• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ರಾಜ್ಯದ ಹಲವು ಕಡೆಗಳಲ್ಲಿ ಲೋಕಾಯುಕ್ತ ದಾಳಿ, ಅಧಿಕಾರಿಗಳಿಗೆ ನಡುಕ..!

ಪ್ರತಿಧ್ವನಿ by ಪ್ರತಿಧ್ವನಿ
August 17, 2023
in ಇದೀಗ, ಕರ್ನಾಟಕ, ವಿಶೇಷ
0
ಬೆಂಗಳೂರು | ಏಕಕಾಲಕ್ಕೆ 45 ಬಿಬಿಎಂಪಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ
Share on WhatsAppShare on FacebookShare on Telegram

ಸರ್ಕಾರಿ ಅಧಿಕಾರಿಗಳಿಗೆ (Government Officers) ಬಿಸಿ ಮಟ್ಟಿಸುವ ನಿಟ್ಟಿನಲ್ಲಿ ಲೋಕಾಯುಕ್ತ ( Lokayuktha ) ಅಧಿಕಾರಿಗಳು ದಾಳಿ ನಡೆಸಿದ್ದು, ಕೆಲವು ಕಡೆಗಳಲ್ಲಿ ಭ್ರಷ್ಟರಿಗೆ ಕಂಟಕ ಶುರುವಾಗಿದೆ ಎನ್ನಲಾಗುತ್ತಿದೆ. ಇದರ ಜೊತೆಗೆ ಹಲವು ಅಧಿಕಾರಿಗಳ ಮನೆಗಳಲ್ಲಿ (house ) ಕೂಡ ಪರಿಶೀಲನೆಯನ್ನ ನಡೆಸಲಾಗುತ್ತಿದೆ.

ADVERTISEMENT

ಇಂದು ಬೆಳಗ್ಗೆಯೇ (Morning )  ಹಲವು ಸರ್ಕಾರಿ ಅಧಿಕಾರಗಳ ಮನೆ ಮೇಲೆ ದಾಳಿ ಮಾಡಿರುವ ಲೋಕಾಯುಕ್ತ ಅಧಿಕಾರಿಗಳು, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ( BBMP) ಮಹದೇವಪುರ ವಲಯದ ರೆವಿನ್ಯೂ ಇನ್ಸ್‌ಪೆಕ್ಟರ್ ನಟರಾಜ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಪ್ರಮುಖವಾಗಿ ನಟರಾಜ್‌ರ ಬನಶಂಕರಿ ನಿವಾಸ, ಹಾಗೂ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿನ ಶಿವನಹಳ್ಳಿ ಗ್ರಾಮದ ನಿವಾಸದಲ್ಲೂ ಕೂಡ ಪರಿಶೀಲನೆ ನಡೆಸಕಾಗುತ್ತಿದೆ, ಸದ್ಯ ನಟರಾಜ್ ಮಾತ್ರವಲ್ಲದೇ ಬೆಂಗಳೂರಿನ ಹಲವು ಕಡೆ ಹಲವು ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗುತ್ತಿದೆ.

ಹೊಳಲ್ಕೆರೆ ಸಣ್ಣ ನೀರಾವರಿ‌ ಇಲಾಖೆ ಇಂಜಿನಿಯರ್ ಕೆ.ಮಹೇಶ್ ಹಾಗೂ ಅವರ ಪತ್ನಿ ಬಿಬಿಎಂಪಿ ಎಇ ಹೆಚ್. ಭಾರತಿ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.  ದಾವಣಗೆರೆ ನಗರದ ಜಯನಗರದಲ್ಲಿರುವ ಮನೆ ಮೇಲೆ ಚಿತ್ರದುರ್ಗ ಲೊಕಾಯುಕ್ತ ಎಸ್​ಪಿ ವಾಸುದೇವ್ ರಾಮ್ ಹಾಗೂ ಡಿವೈಎಸ್​ಪಿ ಮೃಂತುಂಜಯ್ಯ ನೇತೃತ್ವದ ತಂಡದಿಂದ ದಾಳಿ ನಡೆಸಲಾಗಿದೆ.

ದಾವಣಗೆರೆ ಲೋಕಾಯುಕ್ತ ಎಸ್ಪಿ ಕೌಲಪುರೆ ಅವರ ಆದೇಶದ ಮೇರೆಗೆ ದಾವಣಗೆರೆಯ ಇಬ್ಬರು ಇನ್ಸಪೆಕ್ಟರ್ ಸೇರಿದಂತೆ 6 ಜನರ ತಂಡ  ದಾವಣಗೆರೆ ಜಿಲ್ಲೆ ಚನ್ನಗಿರಿ ವಲಯ ಸಂರಕ್ಷಣಾಧಿಕಾರಿಯಾಗಿರುವ ಸತೀಶ್ ಅವರಿಗೂ ಕೂಡ ಲೋಕಾಯುಕ್ತ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದು, ಅವರ ಶಿವಮೊಗ್ಗದ ನಿವಾಸದ ಮೇಲೆಯೂ ದಾವಣಗೆರೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಈಗಾಗಲೇ ಅಕ್ರಮ ಆಸ್ತಿ ವಿಚಾರದ ಆರೋಪ ಸತೀಶ್‌ ಅವರ ಮೇಲೆ ಕೇಳಿ ಬಂದಿರುವುದರಿಂದ ಅವರ ಶಿವಮೊಗ್ಗದ ಡಾಲರ್ಸ್ ಕಾಲೋನಿಯ ವೃಷಾಭಾದ್ರಿ ಮನೆಯ ಮೇಲೆ ಕೂಡ ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಚನ್ನಗಿರಿ ಅರಣ್ಯ ಇಲಾಖೆಯ ವಸತಿ ಗೃಹ ಸೇರಿದಂತೆ ಅವರ ಮನೆಗಳ ಮೇಲೆ ದಾಳಿ ನಡೆಸಲಾಗಿದೆ

ಈ ಸುದ್ದಿಯನ್ನು ಓದಿದ್ದೀರಾ ? ; ಕಿಂಗ್​ಫಿಶರ್​​ ಬಿಯರ್​.. ಮನುಷ್ಯರು ಕುಡಿಯಲು ಯೋಗ್ಯವಲ್ಲ..!

ಸುಮಾರು 10ಕ್ಕೂ ಹೆಚ್ಚು ಮಂದಿಗೆ ಲೋಕಾಯುಕ್ತ ಪೊಲೀಸರು  ತುಮಕೂರು ನಗರ ಅಭಿವೃದ್ಧಿ ಇಲಾಖೆ ಜಂಟಿ ನಿರ್ದೇಶಕರ ನಾಗರಾಜ ಮನೆ ಮೇಲೆ ದಾಳಿ ದಾಳಿ ನಡೆಸಿದ್ದಾರೆ. ತುಮಕೂರು ನಗರದ ಸಪ್ತಗಿರಿ ಬಡಾವಣೆಯಲ್ಲಿರುವ ನಾಗರಜ್‌ಗೆ ಸೇರಿದ ನಿವಾಸದ ಮೇಲೆ ಬೆಳಗ್ಗೆ ಸುಮಾರು ಐದು ಗಂಟೆ ವೇಳೆಗೆ ಅಧಿಕಾರಿಗಳು ದಾಳಿ ನಡೆಸಿದ್ದು, ಕಾಗದಪತ್ರ ಪರಿಶೀಲನೆ ನಡೆಸುತ್ತಿದ್ದಾರೆ. ತುಮಕೂರು ಸಪ್ತಗಿರಿ ಬಡಾವಣೆಯಲ್ಲಿರುವ ನಿವಾಸ ಹಾಗೂ ಪಾವಗಡ ತಾಲೂಕು ಅರಸೀಕೆರೆಯ ನಿವಾಸ ಹಾಗೂ ಟೂಡಾ ಕಚೇರಿಯಲ್ಲಿ ಮೂರು ಪ್ರತ್ಯೇಕ ತಂಡಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಕಳೆದ 18 ತಿಂಗಳಿನಿಂದ TUDA ಕಚೇರಿಯಲ್ಲಿ ಅಕ್ರಮ ನಡೆದಿದೆ ಹಾಗೂ ಅದರ ಹಿಂದೆ ತುಮಕೂರು ನಗರ ಅಭಿವೃದ್ಧಿ ಇಲಾಖೆ ಜಂಟಿ ನಿರ್ದೇಶಕರ ನಾಗರಾಜ ಅವರ ಕೈವಾಡವಿದೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಬಲವಾಗಿ ಕೇಳಿ ಬಂದ ಹಿನ್ನೆಲೆ ಈ ದಾಳಿ ನಡೆದಿದೆ ಎನ್ನಲಾಗುತ್ತಿದೆ.  

​ಬೀದರ್​ ಜಿಲ್ಲೆಯಚಿಟಗುಪ್ಪ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್​ ಕಾನ್ಸ್​ಟೇಬಲ್ ವಿಜಯ್​ಕುಮಾರ್ ಮನೆ ಮೇಲೆ ದಾಳಿ ಮಾಡಲಾಗಿದೆ. ಈತನ  ಹುಮ್ನಾಬಾದ್​ ಪಟ್ಟಣದ ಟೀಚರ್ ಕಾಲೋನಿ ಹಾಗೂ ಹುಚಕನಳ್ಳಿ ಗ್ರಾಮದ ಮನೆಗಳ ಮೇಲೂ ದಾಳಿ ನಡೆಸಲಾಗಿದೆ.

ಕೊಡಗು ಎಡಿಸಿ ನಂಜುಂಡೇಗೌಡ ಮನೆ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಇವರ ನಿವಾಸದ ಮೇಲೆ ಸಂಪೂರ್ಣವಾಗಿ ತಪಾಸಣೆ ನಡೆಸಲಾಗುತ್ತಿದೆ. ಮಡಿಕೇರಿಯ ಕಾರ್ಯಪ್ಪ ವೃತ್ತದ ಬಳಿ ಇರುವ ಮನೆ ಮೇಲೆ ದಾಳಿ ನಡೆದಿದ್ದು ಪ್ರಸ್ತುತ ಅಧಿಕಾರಿಗಳು ಹಲವು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ,  ಲೋಕಾಯುಕ್ತ ಎಸ್ ಪಿ. ಸುರೇಶ್ ಬಾಬು ಮಾರ್ಗದರ್ಶನದಲ್ಲಿ ಡಿ ವೈ ಎಸ್ ಪಿ ಪವನ್ ಕುಮಾರ್, ಇನ್ಸ್​ಪೆಕ್ಟರ್ ಲೋಕೇಶ್ ಮತ್ತು ಸಿಬ್ಬಂದಿ ಪರಿಶೀಲನೆ ಕೈಗೊಂಡಿದ್ದಾರೆ. ಇನ್ನು ಈತನಿಗೆ ಸೇರಿದೆ ಎನ್ನಲಾಗುತ್ತಿರುವ ಪಿರಿಯಾಪಟ್ಟಣದ ಮಾವನ ಮನೆ ಹಾಗೂ ಮೈಸೂರಿನಲ್ಲಿ ಇರುವ ಸಂಬಂಧಿಕರ ಮನೆ ಮೇಲೂ ಕೂಡ ಏಕಕಾಲದಲ್ಲಿ ದಾಳಿ ನಡೆಸಿ ತಪಸಾಣೆ ನಡೆಸಲಾಗುತ್ತಿದೆ ಎನ್ನಲಾಗಿದೆ.

ಕೊಪ್ಪಳದ ನಿರ್ಮಿತಿ‌ ಕೇಂದ್ರದ ಕಚೇರಿ ವ್ಯವಸ್ಥಾಪಕ ಮಂಜುನಾಥ್​ ಬನ್ನಿಕೊಪ್ಪ ಕೆಲಸ ಮಾಡುವ ಕಚೇರಿ ಹಾಗೂ ಮನೆ ಮೇಲೆ ಲೋಕಾಯಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಒಟ್ಟು ಐದು ತಂಡಗಳಲ್ಲಿ ದಾಳಿ ನಡೆಸಲಾಗಿದ್ದು, ಕೊಪ್ಪಳದ ನಿರ್ಮಿತಿ ಕೇಂದ್ರದ ಬಡಾವಣೆಯಲ್ಲಿರುವ ಕಚೇರಿ ಮತ್ತು ಮಂಜುನಾಥ್​ ಹೂಡಿಕೆ ಮಾಡಿರುವ ಕೊಪ್ಪಳ ತಾಲೂಕಿನ ಹುಲಿಗಿಯ ಮಾರ್ಕ್ ಇನ್ ಲಾಡ್ಜ್ ಮೇಲೆ ಅಧಿಕಾರಿಗಳ ತಂಡ ದಾಳಿ ನಡೆಸಿದೆ.

ಒಟ್ಟಾರೆಯಾಗಿ ಇದೀಗ ರಾಜ್ಯ ನಾನ ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಈ ದಾಳಿಯಿಂದಾಗಿ ಹಲವು ಸರ್ಕಾರಿ ಅಧಿಕಾರಿಗಳಿಗೆ ನಡುಕ ಹುಟ್ಟಿರೋದಂತು ಸುಳ್ಳಲ್ಲ. ಇನ್ನು ಈ ದಾಳಿಯಿಂದ ಹಲವು ಭ್ರಷ್ಟ ಅಧಿಕಾರಿಗಳ ಮುಖವಾಡ ಕಳಚ ಬಹುದು ಎನ್ನಲಾಗುತ್ತಿದ್ದು, ಇನ್ನಷ್ಟು ಮಾಹಿತಿ ಲಭ್ಯವಾಗ ಬೇಕಿದೆ.

Tags: AICCCongress GovernmentGovernment OfficialsKarnatakaKPCClokayukta karnataka
Previous Post

ಕಿಂಗ್​ಫಿಶರ್​​ ಬಿಯರ್​.. ಮನುಷ್ಯರು ಕುಡಿಯಲು ಯೋಗ್ಯವಲ್ಲ..!

Next Post

ಭಾರಿ ಮೊತ್ತಕ್ಕೆ ಮಾರಾಟವಾಯಿತು “ರಾನಿ” ಆಡಿಯೋ ರೈಟ್ಸ್ , ಸಿನಿ ರಸಿಕರಲ್ಲಿ ಹೆಚ್ಚಾಯ್ತು ನಿರೀಕ್ಷೆ.!

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
0

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ...

Read moreDetails
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
Next Post
ಭಾರಿ ಮೊತ್ತಕ್ಕೆ ಮಾರಾಟವಾಯಿತು “ರಾನಿ” ಆಡಿಯೋ ರೈಟ್ಸ್ , ಸಿನಿ ರಸಿಕರಲ್ಲಿ ಹೆಚ್ಚಾಯ್ತು ನಿರೀಕ್ಷೆ.!

ಭಾರಿ ಮೊತ್ತಕ್ಕೆ ಮಾರಾಟವಾಯಿತು "ರಾನಿ" ಆಡಿಯೋ ರೈಟ್ಸ್ , ಸಿನಿ ರಸಿಕರಲ್ಲಿ ಹೆಚ್ಚಾಯ್ತು ನಿರೀಕ್ಷೆ.!

Please login to join discussion

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada