• Home
  • About Us
  • ಕರ್ನಾಟಕ
Thursday, July 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ರಾಜ್ಯ ಸರ್ಕಾರವನ್ನು ಟೀಕಿಸುವ ಬದಲು ಕೇಂದ್ರದೊಂದಿಗೆ ಮಾತನಾಡಿ: CM ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
November 2, 2023
in Top Story, ಕರ್ನಾಟಕ
0
ರಾಜ್ಯ ಸರ್ಕಾರವನ್ನು ಟೀಕಿಸುವ ಬದಲು ಕೇಂದ್ರದೊಂದಿಗೆ ಮಾತನಾಡಿ: CM ಸಿದ್ದರಾಮಯ್ಯ
Share on WhatsAppShare on FacebookShare on Telegram

ಕೊಪ್ಪಳ: ರೈತರ ಬಗ್ಗೆ ಕಾಳಜಿ ಇದ್ದರೆ, ಬಿಜೆಪಿ ಸಂಸದರು ರಾಜ್ಯ ಸರ್ಕಾರವನ್ನು ಟೀಕಿಸುವ ಬದಲು ಕೇಂದ್ರದೊಂದಿಗೆ ಮಾತನಾಡಿ, ರಾಜ್ಯಕ್ಕೆ ಪರಿಹಾರಗಳನ್ನು ಬಿಡುಗಡೆಗೊಳಿಸರೆ ಉತ್ತಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ADVERTISEMENT

ಅವರು ಇಂದು ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬರಪರಿಹಾರ ಬಿಡುಗಡೆಯಲ್ಲಿ ಕೇಂದ್ರ ಸರ್ಕಾರ ವಿಳಂಬವೇಕೆ ತೋರುತ್ತಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಕೇಂದ್ರ ಸರ್ಕಾರಕ್ಕೆ ಬರಪರಿಹಾರ 17,900 ಕೋಟಿ ರೂ.ಗಳನ್ನು ಕೋರಿ ಮನವಿ ಸಲ್ಲಿಸಿದೆ. ರಾಜ್ಯದ ಸಚಿವರ ಭೇಟಿಗೂ ಸಮಯ ನೀಡದೇ , ಪರಿಹಾರ ಮೊತ್ತವನ್ನು ಬಿಡುಗಡೆ ಮಾಡದೇ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮಲತಾಯಿ ಧೋರಣೆ ತೋರುತ್ತಿದೆ. ಕೇಂದ್ರಸರ್ಕಾರ ನರೇಗಾ ಯೋಜನೆಯಡಿ ದಿನಗೂಲಿ ಕಾರ್ಮಿಕರ ವೇತನ 600 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿಲ್ಲ ಎಂದರು.

ನಿಗಮ ಮಂಡಳಿ ಅಧ್ಯಕ್ಷರ ಆಯ್ಕೆಗೆ ಚರ್ಚೆ : ಕೇಂದ್ರ ಕಾಂಗ್ರೆಸ್ ನಾಯಕರಾದ ರಣದೀಪ್ ಸುರ್ಜೆವಾಲ ಹಾಗೂ ವೇಣುಗೋಪಾಲ್ ಅವರು ರಾಜ್ಯಕ್ಕೆ ಬಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ,ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ನಾಯಕರು ರಾಜ್ಯಕ್ಕೆ ಆಗಮಿಸಿದ್ದಾರೆ. ಹಾಗೂ ಶಾಸಕರನ್ನು ಕೆಲವು ನಿಗಮ ಮಂಡಳಿಗಳಿಗೆ ಅಧ್ಯಕ್ಷರಾಗಿ ನೇಮಕ ಮಾಡುವ ಪ್ರಕ್ರಿಯೆಯೂ ಇದ್ದು, ಈ ಬಗ್ಗೆಯೂ ಕೇಂದ್ರ ನಾಯಕರೊಂದಿಗೆ ಚರ್ಚೆ ನಡೆಸಲಾಗುವುದು ಎಂದರು.

ಜಿಲ್ಲೆಯ ಜನರ ಕಷ್ಟಗಳಿಗೆ ಜಿಲ್ಲಾಮಂತ್ರಿಗಳ ಸ್ಪಂದನೆ : ಬರನಿರ್ವಹಣೆಗೆ ಸಂಬಂಧಿಸಿದಂತೆ ಯಾವ ಸಚಿವರೂ ಜಿಲ್ಲೆಗಳಿಗೆ ಭೇಟಿ ನೀಡುತ್ತಿಲ್ಲ ಎಂಬ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಎಲ್ಲಾ ಜಿಲ್ಲಾ ಮಂತ್ರಿಗಳು ತಮ್ಮ ಜಿಲ್ಲೆಗಳಿಗೆ ಭೇಟಿ ನೀಡಿ, ಜನರ ಅಹವಾಲುಗಳನ್ನು ಕೇಳಿ, ಅವರ ಕಷ್ಟ ಸುಖಗಳಿಗೆ ಸ್ಪಂದಿಸುತ್ತಿದ್ದಾರೆ ಎಂದರು.

ರಾಜ್ಯ ಸರ್ಕಾರದಿಂದ ಕುಡಿಯುವ ನೀರಿಗೆ 900 ಕೋಟಿ ರೂ: ರಾಜ್ಯಸರ್ಕಾರ ಕುಡಿಯುವ ನೀರಿನ ಬವಣೆ ನೀಗಿಸಲು 900 ಕೋಟಿ ಬಿಡುಗಡೆ ಮಾಡಿದೆ. ಜಿಲ್ಲೆಯ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಅನುದಾನ ನೀಡಿದ್ದು, ಹೆಚ್ಚಿನ ಮೊತ್ತಕ್ಕೆ ಬೇಡಿಕೆ ಸಲ್ಲಿಸಿದ್ದಲ್ಲಿ, ಸರ್ಕಾರ ತಕ್ಷಣ ಅನುದಾನ ಒದಗಿಸಲಿದೆ ಎಂದರು.

ಕೃಷಿ ಪಂಪಸೆಟ್ ಮುಂದುವರೆಸಲಾಗುವುದು : ಕೃಷಿ ಪಂಪಸೆಟ್ ಗಳಿಗೆ ಪೂರಕ ಸೌಲಭ್ಯಗಳು ರೈತರಿಗೆ ನಿಲ್ಲಿಸಲಾಗಿದೆ ಎಂಬುದಕ್ಕೆ ಉತ್ತರಿಸಿ, ಈ ವಿಚಾರ ಕೃಷಿ ಇಲಾಖೆಗೆ ಸಂಬಂಧಪಟ್ಟಿದ್ದು, ಈ ಬಗ್ಗೆ ಪರಿಶೀಲಿಸಲಾಗುವುದು. ಈ ಮುಂಚೆ ನೀಡುತ್ತಿದ್ದಂತೆ ಕೃಷಿ ಪಂಪಸೆಟ್ ಗಳಿಗೆ ಪೂರಕ ಸೌಲಭ್ಯಗಳನ್ನು ರೈತರಿಗೆ ಮುಂದುವರೆಸಲಾಗುವುದು ಎಂದು ತಿಳಿಸಿದರು.

ಬಿಜೆಪಿಯವರ ಹಗಲು ಕನಸು : ತನಿಖಾ ಸಂಸ್ಥೆಗಳಿಂದ ಕಾಂಗ್ರೆಸ್ ನವರ ಭ್ರಷ್ಟಾಚಾರ ಬೆಳಕಿಗೆ ಬರುತ್ತಿರುವುದಾಗಿ ಯಡಿಯೂರಪ್ಪ ತಿಳಿಸಿರುವ ಬಗ್ಗೆ ಉತ್ತರಿಸಿ, ಇವೆಲ್ಲ ಸುಳ್ಳು ಆರೋಪಗಳು ಎಂದರು. ಬಿಜೆಪಿ ಶಾಸಕ ಬಸವರಾಜ ಯತ್ನಾಳ್ ಅವರು ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಹೇಳಿದ್ದರೆ ಬಗ್ಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ಹಗಲುಗನಸು ಕಾಣುತ್ತಿದ್ದಾರೆ ಎಂದರು.

ಸಿದ್ದರಾಮಯ್ಯರವರು ಮುಂಚಿನ ಆಡಳಿತದ ವೈಖರಿ ತೋರುತ್ತಿಲ್ಲ ಎಂಬ ಯಡಿಯೂರಪ್ಪನವರ ಹೇಳಿಕೆಗೆ ಉತ್ತರಿಸಿ, ಯಡಿಯೂರಪ್ಪನವರು ರಾಜಕೀಯದಿಂದ ನಿವೃತ್ತರಾಗಿದ್ದಾರೆ. ಬಿಜೆಪಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿತು. ವಿಧಾನಸಭೆಯಲ್ಲಿ ಅವರು ಕಣ್ಣೀರಿಟ್ಟಿದ್ದರು. ಅವರ ಪಕ್ಷದವರೇ ಅವರನ್ನು ಮನೆಗೆ ಕಳುಹಿಸಿದ್ದಾರೆ. ಅವರ ಹೇಳಿಕೆಗಳಿಗೆ ಏನೂ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

Tags: BJPCentral GovtCMSiddaramaiah
Previous Post

Garadi | ಉತ್ತರ ಕರ್ನಾಟಕದ ಜನರ ಬಗ್ಗೆ “D” BOSS ಏನಂದ್ರು ಗೊತ್ತಾ? | @PratidhvaniNews

Next Post

ನ.10ಕ್ಕೆ ಬಿಡುಗಡೆಯಾಗ್ತಿದೆ ಎಸ್ತರ್ ನರೋನ್ಹಾ ನಿರ್ದೇಶಿಸಿ ನಟಿಸಿರುವ ‘ದಿ ವೆಕೆಂಟ್ ಹೌಸ್’

Related Posts

Top Story

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

by ಪ್ರತಿಧ್ವನಿ
July 30, 2025
0

ನಮ್ಮ ಮತ, ನಮ್ಮ ಹಕ್ಕು ರಕ್ಷಣೆ ಮಾಡಿಕೊಳ್ಳಲು ಸಿದ್ಧರಾಗಬೇಕು, ಪಕ್ಷದ ಕಾರ್ಯಕರ್ತರು, ಮುಖಂಡರಿಗೆ ಕರೆ “ನಮ್ಮ ರಾಜ್ಯದ ಚುನಾವಣೆಯಲ್ಲಿ ಆಗಿರುವ ಅಕ್ರಮ, ಚುನಾವಣಾ ಆಯೋಗದಿಂದ ಆಗಿರುವ ಅನ್ಯಾಯವನ್ನು...

Read moreDetails

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

July 30, 2025

MB Patil: ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಎಂ ಬಿ ಪಾಟೀಲ, ಪ್ರಿಯಾಂಕ್‌ ಖರ್ಗೆ ಮಾತುಕತೆ

July 30, 2025

Australia:16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸದಂತೆ ನೀಷೇದಿಸಿದ ಆಸ್ಟ್ರೇಲಿಯಾ ಸರ್ಕಾರ..!!

July 30, 2025

Lakshmi Hebbalkar: ಗೃಹಲಕ್ಷ್ಮೀ ಯೋಜನೆಯ ಜಂಟಿ ಹೊಣೆಗಾರಿಕೆ ಗುಂಪುಗಳ ಕುರಿತು ಸಭೆ

July 30, 2025
Next Post
ನ.10ಕ್ಕೆ ಬಿಡುಗಡೆಯಾಗ್ತಿದೆ ಎಸ್ತರ್ ನರೋನ್ಹಾ ನಿರ್ದೇಶಿಸಿ ನಟಿಸಿರುವ ‘ದಿ ವೆಕೆಂಟ್ ಹೌಸ್’

ನ.10ಕ್ಕೆ ಬಿಡುಗಡೆಯಾಗ್ತಿದೆ ಎಸ್ತರ್ ನರೋನ್ಹಾ ನಿರ್ದೇಶಿಸಿ ನಟಿಸಿರುವ ‘ದಿ ವೆಕೆಂಟ್ ಹೌಸ್’

Please login to join discussion

Recent News

Top Story

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

by ಪ್ರತಿಧ್ವನಿ
July 30, 2025
Top Story

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

by ಪ್ರತಿಧ್ವನಿ
July 30, 2025
Top Story

MB Patil: ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಎಂ ಬಿ ಪಾಟೀಲ, ಪ್ರಿಯಾಂಕ್‌ ಖರ್ಗೆ ಮಾತುಕತೆ

by ಪ್ರತಿಧ್ವನಿ
July 30, 2025
Top Story

Australia:16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸದಂತೆ ನೀಷೇದಿಸಿದ ಆಸ್ಟ್ರೇಲಿಯಾ ಸರ್ಕಾರ..!!

by ಪ್ರತಿಧ್ವನಿ
July 30, 2025
Top Story

Lakshmi Hebbalkar: ಗೃಹಲಕ್ಷ್ಮೀ ಯೋಜನೆಯ ಜಂಟಿ ಹೊಣೆಗಾರಿಕೆ ಗುಂಪುಗಳ ಕುರಿತು ಸಭೆ

by ಪ್ರತಿಧ್ವನಿ
July 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

July 30, 2025

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

July 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada