ಅತ್ತಿಬೆಲೆಯಲ್ಲಿನ ಪಟಾಕಿ ದುರುಂತದಲ್ಲಿ 17 ಜನ ಸಾವನ್ನಪ್ಪಿದ ಬಳಿಕ, ರಾಜ್ಯ ಸರ್ಕಾರ ಈ ಬಾರಿಯ ದೀಪಾವಳಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.
ಅಧಿಕೃತ ಪರ್ಮನೆಂಟ್ ಲೈಸೆನ್ಸ್ ಹೊಂದಿದವರು ಮಾತ್ರ ಪಟಾಕಿ ಮಾರುವುದಕ್ಕೆ ಅವಕಾಶ ನೀಡಿದೆ. ತಾತ್ಕಾಲಿಕ ಅನುಮತಿ ಪಡೆದು ಮೈದಾನಗಳಲ್ಲಿ ಪಟಾಕಿ ಅಂಗಡಿ ಹಾಕುತ್ತಿದ್ದವರಿಗೆ ಸರ್ಕಾರ ಅನುಮತಿ ನೀಡಿಲ್ಲ. ಮೈದಾನಗಳಲ್ಲಿ ಪಟಾಕಿ ಮಾರಾಟ ಸಂಪೂರ್ಣ ನಿಷೇಧಿಸಲಾಗಿದೆ. ಗ್ರೀನ್ ಪಟಾಕಿಗಳನ್ನು ಮಾರುವುದಕ್ಕೆ ಮಾತ್ರ ಅವಕಾಶ ನೀಡಲಾಗಿದೆ.
ಪಟಾಕಿ ಮಳಿಗೆಗಳನ್ನ ಪರಿಶೀಲಿಸಿ, ಗ್ರೀನ್ ಪಟಾಕಿ ಹೊರತುಪಡಿಸಿ ಬೇರೆ ಪಟಾಕಿ ಇದ್ದರೇ ಮುಟ್ಟುಗೋಲು ಹಾಕಿಕೊಂಡು ಕ್ರಮಿನಲ್ ಪ್ರಕರಣ ದಾಖಲಿಸಲಾಗುತ್ತದೆ. ಗ್ರೀನ್ ಪಟಾಕಿಗಳ ಪ್ಯಾಕೆಟ್ಗಳ ಮೇಲೆ ಚಿಹ್ನೆ ಇದ್ದು, ಕ್ಯುಆರ್ ಕೋಡ್ ಸಹ ಇರುತ್ತೆ.
ರಾತ್ರಿ 8 ಗಂಟೆಯಿಂದ 10 ಗಂಟೆವರೆಗೆ ಮಾತ್ರ ಪಟಾಕಿ ಹೊಡೆಯಲು ಅವಕಾಶ ನೀಡಲಾಗಿದೆ. ಮಕ್ಕಳು ಪ್ರಾಣಿ ಪಕ್ಷಿಗಳಿಗೆ ತೊಂದರೆಯಾಗದಂತೆ ಪಟಾಕಿ ಹೊಡೆಯಬೇಕು. ಒಂದು ವೇಳೆ ನಿಯಮ ಮೀರಿ ಅಕ್ರಮವಾಗಿ ಪಟಾಕಿ ಮಾರಿದರೇ ಅಥವಾ ಹೊಡೆದರೇ ಪ್ರಕರಣ ದಾಖಲಿಸಲಾಗುತ್ತದೆ.