‌ಗಳು ಸೇರಿದಂತೆ ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಸಿಕ್ಕಿದ್ದು, ಎಲ್ಲವೂ ಉಡುಗೊರೆ ಮೂಲಕ ಬಂದಿರುವುದು ಎಂದು ಪೊಲೀಸರ ಎದುರು ಅಜಿತ್‌ ರೈ ಹೇಳಿಕೊಂಡಿದ್ದಾನೆ ಎನ್ನಲಾಗಿದೆ. ಭವಿಷ್ಯ, ಸಂಖ್ಯಾಶಾಸ್ತ್ರದಲ್ಲಿ ಭಾರೀ ನಂಬಿಕೆ ಹೊಂದಿದ್ದ ಅಜಿತ್‌ ರೈ, ತನ್ನ ಎಲ್ಲಾ ಐಷಾರಾಮಿ ಕಾರು, ಬೈಕ್‌ಗಳಿಗೂ ‘1368’ ಸೀರಿಸ್‌ ನಂಬರ್ ತೆಗೆದುಕೊಂಡಿದ್ದ ಅನ್ನೋ ಮಾಹಿತಿಯೂ ಹೊರ ಬಿದ್ದಿದೆ. ಇನ್ನು ಅಜಿತ್ ರೈ ಬಳಿ 15 ಸಿಮ್ ಕಾರ್ಡ್‌ಗಳು ಪತ್ತೆಯಾಗಿದ್ದು, ಅದರಲ್ಲಿ 10 ಸಿಮ್‌ಗಳ ನಂಬರ್ ಕೂಡ ಕೊನೆಯಲ್ಲಿ 1368 ಆಗಿದೆ. 1+3+6+8 ಕೂಡಿದಾಗ 18 ಆಗುತ್ತೆ , 1+8 ಮತ್ತೆ ಕೂಡಿದರೆ ಕೊನೆಗೆ 9 ನಂಬರ್ ಬರಲಿದೆ.. ನಂಬರ್ 9 ಲಕ್ಕಿ ಅನ್ನೋದು ಅಜಿತ್ ರೈ ನಂಬಿಕೆ. ಆದರೆ ಈಗ ಅದೇ ಸಂಖ್ಯಾ ಶಾಸ್ತ್ರ ಉಲ್ಟಾ ಹೊಡೆದಿದೆ.

DySP ಪ್ರಮೋದ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚನೆ..!

ಇಡೀ ಸರ್ಕಾರವೇ ಬೆಚ್ಚಿ ಬೀಳುವಷ್ಟು ಆಸ್ತಿ ಮಾಡಿರುವ ಅಜಿತ್‌ ರೈ ಅಸಲಿಗೆ ಕೆಎಎಸ್‌ ಪರೀಕ್ಷೆ ಪಾಸ್‌ ಮಾಡಿಕೊಂಡು ತಹಶೀಲ್ದಾರ್‌ ಆಗಿ ಕೆಲಸ ಗಿಟ್ಟಿಸಿಲ್ಲ. ಬಸಲಿಗೆ ತನ್ನ ತಂದೆ ಕೆಲಸ ಮಾಡುತ್ತಿದ್ದಾಗ ನಿಧನ ಹೊಂದಿದ ಪರಿಣಾಮ, ಅನುಕಂಪದ ಆಧಾರದಲ್ಲಿ ಕೆಲಸ ಗಿಟ್ಟಿಸಿಕೊಂಡಿದ್ದ ಎನ್ನಲಾಗಿದೆ. ಮೊದಲಿಗೆ RI (Revenue Inspector) ಆಗಿ ಕೆಲಸಕ್ಕೆ ಸೇರಿಕೊಂಡಿದ್ದ. ಆ ಬಳಿಕ ಪ್ರಮೋಷನ್‌ಗಳನ್ನು ಗಿಟ್ಟಿಸಿಕೊಂಡು, ಹಿರಿಯ ಅಧಿಕಾರಿಗಳ ಎದುರು ನಯನಾಜುಕು ತೋರಿಸಿ, ಹುದ್ದೆ ಪಡೆದುಕೊಂಡಿದ್ದ ಅನ್ನೋ ಮಾಹಿತಿಯೂ ಇದೆ. ಇನ್ನು ಕಳೆದ ಮಳೆಗಾಲದಲ್ಲಿ ಅಕ್ರಮ ಕಟ್ಟಡಗಳನ್ನು ತೆರವು ಮಾಡುವ ವಿಚಾರದಲ್ಲಿ ಧಿಮಾಕು ಪ್ರದರ್ಶನ ಮಾಡಿದ್ದ ಅಜಿತ್‌ ರೈ, ಒತ್ತುವರಿದಾರರಿಗೆ ಸಹಕರಿಸಿದ್ದರು ಎನ್ನುವ ವಿಚಾರದಲ್ಲಿ ಅಮಾನತು ಮಾಡಲಾಗಿತ್ತು. ಇನ್ನು ಕೋರ್ಟ್‌ನಲ್ಲಿ ಸರ್ಕಾರಕ್ಕೆ ಹಿನ್ನಡೆ ಆಗುವಂತೆಯೂ ನಡೆದುಕೊಂಡಿದ್ದರು ಎನ್ನುವ ವಿಚಾರ ಬಿಬಿಎಂಪಿ ಅಧಿಕಾರಿಗಳೇ ಸರ್ಕಾರಕ್ಕೆ ಮಾಹಿತಿ ನೀಡಿದ್ದರು.

ಅಜಿತ್‌ ಕುಮಾರ್‌ ರೈ ಮಾತ್ರವಲ್ಲ.. ಈಗಲೂ ನಡೆದಿದೆ ಸ್ಕೆಚ್‌..!

ತಹಶೀಲ್ದಾರ್‌ ಆಗಿದ್ದ ಅಜಿತ್‌ ಕುಮಾರ್‌ ರೈ, ಅಕ್ರಮವಾಗಿ ರಾಜಕಾಲುವೆ ಒತ್ತುವರಿ ಮಾಡಿಕೊಂಡಿದ್ದವರಿಗೆ ಸಹಕರಿಸುತ್ತಿದ್ದರು ಎನ್ನುವುದು ಸರಿ. ಆದರೆ ಇದೀಗ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್‌, ಒತ್ತುವರಿಯನ್ನು ತೆರವು ಮಾಡಲಾಗುವುದು. ಬ್ರ್ಯಾಂಡ್‌ ಬೆಂಗಳೂರು ನಿರ್ಮಾಣ ಮಾಡಲಾಗುವುದು ಎಂದು ಘಂಟಾಘೋಷವಾಗಿ ಹೇಳಿದರೂ ರಾಜಕಾಲುವೆ ತೆರವು ಮಾಡದೆ ಬದಲಿ ಮಾರ್ಗದಲ್ಲಿ ರಾಜಕಾಲುವೆ ನಿರ್ಮಿಸುತ್ತೇವೆ ಎಂದು ಬಿಬಿಎಂಪಿ ಹೇಳುತ್ತಿದೆ. ಅಂದರೆ ಶ್ರೀಮಂತರ ಜೊತೆಗೆ ಶಾಮೀಲಾಗಿರುವುದು ಬಿಬಿಎಂಪಿ ಅಧಿಕಾರಿಗಳಾ..? ಅಥವಾ ಕರ್ನಾಟಕ ಸರ್ಕಾರವಾ..? ಅನ್ನೋದನ್ನು ಸಂಬಂಧ ಪಟ್ಟ ಅಧಿಕಾರಿಗಳು ಹೇಳಬೇಕು. ಇಲ್ಲದಿದ್ರೆ ಮುಂದಿನ ದಿನಗಳಲ್ಲಿ ಅಜಿತ್‌ ಕುಮಾರ್‌ ರೈ ರೀತಿಯಲ್ಲಿ ಈಗಿನ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬೀಳುವುದರಲ್ಲಿ ಯಾವುದೇ ಅನುಮಾನವಿಲ್ಲ.

ಕೃಷ್ಣಮಣಿ

Tags: Enforcement DirectorateIncome Tax Departmentit raidlokayuktalokayukta karnataka
Previous Post

BJPಯಲ್ಲಿ ವಿಪಕ್ಷ ನಾಯಕನ ಆಯ್ಕೆ ಕಸರತ್ತು.. ಮತ್ತೆ ಭುಗಿಲೇಳುತ್ತಾ ಆಕ್ರೋಶ..?

Next Post

ಕನ್ನಡದ ಶ್ರೇಷ್ಠ ಹರಿದಾಸ ಶ್ರೀಪ್ರಸನ್ನವೆಂಕಟದಾಸರ ಜೀವನ ಚರಿತ್ರೆ ದೃಶ್ಯರೂಪದಲ್ಲಿ

Related Posts

ಲಿಂಗಾಯತರು ಕೈಗಾರಿಕಾ  ರಂಗಕ್ಕೆ ಧುಮುಕಬೇಕು: ಎಂ ಬಿ ಪಾಟೀಲ
Top Story

ಲಿಂಗಾಯತರು ಕೈಗಾರಿಕಾ ರಂಗಕ್ಕೆ ಧುಮುಕಬೇಕು: ಎಂ ಬಿ ಪಾಟೀಲ

by ಪ್ರತಿಧ್ವನಿ
January 29, 2026
0

ಬೆಂಗಳೂರು: ವೀರಶೈವ ಲಿಂಗಾಯತ ಸಮುದಾಯವು ಶಿರಸಂಗಿ ಲಿಂಗರಾಜ ದೇಸಾಯಿ, ವಾರದ ಮಲ್ಲಪ್ಪ, ಬಿ.ವಿ.ಭೂಮರೆಡ್ಡಿ ಅವರಂತಹ ಸಾಹಸಿ ಉದ್ಯಮಿಗಳ ದೀರ್ಘ ಇತಿಹಾಸ ಹೊಂದಿದೆ. ಆದ್ದರಿಂದ ಕೇವಲ ಕೃಷಿಗೆ ಸೀಮಿತರಾಗದೆ,...

Read moreDetails
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

January 28, 2026
ಕುಟುಂಬ ರಾಜಕಾರಣ: ಭಾರತೀಯ ಪ್ರಜಾಪ್ರಭುತ್ವದ ಮೇಲೆ ನಡೆಯುತ್ತಿರುವ ಭೀಕರ ದಾಳಿ! 

ಕುಟುಂಬ ರಾಜಕಾರಣ: ಭಾರತೀಯ ಪ್ರಜಾಪ್ರಭುತ್ವದ ಮೇಲೆ ನಡೆಯುತ್ತಿರುವ ಭೀಕರ ದಾಳಿ! 

January 26, 2026

ಬೆಂಗಳೂರಿನ ಹೃದಯಭಾಗದಲ್ಲೊಂದು ಅತ್ಯಾಕರ್ಷಕ ಹಾಗೂ ಸುಸಜ್ಜಿತ ಸಿನಿಮಾ ಮಲ್ಟಿಪ್ಲೆಕ್ಸ್ “AMB ಸಿನಿಮಾಸ್”(ಕಪಾಲಿ ಮಾಲ್)

January 22, 2026
Eshwar Khandre: ವೀರಶೈವ ಮಹಾಸಭಾದ ಅಧ್ಯಕ್ಷರಾಗಿ ಆಯ್ಕೆಯಾದ ಸಚಿವ ಈಶ್ವರ ಖಂಡ್ರೆ..!!

Eshwar Khandre: ವೀರಶೈವ ಮಹಾಸಭಾದ ಅಧ್ಯಕ್ಷರಾಗಿ ಆಯ್ಕೆಯಾದ ಸಚಿವ ಈಶ್ವರ ಖಂಡ್ರೆ..!!

January 21, 2026
Next Post
ಕನ್ನಡದ ಶ್ರೇಷ್ಠ ಹರಿದಾಸ ಶ್ರೀಪ್ರಸನ್ನವೆಂಕಟದಾಸರ ಜೀವನ ಚರಿತ್ರೆ ದೃಶ್ಯರೂಪದಲ್ಲಿ

ಕನ್ನಡದ ಶ್ರೇಷ್ಠ ಹರಿದಾಸ ಶ್ರೀಪ್ರಸನ್ನವೆಂಕಟದಾಸರ ಜೀವನ ಚರಿತ್ರೆ ದೃಶ್ಯರೂಪದಲ್ಲಿ

Please login to join discussion

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada