2024 ರ ಲೋಕಸಭಾ ಚುನಾವಣೆ ಅಷ್ಟರಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ.
ರಾಯಚೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದೇಶದಲ್ಲಿ ಕಾಂಗ್ರೆಸ್ಗೆ ಅಧಿಕಾರ ಇರಲಿಲ್ಲ. ರಾಜ್ಯದಲ್ಲಿ ಈಗ ಗ್ಯಾರಂಟಿ ಅದು, ಇದು ಅಂತ ಮೋಸ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ. ಈಗ ಅಕ್ರಮ ಅಸ್ತಿ ಕುರಿತು ಡಿಸಿಎಂ ಡಿ ಕೆ ಶಿವಕುಮಾರ್ ಕೇಸ್ ಬಂದಿದೆ. ಇನ್ನೂ ಸಚಿವ ಸತೀಶ್ ಜಾರಕಿಹೋಳಿ ಎಷ್ಟು ಜನರನ್ನ ಕರೆದೊಯ್ತಾರೊ ಗೊತ್ತಿಲ್ಲ. ಸರ್ಕಾರ ಬಿದ್ದೊಗತ್ತೆ ಅನ್ನೊದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಹೇಳಿದ್ದಾರೆ.

ಮುಂದುವರೆದು, ನನ್ನ ಹೆಸರು ಬರೆದಿಟ್ಟು ಯಾರೊ ಆತ್ಮಹತ್ಯೆ ಮಾಡಿಕೊಂಡರು, ನಾನು ತಕ್ಷಣ ರಾಜೀನಾಮೆ ಕೊಟ್ಟೆ. ನಾನು ಶರಣಪ್ರಕಾಶ್ ಅವರನ್ನು ದೋಷಿ ಅನ್ನಲ್ಲ, ಸಮಾಜದ ಮುಂದೆ ಅವರ ಹೆಸರು ಬರೆದಿಟ್ಟು ಸತ್ತಿರುವುದರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಲಿ, ಆ ಬಳಿಕ ನಿರ್ದೋಷಿ ಅಂತ ಅಗಿ ಬಂದು ನಂತರ ಮಂತ್ರಿ ಆಗಲಿ ಎಂದು ಹೇಳಿದ್ದಾರೆ.