• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕುತೂಹಲ ಹೆಚ್ಚಿಸಿದ ವಿಜಯ್ ರಾಘವೇಂದ್ರ ಹಾಗೂ ಸೋನು ಗೌಡ ಜೋಡಿಯ ಮರೀಚಿ ಸಿನಿಮಾದ ಟೀಸರ್..

ಪ್ರತಿಧ್ವನಿ by ಪ್ರತಿಧ್ವನಿ
September 23, 2023
in Top Story, ಸಿನಿಮಾ
0
ಕುತೂಹಲ ಹೆಚ್ಚಿಸಿದ ವಿಜಯ್ ರಾಘವೇಂದ್ರ ಹಾಗೂ ಸೋನು ಗೌಡ ಜೋಡಿಯ ಮರೀಚಿ ಸಿನಿಮಾದ ಟೀಸರ್..
Share on WhatsAppShare on FacebookShare on Telegram

ಚಿನ್ನಾರಿ ಮುತ್ತ ವಿಜಯ್ ರಾಘವೇಂದ್ರ ಹಾಗೂ ಸೋನು ಗೌಡ ನಟನೆಯ ಮರೀಚಿ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಸಸ್ಪೆನ್ಸ್ ಥ್ರಿಲ್ಲಿಂಗ್ ಅಂಶಗಳ ಝಲಕ್ ಕುತೂಹಲ ಹೆಚ್ಚಿಸಿದೆ. ಪೊಲೀಸ್ ಖದರ್ ನಲ್ಲಿ ರಾಘು ಕಾಣಿಸಿಕೊಂಡಿದ್ದಾರೆ. ಟೀಸರ್ ಬಗ್ಗೆ ಚಿತ್ರತಂಡ ಸಾಕಷ್ಟು ಮಾಹಿತಿ ಹಂಚಿಕೊಂಡಿದೆ.

ADVERTISEMENT

ನಿರ್ದೇಶಕ ಕಂ ನಿರ್ಮಾಪಕ ಸಿದ್ಧ್ರುವ್ ಮಾತನಾಡಿ, ಮರೀಚಿ ಟೈಟಲ್ ಇಡುವ ಮೊದಲು 150 ಟೈಟಲ್ ನಮ್ಮ ಮುಂದೆ ಇತ್ತು. ಅದರಲ್ಲಿ ಋಷಿ ಹೆಸರು ಇಡುವ ಟೈಟಲ್ ಆಯ್ಕೆ ಮಾಡಬೇಕಿತ್ತು. ಅದಕ್ಕೆ ಮರೀಚಿ ಆಯ್ಕೆ ಮಾಡಿದ್ದೇನೆ. ಮರೀಚಿ ಎಂದರೆ ಬ್ರಹ್ಮನ ಮಗ. ದೇವದಾಸ್ ಹಾಗೂ ಅಸುರರ ಗಾಡ್ ಫಾದರ್. ನಮ್ಮ ಚಿತ್ರದಲ್ಲಿ ಒಳ್ಳೆಯದು ಕೆಟ್ಟದಕ್ಕೆ ಮರೀಚಿ ಗಾಡ್ ಫಾದರ್ ಎಂದು ತೆಗೆದುಕೊಂಡಿದ್ದೇವೆ. ತುಂಬಾ ಅದ್ಭುತವಾಗಿ ಕಥೆ ಮೂಡಿ ಬಂದಿದೆ. ಒಂದೊಳ್ಳೆ ಪ್ರಯತ್ನ ಮಾಡಿದ್ದೇವೆ. ಸ್ಕ್ರೀನ್ ಪ್ಲೇ, ಸ್ಟೋರಿ ಎಲ್ಲವೂ ಚೆನ್ನಾಗಿ ಬಂದಿದೆ ಎಂದರು.

ನಟ ವಿಜಯ್ ರಾಘವೇಂದ್ರ ಮಾತನಾಡಿ, ಮರೀಚಿ ಟೀಸರ್ ಲಾಂಚ್ ಆಗಿದೆ. ಟ್ಯಾಗ್ ಲೈನ್ ಹೇಳುವಂತೆ God father of good and bad ಎನ್ನುವಾಗೇ ಪ್ರತಿಯೊಬ್ಬರ ಮನಸ್ಸಿನಲ್ಲಿ ಕಥೆ ಎಣೆಯುವ ಮನಸ್ಸು ಆಗುತ್ತದೆ. ನಮ್ಮಗೂ ಅದೇ ಬೇಕಿರುವುದು. ಮರೀಚಿ ಸಿನಿಮಾ ಒಂದು ಕ್ರೈಮ್ ಥ್ರಿಲ್ಲರ್ ಟೀಸರ್ ನೋಡಿದರೆ ಗೊತ್ತಾಗುತ್ತದೆ. ಈ ಚಿತ್ರದಲ್ಲಿ ಪೊಲೀಸ್ ಪಾತ್ರ ಮಾಡುವ ಅವಕಾಶವನ್ನು ನಿರ್ದೇಶಕರು ಕೊಟ್ಟಿದ್ದಾರೆ. ಮರೀಚಿ ಸಿನಿಮಾದಲ್ಲಿ ತಾಂತ್ರಿಕ ವರ್ಗದವರನ್ನು ಎಷ್ಟು ಜವಾಬ್ದಾರಿಯಿಂದ ಆಯ್ಕೆ ಮಾಡಿದ್ದರೋ ಅದೇ ರೀತಿ ತೆರೆಮೇಲೆ ಬರುವ ಕಲಾವಿದರನ್ನು ಅಷ್ಟೇ ಜವಾಬ್ದಾರಿಯಿಂದ ಆಯ್ಕೆ ಮಾಡಿದ್ದಾರೆ. ಅದರಲ್ಲಿ ನಾನು ಒಬ್ಬ ಇದ್ದೇನೆ ಎಂದು ಹೇಳಲು ಖುಷಿಯಾಗುತ್ತದೆ ಎಂದರು.

ನಟಿ ಸೋನುಗೌಡ ಮಾತನಾಡಿ, ಮರೀಚಿ ಸ್ಟೋರಿ ಲೈನ್ ನನಗೆ ಬಹಳ ಇಷ್ಟವಾಯಿತು. ಈ ಚಿತ್ರದಲ್ಲಿ ಫಾರ್ಪಮೆನ್ಸ್ ಗೆ ತುಂಬಾ ಸ್ಕೋಪ್ ಇತ್ತು. ನನ್ನ ಪಾತ್ರ ತುಂಬಾ ಚೆನ್ನಾಗಿ ಬಂದಿದೆ. ಹ್ಯಾಪಿ ನ್ಯೂ ಇಯರ್ ನಲ್ಲಿ ಗಂಡ ಹೆಂಡತಿಯಾಗಿ ನಾನು ವಿಜಯ್ ಸರ್ ನಟಿಸಿದ್ದೇವು. ಇಲ್ಲಿಯೂ ಗಂಡ ಹೆಂಡತಿಯಾಗಿ ನಟಿಸಿದ್ದೇವೆ. ಎಮೋಷನಲ್ ಆಗಿ ಮರೀಚಿ ಸಿನಿಮಾ ಮೂಡಿಬಂದಿದೆ. ಸ್ಕ್ರೀನ್ ನಲ್ಲಿ ನಾವು ಹೇಗೆ ಕಾಣಿಸುತ್ತೇವೆ ಎಂಬುದನ್ನು ನೋಡಲು ನಾನು ಕೂಡ ಕಾತುರಳಾಗಿದ್ದೇನೆ ಎಂದರು.

ಮರೀಚಿ ಲವ್ ಸ್ಟೋರಿ ಒಳಗೊಂಡಂತೆ ಸಸ್ಪೆನ್ಸ್, ಥ್ರಿಲ್ಲರ್ ಸಿನಿಮಾ. ಹಲವು ಕಿರುಚಿತ್ರಗಳನ್ನು ನಿರ್ದೇಶಿಸಿ, ಒಂದಿಷ್ಟು ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿ ದುಡಿದ ಅನುಭವ ಇರುವ ಸಿದ್ಧ್ರುವ್ ನಿರ್ದೇಶನದ ಮೊದಲ ಸಿನಿಮಾವಿದು. ಚಿತ್ರಕ್ಕೆ ಕಥೆ, ಚಿತ್ರಕಥೆ ಕೂಡ ಇವರೇ ಬರೆದಿದ್ದಾರೆ .

ವಿಜಯ ರಾಘವೇಂದ್ರ ಜೋಡಿಯಾಗಿ ನಟಿ ಸೋನು ಗೌಡ ನಟಿಸುತ್ತಿದ್ದು. ಅಭಿ ದಾಸ್, ಸ್ಪಂದನ ಸೋಮಣ್ಣ, ಆರ್ಯನ್, ಶೃತಿ ಪಾಟೀಲ್, ಗೋಪಾಲ್ ಕೃಷ್ಣ ದೇಶಪಾಂಡೆ, ಅರುಣ ಬಾಲರಾಜ್ ಚಿತ್ರದ ತಾರಾಬಳಗದಲ್ಲಿದ್ದಾರೆ. ಮನೋಹರ್ ಜೋಶಿ ಛಾಯಾಗ್ರಹಣ, ಜ್ಯೂಡ ಸ್ಯಾಂಡಿ ಸಂಗೀತ ನಿರ್ದೇಶನ ಚಿತ್ರಕ್ಕಿರಲಿದೆ. ಎಸ್ ಎಸ್ ರೆಕ್ ಬ್ಯಾನರ್ ನಡಿ ನಿರ್ದೇಶಕ ಸಿದ್ಧ್ರುವ್ ಹಾಗೂ ಸಂತೋಷ್ ಮಾಯಪ್ಪ ಚಿತ್ರವನ್ನು ನಿರ್ಮಿಸಿದ್ದಾರೆ. ಶೂಟಿಂಗ್ ಮುಗಿಸಿರುವ ಚಿತ್ರತಂಡ ಶೀಘ್ರದಲ್ಲೇ ಸಿನಿಮಾವನ್ನು ತೆರೆಗೆ ತರುವ ಯೋಜನೆ ಹಾಕಿಕೊಂಡಿದೆ.

Tags: CinemaMoviesonugowdaVijay Raghavendra
Previous Post

“ಬಾಹ್ಯಾಕಾಶ ವಿಜ್ಞಾನದಲ್ಲಿ ಭಾರತದ ಮಹಿಳಾ ಧ್ವನಿ” ಭಾರತದ ಬಾಹ್ಯಾಕಾಶ ವಿಜ್ಞಾನದ ನಡಿಗೆಯಲ್ಲಿ ಮಹಿಳಾ ವಿಜ್ಞಾನಿಗಳ ಸಾಧನೆ ಹಿರಿದು

Next Post

ಕಾವೇರಿ ನೀರು ಹಂಚಿಕೆಗೆ ಮುಂದುವರೆದ ಹೋರಾಟ: ಇಂದು ಮಂಡ್ಯ ಬಂದ್

Related Posts

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ
ಸಿನಿಮಾ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

by ಪ್ರತಿಧ್ವನಿ
April 14, 2026
0

ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ‘ಕೆಡಿ’ ಸಿನಿಮಾಗೆ ಸೆನ್ಸಾರ್ ಸಂಬಂಧಿತ ಅಡಚಣೆಗಳು ಎದುರಾಗಿದ್ದು, ಕೇಂದ್ರ ಸೆನ್ಸಾರ್ ಮಂಡಳಿಯ ಕ್ರಮದ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಕನ್ನಡ ಸಿನಿಮಾಗಳಿಗೆ ಅನ್ಯಾಯವಾಗುತ್ತಿದೆ ಎಂಬ...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
Next Post
ಕಾವೇರಿ ನೀರು ಹಂಚಿಕೆಗೆ ಮುಂದುವರೆದ ಹೋರಾಟ: ಇಂದು ಮಂಡ್ಯ ಬಂದ್

ಕಾವೇರಿ ನೀರು ಹಂಚಿಕೆಗೆ ಮುಂದುವರೆದ ಹೋರಾಟ: ಇಂದು ಮಂಡ್ಯ ಬಂದ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada