• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಹತ್ಯೆ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ದೆಹಲಿ ಕೋರ್ಟ್

Any Mind by Any Mind
November 25, 2023
in ದೇಶ
0
ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಹತ್ಯೆ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ದೆಹಲಿ ಕೋರ್ಟ್
Share on WhatsAppShare on FacebookShare on Telegram

ADVERTISEMENT

ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಹತ್ಯೆ ಪ್ರಕರಣದಲ್ಲಿ ನಾಲ್ವರು ಅಪರಾಧಿಗಳಿಗೆ ದೆಹಲಿಯ ಸಾಕೇತ್ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ‌.

ದೆಹಲಿಯಲ್ಲಿ 2008ರ ಸೆಪ್ಟೆಂಬರ್ ರಂದು ಕೆಲಸ ಮುಗಿಸಿ ಕಚೇರಿಯಿಂದ ಮನೆಗೆ ಹಿಂದಿರುಗುವಾಗ ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಇದೀಗ 15 ವರ್ಷಗಳ ಬಳಿಕ ತೀರ್ಪು ಹೊರ ಬಂದಿದೆ. ರವಿ ಕಪೂರ್, ಅಜಯ್ ಕುಮಾರ್, ಅಮಿತ್ ಶುಕ್ಲಾ ಮತ್ತು ಬಲ್ಜೀತ್ ಮಲಿಕ್ ಎಂಬುವವರು ಅಪರಾಧಿಗಳಾಗಿದ್ದು, ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಇದಲ್ಲದೇ ಅಪರಾಧಿಗಳಿಗೆ 5 ಲಕ್ಷ ರೂಪಾಯಿ ದಂಡವನ್ನೂ ಹಾಕಲಾಗಿದೆ. ಮತ್ತೊಬ್ಬ ಅಪರಾಧಿ ಅಜಯ್ ಸೇಥಿ ಎಂಬಾತನಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

ದೆಹಲಿಯಲ್ಲಿ ದೃಶ್ಯ ಮಾಧ್ಯಮದಲ್ಲಿ ಪತ್ರಕರ್ತೆಯಾಗಿದ್ದ ಸೌಮ್ಯಾ ವಿಶ್ವನಾಥನ್ 2008ರ ಸೆಪ್ಟೆಂಬರ್ 30ರಂದು ಬೆಳಗಿನ ಜಾವ 3:30ರ ಸುಮಾರಿಗೆ ಕಚೇರಿಯಿಂದ ಮನೆಗೆ ಹಿಂದಿರುಗುವಾಗ ಹಿಂಬಾಲಿಸಿಕೊಂಡು ಬಂದಿದ್ದ ಐವರು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ, ಸೌಮ್ಯಾ ಅವರನ್ನು ಬರ್ಬರವಾಗಿ ಕೊಲೆ ಮಾಡಿದ್ದರು. ತಮ್ಮ ಕೃತ್ಯ ಬಯಲಾಗದಂತೆ ಮಾಡಲು ರಸ್ತೆ ಅಪಘಾತ ಎಂಬಂತೆ ಬಿಂಬಿಸಿದ್ದರು.

ಆದರೆ, ವಿಧಿವಿಜ್ಞಾನ ವರದಿಗಳಲ್ಲಿ ಸೌಮ್ಯಾ ತಲೆಗೆ ಗುಂಡೇಟು ತಗುಲಿ ಸಾವನ್ನಪ್ಪಿದ್ದಾರೆ ಎಂದು ಬಹಿರಂಗವಾಗಿತ್ತು. ಇದರಿಂದ ಇದೊಂದು ಕೊಲೆ ಎಂದು ಸ್ಪಷ್ಟವಾಗಿ, ಇದರ ಆಧಾರದ ಮೇಲೆ ದೆಹಲಿ ಪೊಲೀಸರು ತನಿಖೆ ಪ್ರಾರಂಭಿಸಿದ್ದರು. ಇಂದು ಐವರಿಗೂ ಕೋರ್ಟ್ ಶಿಕ್ಷೆ ವಿಧಿಸಿದೆ. ಅದರಲ್ಲಿ ನಾಲ್ವರಿಗೆ ಜೀವಾವಧಿ ಒರ್ವನಿಗೆ ಮೂರು ವರ್ಷ ಜೈಲು ಶಿಕ್ಷೆಯಾಗಿದೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಅಸಮಾನತೆ ಹೋಗಲಾಡಿಸಲು ಮೀಸಲಾತಿ ವ್ಯವಸ್ಥೆ ಮುಖ್ಯ : ಸಿಜೆಐ ಡಿ ವೈ ಚಂದ್ರಚೂಡ್​

Next Post

ಹರಿಯಾಣದಲ್ಲಿ ಕಡಿಮೆ ತೀವ್ರತೆಯ ಭೂಕಂಪ

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

April 19, 2026
Next Post
ಹರಿಯಾಣದಲ್ಲಿ ಕಡಿಮೆ ತೀವ್ರತೆಯ ಭೂಕಂಪ

ಹರಿಯಾಣದಲ್ಲಿ ಕಡಿಮೆ ತೀವ್ರತೆಯ ಭೂಕಂಪ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada