• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ “ಕಾಟೇರ” ಚಿತ್ರದ ಬಹುತೇಕ ಚಿತ್ರೀಕರಣ ಮುಕ್ತಾಯ

ಪ್ರತಿಧ್ವನಿ by ಪ್ರತಿಧ್ವನಿ
September 13, 2023
in ಸಿನಿಮಾ
0
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ “ಕಾಟೇರ” ಚಿತ್ರದ ಬಹುತೇಕ ಚಿತ್ರೀಕರಣ ಮುಕ್ತಾಯ
Share on WhatsAppShare on FacebookShare on Telegram

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಜನಪ್ರಿಯ ಚಿತ್ರಗಳನ್ನು ನೀಡಿರುವ ಖ್ಯಾತ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ನಿರ್ಮಾಣದ, ತರುಣ್ ಸುಧೀರ್ ನಿರ್ದೇಶನದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸುತ್ತಿರುವ “ಕಾಟೇರ” ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಯನ್ನು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ನೀಡಿದರು.

ADVERTISEMENT

ನಮ್ಮ ಸಂಸ್ಥೆಯ ನಿರ್ಮಾಣದ “ಕಾಟೇರ” ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಈ ತನಕ ನೂರು ದಿನಗಳ ಚಿತ್ರೀಕರಣವಾಗಿದೆ. ಮೂರು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ಇದು ಎಪ್ಪತ್ತರ ದಶಕದಲ್ಲಿ ನಡೆಯುವ ಕಥೆಯಾಗಿದೆ. ಹಾಗಾಗಿ ಈ ಸ್ಥಳದಲ್ಲಿ ಹಳ್ಳಿಯ ಸೆಟ್ ಹಾಕಿ ಚಿತ್ರೀಕರಣ ಮಾಡಿದ್ದೇವೆ. ಇನ್ನು ಕೆಲವೇ ದಿನಗಳಲ್ಲಿ ಚಿತ್ರೀಕರಣ ಮುಕ್ತಾಯವಾಗಲಿದೆ. ತರುಣ್ ಅವರು ಹೇಳಿದ ಕಥೆ ಬಹಳ ಇಷ್ಟವಾಯಿತು. ದರ್ಶನ್ ಅವರು ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದು, ನಾಯಕಿಯಾಗಿ ಮೊದಲ ಬಾರಿಗೆ ಮಾಲಾಶ್ರೀ ಅವರ ಮಗಳು ಆರಾಧನಾ ಅಭಿನಯಿಸುತ್ತಿದ್ದಾರೆ. ಜನಪ್ರಿಯ ಕಲಾವಿದರ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ. ವಿ.ಹರಿಕೃಷ್ಣ ಸಂಗೀತ ನೀಡುತ್ತಿದ್ದಾರೆ.
ಚಿತ್ರ ಉತ್ತಮವಾಗಿ ಮೂಡಿಬರಲು ಸಹಕಾರ ನೀಡುತ್ತಿರುವ ಇಡೀ ತಂಡಕ್ಕೆ ಧನ್ಯವಾದ ಎಂದರು ನಿರ್ಮಾಪಕ ರಾಕ್ ಲೈನ್ ವೆಂಕಟೇಶ್.

“ಗುರು ಶಿಷ್ಯರು” ಚಿತ್ರದ ನಂತರ ನಾನು ಹಾಗೂ ಜಡೇಶ್ ಅವರು ಸೇರಿ ಈ ಚಿತ್ರದ ಕಥೆ ಬರೆದ್ದೆವು. ದರ್ಶನ್ ಅವರಿಗಾಗಿಯೇ ಬರೆದ ಕಥೆಯಿದು ಎಂದು ಮಾತು ಆರಂಭಿಸಿದ ನಿರ್ದೇಶಕ ತರುಣ್ ಸುಧೀರ್, ಆನಂತರ ದರ್ಶನ್ ಅವರು ರಾಕ್ ಲೈನ್ ವೆಂಕಟೇಶ್ ಅವರಿಗೆ ಈ ಕಥೆ ಹೇಳಿ ಎಂದರು. ರಾಕ್ ಲೈನ್ ಸರ್ ಕಥೆ ಮೆಚ್ಚಿಕೊಂಡು ಚಿತ್ರವನ್ನು ಪ್ರಾರಂಭಿಸಿದರು. ಹಿರಿಯ ನಟಿ ಮಾಲಾಶ್ರೀ ಅವರ ಮಗಳು ಆರಾಧನಾ ಈ ಚಿತ್ರದ ನಾಯಕಿ ಎಂದು ನಿರ್ಮಾಪಕರು, ದರ್ಶನ್ ಅವರು ಹಾಗೂ ನಾನು ಸೇರಿ ಆಯ್ಕೆ ಮಾಡಿದ್ದೆವು. ಆರಾಧನಾ ಅದ್ಭುತ ನಟಿ. ಬಹುತೇಕ ಎಲ್ಲಾ ಸನ್ನಿವೇಶಗಳನ್ನು ಒಂದೇ ಟೇಕ್ ನಲ್ಲಿ ಮುಗಿಸಿದ್ದಾರೆ. ಈ ಚಿತ್ರ 1970ರ ಕಾಲಘಟ್ಟದಲ್ಲಿ ನಡೆಯುವ ಕಥೆಯಾಗಿದ್ದು , ಕನಕಪುರ ರಸ್ತೆಯಲ್ಲಿ ಅದ್ದೂರಿ ಹಳ್ಳಿ ಸೆಟ್ ಹಾಕಲಾಗಿದೆ‌. ನೂರು ದಿನಗಳ ಚಿತ್ರೀಕರಣ ಪೂರ್ಣವಾಗಿದೆ. ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ ಎಂದರು.

ನೂರು ದಿನಗಳ ಚಿತ್ರೀಕರಣದಲ್ಲಿ ನಾನು, ಎಪ್ಪತ್ತೊಂದು ದಿನಗಳ ಕಾಲ ಚಿತ್ರೀಕರಣದಲ್ಲಿ ಭಾಗಿಯಾಗಿದ್ದೇನೆ. ರಾಕ್ ಲೈನ್ ವೆಂಕಟೇಶ್ ಅವರು ಅದ್ದೂರಿಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ‌. ತರುಣ್ ಹಾಗೂ ಜಡೇಶ್ ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ. ಈ ಚಿತ್ರದಲ್ಲಿ ಮಾಲಾಶ್ರೀ ಅವರ ಮಗಳು ಆರಾಧನಾ ನಾಯಕಿಯಾಗಿ ನಟಿಸಿದ್ದಾರೆ. ಎಂತಹ ಸನ್ನಿವೇಶಗಳನ್ನು ಒಂದೇ ಟೇಕ್ ನಲ್ಲಿ ಅಭಿನಯಿಸುವ ಕಲಾವಿದೆ ಅವರು.
ಹಿರಿಯ ನಟರಾದ ಅವಿನಾಶ್, ಜಗಪತಿ ಬಾಬು, ವಿನೋದ್ ಆಳ್ವ, ಕುಮಾರ್ ಗೋವಿಂದ್ ಅವರ ಜೊತೆ ನಟಿಸಿದ್ದು ಖುಷಿಯಾಗಿದೆ. ಸುಧಾಕರ್ ಅವರ ಛಾಯಾಗ್ರಹಣ ಅದ್ಭುತವಾಗಿದ್ದು, ಈ ಚಿತ್ರದ ಛಾಯಾಗ್ರಹಣಕ್ಕಾಗಿ ಅವರಿಗೆ ಪ್ರಶಸ್ತಿ ಬರಬಹುದು ಎಂಬುದು ನನ್ನ ಅನಿಸಿಕೆ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ತಿಳಿಸಿದರು‌.

ಇದು ನನ್ನ ಮೊದಲ ಚಿತ್ರ. ಪಾತ್ರ ಚೆನ್ನಾಗಿದೆ. ಅವಕಾಶ ನೀಡಿದ ರಾಕ್ ಲೈನ್ ವೆಂಕಟೇಶ್, ತರುಣ್ ಸುಧೀರ್ ಹಾಗೂ ದರ್ಶನ್ ಅವರಿಗೆ ನನ್ನ ಧನ್ಯವಾದ ಎನ್ನುತ್ತಾರೆ ನಾಯಕಿ ಆರಾಧನಾ.

ಹಿರಿಯ ನಟರಾದ ಅವಿನಾಶ್, ಕುಮಾರ್ ಗೋವಿಂದ್, ವಿನೋದ್ ಆಳ್ವಾ, ಛಾಯಾಗ್ರಾಹಕ ಸುಧಾಕರ್, ತರುಣ್ ಸುಧೀರ್ ಅವರೊಂದಿಗೆ ಕಥೆ, ಚಿತ್ರಕಥೆ ಬರೆದಿರುವ ಜಡೇಶ್, ಸಂಭಾಷಣೆ ಬರೆದಿರುವ ಮಾಸ್ತಿ ಮುಂತಾದವರು ಚಿತ್ರದ ಕುರಿತು ಮಾತನಾಡಿದರು. ಹಿರಿಯ ನಟಿ ಮಾಲಾಶ್ರೀ ಚಿತ್ರತಂಡಕ್ಕೆ ಶುಭ ಕೋರಿದರು.

Tags: DarshanJagapati BabKannada Film IndustryKatera MovieKFIKumar GovindRadhana Ramsandalwood
Previous Post

ಕರಾವಳಿಯಲ್ಲಿ ವ್ಯಾಪಾರ ದಂಗಲ್: ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘ ಉದ್ಘಾಟಿಸಿದ ಕಟೀಲ್

Next Post

ಮಂಗಳೂರು | ಭಾರೀ ಪ್ರಮಾಣದ ಚಿನ್ನ ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು

Related Posts

ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ
Top Story

ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ

by ಪ್ರತಿಧ್ವನಿ
December 14, 2025
0

ದರ್ಶನ್‌ ನಟನೆಯ ಬಹುನಿರೀಕ್ಷಿತ ಸಿನಿಮಾ  ಡೆವಿಲ್‌  ಯಶಸ್ಸಿನ ಬೆನ್ನಲ್ಲೇ ವಿಜಯಲಕ್ಷ್ಮಿ ದರ್ಶನ್( Vijayalakshmi  Darshan) ಅಭಿಮಾನಿಗಳ ಡಿ ಕಂಪನಿ ಯೂಟ್ಯೂಬ್ ಚಾನೆಲ್​​ಗೆ ಸಂದರ್ಶನ ನೀಡಿದ್ದಾರೆ. ಈ ಸಂದರ್ಶನದಲ್ಲಿ...

Read moreDetails
ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’

ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’

December 13, 2025
BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ

BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ

December 13, 2025
ದರ್ಶನ್ ಸ್ಕ್ರೀನ್‌ ಮೇಲೆ ಬರ್ತಿದ್ದಂತೆ ಏನಾಯ್ತು?  ಭಾವುಕ ಪೋಸ್ಟ್‌ ಹಂಚಿಕೊಂಡ ವಿಜಯಲಕ್ಷ್ಮಿ

ದರ್ಶನ್ ಸ್ಕ್ರೀನ್‌ ಮೇಲೆ ಬರ್ತಿದ್ದಂತೆ ಏನಾಯ್ತು? ಭಾವುಕ ಪೋಸ್ಟ್‌ ಹಂಚಿಕೊಂಡ ವಿಜಯಲಕ್ಷ್ಮಿ

December 12, 2025
BBK 12: ವಿಲನ್‌ ಕೊಟ್ಟ ವಿಚಿತ್ರ ಟಾಸ್ಕ್‌ ಸ್ವೀಕರಿಸಿದ ಮಾಳು..!

BBK 12: ವಿಲನ್‌ ಕೊಟ್ಟ ವಿಚಿತ್ರ ಟಾಸ್ಕ್‌ ಸ್ವೀಕರಿಸಿದ ಮಾಳು..!

December 12, 2025
Next Post
ಮಂಗಳೂರು | ಭಾರೀ ಪ್ರಮಾಣದ ಚಿನ್ನ ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು

ಮಂಗಳೂರು | ಭಾರೀ ಪ್ರಮಾಣದ ಚಿನ್ನ ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು

Please login to join discussion

Recent News

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?
Top Story

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?

by ಪ್ರತಿಧ್ವನಿ
December 14, 2025
ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್
Top Story

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 14, 2025
ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ
Top Story

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

by ಪ್ರತಿಧ್ವನಿ
December 14, 2025
ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ
Top Story

ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ

by ಪ್ರತಿಧ್ವನಿ
December 14, 2025
Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!
Top Story

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

by ಪ್ರತಿಧ್ವನಿ
December 14, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?

December 14, 2025
ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

December 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada