• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಿಜೆಪಿಯನ್ನು ಶಾಶ್ವತವಾಗಿ ವಿಪಕ್ಷ ಸ್ಥಾನದಲ್ಲಿ ಕೂರಿಸಬೇಕೆಂಬುದು ನನ್ನ ಗುರಿ: ಸಿದ್ದರಾಮಯ್ಯ

Any Mind by Any Mind
January 3, 2024
in ಕರ್ನಾಟಕ, ರಾಜಕೀಯ
0
ರಾಜ್ಯದಲ್ಲಿ ಹಿಜಾಬ್ ನಿಷೇಧ ವಾಪಸ್ : ಸಿಎಂ ಸಿದ್ದರಾಮಯ್ಯ ಮಹತ್ವದ ನಿರ್ಧಾರ
Share on WhatsAppShare on FacebookShare on Telegram

ಬೆಂಗಳೂರು: ಹುಬ್ಬಳ್ಳಿಯಲ್ಲಿ ಹಿಂದೂ ಕರಸೇವಕರ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಿಡಿಕಾರುತ್ತಿರುವ ಬಿಜೆಪಿ ನಾಯಕರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಿಎಂ ಸಿದ್ದರಾಮಯ್ಯ, ನಾಲ್ಕು ವರ್ಷಗಳ ಕಾಲ ದುರಾಡಳಿತ ಮತ್ತು ಭ್ರಷ್ಟಾಚಾರದ ಹಗರಣಗಳಲ್ಲಿಯೇ ಕಾಲ ಕಳೆದಿದ್ದ ಭಾರತೀಯ ಜನತಾ ಪಕ್ಷಕ್ಕೆ ನಮ್ಮ ಸರ್ಕಾರದ ಸಾಧನೆಗಳಿಗೆ ವ್ಯಕ್ತವಾಗುತ್ತಿರುವ ಜನಸ್ಪಂದನ ದಿಗಿಲು ಹುಟ್ಟಿಸಿದೆ. ಇದಕ್ಕಾಗಿ ಹುಬ್ಬಳ್ಳಿಯ ಕ್ರಿಮಿನಲ್ ಆರೋಪಿಯೊಬ್ಬನ ಬಂಧನದ ಎಳೆ ಹಿಡಿದುಕೊಂಡು ನೇತಾಡುತ್ತಿದ್ದಾರೆ. ಅಪರಾಧಿಗಳಿಗೆ ಜಾತಿ, ಧರ್ಮಗಳ ಬಣ್ಣ ಹಚ್ಚುವುದು ಅತ್ಯಂತ ಅಪಾಯಕಾರಿ ಎನ್ನುವುದನ್ನು ಬಿಜೆಪಿ ನಾಯಕರು ಅರ್ಥಮಾಡಿಕೊಳ್ಳಬೇಕು.

ADVERTISEMENT

ರಾಜ್ಯದಲ್ಲಿ ಹಿಂದೆ ಬಿಜೆಪಿ ಸರ್ಕಾರ ಇದ್ದಾಗಲೇ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರನ್ನು ಬಂಧಿಸಿ ಜೈಲಿಗಟ್ಟಿದ್ದರು. ಯಡಿಯೂರಪ್ಪನವರಿಗಿಂತ ದೊಡ್ಡ ಹಿಂದೂ? ರಾಮ ಭಕ್ತ ಯಾರಿದ್ದಾರೆ? ಹಾಗಿದ್ದರೆ ಆಗಿನ ಸರ್ಕಾರ ಹಿಂದು ವಿರೋಧಿಯೇ? ಬಿಜೆಪಿ ಬಿಟ್ಟು ಬಿಡಿ, ಅದರ ಪರಿವಾರದ ನಾಯಕರು ಕೂಡಾ ಹಿಂದೂ ಯಡಿಯೂರಪ್ಪನವರನ್ನು ಬಂಧಿಸಿದ ಸರ್ಕಾರ ಹಿಂದು ವಿರೋಧಿ ಎಂದು ಕೂಗಾಡಲಿಲ್ಲವಲ್ಲ? ಈಗ ಯಾಕೆ ಈ ಕೂಗಾಟ?

ರಾಜ್ಯದ ಬಿಜೆಪಿಯ ಸ್ಥಿತಿ ಒಂದು ಮನೆ ನೂರು ಬಾಗಿಲು ಎಂಬಂತಾಗಿದೆ. ಆ ಪಕ್ಷದ ರಾಜ್ಯಾಧ್ಯಕ್ಷರನ್ನು ಅದೇ ಪಕ್ಷದ ಹಿರಿಯ ನಾಯಕರು ಈಗಲೂ ಒಪ್ಪಿಕೊಂಡಿಲ್ಲ, ವಿರೋಧ ಪಕ್ಷದ ನಾಯಕರ ಮಾತಿಗೆ ಸದನದಲ್ಲಿಯೇ ಸದಸ್ಯರು ಬಿಡಿಗಾಸಿನ ಕಿಮ್ಮತ್ತು ಕೊಟ್ಟಿಲ್ಲ. ಯಡಿಯೂರಪ್ಪ ಮತ್ತು ಮಕ್ಕಳ ವಿರುದ್ದ ದಿನಕ್ಕೊಂದು ಗಂಭೀರ ಸ್ವರೂಪದ ಆರೋಪ ಮಾಡುತ್ತಿರುವ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕನಿಷ್ಠ ಒಂದು ಎಚ್ಚರಿಕೆಯ ನೋಟೀಸ್ ನೀಡಲಾಗದಷ್ಟು ಪಕ್ಷ ನಿರ್ವಿರ್ಯವಾಗಿದೆ. ಕಾಂಗ್ರೆಸ್ ಸರ್ಕಾರ ದಿನದಿಂದ ದಿನಕ್ಕೆ ಜನಾನುರಾಗಿಯಾಗುತ್ತಿದೆ. ಈ ಹತಾಶೆಯಿಂದ ಹೊರಬರಲು ಒಬ್ಬ ಕ್ರಿಮಿನಲ್ ಆರೋಪಿಯನ್ನು ಮುಂದಿಟ್ಟು ಬಿಜೆಪಿ ನಾಯಕರು ಕೂಗಾಡುತ್ತಿದ್ದಾರೆ.

ಒಬ್ಬ ಕ್ರಿಮಿನಲ್ ಆರೋಪಿಯನ್ನು ಸಮರ್ಥಿಸುವಂತಹ ದುಸ್ಥಿತಿ ಒಂದು ರಾಷ್ಟ್ರೀಯ ಪಕ್ಷಕ್ಕೆ ಬರಬಾರದಿತ್ತು. ಹುಬ್ಬಳ್ಳಿಯ ಆರೋಪಿಯನ್ನು ಸಮರ್ಥಿಸಿಕೊಂಡು ಹೋರಾಟಕ್ಕೆ ಇಳಿದಿರುವ ಬಿಜೆಪಿ ನಾಯಕರಲ್ಲಿ ಯಾರಾದರೂ ಸ್ವಲ್ಪ ಬುದ್ದಿಗಿದ್ದಿ ಹೊಂದಿದವರಿದ್ದರೆ ದಯವಿಟ್ಟು ಆ ವ್ಯಕ್ತಿಯ ಮೇಲಿನ ಆರೋಪಗಳ ಪಟ್ಟಿಯನ್ನು ತರಿಸಿ ಓದಿ, ಆ ಮೇಲೆ ಹೋರಾಟಕ್ಕೆ ಇಳಿಯಿರಿ. ಜನಸಂಖ್ಯೆಯಲ್ಲಿ ಹಿಂದೂಗಳೇ ಬಹುಸಂಖ್ಯೆಯಲ್ಲಿರುವುದರಿಂದ ಜೈಲುಗಳಲ್ಲಿರುವ ಕೈದಿಗಳಲ್ಲಿಯೂ ಹಿಂದೂ ಧರ್ಮಿಯರೇ ಬಹುಸಂಖ್ಯೆಯಲ್ಲಿದ್ದಾರೆ. ಅವರೆಲ್ಲ ಹಿಂದೂ ಧರ್ಮಕ್ಕೆ ಸೇರಿದವರು ಎನ್ನುವ ಕಾರಣಕ್ಕೆ ಬಿಜೆಪಿ ಅವರ ಪರವಾಗಿ ಹೋರಾಟ ನಡೆಸುತ್ತಾ?

ರಾಜ್ಯದಲ್ಲಿ ಕ್ರಿಮಿನಲ್ ಕೃತ್ಯಗಳು ಹೆಚ್ಚಾಗಲು ಅಪರಾಧ ಮತ್ತು ಅಪರಾಧಿಗಳಿಗೆ ಜಾತಿ-ಧರ್ಮದ ಬಣ್ಣಹಚ್ಚುವ ಬಿಜೆಪಿಯ ಕಾನೂನು ವಿರೋಧಿ ನಡವಳಿಕೆಗಳೇ ಕಾರಣ. ವ್ಯಕ್ತಿಯೊಬ್ಬ ಎಂತಹ ಘನಘೋರ ಅಪರಾಧಗಳನ್ನು ಬೇಕಾದರೂ ಎಸಗಲಿ, ಆತ ಕೇಸರಿ ಶಾಲನ್ನು ತಲೆಗೆ ಸುತ್ತಿಕೊಂಡು ನಾನೊಬ್ಬ ಹಿಂದೂ ಎಂದು ಕೂಗಿದರೆ ಬಿಜೆಪಿ ನಾಯಕರು ಆತನ ರಕ್ಷಣೆಗೆ ಧಾವಿಸುತ್ತಾರೆ. ಈ ಮೂಲಕ ಕೇಸರಿ ಶಾಲು ಮಾತ್ರವಲ್ಲ ಹಿಂದೂ ಧರ್ಮಕ್ಕೂ ಬಿಜೆಪಿ ನಾಯಕರು ಅವಮಾನ ಮಾಡುತ್ತಿದ್ದಾರೆ. ಇದು ಧರ್ಮದ್ರೋಹದ ನಡೆ. ಕಾನೂನನ್ನು ಅದರ ಪಾಡಿಗೆ ಕೆಲಸ ಮಾಡಲು ಬಿಟ್ಟು ಬಿಡಿ.

ರಾಜ್ಯದ ಬಿಜೆಪಿ ನಾಯಕರಲ್ಲಿ ಈಗಲೂ ನಾನು ವಿನಂತಿ ಮಾಡುತ್ತಿದ್ದೇನೆ. ದೇವರು-ಧರ್ಮದ ಹೆಸರಲ್ಲಿ ಕ್ಷುಲಕ ರಾಜಕೀಯ ಮಾಡುವುದನ್ನು ಕೈಬಿಟ್ಟು ಜವಾಬ್ದಾರಿಯುತವಾದ ವಿರೋಧಪಕ್ಷವಾಗಿ ಕಾರ್ಯನಿರ್ವಹಿಸುವ ಪ್ರಯತ್ನ ಮಾಡಿ. ದೇಶವನ್ನು ಕಾಂಗ್ರೆಸ್ ಮುಕ್ತ ಮಾಡುತ್ತೇವೆ ಎಂದು ಹೇಳುತ್ತಿರುವ ಬಿಜೆಪಿ ರೀತಿಯಲ್ಲಿ ನಾವು ರಾಜ್ಯವನ್ನು ಬಿಜೆಪಿ ಮುಕ್ತ ಮಾಡುತ್ತೇವೆ ಎಂಬ ಸೊಕ್ಕಿನ ಹೇಳಿಕೆಗಳನ್ನು ನೀಡುವುದಿಲ್ಲ. ಆದರೆ ರಾಜ್ಯದಲ್ಲಿ ಬಿಜೆಪಿಯನ್ನು ಶಾಶ್ವತವಾಗಿ ವಿರೋಧಪಕ್ಷದ ಸ್ಥಾನದಲ್ಲಿ ಕೂರಿಸಬೇಕೆಂಬುದು ನನ್ನ ಗುರಿ. ರಾಜ್ಯ ಬಿಜೆಪಿ ನಾಯಕರ ಇತ್ತೀಚಿನ ಅವಾಂತರಗಳನ್ನೆಲ್ಲ ನೋಡಿದರೆ ಈ ಗುರಿ ಸಾಧನೆಗೆ ಅವರೇ ಸಹಕಾರ ನೀಡುತ್ತಿರುವಂತೆ ಕಾಣುತ್ತಿದೆ.

Previous Post

ಭವಿಷ್ಯದ ಕನಸುಗಳೊಂದಿಗೆ ವಿದ್ಯಾರ್ಥಿಗಳ ನಡಿಗೆ : ನಾ ದಿವಾಕರ ಅವರ ಬರಹ

Next Post

ದೇಶಾದ್ಯಂತ ಟ್ರಕ್‌, ಬಸ್‌ ಚಾಲಕರು ಪ್ರತಿಭಟನೆ: ಪೆಟ್ರೋಲ್‌, ಡೀಸೆಲ್ ಪೂರೈಕೆ ವ್ಯತ್ಯಯವಾಗುವ ಭೀತಿ

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
ಕರ್ನಾಟಕ

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

by ಪ್ರತಿಧ್ವನಿ
May 27, 2026
0

ಐದು ರಾಜ್ಯಗಳ ಚುನಾವಣೆ ಬಳಿಕ ಇದೀಗ ದೇಶದ ರಾಜಕೀಯ ಗಮನ ಸಂಪೂರ್ಣವಾಗಿ ಕರ್ನಾಟಕದತ್ತ ತಿರುಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಗಳು ರಾಜಕೀಯ ವಲಯದಲ್ಲಿ ಭಾರೀ...

Read moreDetails
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
Next Post
ದೇಶಾದ್ಯಂತ ಟ್ರಕ್‌, ಬಸ್‌ ಚಾಲಕರು ಪ್ರತಿಭಟನೆ: ಪೆಟ್ರೋಲ್‌, ಡೀಸೆಲ್ ಪೂರೈಕೆ ವ್ಯತ್ಯಯವಾಗುವ ಭೀತಿ

ದೇಶಾದ್ಯಂತ ಟ್ರಕ್‌, ಬಸ್‌ ಚಾಲಕರು ಪ್ರತಿಭಟನೆ: ಪೆಟ್ರೋಲ್‌, ಡೀಸೆಲ್ ಪೂರೈಕೆ ವ್ಯತ್ಯಯವಾಗುವ ಭೀತಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada