• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ವಂಚಕರ ಹಣ ವರ್ಗಾವಣೆಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರದಿಂದ ಭಾರತೀಯರ ಹಣ ಬಳಕೆ: ವರದಿ

ಪ್ರತಿಧ್ವನಿ by ಪ್ರತಿಧ್ವನಿ
August 5, 2023
in ದೇಶ, ರಾಜಕೀಯ
0
ಪ್ರಧಾನಿ ನರೇಂದ್ರ ಮೋದಿ
Share on WhatsAppShare on FacebookShare on Telegram

ಈ ದೇಶದಲ್ಲಿ ಹಣ ವಂಚಿಸಿದವರ ಮತ್ತು ಹಣ ಪಾವತಿಯನ್ನು ಬಾಕಿ ಉಳಿಸಿಕೊಂಡ ಸುಸ್ತಿದಾರರ ಹಣ ವರ್ಗಾವಣೆಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಭಾರತದ ಸಾಮಾನ್ಯ ಜನರ ಹಣ ಬಳಸಿದೆ ಎಂದು ಜಾಲತಾಣದ ಮಾಧ್ಯಮವೊಂದರ ವರದಿ ಆರೋಪಿಸಿದೆ.

ADVERTISEMENT

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆಗಸ್ಟ್ 1 ರಂದು ಬ್ಯಾಂಕುಗಳ ನಷ್ಟದ ಬಗ್ಗೆ ಸಂಸತ್ತಿನಲ್ಲಿ ನೀಡಿದ ಉತ್ತರ ಹಲವು ಅನುಮಾನ ಮೂಡಿಸಿದೆ. ಬ್ಯಾಂಕುಗಳ ನಷ್ಟದ ಅಂಕಿ ಅಂಶಗಳ ಮಾಹಿತಿಯನ್ನು ಅವರು ಬಹಿರಂಗಪಡಿಸಿಲ್ಲ.

ದಿ ವೈರ್‌ ಸುದ್ದಿಜಾಲತಾಣವು 20 ತಿಂಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವ್ಯವಹಾರ ಮತ್ತು ಬ್ಯಾಂಕ್‌ ವಹಿವಾಟುಗಳ ವಿವರ ಅಧ್ಯಯನ ನಡೆಸಿ ಪ್ರಕಟಿಸಿದ ವರದಿಯಲ್ಲಿ ಈ ಮಾಹಿತಿ ಬಹಿರಂಗವಾಗಿದೆ.

ಜೂನ್ 18 ರಂದು ದಿ ವೈರ್‌ನಲ್ಲಿ “ಭಾರತದ ಐತಿಹಾಸಿಕ ಬ್ಯಾಂಕ್ 12 ಲಕ್ಷ ಕೋಟಿ ನಷ್ಟಕ್ಕೆ ಪ್ರಧಾನಿ ಮೋದಿ ಸರ್ಕಾರ ಉತ್ತರಿಸಬೇಕು” ಎಂಬ ಶೀರ್ಷಿಕೆಯಡಿ ಪ್ರಕಟಿಸಿದ ವರದಿಯಲ್ಲಿ ಈ ಮಾಹಿತಿ ಪ್ರಸ್ತುತಪಡಿಸಲಾಗಿದೆ.

“ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದ ಮೊದಲ ಎಂಟು ವರ್ಷಗಳು, ಒಂಬತ್ತು ತಿಂಗಳುಗಳನ್ನು ಅಧ್ಯಯನ ಮಾಡಲಾಗಿದೆ. ಒಂಬತ್ತು ವರ್ಷಗಳ ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಅಂಕಿ ಅಂಶವನ್ನು ಹೊಂದಿದ್ದೇವೆ. ಎಲ್ಲಾ ಬ್ಯಾಂಕ್‌ಗಳು ಕಳೆದುಕೊಂಡಿರುವ ಮೊತ್ತವು 12,09,606 ಕೋಟಿ ರೂ.ಗಳಿಂದ 12,50,553 ಕೋಟಿ ರೂ. ಆಗಿದೆ

ಭಾರತದ ಇತಿಹಾಸದಲ್ಲಿ ಹಿಂದೆಂದೂ ಒಂದು ಹಗರಣ ಅಥವಾ ಅದರ ಪರಿಣಾಮದ ಯಾವುದೇ ಸಾರ್ವಜನಿಕ ಚರ್ಚೆಯಿಲ್ಲದೆ ಬ್ಯಾಂಕುಗಳು ವರ್ಷದಿಂದ ವರ್ಷಕ್ಕೆ ಇಷ್ಟು ದೈತ್ಯಾಕಾರದ ಮೊತ್ತವನ್ನು ಕಳೆದುಕೊಂಡು ನಾಶವಾಗದೆ ಉಳಿದಿವೆ” ಎಂದು ವರದಿ ಹೇಳಲಾಗಿದೆ.

ಸಾರ್ವಜನಿಕ ವಲಯದ ಬ್ಯಾಂಕುಗಳು ಹೆಚ್ಚು ಹಾನಿಗೊಳಗಾಗಿವೆ. ಆದರೆ ಖಾಸಗಿ ಬ್ಯಾಂಕುಗಳು ಸಹ ಈ ವೈರಸ್‌ನಿಂದ ಮುಕ್ತವಾಗಿಲ್ಲ. ಈ ಬ್ಯಾಂಕುಗಳಲ್ಲಿನ ಸಾರ್ವಜನಿಕ ಠೇವಣಿಗಳನ್ನು ರಾಜಕೀಯ ಬೆಂಬಲಿತ ವಂಚಕರ ಖಾತೆಗೆ ಹಣ ವರ್ಗಾಯಿಸಲು ಬಳಸಲಾಗಿದೆ ಎಂದು ನವೀಕೃತ ದತ್ತಾಂಶಗಳು ತಿಳಿಸುತ್ತವೆ ಎಂದು ವರದಿ ಮಾಹಿತಿ ನೀಡಿದೆ.

ನರೇಂದ್ರ ಮೋದಿ ಅವರೊಂದಿಗೆ ಪ್ರವರ್ಧಮಾನಕ್ಕೆ ಬಂದ ಅನೇಕರು ಬ್ಯಾಂಕ್ ನಿಧಿಗಳಿಂದ ಕೋಟಿಗಟ್ಟಲೆ ಹಣವನ್ನು ಲೂಟಿ ಮಾಡಿದ್ದಾರೆ. ಈ ಹಣವನ್ನು ವಿದೇಶದಲ್ಲಿ ಸುಂದರವಾದ ಮಹಲುಗಳು, ಐಷಾರಾಮಿ ಜೀವನಕ್ಕಾಗಿ ವಂಚಕರು ಬಳಕೆ ಮಾಡಿದ್ದಾರೆ ಎಂದು ವರದಿ ತಿಳಿಸಿದೆ.

ಪ್ರಧಾನಿ ಮೋದಿ ಸರ್ಕಾರದಿಂದ ಯಾರೊಬ್ಬರೂ ವಿಚಾರಣೆ ಮತ್ತು ಜೈಲು ಶಿಕ್ಷೆಗೆ ಒಳಗಾಗಿಲ್ಲ. ಆದರೆ ಮನಮೋಹನ್ ಸಿಂಗ್ ಸರ್ಕಾರವು ತಮ್ಮ ಆಡಳಿತದಲ್ಲಿನ ರಾಮಲಿಂಗಂ ರಾಜು ಅವರನ್ನು ಸತ್ಯಂ ಪ್ರಕರಣದಲ್ಲಿ ಜೈಲಿಗೆ ಕಳುಹಿಸಿತ್ತು. ಕಂಟ್ರೋಲರ್‌ ಮತ್ತು ಆಡಿಟರ್‌ ಜನರಲ್‌ (ಸಿಎಜಿ) ವರದಿ ಮಾಡಿದ ನಂತರ ಈ ಭ್ರಷ್ಟಾಚಾರದ ಪ್ರಕರಣ ಬೆಳಕಿಗೆ ಬಂದಿತ್ತು.

“ಬ್ಯಾಂಕುಗಳಿಗೆ ವಂಚಿಸಿದ ಮೊತ್ತವನ್ನು ವಸೂಲಿ ಮಾಡಲು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಅಗ್ರ ಇಪ್ಪತ್ತು ವಂಚಕರಲ್ಲಿ ಪ್ರತಿಯೊಬ್ಬರಿಗೂ ಶಿಕ್ಷೆಯನ್ನು ನೀಡಲಾಗಿದೆ” ಎಂದು ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. ಅಲ್ಲದೆ “ವಂಚನೆ ಪತ್ತೆಯಾದ ತಕ್ಷಣ ಬ್ಯಾಂಕ್‌ಗಳು ದೂರುಗಳನ್ನು ಸಲ್ಲಿಸುವ ಅಗತ್ಯವಿದೆ” ಎಂದು ಸೀತಾರಾಮನ್ ಉತ್ತರಿಸಿದ್ದಾರೆ.

ಆದರೆ ನಿರ್ಮಲಾ ಸೀತಾರಾಮನ್‌ ಅವರು ಹೆಸರಿಸಿದ 20 ವಂಚಕರಲ್ಲಿ ಅನೇಕರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಪ್ತರಾಗಿದ್ದಾರೆ ಎಂದು ವರದಿ ಹೇಳಿದೆ.

ಈ ಸುದ್ದಿ ಓದಿದ್ದೀರಾ? ಜಮ್ಮು ಮತ್ತು ಕಾಶ್ಮೀರ | ಉಗ್ರರೊಂದಿಗೆ ಗುಂಡಿನ ಚಕಮಕಿ; ಮೂವರು ಸೇನಾ ಯೋಧರು ಹುತಾತ್ಮ

ಸಂಸತ್ತಿನಲ್ಲಿ ಬ್ಯಾಂಕುಗಳಿಗೆ ವಂಚಿಸಿದವರ ಕುರಿತ ಪ್ರಶ್ನೆಯಿಂದ ನಿರ್ಮಲಾ ಸೀತಾರಾಮನ್‌ ಅವರು ನುಣುಚಿಕೊಂಡರು. ಆದರೆ ರಾಜ್ಯ ಸಚಿವ ಪಂಕಜ್ ಚೌಧರಿ ಅವರು, “ಸರಕಾರವು ಪರಾರಿಯಾದ ಆರ್ಥಿಕ ಅಪರಾಧಿಗಳ ಕಾಯಿದೆಯಡಿ ಆರೋಪಿಗಳಿಂದ 15,113 ಕೋಟಿ ರೂ.ಗಳನ್ನು ವಸೂಲಿ ಮಾಡಿದೆ” ಎಂದು ಉತ್ತರಿಸಿದರು.

ಈ ವರ್ಷದ ಫೆಬ್ರುವರಿ 5 ರಂದು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಹಣಕಾಸು ಖಾತೆಯ ಮತ್ತೊಬ್ಬ ರಾಜ್ಯ ಸಚಿವ ಭಾಗವತ್ ಕರಾದ್, “ದೊಡ್ಡ ಸಾಲಗಳ ಮೇಲಿನ ಮಾಹಿತಿಯ ಕೇಂದ್ರ ಭಂಡಾರ (ಸಿಆರ್‌ಎಲ್‌ಎಲ್‌ಸಿ) ದತ್ತಾಂಶ ವರದಿ ಮಾಡಿದಂತೆ ವಾಣಿಜ್ಯ ಬ್ಯಾಂಕ್‌ಗಳಿಂದ ಅಗ್ರ 10 ಸಾಲಗಾರರಿಗೆ ಒಟ್ಟು 12,71,604 ಕೋಟಿ ರೂ. ನೀಡಲಾಗಿದೆ . ಆದ್ದರಿಂದ ಅಗ್ರ 10 ಸಾಲಗಾರರಿಗೆ ಬ್ಯಾಂಕ್‌ಗಳು ಎಷ್ಟು ಸಾಲ ನೀಡಿವೆ ಎಂಬ ಕಲ್ಪನೆಯನ್ನು ನಾವು ಹೊಂದಿದ್ದೇವೆ. ಅಗ್ರ 100 ಮಂದಿ ಈ ಮೊತ್ತವನ್ನು ಐದರಿಂದ ಆರು ಪಟ್ಟು ಹೆಚ್ಚು ಪಡೆದಿರಬಹುದು ಎಂದು ಅಂದಾಜು ಮಾಡುತ್ತೇವೆ” ಎಂದು ಹೇಳಿದ್ದರು. ಆದರೆ ಈ ಮೊತ್ತ ಬ್ಯಾಂಕುಗಳಿಗೆ ಹಿಂತಿರುಗುವ ಸಾಧ್ಯತೆ ಇಲ್ಲ ಎಂದು ಆರ್ಥಿಕ ತಜ್ಞರು ಹೇಳಿದ್ದಾರೆ ಎಂದು ವರದಿ ಹೇಳಿದೆ.

Tags: Nirmala SitharamanPM Narendra Modiನಿರ್ಮಲಾ ಸೀತಾರಾಮನ್ಪ್ರಧಾನಿ ನರೇಂದ್ರ ಮೋದಿಭಾರತೀಯ ಬ್ಯಾಂಕುಗಳು
Previous Post

ದೇಶದ ದಿವಾಳಿಗೆ ಮೋದಿ ಸರ್ಕಾರ ಕಾರಣ: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಹಿರೋಷಿಮಾ-ನಾಗಸಾಕಿ-ಕಲಿಯಬೇಕಾದ ನೈತಿಕ ಪಾಠಗಳು-ಭಾಗ 1

Related Posts

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
0

https://youtu.be/QX4g82NAFtg

Read moreDetails

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
Next Post
ಹಿರೋಷಿಮಾ-ನಾಗಸಾಕಿ-ಕಲಿಯಬೇಕಾದ ನೈತಿಕ ಪಾಠಗಳು-ಭಾಗ 1

ಹಿರೋಷಿಮಾ-ನಾಗಸಾಕಿ-ಕಲಿಯಬೇಕಾದ ನೈತಿಕ ಪಾಠಗಳು-ಭಾಗ 1

Please login to join discussion

Recent News

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
Top Story

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada