• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಮೇಕೆದಾಟು ಯೋಜನೆ ಅನುಷ್ಠಾನ ಯಾವಾಗ?: ಸರ್ಕಾರಕ್ಕೆ ಎಎಪಿ ಪ್ರಶ್ನೆ

ಪ್ರತಿಧ್ವನಿ by ಪ್ರತಿಧ್ವನಿ
August 27, 2023
in ಇದೀಗ, ಕರ್ನಾಟಕ, ರಾಜಕೀಯ
0
ಎಎಪಿ

ಮೋಹನ್‌ ದಾಸರಿ

Share on WhatsAppShare on FacebookShare on Telegram

ಅಧಿಕಾರಕ್ಕೆ ಬಂದು ನೂರು ದಿನ ಕಳೆದರೂ ಮೇಕೆದಾಟು ಯೋಜನೆ ಅನುಷ್ಠಾನದ ಬಗ್ಗೆ ಕಾಂಗ್ರೆಸ್ ಏಕೆ ಏನು ಮಾತನಾಡುತ್ತಿಲ್ಲ? ಬೆಂಗಳೂರಿಗೆ ಅಗತ್ಯ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರವೇನು? ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯ ಉಪಾಧ್ಯಕ್ಷ ಮೋಹನ್ ದಾಸರಿ ಅವರು ಪ್ರಶ್ನಿಸಿದ್ದಾರೆ.

ADVERTISEMENT

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದು ನೂರು ದಿನಗಳು ಪೂರೈಸಿದ ಹಿನ್ನೆಲೆ ಮೋಹನ್ ದಾಸರಿ ಹೇಳಿಕೆ ಬಿಡುಗಡೆ ಮಾಡಿದ್ದು, ಸಂಭ್ರಮಾಚರಣೆ ಮಾಡಲು ಕಾಂಗ್ರೆಸ್ ಯಾವ ಸಾಧನೆ ಮಾಡಿದೆ? ಶಕ್ತಿ ಯೋಜನೆ ಮೂಲಕ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯ ಮತ್ತು ಗೃಹಜ್ಯೋತಿ ಯೋಜನೆಯ ವಿದ್ಯುತ್ ಉಚಿತ ಸೌಲಭ್ಯವನ್ನು ಹೊರತು ಪಡಿಸಿ ಬೇರೆ ಏನು ಸಾಧನೆ ಮಾಡಿದ್ದಾರೆ? ಚುನಾವಣೆಗೂ ಮುನ್ನ ಐದು ಗ್ಯಾರಂಟಿಗಳನ್ನು ಘೋಷಿಸಿ ನುಡಿದಂತೆ ನಡೆಯುವ ಸರ್ಕಾರ ಎಂದಿದ್ದರು. ಅಧಿಕಾರಕ್ಕೆ ಬಂದ ಬಳಿಕ ತಮ್ಮದೇ ನುಡಿಯನ್ನು ಅನುಸರಿಸುತ್ತಿಲ್ಲ ಏಕೆ? ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ರಾಜ್ಯದ ನಿಜವಾದ ಸಮಸ್ಯೆಗಳ ಬಗ್ಗೆ ಗಮನ ಹರಿಸುತ್ತಿಲ್ಲ. ಬೆಂಗಳೂರಲ್ಲಿ ರಸ್ತೆಗುಂಡಿಗಳ ಸಮಸ್ಯೆ ಹೆಚ್ಚಾಗುತ್ತಲೇ ಇದೆ, ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗುತ್ತಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಮಸ್ಯೆಗಳನ್ನು ಆಲಿಸುತ್ತಿದ್ದೇನೆ ಎಂದು ಸುತ್ತಾಡುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಅವರೇನು ವಿರೋಧ ಪಕ್ಷದಲ್ಲಿಲ್ಲ. ತಮ್ಮದೇ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದಾರೆ. ಬ್ರಾಂಡ್ ಬೆಂಗಳೂರು ಮಾಡುತ್ತೇನೆಂದು ಹೇಳಿಕೊಳ್ಳುತ್ತಿದ್ದಾರೆ. ಬೆಂಗಳೂರಿನ ಸಮಸ್ಯೆಗಳೇನು ಎಂಬ ಅರಿವಿದ್ದುಕೊಂಡು ಪುನಃ ಆಲಿಸುವ ನಾಟಕ ಏಕೆ ಮಾಡುತ್ತಿದ್ದೀರಿ? ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಿ ಎಂದು ಎಎಪಿ ಉಪಾಧ್ಯಕ್ಷ ಮೋಹನ್ ದಾಸರಿ ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ ಮಳೆಯೇ ಇಲ್ಲದ ಪರಿಸ್ಥಿತಿ ಇದೆ. ರಾಜ್ಯದ ರೈತರ ಸಂಕಷ್ಟದ ದಿನಗಳನ್ನು ಲೆಕ್ಕಿಸದೆ ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಹರಿಸಲಾಗುತ್ತಿದೆ. ನಾಡು, ನುಡಿ, ಜಲಕ್ಕೆ ಬದ್ಧ ಎಂದರೆ ಇದೇನಾ? ಎಂದು ಪ್ರಶ್ನಿಸಿದರು.

ಹಿಂದಿನ ಸರ್ಕಾರದ 40% ಕಮಿಷನ್, ಪೇಸಿಎಂ ವಿರುದ್ಧ ಸಿಎಂ ಸಿದ್ದರಾಮಯ್ಯ ಅವರು ರಾಜ್ಯಾದ್ಯಂತ ಹೋರಾಟ ಮಾಡಿ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಗುತ್ತಿಗೆದಾರರ ಬಾಕಿ ಪಾವತಿಗೆ 20% ಕಮಿಷನ್ ಕೇಳುತ್ತಿರುವ ಆರೋಪ ಕೇಳಿಬಂದಿದೆ. ಡಿ.ಕೆ.ಶಿವಕುಮಾರ್ ವಿರುದ್ಧವೇ ದೂರುಗಳು ವ್ಯಕ್ತವಾಗಿವೆ. ಬೆನ್ನಲ್ಲೇ ಕೃಷಿ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಯಿಂದ ತಿಂಗಳಿಗೆ ತಲಾ 6 ರಿಂದ 8 ಲಕ್ಷ ರೂ. ಕಮಿಷನ್ ಅನ್ನು ಕೃಷಿ ಸಚಿವ ಚಲುವರಾಯಸ್ವಾಮಿ ಕೇಳುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಕೇವಲ ಸರ್ಕಾರ ಬದಲಾಗಿದೆ, ಆದರೆ ಭ್ರಷ್ಟಾಚಾರ, ಕಮಿಷನ್ ದಂಧೆ, ವರ್ಗಾವಣೆ ದಂಧೆ ಎಲ್ಲವೂ ಮೊದಲಿನಂತೆ ಮುಂದುವರಿದಿದೆ. ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಸಿಗುತ್ತಿಲ್ಲ ಎಂದು ಶಾಸಕರು ದೂರುತ್ತಿದ್ದಾರೆ. ಹಾಗಿದ್ದರೆ ಸರ್ಕಾರದ ದುಡ್ಡು ಎಲ್ಲಿ ಹೋಯ್ತು? ಅಭಿವೃದ್ಧಿ ಕೆಲಸಗಳಿಗೆ ಮೀಸಲಿಟ್ಟ ದುಡ್ಡನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಿರುವುದು ಏಕೆ? ಅಧಿಕಾರ ಹಿಡಿಯಲೇ ಬೇಕು ಎಂಬ ದುರಾಸೆಗೆ ಅವೈಜ್ಞಾನಿಕವಾಗಿ, ಅಧ್ಯಾಯನ ನಡೆಸದೆ ಏಕಾಏಕಿ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ ರಾಜ್ಯದ ಹಿತಾಸಕ್ತಿಯನ್ನು ಬಲಿಕೊಟ್ಟಿರುವುದೇ ನಿಮ್ಮ ನೂರು ದಿನದ ಸಾಧನೆಯೇ? ಎಂದು ಕಿಡಿಕಾರಿದರು.

ಈ ನಡುವೆ ಬಿಜೆಪಿ ವಿರುದ್ಧವೂ ಹರಿಹಾಯ್ದ ಮೋಹನ್ ದಾಸರಿ, ನೂರು ದಿನಗಳು ಕಳೆದರು ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಪಕ್ಷದ ರಾಜ್ಯಾಧ್ಯಕ್ಷನನ್ನು ಆಯ್ಕೆ ಮಾಡಲಾಗಿಲ್ಲ. ರಾಜ್ಯದಲ್ಲಿv ಪ್ರತಿಪಕ್ಷವೇ ಇಲ್ಲದಂತಹ ಸ್ಥಿತಿ ನಿರ್ಮಾಣವಾಗಿದೆ. ಇದು ರಾಜ್ಯದ ದೌರ್ಭಾಗ್ಯವಾಗಿದೆ ಎಂದು ಎಎಪಿ ಉಪಾಧ್ಯಕ್ಷ ಮೋಹನ್‌ ದಾಸರಿ ಬೇಸರ ವ್ಯಕ್ತಪಡಿಸಿದರು.

Tags: Aam Admy Party‌AAPMoahan Dasariಆಮ್‌ ಆದ್ಮಿ ಪಕ್ಷಎಎಪಿಕಾಂಗ್ರೆಸ್‌ಕಾಂಗ್ರೆಸ್‌ ಗ್ಯಾರಂಟಿಗಳುಮೋಹನ್‌ ದಾಸರಿ
Previous Post

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ನಿರಂತರ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Next Post

ತಮಿಳುನಾಡು | ಮಹಿಳೆಯರು ನಡೆಸುವ ಚಾಕೋಲೇಟ್‌ ಫ್ಯಾಕ್ಟರಿಗೆ ರಾಹುಲ್‌ ಗಾಂಧಿ ಭೇಟಿ

Related Posts

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
0

ಜೂನಿಯರ್‌ ಚಿತ್ರದ ಡ್ಯಾನ್ಸಿಂಗ್‌ ನಂಬರ್..ಡಿಎಸ್‌ಪಿ ಮ್ಯೂಸಿಕ್‌ಗೆ ಕುಣಿದು ಕುಪ್ಪಳಿಸಿದ ಕಿರೀಟಿ-ಶ್ರೀಲೀಲಾ ಕಿರೀಟಿ ಚಿತ್ರರಂಗದಲ್ಲಿ ಛಾಪೂ ಮೂಡಿಸಲು ಸಜ್ಜಾಗಿದ್ದು, ಚೊಚ್ಚಲ ಚಿತ್ರ ಜೂನಿಯರ್‌ ಟೀಸರ್‌ ಈಗಾಗಲೇ ಭಾರೀ ಸದ್ದು...

Read moreDetails

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
Next Post
ರಾಹುಲ್‌ ಗಾಂಧಿ

ತಮಿಳುನಾಡು | ಮಹಿಳೆಯರು ನಡೆಸುವ ಚಾಕೋಲೇಟ್‌ ಫ್ಯಾಕ್ಟರಿಗೆ ರಾಹುಲ್‌ ಗಾಂಧಿ ಭೇಟಿ

Please login to join discussion

Recent News

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada