ಬೆಂಗಳೂರು: ಕನ್ನಡ ಚಲನಚಿತ್ರ ನಟ ದರ್ಶನ್ ಹುಲಿಯ ಉಗುರಿನ ಪೆಂಡೆಂಟ್ ಧರಿಸಿದ್ದಾರೆ. ಅವದೂತ ವಿನಯ್ ಗುರೂಜೀ ಅವರು ಹುಲಿ ಚರ್ಮವನ್ನು ಹೊಂದಿದ್ದು ಅವರ ವಿರುದ್ಧ ಕಾನೂನು ರೀತ್ಯಾ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಅರಣ್ಯ ಇಲಾಖೆ ಮುಖ್ಯ ಸಂರಕ್ಷಣಾಧಿಕಾರಿಗಳಿಗೆ ವಂದೇ ಮಾತರಂ ಸಮಾಜ ಸೇವಾ ಸಂಸ್ಥೆಯ ಸರ್ವಸಂಘಟನೆಗಳ ಒಕ್ಕೂಟದ ವತಿಯಿಂದ ದೂರು ನೀಡಲಾಗಿದೆ.
ಕನ್ನಡ ಚಲನಚಿತ್ರ ನಟ ತೂಗೂದೀಪ್ರವರ ಕತ್ತಿನಲ್ಲಿ ಬಂಗಾರದ ಚೈನಿನಲ್ಲಿ ಒಂದು ಹುಲಿಯ ಹಾಕಿಕೊಂಡಿರುವ ಎಲ್ಲಾ ಮಾಧ್ಯಮಗಳಲ್ಲಿ ಎಲ್ಲಾ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್ ಆಗಿದ್ದು, ವನ್ಯ ಸಂರಕ್ಷಣಾ ಕಾಯ್ದೆ-1972 ಕಾಯ್ದೆಯಡಿಯಲ್ಲಿ ಕಾನೂನು ಉಲ್ಲಂಘನೆಯಾಗಿದ್ದು ಅವರ ವಿರುದ್ಧ ಸೂಕ್ತ ರೀತಿಯ ಕ್ರಮ ಜರುಗಿಸಬೇಕು. ಅವದೂತ ವಿನಯ್ಗುರೂಜಿಗಳು ಹುಲಿಯ ಚರ್ಮದ ಮೇಲೆ ಕುಳಿತಿರುವ ಫೋಟೋ ವೈರಲ್ ಆಗಿದ್ದು, ಎಲ್ಲಾ ಮಾಧ್ಯಮಗಳಲ್ಲಿ ಎಲ್ಲಾ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್ ಆಗಿದ್ದು, ವನ್ಯ ಸಂರಕ್ಷಣಾ ಕಾಯ್ದೆ-1972 ಕಾಯ್ದೆಯಡಿಯಲ್ಲಿ ಕಾನೂನು ಉಲ್ಲಂಘನೆಯಾಗಿದ್ದು ಅವರ ವಿರುದ್ಧ ಸೂಕ್ತ ರೀತಿಯ ಕ್ರಮ ಜರುಗಿಸಬೇಕು ಎಂದು ದೂರು ಕೊಡಲಾಗಿದೆ.