• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಅಧಿಕಾರಿಗಳ ದುರ್ಬಳಕೆ, ಸರ್ಕಾರಕ್ಕೆ ಸವಾಲು ಹಾಕಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ

Any Mind by Any Mind
July 20, 2023
in ರಾಜಕೀಯ
0
ಕಾಂಗ್ರೆಸ್ ಸರಕಾರದಲ್ಲೂ ಕಾಸಿಗಾಗಿ ಪೋಸ್ಟಿಂಗ್!!, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇರ ಆರೋಪ!
Share on WhatsAppShare on FacebookShare on Telegram

ಬೆಂಗಳೂರು: ಅಧಿಕಾರಿಗಳ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಹಾಗೂ ಸ್ಪೀಕರ್ ಅವರು ಏಕಪಕ್ಷೀಯವಾಗಿ ವರ್ತಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.

ADVERTISEMENT

ಸ್ಪೀಕರ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡುವ ಮುನ್ನ ವಿಧಾನಸೌಧದಲ್ಲಿ ಮಾಜಿ ಮುಖ್ಯಮಂತ್ರಿಗಳು ಜೆಡಿಎಸ್ ಪಕ್ಷದ ಶಾಸಕಾಂಗ ಸಭೆ ನಡೆಸಿದರು. ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ನಾನು ಸಿಎಂ ಆಗಿದ್ದ ವೇಳೆ ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಂಡಿಲ್ಲ. ಅವರನ್ನು ಗೌರವದಿಂದ ನಡೆಸಿಕೊಂಡಿದ್ದೇನೆ. ಪ್ರಮಾಣವಚನ ಸ್ವೀಕಾರ ಸಂದರ್ಭದಲ್ಲಿ ಕೂಡ ಅಧಿಕಾರಿಗಳ ದುರ್ಬಳಕೆ ಮಾಡಿಕೊಂಡಿಲ್ಲ. ಯಾವುದೇ ಸಂದರ್ಭದಲ್ಲಿಯೂ ಅಧಿಕಾರಿಗಳಿಂದ ಯಾರಿಗೂ ಅಥಿತ್ಯ ಕೊಡಿಸಿಲ್ಲ. ಹೀಗೆ ಸುಳ್ಳು ಹೇಳುವುದಕ್ಕೆ ನಾಚಿಕೆ ಆಗಬೇಕು ಇವರಿಗೆ. ನನ್ನ ವಿರುದ್ಧ ದಾಖಲೆ ಇದ್ದರೆ ಬಿಡುಗಡೆ ಮಾಡಿ ಎಂದು ಅವರು ಸವಾಲು ಹಾಕಿದರು.

2018ರಲ್ಲಿ ನನ್ನ ನೇತೃತ್ವದ ಮೈತ್ರಿ ಸರಕಾರ ಪ್ರಮಾಣ ವಚನ ಸ್ವೀಕರಿಸಿದ ವೇಳೆ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡಿಲ್ಲ. ಆಗ ರಾಜ್ಯಪಾಲರ ಆದೇಶದ ಮೇರೆಗೆ ಮುಖ್ಯ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಎಲ್ಲಾ ವ್ಯವಸ್ಥೆಯನ್ನು ಮಾಡಿತ್ತು. ಆದರೆ, ಮೊನ್ನೆ ನಡೆದ ಸಭೆಗೆ ಸ್ವತಃ ಮುಖ್ಯಮಂತ್ರಿಗಳ ಅಧೀನದಲ್ಲಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯೇ ಅಧಿಕಾರಿಗಳಿಗೆ ಆದೇಶ ನೀಡಿದೆ. ತಪ್ಪು ತಪ್ಪೇ ಅಲ್ಲವೇ? ಇದನ್ನು ಒಪ್ಪಿಕೊಳ್ಳಲು ಪ್ರತಿಷ್ಠೆ ಏಕೆ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

ಸರಕಾರವೇ ನೇರ ಕಾರಣ:

ವಿಧಾನಸಭೆಯಲ್ಲಿ ಬುಧವಾರ ನಡೆದ ಗೊಂದಲಕ್ಕೆ ರಾಜ್ಯ ಕಾಂಗ್ರೆಸ್ ಸರಕಾರವೇ ನೇರ ಕಾರಣ. ಸಭಾಧ್ಯಕ್ಷರ ಪೀಠವನ್ನು ದುರ್ಬಳಕೆ ಮಾಡಿಕೊಂಡಿದೆ. ಎರಡು ನಿಮಿಷದಲ್ಲಿ ಬಗೆಹರಿಸುವ ವಿಷಯವನ್ನು ಇಷ್ಟು ದೂರ ಎಳೆದು ತರಲಾಗಿದೆ ಎಂದು ಅವರು ಹೇಳಿದರು.

ಸರಕಾರ ಗಂಭೀರ ಲೋಪ ಎಸಗಿದೆ. ಆಗಿರುವ ತಪ್ಪನ್ನು ಒಪ್ಪಿಕೊಳ್ಳುವುದು ಬಿಟ್ಟಿ ಭಂಡತನ ಪ್ರದರ್ಶನ ಮಾಡುತ್ತಿದೆ ಎಂದು ದೂರಿದರು.

ವಿಧಾನಸಭೆಯಲ್ಲಿ ನಡೆದಿರುವ ಬೆಳವಣಿಗೆಗೆ ಕಾಂಗ್ರೆಸ್ ಪಕ್ಷವೇ ನೇರ ಕಾರಣ. ಘಟಬಂಧನ್ ಸಭೆಗೆ ಬಂದಿದ್ದ ಹೊರರಾಜ್ಯದ ಗಣ್ಯರಿಗೆ ಉಪಚಾರ ಮಾಡಲು ಐಎಎಸ್ ಅಧಿಕಾರಿಗಳನ್ನು ಬಳಕೆ ಮಾಡಿಕೊಂಡಿದ್ದು ತಪ್ಪು. ಈ ಸದನದಲ್ಲಿ ಪ್ರಸ್ತಾಪ ಮಾಡಿದ ಪ್ರತಿಪಕ್ಷಗಳ ಮನವಿಯ ಬಗ್ಗೆ ಸರಕಾರ ಭಂಡತನ ತೋರಿದೆ. ಸ್ವೀಕರ್ ಕಚೇರಿಯಲ್ಲಿ ಸಂಧಾನ ಸಭೆ ನಡೆಸಿದ ವೇಳೆಯಲ್ಲೂ ಕಾಂಗ್ರೆಸ್ ನಾಯಕರು, ನಾವೇನೂ ಎನು ತಪ್ಪು ಮಾಡಿಲ್ಲವೆಂದು ಪ್ರತಿಷ್ಠೆ ತೋರಿದರು ಎಂದರು ಮಾಜಿ ಮುಖ್ಯಮಂತ್ರಿಗಳು.

ಎರಡು ನಿಮಿಷಗಳ ಬಗೆಹರಿಸಬಹುದಾಗಿದ್ದ ವಿಷಯವನ್ನು ಇಷ್ಟು ದೂರ ಎಳೆದು ತಂದಿದ್ದಾರೆ. ಆಗಿದ್ದು ಆಯಿತು, ಮುಂದೆ ಈ ರೀತಿ ಆಗಲ್ಲ ಅಂತ ಹೇಳಿದ್ದರೆ ಸಾಕಿತ್ತು. ವಿಷಾದವನ್ನೂ ವ್ಯಕ್ತಪಡಿಸುವ ಅವಶ್ಯಕತೆಯೂ ಇರಲಿಲ್ಲ. ಆದರೆ, ಸ್ವೀಕರ್ ಪ್ರತಿಪಕ್ಷ ಶಾಸಕರನ್ನು ದೇಶದೋಹ್ರಿಗಳು ಎಂದರು. ಸಿಎಂ ಹೇಳಿದರೂ ಅಂತ ಶಾಸಕರನ್ನು ಕೊನೆಪಕ್ಷ ಊಟಕ್ಕೆ ಬಿಡದೆ ಎದ್ದು ಹೋದರು. ಇಂಥ ನಡವಳಿಕೆಯನ್ನು ಹಿಂದೆ ನಾನೆಂದೂ ನೋಡಿರಲಿಲ್ಲ ಎಂದು ಕುಮಾರಸ್ವಾಮಿ ಅವರು ಬೇಸರ ವ್ಯಕ್ತಪಡಿಸಿದರು.

ಸ್ವೀಕರ್ ಏಕಪಕ್ಷೀಯವಾಗಿ ಕೆಲಸ ಮಾಡ್ತಾ ಇದ್ದಾರೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಸ್ಪೀಕರ್ ಅವರಿಗೆ ಸಿಎಂ ಅವರು ಸನ್ನೆ ಮ‌ೂಲಕ ಸೂಚನೆ ನೀಡಿದ್ದಾರೆ ಎಂದು ಸದನದ ಬಾವಿಯಲ್ಲಿ ಇದ್ದವರೇ ಹೇಳಿದರು ಎಂದು ಅವರು ತಿಳಿಸಿದರು.

ಶತಮಾನಕ್ಕೂ ಹೆಚ್ಚು ಇತಿಹಾಸ ಹೊಂದಿರುವ ಪಕ್ಷಕ್ಕೆ ಸದನದಲ್ಲಿ ಹೇಗೆ ವರ್ತನೆ ಮಾಡಬೇಕು ಎಂಬುದೇ ಗೊತ್ತಿಲ್ಲ. ಅಜ್ಞಾನದಿಂದ ಸರ್ಕಾರ ನಡೆಸುತ್ತಿದ್ದಾರೆ. ನಾವು ಗೌರವಯುತವಾಗಿ ನಡೆಸಿಕೊಂಡಿದ್ದೇವೆ. ಇಷ್ಟೆಲ್ಲಾ ಮಾಡಿ, ಹಠಮಾರಿ ಧೋರಣೆಯಿಂದ ಈ ರೀತಿ ಸದನದಲ್ಲಿ ನಡೆದುಕೊಳ್ಳುವುದು ಎಷ್ಟು ಸರಿ? ಅಧಿಕಾರ ಯಾರಿಗೂ ಶಾಶ್ವತ ಅಲ್ಲ. ಈಗ ಅಧಿಕಾರ ಇದೆ. ಮುಂದೆ ಅಧೋಗತಿಗೆ ಹೋಗುವ ಪರಿಸ್ಥಿತಿ ಬರಬಹುದು. ಎಚ್ಚರಿಕೆಯಿಂದ ಇರಿ ಎಂದು ಕಾಂಗ್ರೆಸ್ ನಾಯಕರಿಗೆ ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಿದರು.

Previous Post

ʼʼನಿಮ್ಮ ಬೇಟಿ ಬಚಾವೋ ನಾಟಕಕ್ಕೆ ಧಿಕ್ಕಾರವಿರಲಿʼʼ ಪ್ರಧಾನಿ ಮೋದಿ ವಿರುದ್ಧ ನಟ ಕಿಶೋರ್‌ ಆಕ್ರೋಶ

Next Post

ಆರ್‌ಎಸ್‌ಎಸ್‌ ಶಾಲೆಗಳು: ಕೋಮುವಾದದ ಪಠ್ಯಪುಸ್ತಕಗಳುˌ ವಿಷ ಬಿತ್ತುವಿಕೆ – ಭಾಗ 6

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
0

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ...

Read moreDetails
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025

ನವೆಂಬರ್‌ ನಲ್ಲಿ ಡಿಕೆಶಿ ಸಿಎಂ ಸ್ಥಾನಕ್ಕೆ ಅಪಶಕುನನಾ..?

June 17, 2025
Next Post
ಮೋದಿ ಘೋಷಿಸಿದ ಯೋಜನೆಗಳಲ್ಲಿ ಎಷ್ಟು ಪೂರ್ಣಗೊಂಡಿವೆ?

ಆರ್‌ಎಸ್‌ಎಸ್‌ ಶಾಲೆಗಳು: ಕೋಮುವಾದದ ಪಠ್ಯಪುಸ್ತಕಗಳುˌ ವಿಷ ಬಿತ್ತುವಿಕೆ - ಭಾಗ 6

Please login to join discussion

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada