• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಕಾಂಗ್ರೆಸ್ ಗೆಲುವು ಬಿಜೆಪಿಯ ಭಯಕ್ಕೆ ಕಾರಣವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
August 11, 2023
in ಇದೀಗ, ಕರ್ನಾಟಕ, ರಾಜಕೀಯ
0
ಮುಖ್ಯಮಂತ್ರಿ ಸಿದ್ದರಾಮಯ್ಯ
Share on WhatsAppShare on FacebookShare on Telegram

ಬಿಜೆಪಿಯವರು ಭ್ರಷ್ಟಾಚಾರ , ಬೆಲೆಏರಿಕೆ, ಧರ್ಮ ರಾಜಕಾರಣ ಮಾಡಿದ್ದು ರಾಜ್ಯವನ್ನು ಆರ್ಥಿಕವಾಗಿ ಹಾಳು ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ 135 ಸ್ಥಾನವನ್ನು ಗಳಿಸಿರುವುದು ಬಿಜೆಪಿಯವರ ಭಯಕ್ಕೆ ಕಾರಣವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ (ಆಗಸ್ಟ್ 11) ಹೇಳಿದ್ದಾರೆ.

ADVERTISEMENT

ಬೆಳಗಾವಿ ಅಥಣಿ ಹೆಲಿಪ್ಯಾಡ್ ಬಳಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಶಕ್ತಿ ಹಾಗೂ ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರು ಸಂತೋಷವಾಗಿದ್ದಾರೆ. ಗೃಹಲಕ್ಷ್ಮಿ ಕಾರ್ಯಕ್ರಮಕ್ಕೆ ಬೆಳಗಾವಿಯಲ್ಲಿ ಚಾಲನೆ ದೊರೆಯಲಿದ್ದು, 1.28 ಕೋಟಿ ಕುಟುಂಬಗಳಿಗೆ ಪ್ರತಿ ತಿಂಗಳು 2000 ರೂ. ನೆರವು ನೀಡುವ ದೇಶದಲ್ಲಿಯೇ ದೊಡ್ಡ ಯೋಜನೆಯಾಗಿದೆ. ನೇಕಾರರಿಗೆ ಉಚಿತ ವಿದ್ಯುತ್ ಸೌಲಭ್ಯ ನೀಡುವ ಬಗ್ಗೆ ಮತ್ತೊಮ್ಮೆ ಸಭೆ ನಡೆಸಿ ಚರ್ಚಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

“ಕಳೆದ ಮೂರು ವರ್ಷಗಳಿಂದ ಗುತ್ತಿಗೆದಾರರ ಬಿಲ್ಲುಗಳು ಪಾವತಿಯಾಗಿಲ್ಲ. ನಮ್ಮ ಸರ್ಕಾರ ಯಾರ ಗುತ್ತಿಗೆದಾರರ ಬಿಲ್ ಪಾವತಿಗೂ ತೊಂದರೆ ಮಾಡುವುದಿಲ್ಲ. ಮೂರು ವರ್ಷದಿಂದ ಬಿಲ್ ಪಾವತಿ ಮಾಡದೇ ಇದ್ದ ಬಿಜೆಪಿಯವರಿಗೆ ಹೋರಾಟ ಮಾಡಲು ಯಾವ ನೈತಿಕತೆಯೂ ಇಲ್ಲ. ಬಿಜೆಪಿಯವರಿಗೆ ಜನರ ಬಳಿ ದೂರಲು ಯಾವ ವಿಷಯವೂ ಇಲ್ಲ. ಆದ್ದರಿಂದ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು.

ರಾಹುಲ್ ಗಾಂಧಿ ವಿರುದ್ಧ ಸಂಸದೆ ಶೋಭಾ ಕರಂದ್ಲಾಜೆ ಮತ್ತಿತರು ಸೇರಿ ದೂರು ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಈ ವಿಷಯ ಲೋಕಸಭಾಧ್ಯಕ್ಷರ ಮುಂದಿದೆ. ರಾಹುಲ್ ಗಾಂಧಿಯವರು ಅಧಿವೇಶನದಲ್ಲಿ ಅವಿಶ್ವಾಸ ಮಂಡನೆ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಟು ಟೀಕೆ ಮಾಡಿರುವುದರಿಂದ ದೂರು ನೀಡಿದ್ದಾರೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಆತ್ಮಹತ್ಯೆ ಮಾಡಿಕೊಂಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಕುಟುಂಬದವರು ಪೋಲಿಸರಿಂದ ನಮಗೆ ನ್ಯಾಯ ದೊರೆತಿಲ್ಲ, ಸಿಐಡಿಗೆ ವಹಿಸಬೇಕೆಂದು ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ವಿಚಾರ ಮಾಡಿ, ಕಾನೂನು ಇಲಾಖೆಯೊಂದಿಗೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಆನೆಗಳ ಸಂಖ್ಯೆಯಲ್ಲಿ ಕರ್ನಾಟಕ ನಂ 1

ಮಾಜಿ ಸಚಿವ ಆರ್.ಅಶೋಕ್ ಅವರು ತಮ್ಮ ಸರ್ಕಾರ ಬಿನ್ ಲ್ಯಾಡೆನ್ ಸರ್ಕಾರ ಎಂದು ಟೀಕಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲುವ ಭಯ ಶುರುವಾಗಿದೆ. ಹಾಗಾಗಿ ಹತಾಶರಾಗಿದ್ದಾರೆ. ನಮ್ಮ ಗ್ಯಾರಂಟಿ ಯೋಜನೆಗಳು ಜಾರಿಯಾಗುತ್ತಿರುವುದರಿಂದ ಹೆದರಿಕೆಯಿಂದ ಬಾಯಿಗೆ ಬಂದಂತೆ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ” ಎಂದು ಟೀಕಿಸಿದರು.

ಗುತ್ತಿಗೆದಾರರ ಬಿಲ್ ಪಾವತಿಗೆ ಸಂಬಂಧಿಸಿದಂತೆ ಮಾತನಾಡಿ, “ಹಿಂದಿನ ಸರ್ಕಾರದಲ್ಲಿ ಆಗಿರುವ ಕಾಮಗಾರಿಗಳಿಗೆ 2-3 ವರ್ಷಗಳಾದರೂ ಬಿಲ್ ಬಾಕಿ ಉಳಿಸಿ ಹೋಗಿದ್ದಾರೆ. ನಾವು ಅಧಿಕಾರಕ್ಕೆ ಬಂದು ಮೂರು ತಿಂಗಳಾಗಿದೆ. ಆದರೆ, ನಮ್ಮ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಾವು ಹಿಂದಿನ ಸರ್ಕಾರದ ಮೇಲೆ ಶೇ 40 ಕಮಿಷನ್ ಆರೋಪ ಮಾಡಿದ್ದೆವು. ಅದು ಪ್ರಮುಖವಾಗಿ ಚರ್ಚೆಯಾಗಿದೆ. ತನಿಖೆಯಿಂದ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುವುದು. ಬಿಲ್ ಕೂಡ ಪಾವತಿಸಲಾಗುವುದು. ನಾಲ್ಕು ತಂಡಗಳನ್ನು ರಚಿಸಿ ತನಿಖೆಯಾಗುತ್ತಿದೆ. ವರದಿ ಬಂದ ಕೂಡಲೇ ಪರಿಶೀಲಿಸಿ ತಪ್ಪು ಮಾಡದಿದ್ದರೆ ಬಿಲ್ ಪಾವತಿಸುತ್ತೇವೆ. ತಪ್ಪಾಗಿದ್ದರೆ ಅವರ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

Tags: BJPCM SiddaramaiahContractors due billGruha Lakshmi Schemeಕಾಂಗ್ರೆಸ್‌ಬಿಜೆಮುಖ್ಯಮಂತ್ರಿ ಸಿದ್ದರಾಮಯ್ಯ
Previous Post

ನಕಲಿ ಸಹಿ ಆರೋಪ | ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್‌ ಚಡ್ಡಾ ಅಮಾನತು

Next Post

ಸಿದ್ದರಾಮಯ್ಯ ಸರ್ಕಾರ ಬಸವಣ್ಣನ ತತ್ವ ಅಳವಡಿಸಿಕೊಂಡಿದೆ: ಲಕ್ಷ್ಮಿ ಹೆಬ್ಬಾಳಕರ್

Related Posts

Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
0

ಮಿತ್ರಪಕ್ಷದ ಮುಲಾಜಿನಲ್ಲಿ ಕಾಂಗ್ರೆಸ್; ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ, ಮಂಡ್ಯಕ್ಕೆಷ್ಟು ಅನುದಾನ; ಮೊದಲು ತಿಳಿಯಲಿ ಎಂದು ಚೆಲುವರಾಯಸ್ವಾಮಿಗೆ ತಿರುಗೇಟು, RSS ಬಗ್ಗೆ ಟೀಕೆ; ಪ್ರಿಯಾಂಕ್ ಖರ್ಗೆ...

Read moreDetails

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

July 5, 2025

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

July 5, 2025
ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

July 5, 2025
Next Post
ಲಕ್ಷ್ಮಿ ಹೆಬ್ಬಾಳಕರ್‌

ಸಿದ್ದರಾಮಯ್ಯ ಸರ್ಕಾರ ಬಸವಣ್ಣನ ತತ್ವ ಅಳವಡಿಸಿಕೊಂಡಿದೆ: ಲಕ್ಷ್ಮಿ ಹೆಬ್ಬಾಳಕರ್

Please login to join discussion

Recent News

Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
Top Story

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

by ಪ್ರತಿಧ್ವನಿ
July 5, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada