• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಯ ಬಗ್ಗೆ BBMP ಆಯುಕ್ತರ ಸಭೆ!

Any Mind by Any Mind
December 15, 2023
in ಕರ್ನಾಟಕ
0
ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಯ ಬಗ್ಗೆ BBMP ಆಯುಕ್ತರ ಸಭೆ!
Share on WhatsAppShare on FacebookShare on Telegram

ADVERTISEMENT

ಬೃಹತ್ ನೀರುಗಾಲುವೆ ಹಾಗೂ ಕೆರೆಗಳಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಯ ಸರ್ವೇ ಕಾರ್ಯಕ್ಕಾಗಿ ಹೆಚ್ಚು ಭೂಮಾಪಕರನ್ನು ನಿಯೋಜಿಸಲು ಭೂದಾಖಲೆಗಳ ಇಲಾಖೆಗೆ ಪತ್ರ ಬರೆಯಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗೆ ಸೂಚನೆ ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಬೃಹತ್ ನೀರುಗಾಲುವೆಗಳ ಒತ್ತುವರಿ ತೆರವು ಕಾರ್ಯಾಚರಣೆಯ ಸಂಬಂಧ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಬೃಹತ್ ನೀರುಗಾಲುವೆ ಹಾಗೂ ಕೆರೆಗಳಲ್ಲಿ ಸರ್ವೇ ಮಾಡಲು ಹೆಚ್ಚು ಭೂಮಾಪಕರ ಅವಶ್ಯಕತೆಯಿದ್ದು, ಕಂದಾಯ ಇಲಾಖೆಯ ಅಡಿ ಬರುವ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಗೆ ಪತ್ರ ಬರೆದು ಹೆಚ್ಚು ಭೂಮಾಪಕರನ್ನು ನಿಯೋಜನೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಯಿತು.

ನಗರದಲ್ಲಿ ಬೃಹತ್ ನೀರುಗಾಲುವೆಗಳನ್ನು ಒತ್ತುವರಿ ಮಾಡಿಕೊಂಡಿರುವ ಸ್ಥಳಗಳನ್ನು ಭೂಮಾಪಕರಿಂದ ಸರ್ವೇ ನಡೆಸಿ ಮಾರ್ಕ್ ಮಾಡಿ, ತಹಶೀಲ್ದಾರ್ ರವರಿಂದ ಆದೇಶಗಳನ್ನು ಜಾರಿಮಾಡಿರುವಂತಹ ಒತ್ತುವರಿಗಳನ್ನು ಕೂಡಲೆ ತೆರವುಗೊಳಿಸಬೇಕು. ಉಚ್ಛ ನ್ಯಾಯಾಲಯದಲ್ಲಿ ತಡೆಯಾಜ್ಞೆಯಿರುವ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಿಕೊಂಡು ತೆರವು ಕಾರ್ಯಾಚರಣೆ ನಡೆಸಲು ಸೂಚನೆ ನೀಡಲಾಯಿತು.

ನಿಗದಿತ ಸಮಯದಲ್ಲಿ ಕೆರೆ ಹಾಗೂ ರಾಜಕಾಲುವೆ ಒತ್ತುವರಿಗಳನ್ನು ಗುರುತಿಸಲು ಕಂದಾಯ ಇಲಾಖೆಗೆ ಸೂಚನೆ ನೀಡಲಾಗಿದೆ. ಒತ್ತುವರಿಗಳನ್ನು ಗುರುತಿಸಿದ ನಂತರ ತಹಶೀಲ್ದಾರ್ ಗಳು ಒತತುವರಿದಾರರಿಗೆ ಆದೇಶಗಳನ್ನು ನೀಡಿದ ಬಳಿಕ ಪಾಲಿಕೆ ಹಾಗೂ ಕಂದಾಯ ಇಲಾಖೆಯು ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಲಿದೆ.

75 ಒತ್ತುವರಿಗಳನ್ನು ತೆರವುಗೊಳಿಸಿರುವ ವಿವರ:

ನಗರದಲ್ಲಿ ಬೃಹತ್ ನೀರುಗಾಲುವೆಗಳ ಒತ್ತುವರಿ ತೆರವು ಕಾರ್ಯಾಚರಣೆ ಪ್ರಕ್ರಿಯೆ ಸಕ್ರಿಯವಾಗಿ ನಡೆಯುತ್ತಿದ್ದು, ಕಳೆದ 15 ದಿನಗಳಲ್ಲಿ ಮಹದೇವಪುರ ವ್ಯಾಪ್ತಿಯಲ್ಲಿ ಬರುವ ಎಬಿಕೆ, ಗುಂಜೂರು, ಕರಿಯಮ್ಮನ ಅಗ್ರಹಾರ, ಬೆಳ್ಳತ್ತೂರಿನಲ್ಲಿ ಹಾಗೂ ಕೆ.ಆರ್ ಪುರದ ಸರ್ವೇ ಸಂಖ್ಯೆ 69ರಲ್ಲಿ ಬರುವ 3 ಅಂತಸ್ತಿನ ಕಟ್ಟಡದಲ್ಲಿ ಬರುವ 10 ಮಳಿಗೆಗಳು ಸೇರಿದಂತೆ 62 ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ. ಇನ್ನು ಯಲಹಂಕ ವಲಯ ವ್ಯಾಪ್ತಿಯಲ್ಲಿ 8 ಒತ್ತುವರಿಗಳು ಹಾಗೂ ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿ 5 ಒತ್ತುವರಿಗಳು ಸೇರಿದಂತೆ ಒತ್ತು 75 ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ.

ಬೃಹತ್ ನೀರುಗಾಲುವೆ ಒತ್ತುವರಿಗಳ ವಿವರ:

ನಗರದಲ್ಲಿ ಹೊಸ ಒತ್ತುವರಿಗಳು ಸೇರಿದಂತೆ 3176 ಒತ್ತುವರಿಗಳನ್ನು ಗುರುತಿಸಲಾಗಿದ್ದು, 2322 ಒತ್ತುವರಿಗಳನ್ನು ಇದುವರೆಗೆ ತೆರವುಗೊಳಿಸಲಾಗಿದೆ. ಇನ್ನು 854 ಒತ್ತುವರಿಗಳನ್ನು ತೆರವುಗೊಳಿಸಬೇಕಾಗಿದ್ದು, ಈ ಪೈಕಿ 155 ಒತ್ತುವರಿ ಪ್ರಕರಣಗಳು ನ್ಯಾಯಾಲಯದಲ್ಲಿರುತ್ತದೆ. 487 ಒತ್ತುವರಿಗಳಿಗೆ ಆದೇಶಗಳನ್ನು ಜಾರಿಗೊಳಿಸುವ ಹಂತದಲ್ಲಿದೆ. ಇನ್ನು 162 ಒತ್ತುವರಿಗಳಿಗೆ ತಹಶಿಲ್ದಾರಿಂದ ಆದೇಶಗಳನ್ನು ಜಾರಿಗೊಳಿಸಲಾಗಿದ್ದು, ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಬೇಕಿದೆ ಎಂದು ರಾಜಕಾಲುವೆ ವಿಭಾಗದ ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು.

ಕೆರೆಗಳ ಒತ್ತುವರಿಗಳ ಸರ್ವೇ ಕಾರ್ಯ ತ್ವರಿತವಾಗಿ ನಡೆಸಿ:

ಪಾಲಿಕೆ ವ್ಯಾಪ್ತಿಯಲ್ಲಿ 202 ಕೆರೆಗಳಿದ್ದು, 159 ಕೆರೆಗಳಲ್ಲಿ ಒತ್ತುವರಿಯಾಗಿದೆ ಎಂಬುದನ್ನು ಗುರುತಿಸಲಾಗಿದೆ. ಅದರಂತೆ 140 ಕೆರೆಗಳಲ್ಲಿ ಒತ್ತುವರಿಯಾಗಿರುವ ಬಗ್ಗೆ ತಹಶೀಲ್ದಾರರಿಗೆ ಪತ್ರಗಳನ್ನು ಬರೆಯಲಾಗಿದೆ. ಈ ಪೈಕಿ 40 ಕೆರೆಗಳ ಸರ್ವೇ ಕಾರ್ಯ ಪೂರ್ಣಗೊಂಡಿದ್ದು, 100 ಕೆರೆಗಳಲ್ಲಿ ಸರ್ವೇ ಕಾರ್ಯ ನಡೆಸಬೇಕಿದೆ. ಉಳಿದ ಕೆರೆಗಳಲ್ಲಿ ಸರ್ವೇಕಾರ್ಯವನ್ನು ತ್ವರಿತವಾಗಿ ನಡೆಸಲು ಸೂಚನೆ ನೀಡಿದರು.

ಸಭೆಯಲ್ಲಿ ಯೋಜನಾ ವಿಭಾಗದ ವಿಶೇಷ ಆಯುಕ್ತರಾದ ಡಾ. ಕೆ. ಹರೀಶ್ ಕುಮಾರ್, ಬಿಎಂಟಿಎಫ್ ಸೂಪರಿಡೆಂಟ್ ಆಫ್ ಪೊಲೀಸ್ ಡಾ. ವಿ.ಜೆ ಶೋಭಾ ರಾಣಿ, IPS., ಎಲ್ಲಾ ವಲಯ ಆಯುಕ್ತರು, ವಲಯ ಜಂಟಿ ಆಯುಕ್ತರು, ಇಂಜಿನಿಯರಿಂಗ್ ವಿಭಾಗದ ಪ್ರಧಾನ ಅಭಿಯಂತರರು, ವಲಯ ಮುಖ್ಯ ಅಭಿಯಂತರರು, ರಾಜಕಾಲುವೆ ವಿಭಾಗಕ್ಕೆ ಸಂಬಂಧಿಸಿದ ಅಧಿಕಾರಿಗಳು, ಬೆಂಗಳೂರು ನಗರ ಜಿಲ್ಲೆಯ ತಹಶೀಲ್ದಾರ್ ಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Tags: BJPCongress Partyನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸಂಸತ್ ಭವನಕ್ಕೆ ನುಗ್ಗಿದ್ದ ವ್ಯಕ್ತಿ ಪ್ರತಾಪ್ ಸಿಂಹನ ಐಟಿ ಸೆಲ್ನಲ್ಲಿ ಕೆಲಸ ಮಾಡುತ್ತಿದ್ದ : ಎಂ ಲಕ್ಷ್ಮಣ್ ಆರೋಪ

Next Post

ಇಂಧನ ಸಚಿವ ಕೆ.ಜೆ ಜಾರ್ಜ್ ಕಚೇರಿಯಲ್ಲಿ ಕಳ್ಳತನ

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
ಇಂಧನ ಸಚಿವ ಕೆ.ಜೆ ಜಾರ್ಜ್ ಕಚೇರಿಯಲ್ಲಿ ಕಳ್ಳತನ

ಇಂಧನ ಸಚಿವ ಕೆ.ಜೆ ಜಾರ್ಜ್ ಕಚೇರಿಯಲ್ಲಿ ಕಳ್ಳತನ

Please login to join discussion

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada