ನಾಳೆ ಮಧ್ಯಾಹ್ನ 3 ಗಂಟೆಗೆ ವಿಧಾನಸೌಧದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದ್ದು ಈಗ ರಾಜ್ಯದ ಎಲ್ಲೆಡೆ ಬಿಸಿಬಿಸಿ ಚರ್ಚೆಗಳು ಆರಂಭವಾಗಿದೆ.
ಹೌದು, ಕಳೆದ ಎರಡು ವಾರಗಳಿಂದ ರಾಜ್ಯದಲ್ಲಿ ಹಲವು ವಿಷಯಗಳ ಕುರಿತು ಪರ ವಿರೋಧ ಚರ್ಚೆಗಳ ನಡುವೆಯೇ ನಾಳೆ ಮಧ್ಯಾಹ್ನ 3 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಲಿಯುತ್ತಿದೆ. ಸಭೆಯಲ್ಲಿ ಹಿಂದುಳಿದ ವರ್ಗದ ಮೀಸಲಾತಿ ಸಂಬಂಧ, ಜಾತಿ ಗಣತಿ , ಕಾವೇರಿ ನದಿ ನೀರು ವಿವಾದ, ಶಿವಮೊಗ್ಗ ಗಲಾಟೆ ರಾಜ್ಯದಲ್ಲಿ ಬರ ಸೇರಿ ಹಲವು ಮಹತ್ವದ ವಿಚಾರಗಳು ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಲಿದೆ ಎಂದು ಮಾಹಿತಿ ತಿಳಿದು ಬಂದಿದೆ.
ರಾಜ್ಯದ ಇತರೆ ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಸಾಧ್ಯತೆ
ರಾಜ್ಯದ ಕೆಲ ತಾಲೂಕುಗಳನ್ನು ಬರಪೀಡಿತ ಪಟ್ಟಿಯಿಂದ ಕೈಬಿಡಲಾಗಿದೆ. ನಮ್ಮ ತಾಲ್ಲೂಕುಗಳನ್ನು ಬರ ಪೀಡಿತ ಅಂತ ಘೋಷಿಸುವಂತೆ ಒತ್ತಾಯ ಹೆಚ್ಚಾಗಿತ್ತು. ಈ ಹಿನ್ನಲೆಯಲ್ಲಿ ಅಕ್ಟೋಬರ್.5ರಂದು ಮಹತ್ವದ ಸಚಿವ ಸಂಪುಟ ಉಪಸಮಿತಿ ಸಭೆಯನ್ನು ನಿಗದಿ ಪಡಿಸಲಾಗಿದೆ.
ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಮಂತ್ರಿ ಮಂಡಲದ ಸಚಿವರು, ಶಾಸಕರು, ಸರ್ಕಾರದ ಕಾರ್ಯದರ್ಶಿಗಳು, ಹಿರಿಯ ಅಧಿಕಾರಿಗಳು ಕೂಡ ಭಾಗಿಯಾಗಲಿದ್ದಾರೆ.






