• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ದಲಿತ ಯುವಕರಿಗೆ ಮಲ ತಿನ್ನಿಸಿದ್ದ ಪ್ರಕರಣ, 7 ಮಂದಿಯ ಬಂಧನ

Any Mind by Any Mind
July 8, 2023
in ದೇಶ
0
ದಲಿತ ಯುವಕರಿಗೆ ಮಲ ತಿನ್ನಿಸಿದ್ದ ಪ್ರಕರಣ, 7 ಮಂದಿಯ ಬಂಧನ
Share on WhatsAppShare on FacebookShare on Telegram

ಮಧ್ಯಪ್ರದೇಶ ; ಬುಡಕಟ್ಟು ಸಮುದಾಯದ ಯುವಕನ ಮೇಲೆ ಬಿಜೆಪಿ ಮುಖಂಡನೊಬ್ಬ ಮೂತ್ರ ವಿಸರ್ಜನೆ ಮಾಡಿದ ಹೇಯ ಕೃತ್ಯ ಇನ್ನೂ ಕೂಡ ಮಾಸಿಲ್ಲ. ಈ ನಡುವೆ ಇದೀಗ ದಲಿತ ಸಮುದಾಯದ ಯುವಕರಿಗೆ ಬಲವಂತವಾಗಿ ಮಲ ತಿನ್ನಿಸಿದಂತ ನಾಚಿಕೆಗೇಡಿನ ಕೃತ್ಯ ಮಧ್ಯಪ್ರದೇಶದಲ್ಲಿ ನಡೆದಿತ್ತು.

ADVERTISEMENT

ಹೌದು ಕಳೆದ ಜೂನ್ 30ರಂದು ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯ ವಾರ್ಖಾಡಿ ಗ್ರಾಮದಲ್ಲಿ ಈ ಘಟನೆ ನಡೆದಿತ್ತು. ಇದರ ವಿಡಿಯೋ ವೈರಲ್ ಆದ ಬೆನ್ನಲ್ಲೇ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು, ಆರೋಪಿಗಳ ಬಂಧನಕ್ಕೆ ಕೂಡ ಒತ್ತಾಯ ಕೇಳಿಬಂದಿತ್ತು. 23 ಮತ್ತು 24 ವರ್ಷದ ಇಬ್ಬರು ಯುವಕರ ಮೇಲೆ ಈ ಅಮಾನವೀಯ ಕೃತ್ಯವನ್ನು ಎಸೆಗಲಾಗಿದ್ದು ಕೃತ್ಯಕ್ಕೆ ಸಂಬಂಧಿಸಿದಂತೆ ಒಂದೇ ಕುಟುಂಬದ ಏಳು ಮಂದಿಯನ್ನು ಈಗ ಬಂಧಿಸಿರುವುದಾಗಿ ಪೊಲೀಸ್ ಇಲಾಖೆ ಹೇಳಿಕೆ ನೀಡಿದೆ

ಲಭ್ಯವಿರುವ ಮಾಹಿತಿಯ ಪ್ರಕಾರ, ಇಬ್ಬರು ದಲಿತ ಯುವಕರು ಆರೋಪಿ ಕುಟುಂಬಕ್ಕೆ ಸೇರಿದ 26 ವರ್ಷದ ಯುವತಿಯೊಂದಿಗೆ ಫೋನಿನಲ್ಲಿ ಮಾತನಾಡುತ್ತಿದ್ದರು, ಈ ವಿಷಯ ತಿಳಿದ ಮನೆಯವರು ಆ ಸಂತ್ರಸ್ತ ಯುವಕರನ್ನು ಯುವತಿಯ ಮೂಲಕ ಮನೆಗೆ ಕರೆಸಿಕೊಂಡಿದ್ದಾರೆ ತದ ನಂತರ, ಜೂನ್ 30ರಂದು ಇಬ್ಬರು ಯುವಕರು ಮನೆಗೆ ಬಂದಾಗ, ಮನೆಯವರು ಈ ಯುವಕರನ್ನ ಅಮಾನುಷವಾಗಿ ಥಳಿಸಿದ್ದಾರೆ, ಜೊತೆಗೆ ಯುವಕರ ಮುಖಕ್ಕೆ ಮಸಿ ಬಳಿದು ಮಲವನ್ನ ತಿನ್ನುವಂತೆ ಒತ್ತಾಯಿಸಿದ್ದಾರೆ. ಚಪ್ಪಲಿ ಹಾರ ಹಾಕಿ ಗ್ರಾಮದಲ್ಲಿ ಮೆರವಣಿಗೆ ಮಾಡಿಸಿದ್ದಾರೆ ಅಂತ ಎಸ್‌ಪಿ ರಘುವಂಶ್ ಸಿಂಗ್ ಭಡೋರಿಯಾ ಹೇಳಿಕೆಯನ್ನು ನೀಡಿದ್ದಾರೆ.

ಇನ್ನು ಇದರ ಮಧ್ಯೆ ಆರೋಪಿಗಳು ತಮ್ಮನ್ನ ರಕ್ಷಿಸಿಕೊಳ್ಳುವುದಕ್ಕೆ ಯುವಕರು ಮಹಿಳೆಯರಿಗೆ ಕಿರುಕುಳ ನೀಡಿದ್ದಕ್ಕಾಗಿ ಮತ್ತು ಆಕೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಕ್ಕಾಗಿ ತಿಳಿಸಿದ್ದೇವೆ ಅಂತ ಹೇಳಿಕೆಯನ್ನು ನೀಡಿದರು ಆದರೆ ತನಿಖೆಯ ಸಂದರ್ಭದಲ್ಲಿ ಕುಟುಂಬದವರ ಹೇಳಿಕೆಗಳು ಶುದ್ಧ ಸುಳ್ಳು ಅನ್ನೋದು ಬಟಾ ಬಾಯಲಾಗಿದೆ. ಈ ಬಗ್ಗೆ ಯುವಕರ ಬಳಿ ಮಾಹಿತಿಯನ್ನು ಪಡೆದಾಗ ತಮ್ಮನ್ನು ಲೈಂಗಿಕ ಕಿರುಕುಳದ ಸುಳ್ಳು ಪ್ರಕರಣದಲ್ಲಿ ಸಿಲುಕಿಸಲು ಕುಟುಂಬದವರು ಪ್ರಯತ್ನಿಸಿದ್ದಾರೆ ಅಂತ ಆರೋಪಿಗಳು ತಮ್ಮ ಮೇಲಿದ್ದ ಆರೋಪವನ್ನು ತಳ್ಳಿ ಹಾಕಿದ್ದಾರೆ.

ಈ ಪ್ರಕರಣದ ತನಿಖೆಯನ್ನು ಗಂಭೀರವಾಗಿ ಮಾಡಿದ್ದ ಪೊಲೀಸ್ ಇಲಾಖೆಯ ಅಧಿಕಾರಿಗಳು ಈ ಪ್ರಕರಣದಲ್ಲಿ ಯುವಕರು ಯುವತಿಯೊಂದಿಗೆ ಮಾತನಾಡಿದ್ದು ಯುವತಿಯ ಕುಟುಂಬದವರಿಗೆ ತಿಳಿಸಿರಲಿಲ್ಲ ಹಾಗಾಗಿ ಯುವಕರಿಗೆ ಬುದ್ಧಿ ಕಲಿಸುವ ಸಲುವಾಗಿ ಯುವತಿಯ ಕುಟುಂಬದವರು ದಲಿತ ಯುವಕರನ್ನ ತಮ್ಮ ಮನೆಗೆ ಕರೆಸಿಕೊಂಡು ಹಲ್ಲೆ ಮಾಡಿ ಚಪ್ಪಲಿ ಹಾರ ಹಾಕಿ ಮಲ ತಿನ್ನಿಸುವಂತೆ ಒತ್ತಾಯಿಸಿದ್ದಾರೆ, ಬಳಿಕ ಯುವಕರಿಗೆ ಕಿರುಕುಳವನ್ನು ನೀಡಿದ್ದಾರೆ ಎಂದು ಪೊಲೀಸರು ಪತ್ತೆಹಚ್ಚಿದ್ದಾರೆ

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರಿಫ್ ಖಾನ್, ಅಜ್ಮತ್ ಖಾನ್, ವಕೀಲ್ ಖಾನ್, ಇಸ್ಲಾಂ ಖಾನ್, ಶಾಹಿದ್ ಖಾನ್, ರಹೀಶಾ ಭಾನೋ, ಸೈನಾ ಭಾನೋ ಆರೋಪಿಗಳನ್ನು ಬಂಧಿಸಲಾಗಿದೆ ಈಗಾಗಲೇ ಈ ಆರೋಪಿಗಳ ಕುಟುಂಬದ ವಿರುದ್ಧ ಸೆಕ್ಷನ್ 323, 294, 506, 328, 342, 147, 355, 270 ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ

Tags: Amit ShahBJPmadya pradeshNarendra Modishivraj sing chowhan
Previous Post

2023ರ ಗೆಲುವೂ-2024ರ ಆಶಯಗಳೂ

Next Post

ರಾಜ್ಯ ಬಿಜೆಪಿ ಮೇಲೆ ಯಾಕೆ ​ ಮಲತಾಯಿ ಧೋರಣೆ..!? ಬಿಜೆಪಿ ಹೈಕಮಾಂಡ್‌ಗೆ ಸೆಡ್ಡು..!?

Related Posts

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!
Top Story

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

by ಪ್ರತಿಧ್ವನಿ
April 29, 2026
0

ಬೆಳಗಾವಿ : ಜನ ಸಮುದಾಯ ಎಷ್ಟೇ ಮುಂದುವರೆದರೂ, ತಂತ್ರಜ್ಷಾನ ದಿನದಿಂದ ದಿನಕ್ಕೆ ಬೆಳವಣಿಗೆ ಕಂಡರೂ ಅಲ್ಲದೆ ಕಾನೂನುಗಳು ಅದೆಷ್ಟೇ ಬಿಗಿಯಾದರೂ ಸಹ ಜನರ ಮನಸ್ಸುಗಳು, ಯೋಚನೆಗಳು ಮಾತ್ರ...

Read moreDetails
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post
ರಾಜ್ಯ ಬಿಜೆಪಿ ಮೇಲೆ ಯಾಕೆ ​ ಮಲತಾಯಿ ಧೋರಣೆ..!? ಬಿಜೆಪಿ ಹೈಕಮಾಂಡ್‌ಗೆ ಸೆಡ್ಡು..!?

ರಾಜ್ಯ ಬಿಜೆಪಿ ಮೇಲೆ ಯಾಕೆ ​ ಮಲತಾಯಿ ಧೋರಣೆ..!? ಬಿಜೆಪಿ ಹೈಕಮಾಂಡ್‌ಗೆ ಸೆಡ್ಡು..!?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada