• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಾನು ನಾನೇ-ನಾನು ದೇವರಾಜ ಅರಸು ಆಗಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
September 17, 2023
in Top Story, ಇತರೆ / Others, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ನಾನು ನಾನೇ-ನಾನು ದೇವರಾಜ ಅರಸು ಆಗಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ಬೆಂಗಳೂರು ಸೆ 17: ನನ್ನನ್ನು ಎಲ್ಲರೂ ಎರಡನೇ ದೇವರಾಜ ಅರಸು ಅಂತಾರೆ. ಆದರೆ, ದೇವರಾಜ ಅರಸು ದೇವರಾಜ ಅರಸುನೇ ಸಿದ್ದರಾಮಯ್ಯ ಸಿದ್ದರಾಮಯ್ಯನೇ. ನಾನು ದೇವರಾಜ ಅರಸು ಆಗಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ADVERTISEMENT

ಕೆಲವರು ನನ್ನನ್ನು ಎರಡನೇ ದೇವರಾಜು ಅರಸು ಅಂತಾರೆ. ಅದು ಸಾಧ್ಯವಿಲ್ಲ. ನಾನು ಅರಸು ಆಗಲು ಸಾಧ್ಯವಿಲ್ಲ. ಅರಸು, ಇಂದಿರಾಗಾಂಧಿ, ನೆಹರೂ ಎಲ್ಲರೂ ಭಿನ್ನವಾಗಿದ್ದರು. ಆದರೆ ಇವರೆಲ್ಲರ ಸಾಮಾಜಿಕ ಕೊಡುಗೆಗಳು ಅಪಾರ. ಯಾರ ಕೊಡುಗೆಗಳನ್ನೂ ಅಲ್ಲಗಳೆಯಲಾಗದು. ಒಬ್ಬರು ಇನ್ನೊಬ್ಬರಾಗಲು ಸಾಧ್ಯವಿಲ್ಲ. ಹಾಗೆಯೇ ನಾನು ದೇವರಾಜ ಅರಸು ಆಗಲು ಸಾಧ್ಯವಿಲ್ಲ. ನಾವು ರೂಪಿಸುವ ಕಾಳಜಿ ಮತ್ತು ಕಾರ್ಯಕ್ರಮಗಳಲ್ಲಿ ಸಾಮಾಜಿಕ ನ್ಯಾಯ ಇರುತ್ತದೆ. ಎಲ್ಲಾ ಹಿಂದುಳಿದ ಜಾತಿ, ಸಮುದಾಯಗಳು ಸಮಾನ ಅವಕಾಶಗಳನ್ನು ಪಡೆದುಕೊಂಡು ಮುಂದುವರೆದಾಗ ಮಾತ್ರ ಇಡೀ ಸಮಾಜ ಮುಂದುವರೆಯುತ್ತದೆ. ಕೆಲವೇ ಜಾತಿ-ಸಮುದಾಯಗಳು ಅವಕಾಶಗಳನ್ನು ಪಡೆದುಕೊಂಡು ಉಳಿದವುಗಳು ಅವಕಾಶ ವಂಚಿತರಾಗುತ್ತಿದ್ದರೆ ಅದನ್ನು ಪ್ರಗತಿ ಪಥದಲ್ಲಿರುವ ಸಮಾಜ ಎಂದು ಕರೆಯಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.

ಬಿಂಬಾರಾಯ್ಕರ್, ರಘು ಆಚಾರ್ಯ ಸೇರಿ ವಿಶ್ವಕರ್ಮ ಸಮುದಾಯದ ಹಲವರಿಗೆ ರಾಜಕೀಯ ಪ್ರಾತಿನಿಧ್ಯ ಮತ್ತು ಅಧಿಕಾರವನ್ನು ಒದಗಿಸಿಕೊಟ್ಟಿದೆ. ರಘು ಆಚಾರ್ಯ ದುಡುಕಿ ನಮ್ಮನ್ನೆಲ್ಲಾ ಬಿಟ್ಟು ಕಾಂಗ್ರೆಸ್ ತೊರೆದರು. ನಾನು ಎಷ್ಟು ಹೇಳಿದರೂ ಕೇಳಲಿಲ್ಲ ಎಂದರು.

ಕಾಂಗ್ರೆಸ್ ಪ್ರತಿಯೊಂದು ಜಾತಿ, ಸಮುದಾಯಗಳಿಗೂ ಅವಕಾಶ ಮತ್ತು ಅಧಿಕಾರವನ್ನು ನಿರಂತರವಾಗಿ ಒದಗಿಸುತ್ತಲೇ ಬಂದಿದೆ. ಆ ಮೂಲಕ ಹಿಂದುಳಿದ ಸಮುದಾಯಗಳಿಗೆ, ದಲಿತ ಸಮುದಾಯಗಳಿಗೂ ಶಕ್ತಿ ತುಂಬುತ್ತಿದೆ. ಒಂದು ಕೋಟಿ ರೂಪಾಯಿವರೆಗಿನ ಕಾಂಟ್ರಾಕ್ಟ್ ಕೆಲಸಗಳಿಗೆ ಮೀಸಲಾತಿ ಒದಗಿಸಿದ್ದು ನಾವೆ ತಾನೇ ಎಂದು ನೆನಪಿಸಿದ ಮುಖ್ಯಮಂತ್ರಿಗಳು ನನಗೆ ಅಧಿಕಾರ ಎನ್ನುವುದು ಸಾಮಾಜಿಕ ನ್ಯಾಯವನ್ನು ಆಚರಿಸುವ, ಪಾಲಿಸುವ ಒಂದು ಸಾಧನ ಎಂದು ವಿವರಿಸಿದರು.

ವಿಶ್ವಕರ್ಮ ಸಮುದಾಯದ ಮಕ್ಕಳಿಗೆ ಶಾಲೆ, ಹಾಸ್ಟೆಲ್ ಗಳನ್ನು ನಿರ್ಮಿಸುವ ಕಾರಣಕ್ಕೆ ಸರ್ಕಾರದಿಂದ ಜಾಗ ಕೇಳಿದ್ದೀರಿ. ಎಲ್ಲಾ ಸಮುದಾಯಗಳೂ ಜಾಗ ಪಡೆದುಕೊಂಡಿವೆ. ನೀವೂ ಪಡೆದುಕೊಳ್ಳಿ. ನಮ್ಮ ಸರ್ಕಾರ ನಿಮಗೂ ಜಾಗ ಒದಗಿಸುತ್ತದೆ ಮಕ್ಕಳನ್ನು ಹೆಚ್ಚೆಚ್ಚು ಶಿಕ್ಷಿತರನ್ನಾಗಿ ಮಾಡಿ ಎಂದು ಹಾರೈಸಿದರು.

ವಿಶ್ವಕರ್ಮ ನಿಗಮಕ್ಕೆ ಮೊದಲಿನಿಂದಲೂ ಹೆಚ್ಚು ಅನುದಾನ ಕೊಡುತ್ತಾ ಬಂದಿರುವವರು ನಾವೇ. ಈಗ ಇನ್ನಷ್ಟು ಹೆಚ್ಚಿಸಬೇಕು ಎನ್ನುವ ಬೇಡಿಕೆ ಇದೆ. ಆ ಬಗ್ಗೆ ಪರಿಶೀಲಿಸಲಾಗುವುದು. ಚುನಾವಣೆ ಬಂದಾಗ ಭಾಷಣಗಳಲ್ಲಿ ಕಾಳಜಿಗಳು ಕೇಳಿಸುತ್ತವೆ. ಆದರೆ, ಯಾರಿಗೆ-ಯಾವ ಪಕ್ಷಕ್ಕೆ ನಿಜವಾದ ಬದ್ಧತೆ ಇದೆ ಎನ್ನುವುದನ್ನು ಗುರುತಿಸಿ ತೀರ್ಮಾನ ತೆಗೆದುಕೊಳ್ಳಿ. ಕಾಳಜಿ, ಬದ್ಧತೆ ಇಲ್ಲದವರ ಕೈಗೆ ಅಧಿಕಾರ ಕೊಟ್ಟು ಸಮಾಜಕ್ಕೆ ಒಳ್ಳೆಯದು ಆಗಬೇಕು ಎಂದು ತಲೆ ಚಚ್ಚಿಕೊಂಡರೆ ಸಾಧ್ಯವಿಲ್ಲದ ಮಾತು. ಆದ್ದರಿಂದ ಸಾಮಾಜಿಕ ನ್ಯಾಯವನ್ನು ಯಾರು, ಯಾವ ಪಕ್ಷದವರು ಪಾಲಿಸುತ್ತಿದ್ದಾರೆ ಎನ್ನುವುದನ್ನು ಪ್ರಾಮಾಣಿಕವಾಗಿ ಗ್ರಹಿಸಿ ಎಂದು ಕರೆ ನೀಡಿದರು.

ಮಧುಗಿರಿ ನಿಟ್ಟರಹಳ್ಳಿ ಅಭಯಹಸ್ತೆ ಆದಿಲಕ್ಷ್ಮಿ ಸಂಸ್ಥಾನ ಮತ್ತು ವಿಶ್ವಕರ್ಮ ಸಂಪನ್ಮೂಲ ಮಠದ ಶ್ರೀ ಶ್ರೀ ಶ್ರೀ ಡಾ.ನೀಲಕಂಠಚಾರ್ಯ ಮಹಾಸ್ವಾಮಿಗಳ ದಿವ್ಯಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮುದಾಯದ ಮುಖಂಡರು ಮತ್ತು ಇಲಾಖೆಯ ಅಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Tags: BJPBK HariprasadcmsiddaramiahCongress PartyDKShivakumar
Previous Post

“ಸೈಮಾ”ದಲ್ಲೂ “ಕಾಂತಾರ”ದ ಕಲರವ , ಪ್ರಶಸ್ತಿಗಳ ಸುರಿಮಳೆ

Next Post

ಉಳ್ಳಾಲದಲ್ಲಿ ನಿಷೇಧಿತ ಮಾದಕ ವಸ್ತು ಮಾರಾಟ- ಇಬ್ಬರ ಬಂಧನ..!

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
Next Post
ಉಳ್ಳಾಲದಲ್ಲಿ ನಿಷೇಧಿತ ಮಾದಕ ವಸ್ತು ಮಾರಾಟ- ಇಬ್ಬರ ಬಂಧನ..!

ಉಳ್ಳಾಲದಲ್ಲಿ ನಿಷೇಧಿತ ಮಾದಕ ವಸ್ತು ಮಾರಾಟ- ಇಬ್ಬರ ಬಂಧನ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada