• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಸೆ.26ರ ಬೆಂಗಳೂರು ಬಂದ್​​​ ಹಿಂಪಡೆಯಲು ಕರವೇ ಮನವಿ, ಒಂದೇ ಬಾರಿ ರಾಜ್ಯ ಬಂದ್​ಗೆ ಪ್ಲಾನ್..?

Any Mind by Any Mind
September 24, 2023
in ಇದೀಗ
0
ಸೆ.26ರ ಬೆಂಗಳೂರು ಬಂದ್​​​ ಹಿಂಪಡೆಯಲು ಕರವೇ ಮನವಿ, ಒಂದೇ ಬಾರಿ ರಾಜ್ಯ ಬಂದ್​ಗೆ ಪ್ಲಾನ್..?
Share on WhatsAppShare on FacebookShare on Telegram


ADVERTISEMENT

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕರ್ನಾಟಕ ಸರ್ಕಾರದ ವಿರುದ್ಧ ರೈತರು ಹಾಗೂ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೆ, ಸೆ.26 ರಂದು ಬೆಂಗಳೂರು ಬಂದ್​ಗೆ(Bangalore Bandh) ಕರೆ ನೀಡಲಾಗಿದೆ. ಆದರೆ ಎಲ್ಲರೂ ಒಟ್ಟು ಸೇರಿ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ನಿಟ್ಟಿನಲ್ಲಿ ಎಲ್ಲಾ ಸಂಘಟನೆಗಳು ಸೇರಿಕೊಂಡು ಕರ್ನಾಟಕ ಬಂದ್ (Karnataka Bandh) ನಡೆಸಲು ಕರ್ನಾಟಕ ರಕ್ಷಣಾ ವೇದಿಕೆ ತೀರ್ಮಾನಿಸಿದೆ. ಹೀಗಾಗಿ ಬೆಂಗಳೂರು ಬಂದ್ ಹಿಂಪಡೆಯಲು ಮನವಿ ಮಾಡಿದೆ.

ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟು, ಸೆ.26ರ ಬೆಂಗಳೂರು ಬಂದ್​​​ ಹಿಂಪಡೆಯುವಂತೆ ಮನವಿ ಮಾಡಿದ್ದೇವೆ. ಬೆಂಗಳೂರು ಬಂದ್​, ಕರ್ನಾಟಕ ಬಂದ್​ ಪ್ರತ್ಯೇಕವಾಗಿ ಬೇಡ ಅಂತ ಮನವಿ ಮಾಡಲಾಗಿದೆ. ಎರಡು ಬಾರಿ ಬಂದ್ ಮಾಡುವ ಬದಲು ಒಂದೇ ಬಾರಿ ರಾಜ್ಯ ಬಂದ್ ಮಾಡೋಣ. ಈ ಬಗ್ಗೆ ವಾಟಾಳ್ ನಾಗರಾಜ್ ಸೇರಿ ಎಲ್ಲ ಸಂಘಟನೆಗಳ ಜತೆ ಚರ್ಚಿಸುತ್ತೇವೆ ಎಂದರು.

ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ರೈತರು, ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು, ಸೆ.26 ರಂದು ಬೆಂಗಳೂರು ಬಂದ್ ನಿಶ್ಚಿತವಾಗಿದೆ. ಬಹುತೇಕ ಸಂಘಟನೆಗಳು ಬೆಂಬಲ ಸೂಚಿಸಿವೆ.

ಇನ್ನೊಂದೆಡೆ, ಅಖಂಡ ಕರ್ನಾಟಕ ಬಂದ್ ನಡೆಸಲು ಒಂದಷ್ಟು ಕನ್ನಡ ಪರ ಸಂಘಟನೆಗಳು ಮುಂದಾಗಿವೆ. ವಾಟಾಳ್ ನಾಗರಾಜ್, ಸೋಮವಾರದಂದು ಬಂದ್ ದಿನಾಂಕ ಘೋಷಣೆ ಮಾಡಲಿದ್ದಾರೆ. ಸೆ. 28 ಅಥವಾ 29 ಅಥವಾ 30 ರಂದು ಅಖಂಡ ಕರ್ನಾಟಕ ಬಂದ್ ನಡೆಸುವ ಸಾಧ್ಯತೆ ಇದೆ. ಈ ಬಗ್ಗೆ ಮಾತನಾಡಿದ ವಾಟಾಳ್, 26 ರಂದು ಬಂದ್​ಗೆ ಕರೆ ನೀಡಿರುವುದಕ್ಕೆ ನನ್ನ ವಿರೋಧ ವಿಲ್ಲ. ಅವರ ಜೊತೆಗೆ ಮಾತಾಡುತ್ತೇವೆ, ಎಲ್ಲರೂ ಒಟ್ಟಿಗೆ ಸೇರಿ ಅಖಂಡ ಕರ್ನಾಟಕ ಬಂದ್ ಮಾಡೋಣ ಅಂತ ಮನವಿ ಮಾಡುವುದಾಗಿ ಹೇಳಿದ್ದರು.

ವಾಟಾಳ್​ ನಾಗರಾಜ್ ಪೊಲೀಸರ ವಶಕ್ಕೆ

ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನು ಖಂಡಿಸಿ ಬೆಂಗಳೂರಿನಲ್ಲಿ ವಾಟಾಳ್ ನಾಗರಾಜ್​ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಮೈಸೂರು ಬ್ಯಾಂಕ್​ ಸರ್ಕಲ್​​ ಬಳಿ ಕನ್ನಡ ಒಕ್ಕೂಟದಿಂದ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.

ನಾಳೆ ಮಹತ್ವದ ಸಭೆ

ಕರ್ನಾಟಕ ಬಂದ್​​ಗೆ ಕರೆ ನೀಡುವ ಸಂಬಂಧ ಬೆಂಗಳೂರಿನ ಖಾಸಗಿ ಹೊಟೇಲ್​ನಲ್ಲಿ ನಾಳೆ ಮಹತ್ವದ ಸಭೆ ನಡೆಯಲಿದೆ. ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಡೆಯುವ ಈ ಸಭೆಯಲ್ಲಿ ಎಲ್ಲಾ ಸಂಘಟನೆಗಳ ಜೊತೆ ಚರ್ಚಿಸಿ ಕರ್ನಾಟಕ ಬಂದ್​ ದಿನಾಂಕ ನಿಗದಿ ಮಾಡಲಾಗುತ್ತಿದೆ.

ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು, ಕರವೇ ರಾಜ್ಯಾಧ್ಯಕ್ಷರಾದ ಶಿವರಾಮೇಗೌಡ, ಪ್ರವೀಣ್ ಕುಮಾರ್ ಶೆಟ್ಟಿ, ವಿವಿಧ ಕನ್ನಡಪರ ಸಂಘಟನೆಗಳ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಗಿದ್ದು, ಪ್ರತಿಭಟನಾನಿರತ ವಾಟಾಳ್​ ನಾಗರಾಜ್, ಸಾ.ರಾ.ಗೋವಿಂದು ಸೇರಿದಂತೆ ಹಲವು ಕನ್ನಡ ಪರ ಸಂಘಟನೆಗಳ ಮುಖಂಡರನ್ನು ಪೊಲೀಸ್ ವಶಕ್ಕೆ ಪಡೆದರು.

Tags: #karnataka politics#karnatraka#praveen shetty#ಕರವೇ
Previous Post

ರಾಕ್ ಲೈನ್ ವೆಂಕಟೇಶ್ ಹಾಗೂ ಸಾಯಿಪ್ರಕಾಶ್ ಅವರಿಂದ “ನಿರ್ಭಯ 2” ಚಿತ್ರದ ಟೀಸರ್ ಅನಾವರಣ

Next Post

ಅದಾನಿ ಸಮೂಹವನ್ನು ಅಲುಗಾಡಿಸಿರುವ ಸ್ಟಾಕ್ ಮ್ಯಾನಿಪ್ಯುಲೇಷನ್ ಆರೋಪಗಳ ದಾಖಲೆಗಳು

Related Posts

Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
0

ಸ್ಯಾಂಡಲ್ವುಡ್ ನ ಭರವಸೆಯ ನಟ ಕಿರಣ್ ರಾಜ್ ಹುಟ್ಟು ಹಬ್ಬದಂದು ಸಿಕ್ಕಿತು ಮತ್ತೊಂದು ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ ಮತ್ತು ಉದ್ಯೋನ್ಮುಖ ನಟ ಕಿರಣ್ ರಾಜ್,...

Read moreDetails

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

July 5, 2025

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

July 5, 2025
Next Post
ಅದಾನಿ ಸಮೂಹವನ್ನು ಅಲುಗಾಡಿಸಿರುವ ಸ್ಟಾಕ್ ಮ್ಯಾನಿಪ್ಯುಲೇಷನ್ ಆರೋಪಗಳ ದಾಖಲೆಗಳು

ಅದಾನಿ ಸಮೂಹವನ್ನು ಅಲುಗಾಡಿಸಿರುವ ಸ್ಟಾಕ್ ಮ್ಯಾನಿಪ್ಯುಲೇಷನ್ ಆರೋಪಗಳ ದಾಖಲೆಗಳು

Please login to join discussion

Recent News

Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
Top Story

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada