• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜಲಸೂರು ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಸಚಿವ ಚಲುವರಾಯಸ್ವಾಮಿ ಸೂಚನೆ

ಪ್ರತಿಧ್ವನಿ by ಪ್ರತಿಧ್ವನಿ
September 6, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸಚಿವ ಚಲುವರಾಯಸ್ವಾಮಿ

ಸಚಿವ ಚಲುವರಾಯಸ್ವಾಮಿ ಜಲಸೂರು ರಸ್ತೆ ಕಾಮಗಾರಿ ಪರಿಶೀಲಿಸಿದರು

Share on WhatsAppShare on FacebookShare on Telegram

ಮಾಗಡಿ -ಸೋಮವಾರಪೇಟೆ ಜಲಸೂರು ಹೆದ್ದಾರಿಯ ಮಂಡ್ಯ ಜಿಲ್ಲಾ ವ್ಯಾಪ್ತಿಯ ರಸ್ತೆ ಕಾಮಗಾರಿಯನ್ನು ಮುಂದಿನ 6 ತಿಂಗಳೊಳಗೆ ಪೂರ್ಣಗೊಳಿಸುವಂತೆ ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ ಬುಧವಾರ (ಸೆಪ್ಟೆಂಬರ್ 6) ಸೂಚನೆ ನೀಡಿದ್ದಾರೆ.

ADVERTISEMENT

ನಾಗಮಂಗಲ ಕ್ಷೇತ್ರದ ಕೌಡ್ಲೆ ಗೇಟ್ ನಿಂದ ,ನಾಗಮಂಗಲ ಬೋಗಾದಿ ಮಾರ್ಗವಾಗಿ ಕೆ.ಆರ್ ಪೇಟೆ ವರಗೆ ರಸ್ತೆ ಕಾಮಗಾರಿ ಪರಿಶೀಲಿಸಿದ ಸಚಿವರು ಕೆ.ಶಿಫ್ ಇಂಜಿನಿಯರ್ ಗಳಿಗೆ ಹಲವು ನಿರ್ದೇಶನಗಳನ್ನು ನೀಡಿದರು.

ಇದೇ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು

2018 ರಲ್ಲಿ ರಸ್ತೆ ಕಾಮಗಾರಿಗೆ ಅನುಮೋದನೆ ದೊರಕಿದ್ದು, 2020 ರಲ್ಲಿ ಕಾಮಗಾರಿ ಪ್ರಾರಂಭವಾಗಿರದೆ.3 ವರ್ಷಗಳಿಂದ ಯಾವುದೇ ರೀತಿಯ ಸಮಸ್ಯೆ ಇಲ್ಲದ ಪ್ರದೇಶದಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದರು.

ಸಚಿವ ಚಲುವರಾಸ್ವಾಮಿ
ಸಚಿವ ಚಲುವರಾಯಸ್ವಾಮಿ ಜಲಸೂರು ರಸ್ತೆ ಕಾಮಗಾರಿ ಪರಿಶೀಲಿಸಿದರು

ಕೋವಿಡ್ ಸಂದರ್ಭ, ಅಧಿಕಾರಿಗಳ ಬದಲಾವಣೆ, ಭೂ ಸ್ವಾಧೀನ, ಅರಣ್ಯ ಇಲಾಖೆಗೆ ಸೇರಿದ ಸ್ಥಳದಿಂದ ಕೆಲವು ಭಾಗಗಳಲ್ಲಿ ಕಾಮಗಾರಿ ಪೂರ್ಣಗೊಂಡಿಲ್ಲ. ಸಮಸ್ಯೆಗಳ ಬಗ್ಗೆ ಚರ್ಚಿಸಲು ಇಂದು ಪರಿಶೀಲನೆ ನಡೆಸಲಾಗುತ್ತಿದೆ ಎಂದರು.

ಮಂಡ್ಯ ಜಿಲ್ಲೆಯಲ್ಲಿ ಹೆದ್ದಾರಿ ಕಾಮಗಾರಿಗೆ 63 ಎಕರೆ ಅರಣ್ಯ ಭೂಮಿ ಬಳಕೆಯಾಗಲಿದ್ದು ಫಾರೆಸ್ಟ್ ಕ್ಲಿಯರೆನ್ಸ್ ಗಾಗಿ ಕೇಂದ್ರಕ್ಕೆ ಪ್ರಸ್ರಾವನೆ ಕಳಿಸಲಾಗಿದೆ ಈ ಜಮೀನಿನ ಬದಲಿಗೆ 126 ಎಕರೆ ಬದಲಿ ಸರ್ಕಾರಿ ಭೂಮಿಯನ್ನು ಅರಣ್ಯ ಇಲಾಖೆಗೆ ಬಿಟ್ಟು ಕೊಡಲು ಈ ಗಾಗಲೇ ಜಾಗ ಗುರುತಿಸಲಾಗಿದೆ.ಕೇಂದ್ರದ ಅನುಮೋದನೆ ಬಾಕಿ ಇದೆ.

ಇದಲ್ಲದೆ ಜಿಲ್ಲೆಯ 8 ಕಡೆ ತಾಂತ್ರಿಕ ಸಮಸ್ಯೆ ಗಳಿಂದ ಕೆಲಸ ವಿಳಂಬವಾಗಿದ್ದು ಆದಷ್ಟು ಶೀಘ್ರ ಬಗೆಹರಿಯಲಿದೆ ಎಂದು ಚಲುವರಾಯಸ್ವಾಮಿ ಹೇಳಿದರು.

ನಾಗಮಂಗಲ ಬಳಿ ಜವಳಿ ಪಾರ್ಕ್ ಗೆ 6 ಎಕರೆ ಹಾಗೂ ಗಾರ್ಮೆಂಟ್ಸ್ ಉದ್ದಿಮೆಗೆ 4 ಎಕರೆ ಜಾಗ ಗುರುತಿಸಲು ಸೂಚಿಸಲಾಗಿದೆ ಈ ಗಾಗಲೇ ಅಧಿಕಾರಿಗಳು ಕ್ರಮವಹಿಸಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು

ಮಾರ್ಗದುದ್ದಕ್ಕೂ ಆತ್ಮೀಯ ಸ್ವಾಗತ;ಎಲ್ಲರ ಅಹವಾಲು ಆಲಿಸಿದ ಸಚಿವರು:

ಹೆದ್ದಾರಿ ಕಾಮಗಾರಿ ಪರಿಶೀಲನೆಗೆ ಕೌಡ್ಲೆ ಗೇಟ್ ನಿಂದ ಕೆ.ಅರ್ ಪೇಟೆ ವರಗೆ ಅಗಮಿಸಿದ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.ಪ್ರತಿ ಗ್ರಾಮದಲ್ಲೂ ಸಾರ್ವಜನಿಕರು ಗುಂಪು ಗುಂಪಾಗಿ ಸಚಿವರನ್ನು ಬರಮಾಡಿಕೊಂಡು ಹರ್ಷ ವ್ಯಕ್ತಪಡಿಸಿದರು ಜೊತೆಗೆ ತಮ್ಮೂರ ಅಹವಾಲುಗಳನ್ನು ಹಿಳಿಕೊಂಡರು.

ಎಲ್ಲರ ಸಮಸ್ಯೆಗಳನ್ನು ಸಮಾದಾನದಿಂದ ಆಲಿಸಿದ ಸಚಿವರು ಸಾಧ್ಯವಾದಷ್ಟು ಪ್ರಕರಣಗಳನ್ನು ಸ್ಥಳದಲ್ಲೇ ಅಧಿಕಾರಿಗಳಿಗೆ ಸೂಚನೆ ನೀಡಿ ಬಗೆಹರಿಸಿದರು

, ರಸ್ತೆಗೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲಾ ವ್ಯಾಪ್ತಿಯ ಸಮಸ್ಯೆಗಳಿದ್ದಲ್ಲಿ ಜಿಲ್ಲಾಧಿಕಾರಿಗಳ ಹಂತದಲ್ಲಿ ಸಭೆ ನಡೆಸಿ ಪರಿಹರಿಸಲಾಗುವುದು ಎಂದು ಸಚಿವರು ಹೇಳಿದರು.

ಪರಿಶೀಲನೆ ವೇಳೆ ಜಿಲ್ಲಾಧಿಕಾರಿ ಡಾ. ಕುಮಾರ, ಉಪವಿಭಾಗಾಧಿಕಾರಿ ನಂದೀಶ್, ಕೆ.ಶಿಪ್ ಚೀಫ್ ಇಂಜಿನಿಯರ್ ಶಿವಕುಮಾರ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Tags: JalsurMinister ChaluvarayaswamyRoad Workಜಲಸೂರುರಸ್ತೆ ಕಾಮಗಾರಿಸಚಿವ ಚಲವರಾಯಸ್ವಾಮಿ
Previous Post

ನಾನು ಧರ್ಮದ ಕುರಿತು ವಿವಾದಾತ್ಮಕ ಹೇಳಿಕೆ ಕೊಟ್ಟಿಲ್ಲ, ರಾಜಕೀಯವಾಗಿ ವಿಚಾರ ತಿರುಚುತ್ತಿದ್ದಾರೆ; ಸಚಿವ ಪರಮೇಶ್ವರ್‌ ಸ್ಪಷ್ಟನೆ .!

Next Post

ಆ ಮ್ಯಾನೇಜರ್ ಒಬ್ಬನಿಂದಲೇ ನನಗೆ ದೊಡ್ಡ ಸಿನಿಮಾಗಳು ಕೈ ತಪ್ಪಿದ್ದವು : ಗದರ್‌-2 ಚಿತ್ರದ ನಾಯಕಿ ಅಮೀಷಾ ಪಟೇಲ್‌

Related Posts

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ
Top Story

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

by ಪ್ರತಿಧ್ವನಿ
April 10, 2026
0

ಐಟಿ ದಾಳಿ ನಡೆಯುತ್ತಿರುವ ಸಂದರ್ಭದಲ್ಲೇ ಆತ್ಮಹತ್ಯೆಗೆ ಶರಣಾಗಿ ಭಾರೀ ಚರ್ಚೆಗೆ ಕಾರಣವಾಗಿದ್ದ ಕಾನ್ಫಿಡೆಂಟ್ ಗ್ರೂಪ್ ಸಂಸ್ಥೆಯ ಮುಖ್ಯಸ್ಥ ಸಿಜೆ ರಾಯ್ ಪ್ರಕರಣದ ತನಿಖೆ ಇದೀಗ ಅಂತಿಮ ಹಂತ...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post
ಆ ಮ್ಯಾನೇಜರ್ ಒಬ್ಬನಿಂದಲೇ ನನಗೆ ದೊಡ್ಡ ಸಿನಿಮಾಗಳು ಕೈ ತಪ್ಪಿದ್ದವು : ಗದರ್‌-2 ಚಿತ್ರದ ನಾಯಕಿ ಅಮೀಷಾ ಪಟೇಲ್‌

ಆ ಮ್ಯಾನೇಜರ್ ಒಬ್ಬನಿಂದಲೇ ನನಗೆ ದೊಡ್ಡ ಸಿನಿಮಾಗಳು ಕೈ ತಪ್ಪಿದ್ದವು : ಗದರ್‌-2 ಚಿತ್ರದ ನಾಯಕಿ ಅಮೀಷಾ ಪಟೇಲ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada