• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅಜಯ್ ರಾಜ್ ಅಭಿನಯದ “ಮನ್ ರೇ ” ಚಿತ್ರ ನವೆಂಬರ್ ನಲ್ಲಿ ಆರಂಭ

ಪ್ರತಿಧ್ವನಿ by ಪ್ರತಿಧ್ವನಿ
October 17, 2023
in Top Story, ಸಿನಿಮಾ
0
ಅಜಯ್ ರಾಜ್ ಅಭಿನಯದ “ಮನ್ ರೇ ” ಚಿತ್ರ ನವೆಂಬರ್ ನಲ್ಲಿ ಆರಂಭ
Share on WhatsAppShare on FacebookShare on Telegram

ಕಳೆದ ತಿಂಗಳು ನಡೆದ ‘ಸೇನಾಪುರ’ ಚಿತ್ರದ ಟ್ರೇಲರ್ ಬಿಡುಗಡೆ ಸಮಯದಲ್ಲೇ ಸದ್ಯದಲ್ಲೇ ಇನ್ನೊಂದು ಹೊಸ ಚಿತ್ರದ ಘೋಷಣೆ ಮಾಡುವುದಾಗಿ ನಿರ್ದೇಶಕ ಗುರು ಸಾವನ್‍ ಹೇಳಿಕೊಂಡಿದ್ದರು. ಅದರಂತೆ ಒಂದು ತಿಂಗಳ ಒಳಗೆ ಅವರು ಇನ್ನೊಂದು ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ಅದೇ ‘ಮನ್ ರೇ’. ಚಿತ್ರದ ಘೋಷಣೆ ಅಧಿಕೃತವಾಗಿ ಸೋಮವಾರದಂದು ಆಗಿದ್ದು, ನವೆಂಬರ್‌ನಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ.

ADVERTISEMENT

ಭೂಮಿಕಾ ಕ್ರಿಯೇಷನ್ಸ್ ನಡಿ ತಿಲಕ್‍ ರಾಜು ಮತ್ತು ರಾಜಣ್ಣ ನಿರ್ಮಿಸುತ್ತಿರುವ ‘ಮನ್‍ರೇ’ ಚಿತ್ರದಲ್ಲಿ ಅಜಯ್‍ ರಾಜ್‍ ನಾಯಕನಾಗಿ ಕಾಣಿಸಿಕೊಂಡರೆ, ಗಾಯಕಿ ಐಶ್ವರ್ಯ ರಂಗರಾಜನ್‍ ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಇನ್ನು, ‘ಅಮೃತವರ್ಷಿಣಿ’ ಖ್ಯಾತಿಯ ರಜನಿ, ಪ್ರಮೋದ್‍ ಶೆಟ್ಟಿ, ಸೂರ್ಯ ಸಿದ್ಧಾರ್ಥ್, ಅಮಿತ್ ರಾಜ್ ಮುಂತಾದವರು ನಟಿಸುತ್ತಿದ್ದಾರೆ.

‘ಮನ್‍ರೇ’ ಕುರಿತು ಮಾತನಾಡುವ ಗುರು ಸಾವನ್‍, ‘’ಮನ್‍ ರೇ’ ಎಂದರೆ ಮನಸ್ಸಿನ ಎಕ್ಸ್ ರೇ ಎಂದರ್ಥ. ಮನಸ್ಸಿನ ತೊಳಲಾಟವನ್ನು ಈ ಚಿತ್ರದ ಮೂಲಕ ಹೇಳುವ ಪ್ರಯತ್ನವನ್ನು ಮಾಡುತ್ತಿದ್ದೇವೆ. ಕಾನ್ಶಿಯಸ್‍ ಮತ್ತು ಸಬ್‍ ಕಾನ್ಶಿಯಸ್‍ ಮೈಂಡ್‍ ನಡುವಿನ ತೊಳಲಾಟವಿದು. ಸುಮಾರು 8-9 ವರ್ಷಗಳ ಹಿಂದೆಯೇ ಕಥೆ ಮಾಡಿಕೊಂಡಿದ್ದೆ. ಇದೊಂದು ಸೈಕಲಾಜಿಕಲ್‍ ಥ್ರಿಲ್ಲರ್ ಕಥೆ. ಸಂಪೂರ್ಣ ಕಾಲ್ಪನಿಕ’ ಎನ್ನುತ್ತಾರೆ ಅವರು. ಈ ಸಮಸ್ಯೆ ಪ್ರತಿಯೊಬ್ಬರಲ್ಲೂ ಇದ್ದೇ ಇರುತ್ತದೆ ಎನ್ನುವ ಗುರು, ‘ನಾವು ಏನೋ ಕೆಲಸ ಮಾಡುತ್ತಿದ್ದರೆ, ಮನಸ್ಸು ಇನ್ನೇನೋ ಯೋಚಿಸುತ್ತಿರುತ್ತದೆ. ಇಲ್ಲಿ ನಾಯಕ ಆರವ್‍, ಭ್ರಮೆಯ ಲೋಕದಲ್ಲಿ ಬದುಕುತ್ತಿರುತ್ತಾನೆ. ಅವನು ವಾಸ್ತವಕ್ಕೆ ಹೇಗೆ ಬರುತ್ತಾನೆ.

ಅವನ ಸುತ್ತಲಿನವರು, ಅವನ ಈ ಸಮಸ್ಯೆಯಿಂದ ಎಷ್ಟೆಲ್ಲಾ ಕಷ್ಟಪಡುತ್ತಾರೆ ಎನ್ನುವುದನ್ನು ಈ ಚಿತ್ರದ ಮೂಲಕ ಪ್ರಯತ್ನ ಮಾಡುತ್ತಿದ್ದೇವೆ. ಪ್ರಮೋದ್‍ ಶೆಟ್ಟಿ ಇಲ್ಲಿ ಅರಸ್‍ ಎಂಬ ವೈದ್ಯರ ಪಾತ್ರ ಮಾಡುತ್ತಿದ್ದಾರೆ. ಈಗಾಗಲೇ ಪ್ರೀಪ್ರೊಡಕ್ಷನ್‍ ಕೆಲಸಗಳು ನಡೆಯುತ್ತಿವೆ. ನವೆಂಬರ್‌ನಲ್ಲಿ ಚಿತ್ರೀಕರಣ ಪ್ರಾರಂಭವಾಗಿ ಮುಂದಿನ ವರ್ಷ ಮೇನಲ್ಲಿ ಬಿಡುಗಡೆ ಮಾಡುವ ಪ್ಲಾನ್‍ ಇದೆ’ ಎನ್ನುತ್ತಾರೆ. ಸಾಮಾನ್ಯವಾಗಿ ಸೈಕಲಾಜಿಕಲ್‍ ಥ್ರಿಲ್ಲರ್ ಎಂದರೆ ಕ್ರೈಮ್‍ ಅಥವಾ ಹಿಂಸೆ ಇರುತ್ತದೆ. ಆದರೆ, ಈ ಚಿತ್ರದಲ್ಲಿ ಅಂಥದ್ದು ಯಾವುದೂ ಇರುವುದಿಲ್ಲ ಎನ್ನುವ ಅಜಯ್‍ ರಾಜ್‍, ‘ಸರಳವಾಗಿ ಹೇಳಬೇಕು ಎಂದರೆ ಇದು ಮನಸ್ಸಿನೊಳಗೆ ನಡೆಯುವ ಸಂಘರ್ಷ. ಇಲ್ಲಿ ನಾಯಕನೇ ಸಮಸ್ಯೆ. ಅವನಿಂದ ಏನಾಗುತ್ತದೆ ಎಂಬುದು ಕಥೆ’ ಎಂದರು.

ರಜನಿಗೆ ಇಲ್ಲಿ ವಿಶೇಷ ಪಾತ್ರ ಸಿಕ್ಕಿದೆಯಂತೆ. ಅಷ್ಟೇ ಅಲ್ಲ, ಇದು ಅವರ ಕನಸಿನ ಪಾತ್ರವಂತೆ. ‘ನಿರ್ದೇಶಕರು ಬಂದು ಒಂದು ಸೀನ್‍ ಕೇಳಿ, ಆ ನಂತರ ಚಿತ್ರದಲ್ಲಿ ನಟಿಸುವ ಬಗ್ಗೆ ಯೋಚನೆ ಮಾಡಿ ಎಂದರು. ಬಹುಶಃ ಗ್ಲಾಮರಸ್‍ ಪಾತ್ರ ಇರಬಹುದು ಎಂದುಕೊಂಡೆ. ಆದರೆ, ಹಾಗೇನಿಲ್ಲ. ಇದೊಂದು ಸವಾಲಿನ ಪಾತ್ರ. ನಾನು ಇದುವರೆಗೂ ನೋಡಿರುವ ಚಿತ್ರಗಳಲ್ಲಿ ಇಂಥದ್ದೊಂದು ಪಾತ್ರ ಬಂದಿಲ್ಲ. ಹಾಗೆಯೇ ಇಂಥದ್ದೊಂದು ಪಾತ್ರ ಹೇಗೆ ಹೊಳೆಯಿತು ಎಂಬ ಆಶ್ಚರ್ಯವೂ ಆಯಿತು’ ಎಂದರು. ಇನ್ನು, ಮತ್ತೊಬ್ಬ ನಾಯಕಿಯಾಗಿರುವ ಐಶ್ವರ್ಯಾ ಚಿತ್ರದಲ್ಲಿ ನಟಿಸುತ್ತಿರುವುದಕ್ಕೆ ಖುಷಿಪಟ್ಟರು.


ನಿರ್ಮಾಪಕರಲ್ಲೊಬ್ಬರಾದ ತಿಲಕ್‍ ರಾಜು ಅನಿವಾಸಿ ಭಾರತೀಯರು. ಸದ್ಯ ಅಮೇರಿಕಾದಲ್ಲಿ ವಾಸಿಸುತ್ತಿರುವ ಅವರಿಗೆ ಚಿತ್ರ ಮಾಡುವುದು ಬಹುದಿನಗಳ ಕನಸಂತೆ. ಈ ಚಿತ್ರದ ಮೂಲಕ ಅದು ನನಸಾಗುತ್ತಿರುವುದಾಗಿ ಖುಷಿಪಟ್ಟರು. ‘ಮನ ರೇ‘ ಚಿತ್ರಕ್ಕೆ ಆದಿ ಅವರ ಛಾಯಾಗ್ರಹಣವಿದೆ. ಈಗಾಗಲೇ ಸಾಕಷ್ಟು ಜನಪ್ರಿಯ ಚಿತ್ರಗಳಿಗೆ ಹಾಡಿ, ಉತ್ತಮ ಗಾಯಕರೆನಿಸಿಕೊಂಡಿರುವ ಅನಿರುದ್ಧ್ ಶಾಸ್ತ್ರಿ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಜೊತೆಗೆ ಪ್ರಮುಖಪಾತ್ರದಲ್ಲೂ ನಟಿಸುತ್ತಿದ್ದಾರೆ.

Tags: Ajay RajCinemaGuru SavanMan RayMoviePramodh ShettyTilak Raju
Previous Post

ಐಟಿ ದಾಳಿಯಲ್ಲಿ ಕೆಲವು ಡೈರಿ, ಪುಸ್ತಕಗಳು ಪತ್ತೆಯಾಗಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ: ಡಿ.ಕೆ. ಶಿವಕುಮಾರ್

Next Post

ಬಿಜೆಪಿ ರಾಜ್ಯವನ್ನು ದಿವಾಳಿ ಮಾಡಿತ್ತು: ಕೆಪಿಸಿಸಿ ವಕ್ತಾರರಾದ ಎಂ. ಲಕ್ಷ್ಮಣ್

Related Posts

BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!
Top Story

BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!

by ಪ್ರತಿಧ್ವನಿ
January 13, 2026
0

ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 12(Bigg Boss Kannada Season 12) ಇದೀಗ ಅಂತಿಮ ಹಂತದತ್ತ ಸಾಗುತ್ತಿದೆ. ಫಿನಾಲೆಗೆ ದಿನಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ...

Read moreDetails
ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

January 13, 2026
BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

January 13, 2026
ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

January 13, 2026
Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

January 13, 2026
Next Post
ಬಿಜೆಪಿ ರಾಜ್ಯವನ್ನು ದಿವಾಳಿ ಮಾಡಿತ್ತು: ಕೆಪಿಸಿಸಿ ವಕ್ತಾರರಾದ ಎಂ. ಲಕ್ಷ್ಮಣ್

ಬಿಜೆಪಿ ರಾಜ್ಯವನ್ನು ದಿವಾಳಿ ಮಾಡಿತ್ತು: ಕೆಪಿಸಿಸಿ ವಕ್ತಾರರಾದ ಎಂ. ಲಕ್ಷ್ಮಣ್

Please login to join discussion

Recent News

BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!
Top Story

BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!

by ಪ್ರತಿಧ್ವನಿ
January 13, 2026
ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!
Top Story

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

by ಪ್ರತಿಧ್ವನಿ
January 13, 2026
BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?
Top Story

BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

by ಪ್ರತಿಧ್ವನಿ
January 13, 2026
ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ
Top Story

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

by ಪ್ರತಿಧ್ವನಿ
January 13, 2026
Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!
Top Story

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!

BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!

January 13, 2026
ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada