ಚಿನ್ನಾಭರಣ ವ್ಯಾಪಾರಕ್ಕೆ ಸಂಬಂಧಿಸಿದ ₹100 ಕೋಟಿ ಮೊತ್ತದ ಪೊಂಜಿ ಸ್ಕೀಂ ಹಗರಣಕ್ಕೆ ಸಂಬಂಧಿಸಿದಂತೆ ನಟ ಪ್ರಕಾಶ್ ರಾಜ್ ಅವರನ್ನು ವಿಚಾರಣೆಗಾಗಿ ಜಾರಿ ನಿರ್ದೇಶನಾಲಯ (ED) ಸಮನ್ಸ್ ನೀಡಿದೆ.
ಪಿಟಿಐ ವರದಿಯ ಪ್ರಕಾರ, ತಿರುಚಿರಾಪಳ್ಳಿ ಮೂಲದ ಪಾಲುದಾರಿಕೆ ಸಂಸ್ಥೆಯಾದ ಪ್ರಣವ್ ಜ್ಯುವೆಲರ್ಸ್ ವಿರುದ್ಧ ಇಡಿ ದಾಳಿ ನಡೆಸಿತು ಮತ್ತು 23.70 ಲಕ್ಷ ರೂಪಾಯಿಗಳಷ್ಟು “ದಾಖಲೆ ಇಲ್ಲದ” ನಗದು ಮತ್ತು ಕೆಲವು ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದೆ.
ಪ್ರಣವ್ ಜ್ಯುವೆಲ್ಲರ್ಸ್ ನಡೆಸುತ್ತಿದ್ದ ಮಳಿಗೆಗಳು ಅಕ್ಟೋಬರ್ನಲ್ಲಿ ಕಾರ್ಯಚರಣೆ ಸ್ಥಗಿತ ಮಾಡಿದ್ದವು. ಇದರ ನಂತರ ದೂರುಗಳ ದಾಖಲಾಗುದ್ದು, ಅದರ ಆಧಾರದ ಮೇಲೆ ತಮಿಳುನಾಡಿನ ತಿರುಚ್ಚಿಯ ಆರ್ಥಿಕ ಅಪರಾಧಗಳ ವಿಭಾಗವು ಮಾಲೀಕ ಮದನ್ ವಿರುದ್ಧ ಪ್ರಕರಣ ದಾಖಲಿಸಿದೆ. ಈ ತಿಂಗಳ ಆರಂಭದಲ್ಲಿ ಮಾಲೀಕರು ಮತ್ತು ಅವರ ಪತ್ನಿ ವಿರುದ್ಧ ಲುಕ್ಔಟ್ ನೋಟಿಸ್ ಕೂಡ ಜಾರಿ ಮಾಡಲಾಗಿತ್ತು. ಈಗ ಪ್ರಕಾಶ್ ರಾಜ್ ಗೆ ಸಮನ್ಸ್ ಜಾರಿ ಮಾಡಿದೆ.
ಚಿನ್ನದ ಹೂಡಿಕೆ ಯೋಜನೆಯ ನೆಪದಲ್ಲಿ ಪ್ರಣವ್ ಜ್ಯುವೆಲ್ಲರ್ಸ್ನಿಂದ ₹ 100 ಕೋಟಿ ಸಂಗ್ರಹಿಸಲಾಗಿದೆ ಎಂದು ಇಡಿ ನಿನ್ನೆ ಹೇಳಿಕೆಯಲ್ಲಿ ತಿಳಿಸಿದೆ . ಹೂಡಿಕೆ ಮಾಡಿದ ಮೊತ್ತವನ್ನು ಹೂಡಿಕೆದಾರರಿಗೆ ಹಿಂತಿರುಗಿಸಲಾಗಿಲ್ಲ. ವಿವಿಧ ರೀತಿಯಲ್ಲಿ ಸಾರ್ವಜನಿಕರನ್ನು ವಂಚಿಸಿದೆ ಎಂದು ಇಡಿ ಹೇಳಿದೆ.

ಪ್ರಕಾಶ್ ರಾಜ್ ಅವರು ಹಗರಣದ ಆರೋಪ ಹೊತ್ತಿರುವ ಪ್ರಣವ್ ಜ್ಯುವೆಲರ್ಸ್ನ ಬ್ರಾಂಡ್ ಅಂಬಾಸಿಡರ್ ಆಗಿದ್ದರು. “ಬಹುಭಾಷ ಚಲನಚಿತ್ರಗಳಲ್ಲಿ ವಿವಿಧ ಪಾತ್ರಗಳನ್ನು ನಿರ್ವಹಿಸಿರುವ ಪ್ರಕಾಶ್ ರಾಜ್ ಅವರು ಬಿಜೆಪಿ ಮತ್ತು ಪ್ರಧಾನಿ ಮೋದಿಯ ನಿಷ್ಠುರ ಟೀಕಾಕಾರರಾಗಿದ್ದರು.





