• Home
  • About Us
  • ಕರ್ನಾಟಕ
Sunday, July 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಬೆಂಗಳೂರಿನಲ್ಲಿರುವ ತಮಿಳರನ್ನ ಬೇಗ ವಾಪಸ್ ಕರೆಸಿಕೊಳ್ಳಿ: ಸ್ಟಾಲಿನ್​ಗೆ ವಾಟಾಳ್ ನಾಗರಾಜ್ ಸವಾಲು..!

Any Mind by Any Mind
September 21, 2023
in ಇದೀಗ, ಕರ್ನಾಟಕ
0
ಬೆಂಗಳೂರಿನಲ್ಲಿರುವ ತಮಿಳರನ್ನ ಬೇಗ  ವಾಪಸ್ ಕರೆಸಿಕೊಳ್ಳಿ: ಸ್ಟಾಲಿನ್​ಗೆ ವಾಟಾಳ್ ನಾಗರಾಜ್ ಸವಾಲು..!
Share on WhatsAppShare on FacebookShare on Telegram

ADVERTISEMENT

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು (Cauvery Water) ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದ ವಿಚಾರವಾಗಿ ಪ್ರತಿಕ್ರಿಯಿಸಿದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ (Vatal Nagaraj), ಬೆಂಗಳೂರಿನಲ್ಲಿ ತಮಿಳರು ಇದ್ದಾರೆ. ಅವರನ್ನು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಹೊಸೂರು ಮೂಲಕ ಕರೆಸಿಕೊಳ್ಳಲಿ ಎಂದು ಆಗ್ರಹಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ತಮಿಳು ಚಿತ್ರ ಬಂದ್ ಮಾಡುತ್ತೇವೆ. ರಜನಿಕಾಂತ್ ಬೆಂಗಳೂರಿಗೆ ಬರಬಾರದು. ಕಾವೇರಿ ವಿಚಾರದಲ್ಲಿ ರಜನಿಕಾಂತ್‌ ಏನು ನಿರ್ಧಾರ ಮಾಡ್ತಾರೋ ಮಾಡಲಿ. ಕರ್ನಾಟಕದ ಪರ ನಿಲ್ತಾರಾ, ಅಲ್ಲ ತಮಿಳುನಾಡು ಪರ ನಿಲ್ತಾರಾ ಎಂದು ಪ್ರಶ್ನಿಸಿದ್ದಾರೆ.

ಕರ್ನಾಟಕ ದಿಕ್ಕಿಲ್ಲದಂತೆ ಆಗಿದೆ. ಮುಖ್ಯಮಂತ್ರಿ ಏನು ನಿರ್ಧಾರ ಮಾಡ್ತಾರೆ ನೋಡೋಣ. ರಾಜ್ಯದ ಎಲ್ಲಾ ಸಂಸದರು ರಾಜೀನಾಮೆ ಕೊಟ್ಟು ನಿಮ್ಮ ಧೈರ್ಯ ತೋರಿಸಿ ಎಂದು ವಾಟಾಳ್ ಆಗ್ರಹಿಸಿದ್ದಾರೆ.

ಇನ್ನೆರಡು ದಿನಗಳಲ್ಲಿ ಕನ್ನಡಪರ ಸಂಘಟನೆಗಳು ಚರ್ಚೆ ಮಾಡುತ್ತೇವೆ. ನಂತರ ಹೋರಾಟಕ್ಕೆ ನಿರ್ಧರಿಸುತ್ತೇವೆ. ಕಾವೇರಿ ನೀರು ಬಿಡಲೇಬೇಕಂದ್ರೆ ಬಂದ್ ಮಾಡಲು ಸಿದ್ಧರಿದ್ದೇವೆ. ನಟರು ಬರುತ್ತೇವೆಂದು ಹೇಳಿದ್ದಾರೆ, ನೋಡೋಣ ಯಾವ ರೀತಿ ಬರುತ್ತಾರೆಂದು. ನಮ್ಮ ಕನ್ನಡ ನಟರು ಎಲ್ಲೆಲ್ಲೋ ಇದ್ದಾರೆ, ಎಲ್ಲರೂ ಇಳಿದು ಕೆಳಗೆ ಬರಲಿ. ನಾಡಿನ ಪರ, ಕನ್ನಡ ಪರ, ರೈತರ ಪರ ಸ್ಯಾಂಡಲ್‌ವುಡ್‌ ನಟರು ಬರಲಿ. ಬರದಿದ್ದರೆ ಏನು ಮಾಡಬೇಕೋ ಮಾಡೋಣ. ಶಾಸಕರು ಮುದ್ದು ಮುದ್ದಾಗಿ ಮಾತಾಡಲು ವಿಧಾನಸೌಧಕ್ಕೆ ಬರುತ್ತಾರೆ. ಅವರೆಲ್ಲಾ ಯಾವ ತೀರ್ಮಾನ ಕೈಗೊಳ್ಳುತ್ತಾರೆಂದು ನೋಡೋಣ ಎಂದು ನಾಗರಾಜ್ ಹೇಳಿದ್ದಾರೆ.

ಕಾವೇರಿ ಹೋರಾಟ ಅಂದ್ರೆ ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆ, ಕನ್ನಡಪರ ಸಂಘಟನೆಗಳು, ರೈತರು ಇಷ್ಟಕ್ಕೇ ಸೀಮಿತ ಆಗಬಾರದು. ಕಾವೇರಿ ಹೋರಾಟ ಅಂದ್ರೆ ರಾಜ್ಯದ ಎಲ್ಲಾ ರೈತರು, ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕ, ಮಂಗಳೂರು ಹಾಗೂ ಬೆಂಗಳೂರಿನ ಪ್ರಶ್ನೆಯಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಉತ್ತರ ಕರ್ನಾಟಕದ ಭಾಗದವರು ಕಾವೇರಿ ನದಿ ನಮ್ಮದಲ್ಲ ಅಂತಾರೆ. ಮಂಗಳೂರಿನವರು ಸಮುದ್ರ ಪಕ್ಕದವರು, ನಮಗಲ್ಲ ಅಂತಾರೆ. ಮಂಡ್ಯ, ಚಾಮರಾಜನಗರ, ಕನ್ನಡಪರ ಸಂಘಟನೆಗಳಿಂದ ಮಾತ್ರ ಹೋರಾಟ ನಡೆಯುತ್ತಿದೆ. ಕಾವೇರಿ ಹೋರಾಟದಲ್ಲಿ ಬೆಂಗಳೂರಿನವರು ಬಹಳ ಮಂದಗತಿಯಲ್ಲಿದ್ದಾರೆ‌. ಮೊದಲು ಬೆಂಗಳೂರು ನಗರದಲ್ಲಿ ಶುರುವಾಗಿದ್ದು ತಮಿಳರ ದರ್ಬಾರು. ಬಳಿಕ ಮಾರ್ವಾಡಿ, ಸಿಂಧಿಗಳು, ವಿದೇಶದಿಂದ ಬಂದವರದ್ದು ದರ್ಬಾರು. ಇವರು ಯಾರಿಗೂ ಕನ್ನಡಿಗರ ಪರಿಸ್ಥಿತಿ ಅರ್ಥ ಆಗುತ್ತಿಲ್ಲ. ಬೆಂಗಳೂರಿಗೆ ಬರುವ ನೀರು ಒಂದು ದಿನ ಬರದಿದ್ರೆ ಕಷ್ಟ ಗೊತ್ತಾಗುತ್ತದೆ. ಬೆಂಗಳೂರಿನ ಜನರಿಗೆ ಕಾವೇರಿ ನೀರು ಬೇಕಾ? ಬೇಡವಾ? ಕಾವೇರಿ ನೀರು ಬೇಡ ಅನ್ನುವವರು ಸರ್ಕಾರಕ್ಕೆ ಪ್ರಮಾಣ ಪತ್ರ ಕೊಡಲಿ ಎಂದು ಅವರು ಆಗ್ರಹಿಸಿದ್ದಾರೆ.

ಸುಪ್ರೀಂಕೋರ್ಟ್‌ನಲ್ಲಿ ಸ್ಟಾಲಿನ್‌ಗೆ ಗೆಲುವಾಗಿದೆ. ನಮ್ಮ ವಾದ ಆಲಿಸಬೇಕಿತ್ತು. ಕತ್ತು ಕಡಿದಿದ್ದಾರೆ, ರುಂಡ ಕೆಳಗೆ ಬಿದ್ದಿದ್ದೇ ಸರಿ ಅಂತಾ ಸುಪ್ರೀಂ ಹೇಳಿದೆ ಎಂದು ವಾಟಾಳ್ ನಾಗರಾಜ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Tags: KarnatakaKaveri Rivermk stalinTamilnaduvatal nagaraj
Previous Post

ಮೋಜು-ಮಸ್ತಿಗಾಗಿ ದಾಳಿಂಬೆ ಹಣ್ಣು ಕದ್ದು, ರೈತರ ನಿದ್ದೆಗೆಡಿಸಿದ್ದ ಕಳ್ಳರು ಅಂದರ್‌..!

Next Post

ಹೈಕಮಾಂಡ್‌ ಒಪ್ಪಿಗೆ ನೀಡಿದ್ರೆ ಡಿಸಿಎಂ ಆಗ್ತೀನಿ: ಎಂ.ಬಿ ಪಾಟೀಲ್

Related Posts

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್
ಕರ್ನಾಟಕ

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

by ಪ್ರತಿಧ್ವನಿ
July 13, 2025
0

ಕನಕದಾಸರು ಕುಲದ ಅವಮಾನವನ್ನು ಅನುಭವಿಸಿ ಬಳಿಕ ಅಳಿಸಿದರು: ಕೆ.ವಿ.ಪಿ ಕನಕದಾಸರನ್ನು ಭಕ್ತಿಗೆ ಕಟ್ಟಿಹಾಕದೆ-ಅವರ ಬಂಡಾಯವನ್ನೂ ನಾವು ಅರಿಯಬೇಕಿದೆ: ಕೆ.ವಿ.ಪಿ ಪ್ರತಿಭಾ ಪುರಸ್ಕಾರ ಅಂದರೆ ಆತ್ಮವಿಶ್ವಾಸದ ರಕ್ತದಾನವಿದ್ದಂತೆ: ಕೆ.ವಿ.ಪ್ರಭಾಕರ್...

Read moreDetails

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

July 13, 2025

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

July 12, 2025

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

July 12, 2025
Next Post
ಹೈಕಮಾಂಡ್‌  ಒಪ್ಪಿಗೆ ನೀಡಿದ್ರೆ ಡಿಸಿಎಂ  ಆಗ್ತೀನಿ: ಎಂ.ಬಿ ಪಾಟೀಲ್

ಹೈಕಮಾಂಡ್‌ ಒಪ್ಪಿಗೆ ನೀಡಿದ್ರೆ ಡಿಸಿಎಂ ಆಗ್ತೀನಿ: ಎಂ.ಬಿ ಪಾಟೀಲ್

Please login to join discussion

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

by ಪ್ರತಿಧ್ವನಿ
July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ
Top Story

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

by ಪ್ರತಿಧ್ವನಿ
July 13, 2025
Top Story

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

by ಪ್ರತಿಧ್ವನಿ
July 12, 2025
Top Story

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

by ಪ್ರತಿಧ್ವನಿ
July 12, 2025
Top Story

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

by ಪ್ರತಿಧ್ವನಿ
July 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

July 13, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

July 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada