• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ನಾನು ಆರೂವರೆ ಕೋಟಿ ಕನ್ನಡಿಗರ ವಕ್ತಾರ: ಎಚ್.ಡಿ.ಕುಮಾರಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
August 15, 2023
in ಇದೀಗ, ಕರ್ನಾಟಕ, ರಾಜಕೀಯ
0
ಎಚ್‌.ಡಿ.ಕುಮಾರಸ್ವಾಮಿ
Share on WhatsAppShare on FacebookShare on Telegram

ತಮ್ಮನ್ನು ಬಿಜೆಪಿ ವಕ್ತಾರ ಎಂದು ಕರೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ನಾಯಕರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಂಗಳವಾರ (ಆಗಸ್ಟ್‌ 15) ತಿರುಗೇಟು ನೀಡಿದ್ದಾರೆ. ನಾನು ಆರೂವರೆ ಕೋಟಿ ಕನ್ನಡಿಗರ ವಕ್ತಾರ ಎಂದು ಹೇಳಿದ್ದಾರೆ.

ADVERTISEMENT

ಜಾತ್ಯತೀತ ಜನತಾದಳ ಕಚೇರಿಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಎಚ್‌.ಡಿ.ಕುಮಾರಸ್ವಾಮಿ ಭಾಷಣ ಮಾಡಿದರು.

“ನಾನು ಜನರ ವಕ್ತಾರನೇ ಹೊರತು ಯಾವುದೇ ಪಕ್ಷದ ವಕ್ತಾರ ಅಲ್ಲ. ಅವರು ನನ್ನನ್ನು ಪ್ರತಿಪಕ್ಷ ಸ್ಥಾನದಲ್ಲಿ ಇರಿಸಿದ್ದಾರೆ. ಅವರ ಪರವಾಗಿ ಸರ್ಕಾರವನ್ನು ಪ್ರಶ್ನಿಸುವುದೇ ನನ್ನ ಕೆಲಸ ಹಾಗೂ ಜನರ ಪರವಾಗಿ ನಾನು ದನಿಯೆತ್ತಲೇ ಬೇಕಿದೆ, ಅವರ ಕಾವಲುಗಾರನಾಗಿ ನಾನು ಕೆಲಸ ಮಾಡುತ್ತೇನೆ. ನನ್ನ ದನಿಯನ್ನು ಉಡುಗಿಸಲು ಯಾರಿಂದಲೂ ಸಾಧ್ಯವಿಲ್ಲ” ಎಂದು ಎಚ್‌.ಡಿ.ಕಮಾರಸ್ವಾಮಿ ಗುಡುಗಿದರು.

ಅಸಮಾನತೆಯ ಗ್ಯಾರಂಟಿ ನೀಡಿದ್ದಾರೆ

“ಹಿಂದೆ ಇದೇ ಕಾಂಗ್ರೆಸ್ ಪಕ್ಷದವರು ದೇಶದಲ್ಲಿ ಗರೀಬಿ ಹಠಾವೋ ಮಾಡುತ್ತೇವೆ ಎಂದರು. 1971ರಲ್ಲಿ ಮೊಳಗಿದ ಈ ಘೋಷಣೆ ಘೋಷಣೆಯಾಗಿಯೇ ಉಳಿದಿದೆ. ಈಗ 77ನೇ ಸ್ವಾತಂತ್ರ್ಯ ದಿನ ಆಚರಣೆ ಮಾಡುತ್ತಿದ್ದಾಗಲೂ ಬಡತನ ನಿವಾರಣೆ, ಪುಕ್ಕಟೆ ವಿಷಯಗಳ ಬಗ್ಗೆಯೇ ಮಾತನಾಡಲಾಗುತ್ತಿದೆ. ಹಾಗಿದ್ದರೆ ಹಿಂದೆ ಮಾಡಿದ ಘೋಷಣೆಗಳು, ಹಮ್ಮಿಕೊಂಡ ಕಾರ್ಯಕ್ರಮಗಳೆಲ್ಲವೂ ಎಲ್ಲಿ ಹೋದವು” ಎಂದು ಎಚ್‌.ಡಿ.ಕುಮಾರಸ್ವಾಮಿ ಕುಟುಕಿದರು.

“ಕಾಂಗ್ರೆಸ್ ಪಕ್ಷದವತು ಸಮಾನತೆ ತರುತ್ತೇವೆ ಎಂದು ಹೇಳಿದ್ದಾರೆ. ಯಾವುದರಲ್ಲಿ ಸಮಾನತೆ ತರುತ್ತಾರೆ ಇವರು? ಪುಕ್ಕಟೆ ಕೊಡುವ ಮೂಲಕ ಎಲ್ಲರೂ ತಮ್ಮ ಮುಂದೆ ಕೈ ಒಡ್ಡುವಂತೆ ಮಾಡಿದ್ದಾರೆ. ದುಡಿಯುವ ಕೈಗಳಿಗೆ ಶಕ್ತಿ ತುಂಬುವ ಬದಲು ಅವರು ಕೈ ಚಾಚಿ ನಿಲ್ಲುವಂತೆ ಮಾಡಿದ್ದಾರೆ. ಜನರನ್ನು ಕೈಯೊಡ್ಡಿ ನಿಲ್ಲಿಸುವ ವಿಚಾರದಲ್ಲಿ ಇವರು ಸಮಾನತೆ ಸಾಧಿಸುತ್ತಿದ್ದಾರೆ. ಇದಕ್ಕಿಂತ ದುಸ್ಥಿತಿ ಇನ್ನೇನಿದೆ” ಎಂದು ಎಚ್‌.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.

“ರಾಜ್ಯದಲ್ಲಿ ಹಣಕ್ಕೆ ಕೊರತೆ ಇಲ್ಲ. ನಾಡಿನ ಜನರು ತಮ್ಮ ರಕ್ತ ಸುರಿಸಿ ಖಜಾನೆ ತುಂಬುತ್ತಿದ್ದಾರೆ. ಹಿಂದೆ ಯಾವುದಾದರೂ ಕಾರ್ಯಕ್ರಮ ಬಂದರೆ ಹಣವನ್ನು ಎಲ್ಲಿಂದ ತರುವುದು? ಎನ್ನುವ ಪ್ರಶ್ನೆ ಇರುತ್ತಿತ್ತು. ಈಗ ಸಂಪತ್ತಿಗೆ ಕೊರತೆ ಇಲ್ಲ. ಆದರೆ, ಇರುವ ಹಣವನ್ನು ಎಲ್ಲಿಗೆ ಒಯ್ಯುತ್ತಿದ್ದೀರಿ ಎಂದು ಆಳುವ ಮಂದಿಯನ್ನು ಕೇಳಬೇಕಾದ ಸ್ಥಿತಿ ಬಂದಿದೆ” ಎಂದು ಎಚ್‌.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಚುನಾವಣೆಯ ಗೆಲುವನ್ನು ಪಕ್ಷದ ಕಾರ್ಯಕರ್ತರಿಗೆ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

“ಸ್ವಾತಂತ್ರ್ಯಪೂರ್ವದಲ್ಲಿ ಒಂದೇ ಒಂದು ಈಸ್ಟ್ ಇಂಡಿಯಾ ಕಂಪನಿ ಇತ್ತು. ಈಗ ಹೆಜ್ಜೆಹೆಜ್ಜೆಗೂ ಅಂಥಾ ಕಂಪನಿಗಳು ಕಾಣುತ್ತಿವೆ. ರಾಷ್ಟ್ರೀಯ ಪಕ್ಷಗಳು ಈಸ್ಟ್ ಇಂಡಿಯಾ ಕಂಪನಿಗಳಂತೆ ಜನರನ್ನು ಸುಲಿಗೆ ಮಾಡುತ್ತಿವೆ. ಈ ದೇಶದ ಸಂಪತ್ತಿಗೆ ಶಕ್ತಿ ತುಂಬುವ ಕೆಲಸವನ್ನು ಕನ್ನಡಿಗರು ಮಾಡುತ್ತಿದ್ದಾರೆ. ತೆರಿಗೆ ಸಂಗ್ರಹ ಮಾಡಿ ಕೇಂದ್ರದ ಖಜಾನೆ ತುಂಬುವ ಎರಡನೇ ಸಂಪದ್ಭರಿತ ರಾಜ್ಯವಾಗಿದೆ ಕರ್ನಾಟಕ. ಆದರೆ, ಆದರೆ ನಮಗೆ ಆಗುತ್ತಿರುವ ಅನ್ಯಾಯ ಬಗ್ಗೆ ದನಿ ಎತ್ತುವವರು ಯಾರು? ಎಂದು ಎಚ್‌.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು.

ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಈ ಸಂದರ್ಭದಲ್ಲಿ ಮಾತನಾಡಿದರು. ಎಚ್‌.ಡಿ.ಕುಮಾರಸ್ವಾಮಿ ಸೇರಿ ಪಕ್ಷದ ನಗರ ಘಟಕದ ಅಧ್ಯಕ್ಷರಾದ ಎಚ್.ಎಂ.ರಮೇಶ್ ಗೌಡ, ಪಕ್ಷದ ಹಿರಿಯ ನಾಯಕರಾದ ನಾರಾಯಣ ರಾವ್, ವಿಧಾನ ಪರಿಷತ್ ಸದಸ್ಯರಾದ ಕೆ.ಎನ್.ತಿಪ್ಪೇಸ್ವಾಮಿ, ಟಿ.ಎ.ಶರವಣ ಸೇರಿ ಅನೇಕ ನಾಯಕರು, ಕಾರ್ಯಕರ್ತರು, ಮಕ್ಕಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Tags: 77th Independence Day77ನೇ ಸ್ವಾತಂತ್ರ್ಯೋತ್ಸವHD KumaraswamyJDSಎಚ್‌.ಡಿ.ಕುಮಾರಸ್ವಾಮಿಕಾಂಗ್ರೆಸ್‌ಜೆಡಿಎಸ್‌
Previous Post

ಈ ಭಾರತ ದೇಶದಲ್ಲಿ ಮಾಧ್ಯಮಗಳಿಗೆ ಏನಾಗಿದೆ..? ಪ್ರಜಾಪ್ರಭುತ್ವಕ್ಕೆ ಮಾರಕವೇ..?

Next Post

ತಮ್ಮ ಕಾರು ಗುದ್ದಿದ ಸ್ವಚ್ಛತಾ ಕಾರ್ಮಿಕನಿಗೆ ಕ್ಷಮೆಯಾಚಿಸಿದ ರಚಿತಾ ರಾಮ್

Related Posts

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
0

ಮೋದಿ ಸರ್ಕಾರದ ಬದ್ಧತೆ ಪುನರುಚ್ಚರಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಉದ್ಯಮ ವಲಯದ ಸಾಧಕ ಕಂಪನಿಗಳಿಗೆ ಗೋಲ್ಡನ್ ಪೀಕಾಕ್ ಪ್ರಶಸ್ತಿ ಪ್ರದಾನ ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಪರಿಸರ...

Read moreDetails
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

June 26, 2025
ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

June 26, 2025
ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

June 26, 2025

Anil Shetty: ಸ್ಟಾರ್ಟಪ್ ಉದ್ಯಮಿ ಹಾಗೂ ಯುವರಾಜಕಾರಣಿ ಅನಿಲ್ ಶೆಟ್ಟಿ ನಾಯಕ ನಟನಾಗಿ ಚಲನ ಚಿತ್ರರಂಗಕ್ಕೆ ಪಾದಾರ್ಪಣೆ

June 26, 2025
Next Post
ರಚಿತಾ ರಾಮ್‌

ತಮ್ಮ ಕಾರು ಗುದ್ದಿದ ಸ್ವಚ್ಛತಾ ಕಾರ್ಮಿಕನಿಗೆ ಕ್ಷಮೆಯಾಚಿಸಿದ ರಚಿತಾ ರಾಮ್

Please login to join discussion

Recent News

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು
Top Story

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

by ಪ್ರತಿಧ್ವನಿ
June 26, 2025
ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು
Top Story

ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

by ಪ್ರತಿಧ್ವನಿ
June 26, 2025
ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada