• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಚಂದ್ರಯಾನ 3 | ಲ್ಯಾಂಡರ್ ಇಳಿಯುವ ಮುನ್ನ ಚಂದ್ರನ ಹೊಸ ಪೊಟೊಗಳನ್ನು ಹಂಚಿಕೊಂಡ ಗಗನನೌಕೆ

ಪ್ರತಿಧ್ವನಿ by ಪ್ರತಿಧ್ವನಿ
August 21, 2023
in ಇದೀಗ, ದೇಶ
0
ಚಂದ್ರಯಾನ 3

ಚಂದ್ರನ ಮೇಲೆ ಇಳಿಯುವ ಮುನ್ನ ಚಂದ್ರಯಾನ 3 ಗಗನನೌಕೆಯು ಹೊಸ ಫೊಟೊಗಳನ್ನು ತೆಗೆದೊದೆ

Share on WhatsAppShare on FacebookShare on Telegram

ಭಾರತದ ಮಹಾತ್ವಕಾಂಕ್ಷೆಯ ಚಂದ್ರಯಾನ 3 ಯೋಜನೆಯು ಮಹತ್ವದ ಘಟ್ಟದಲ್ಲಿದೆ. ಇನ್ನು ಕೆಲವೇ ಗಂಟೆಗಳಲ್ಲಿ ಅಂದರೆ, ಇದೇ ಬುಧವಾರ ಸಂಜೆ 6 ಗಂಟೆ 4 ನಿಮಿಷಕ್ಕೆ ಇಸ್ರೋ ಚಂದ್ರಯಾನ-3 ನೌಕೆಯ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಯಲು ಸಜ್ಜಾಗಿದೆ. ಇದೇ ಸಮಯದಲ್ಲಿ ಭಾರತದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಚಂದ್ರಯಾನ-3 ಲ್ಯಾಂಡರ್ ಭೂಮಿಗೆ ಕಾಣಿಸದ ಚಂದ್ರನ ಇನ್ನೊಂದು ಬದಿಯ ಫೋಟೊಗಳನ್ನು ಕ್ಲಿಕ್ಕಿಸಿದೆ. ಈ ಚಿತ್ರಗಳನ್ನು ಇಸ್ರೊ ಹಂಚಿಕೊಂಡಿದ್ದು, ಭೂಮಿಗೆ ಕಾಣಿಸದ ಚಂದ್ರನ ಇನ್ನೊಂದು ಮಗ್ಗಲಿನಲ್ಲಿ ಸಾಕಷ್ಟು ಕುಳಿಗಳು ಇರುವುದು ಕಾಣಿಸಿದೆ.

ADVERTISEMENT

ಈ ಚಿತ್ರಗಳು ವಿಕ್ರಮ್ ಲ್ಯಾಂಡರ್ಗೆ ಚಂದ್ರನ ಮೇಲೆ ಸುರಕ್ಷಿತವಾಗಿ ಇಳಿಯಲು ನೆರವಾಗಲಿದೆ. “ಲ್ಯಾಂಡರ್ ಹಜಾರ್ಡ್ ಡಿಟೆಕ್ಷನ್ ಆಂಡ್ ಅವಾಯಿಡೆನ್ಸ್ ಕ್ಯಾಮೆರಾ (ಎಲ್ಎಚ್ಡಿಎಸಿ) ಮೂಲಕ ಸೆರೆಹಿಡಿಯಲಾದ ಚಂದ್ರನ ದೂರದ ಪ್ರದೇಶದ ಚಿತ್ರಗಳು ಇಲ್ಲಿವೆ. ಸುರಕ್ಷಿತ ಲ್ಯಾಂಡಿಂಗ್ ಪ್ರದೇಶವನ್ನು ಪತ್ತೆಹಚ್ಚಲು ಈ ಕ್ಯಾಮೆರಾ ನೆರವಾಗಲಿದೆ. ಬಂಡೆಗಳು ಅಥವಾ ಆಳವಾದ ಕಂದಕಗಳಿಲ್ಲದ ಸ್ಥಳದಲ್ಲಿ ಇಳಿಯಲು ಇದು ನೆರವಾಗಲಿದೆ. ಇದನ್ನು ಎಸ್ಎಸಿ/ಇಸ್ರೊ ಅಭಿವೃದ್ಧಿಪಡಿಸಿದೆ” ಎಂದು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ( ಟ್ವಿಟ್ಟರ್) ಇಸ್ರೊ ತಿಳಿಸಿದೆ.

Chandrayaan-3 Mission:

Here are the images of
Lunar far side area
captured by the
Lander Hazard Detection and Avoidance Camera (LHDAC).

This camera that assists in locating a safe landing area — without boulders or deep trenches — during the descent is developed by ISRO… pic.twitter.com/rwWhrNFhHB

— ISRO (@isro) August 21, 2023

ಈ ಚಿತ್ರಗಳನ್ನು ಶನಿವಾರ ಸೆರೆಹಿಡಿಲಾಗಿದೆ. ಇದರಲ್ಲಿ ಹೈನ್, ಬಾಸ್ ಎಲ್, ಮಾರ್ ಹಬ್ಲೊಲ್ಡಿಟಿನಿಯಮ್ ಮತ್ತು ಬೆಲ್ಕೊವಿಚ್ ಎಂಬ ಕುಳಿಗಳನ್ನು ಗುರುತಿಸಲಾಗಿದೆ. ಭೂಮಿಗೆ ಕಾಣಿಸದ ಚಂದ್ರನ ಭಾಗವು ಗೋಳಾರ್ಧವಾಗಿದೆ. ಚಂದ್ರನ ಕಕ್ಷೆಯಲ್ಲಿ ಸಿಂಕ್ರೊನಸ್ ಆಗಿ ತಿರುಗುವಿಕೆಯಿಂದಾಗಿ ಈ ಭಾಗ ಭೂಮಿಗೆ ಕಾಣಿಸುವುದೇ ಇಲ್ಲ. ಇದೀಗ ಇಸ್ರೋದ ಕ್ಯಾಮೆರಾವು ಆ ಭಾಗದ ಚಿತ್ರಗಳನ್ನು ತೆಗೆದಿದೆ. ಇದೇ ಬುಧವಾರ ಚಂದ್ರಯಾನ 3 ಲ್ಯಾಂಡರ್ ಚಂದ್ರನ ದಕ್ಷಿನ ಧ್ರುವದ ಭಾಗದಲ್ಲಿ ಇಳಿಯಲಿದೆ. ಇದು ಯಶಸ್ವಿಯಾದರೆ ಚಂದ್ರನ ಮೇಲೆ ಲ್ಯಾಂಡರ್ ಇಳಿಸಿದ ಜಗತ್ತಿನ ನಾಲ್ಕನೇ ದೇಶವೆಂಬ ಹೆಮ್ಮೆಗೆ ಭಾರತ ಪಾತ್ರವಾಗಲಿದೆ. ಈಗಾಗಲೇ ಅಮೆರಿಕ, ರಷ್ಯಾ ಮತ್ತು ಚೀನಾ ದೇಶಗಳು ಈ ಕೀರ್ತಿಗೆ ಪಾತ್ರವಾಗಿವೆ.

ಒಂದೆಡೆ ಭಾರತದ ಇಂತಹ ಸಾಧನೆಗೆ ಜಗತ್ತೇ ಎದಿರು ನೋಡುತ್ತಿದೆ. ವಿಶೇಷವಾಗಿ ಭಾರತೀಯರು ಇಂತಹ ಸಾಧನೆ ಕಣ್ತುಂಬಿಕೊಳ್ಳಲು ತುದಿಗಾಲಿನಲ್ಲಿ ನಿಂತಿದ್ದಾರೆ. ಈ ಹಿಂದಿನ ಚಂದ್ರಯಾನ ಯೋಜನೆಯಲ್ಲಿ ಕೊನೆಕ್ಷಣದಲ್ಲಿ ಲ್ಯಾಂಡರ್ ಇಳಿಯುವ ಸಮಯದಲ್ಲಿ ವಿಫಲವಾಗಿತ್ತು. ಈ ಬಾರಿ ಭಾರತದ ಚಂದ್ರಯಾನ 3 ಯಶಸ್ವಿಯಾಗಲೆಂದು ಜನರು ಕಾಯುತ್ತಿದ್ದಾರೆ. ಇಂತಹ ಸಮಯದಲ್ಲಿ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಮಾಡಿರುವ ಟ್ವಿಟ್ಟೊಂದು ನೆಟ್ಟಿಗರ ಆಕ್ರೋಶಕ್ಕೆ ಪಾತ್ರವಾಗಿದೆ.

ಇಸ್ರೊ ಮಾಜಿ ಮುಖ್ಯಸ್ಥ ಕೆ. ಶಿವನ್ ಲುಂಗಿ ತೊಟ್ಟು, ಎರಡೂ ಕೈಗಳಲ್ಲಿ ಚಹಾವನ್ನು ಬೆರೆಸುವ ಕಾರ್ಟೂನ್ ಫೊಟೊವನ್ನು ಟ್ವಿಟ್ಟರ್ನಲ್ಲಿ ಹಂಚಿಕೊಂಡಿರುವ ಪ್ರಕಾಶ್ ರಾಜ್, ”ತಾಜಾ ಸುದ್ದಿ; ಚಂದ್ರಯಾನದಿಂದ ಈಗಷ್ಟೇ ಬಂದ ಮೊದಲ ದೃಶ್ಯ” ಎಂದು ಬರೆದುಕೊಂಡಿದ್ದಾರೆ.

Tags: Chandrayaan 3ISROlander Vikramಇಸ್ರೊಚಂದ್ರಯಾನ 3ಲ್ಯಾಂಡರ್‌ ವಿಕ್ರಮ್‌
Previous Post

ಬೆಂಗಳೂರು ತರಕಾರಿ ಮಾರುಕಟ್ಟೆಯಲ್ಲಿ ಖರೀದಿಗೆ ಡಿಜಿಟಲ್ ಯುಪಿಐ ಬಳಸಿದ ಜರ್ಮನ್ ಸಚಿವ ಹಣ ಪಾವತಿ

Next Post

Breaking: ಮಡಿಕೇರಿ | ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ ; ನೆಲಕ್ಕುರುಳಿದ ಸೇನಾನಿ ಜನರಲ್ ತಿಮ್ಮಯ್ಯ ಪ್ರತಿಮೆ

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
Next Post
ಜನರಲ್‌ ತಿಮ್ಮಯ್ಯ

Breaking: ಮಡಿಕೇರಿ | ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ ; ನೆಲಕ್ಕುರುಳಿದ ಸೇನಾನಿ ಜನರಲ್ ತಿಮ್ಮಯ್ಯ ಪ್ರತಿಮೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada