• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ದಲಿತರಿಗೆ ಶ್ರೀ ರಾಮ ಮಂದಿರದಲ್ಲಿ ಪೂಜೆಗೆ ಅವಕಾಶ ಇಲ್ವಾ..? ಸುವರ್ಣ ಟಿವಿ ವಿರುದ್ಧ ದೂರು!

Any Mind by Any Mind
January 16, 2024
in ಇತರೆ / Others, ಕರ್ನಾಟಕ
0
ದಲಿತರಿಗೆ ಶ್ರೀ ರಾಮ ಮಂದಿರದಲ್ಲಿ ಪೂಜೆಗೆ ಅವಕಾಶ ಇಲ್ವಾ..? ಸುವರ್ಣ ಟಿವಿ ವಿರುದ್ಧ ದೂರು!
Share on WhatsAppShare on FacebookShare on Telegram

ಏಷಿಯಾ ನೆಟ್‌ ಸುವರ್ಣ ಟಿವಿಯಲ್ಲಿ ಪ್ರಸಾರವಾದ ಕಾರ್ಯಕ್ರಮ ಹಾಗು ಪೇಜಾವರ ಶ್ರೀಗಳು ಮತ್ತು ಕಾರ್ಯಕ್ರಮದ ನಿರೂಪಕ ಅಜಿತ್‌ ಹನುಮಕ್ಕನವರ್‌‌ ವಿರುದ್ಧ ದೂರು ದಾಖಲಾಗಿದೆ. ಡಿಸೆಂಬರ್ 27, 2023 ರಂದು ಪ್ರಸಾರವಾದ ಉಡುಪಿ ಪೇಜಾವರ ಸ್ವಾಮೀಜಿ, ನ್ಯೂಸ್ ಅವರ್ ವಿಶೇಷ ಕಾರ್ಯಕ್ರಮದಲ್ಲಿ ದಲಿತರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಅಯೋಧ್ಯೆಯಲ್ಲಿ ದಲಿತರಿಗೆ ಪೂಜೆ ಮಾಡಲು ಅವಕಾಶವಿದೆಯೇ..? ಎನ್ನುವ ವಿಚಾರವಾಗಿ ಚರ್ಚೆ ನಡೆಸಲಾಗಿದೆ. ಇದು ಅಯೋಧ್ಯೆಯ ರಾಮಮಂದಿರದಲ್ಲಿ ದಲಿತರಿಗೆ ಪೂಜೆ ಮಾಡಲು ಅವಕಾಶವಿದೆಯೇ ಎಂದು ಚರ್ಚೆ ಮಾಡಿರುವು ಸಂವಿಧಾನ ಬಾಹಿರ ಎಂದು ಆರೋಪಿಸಲಾಗಿದೆ.

ADVERTISEMENT

ಉಡುಪಿ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಮತ್ತು ಸುವರ್ಣ ಟಿವಿ ವಾರ್ತಾ ವಾಚಕ ಅಜಿತ್ ಹನುಮಕ್ಕನವರ್ ವಿರುದ್ಧ ತಾರತಮ್ಯ ಮತ್ತು ಧಾರ್ಮಿಕ ಸ್ಥಳಗಳಲ್ಲಿ ಜಾತಿ ಆಧಾರಿತ ಬಹಿಷ್ಕಾರವನ್ನು ಉತ್ತೇಜಿಸಿದ ಆರೋಪದ ಮೇಲೆ ಜನವರಿ 12, 2024ರ ಶುಕ್ರವಾರದಂದು ಬೆಂಗಳೂರಿನಲ್ಲಿ ದಲಿತ ಸಂಘಟನೆ ದೂರು ದಾಖಲಿಸಿದೆ. ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಟ್ರಸ್ಟಿ ಕೂಡ ಆಗಿರುವ ಪೇಜಾವರ ಶ್ರೀಗಳು ಈ ರೀತಿಯ ಹೇಳಿಕೆಯಲ್ಲಿ ಭಾಗಿಯಾಗಿದ್ದಾರೆ ಎಂದು ದೂರಲಾಗಿದೆ.

ದಲಿತ ಸಂಘಟನೆಯ ವಕ್ತಾರ ನಾಗರಾಜ್ ಎಂಬುವರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಅಯೋಧ್ಯೆಯ ರಾಮ ಮಂದಿರದಲ್ಲಿ ದಲಿತರನ್ನು ಪೂಜೆ ಮಾಡಲು ಅವಕಾಶ ಇದ್ಯಾ..? ಎಂದು ಪ್ರಶ್ನೆ ಇಟ್ಟಿದ್ದರು. ಅದಕ್ಕೆ ಪ್ರತಿಕ್ರಿಯಿಸಿರುವ ಪೇಜಾವರ ಶ್ರೀಗಳು, “ದೇವಸ್ಥಾನದಲ್ಲಿ ಒಬ್ಬರೇ ಪೂಜೆ ಮಾಡುತ್ತಾರೆ, ಎಲ್ಲರೂ ಪೂಜೆ ಮಾಡುವುದಿಲ್ಲ. ಕಾಶಿ ದೇವಸ್ಥಾನವನ್ನು ಹೊರತುಪಡಿಸಿ ಬೇರೆ ಎಲ್ಲೂ ಅವಕಾಶವಿಲ್ಲ. ಅದಕ್ಕೆ ನೇಮಕಗೊಂಡವರು ಪೂಜೆಯನ್ನು ಮಾತ್ರ ಮಾಡುತ್ತಾರೆ. ದೇವಸ್ಥಾನ ಮಾತ್ರವಲ್ಲ, ಯಾವುದೇ ಕಚೇರಿ ಅಥವಾ ಸಂಸ್ಥೆಯಲ್ಲೂ ನೇಮಕಗೊಂಡವರು ಮಾತ್ರ ಆ ಹುದ್ದೆಯಲ್ಲಿ ಕುಳಿತುಕೊಳ್ಳಬಹುದು ಎಂದಿದ್ದಾರೆ. ದಲಿತನೂ ಓರ್ವ ಹಿಂದೂ ಅಲ್ಲವೇ..? ಯಾಕೆ ಅವಕಾಶ ಕೊಡಬಾರದು ಎಂದು ಮರು ಪ್ರಶ್ನೆ ಮಾಡಿದ್ದಕ್ಕೆ ದಲಿತ ಸಂಘಟನೆಯಲ್ಲಿ ಬ್ರಾಹ್ಮಣನನ್ನು ಅಧ್ಯಕ್ಷನನ್ನಾಗಿ ಮಾಡುತ್ತೀರಾ..? ಇಲ್ಲಾ ಎಂದಾದರೆ ಇಲ್ಲಿ ಅವಕಾಶ ಕೇಳುವುದು ಸರೀನಾ ಎಂದು ಪೇಜಾವರ ಶ್ರೀಗಳು ಕೇಳಿದ್ದಾರೆ.

ಈ ಚರ್ಚೆ ವೇಳೆ ಮಾತನಾಡಿರುವ ಅಜಿತ್‌ ಹನುಮಕ್ಕನವರ್‌, “ನೀವು ಧಾರ್ಮಿಕ ಸ್ಥಳಗಳಲ್ಲಿ ಜಾತ್ಯತೀತ ಸ್ಥಳಗಳ ನಿಯಮಗಳನ್ನು ಹಾಕಲು ಸಾಧ್ಯವಿಲ್ಲ. ಎರಡನ್ನೂ ಬೆರೆಸಬೇಡಿ. ನೀವು ಶಬರಿಮಲೆ ದೇಗುಲಕ್ಕೆ ಭೇಟಿ ನೀಡಲು ಬಯಸಿದರೆ, ಅಗತ್ಯವಿರುವ ನಿಯಮಗಳಿವೆ ಅವುಗಳನ್ನು ಅನುಸರಿಸಬೇಕು ಎಂದಿದ್ದಾರೆ. ನಿಗದಿತ ನಿಯಮಗಳನ್ನು ಪಾಲಿಸದೆ ಶಬರಿಮಲೆಗೆ ಹೋಗಬೇಕೆಂದು ನೀವು ಹೇಗೆ ಹೇಳುತ್ತೀರಿ..? ಎಂದು ನಾಗರಾಜ್ ಅವರ ಮಾತನ್ನು ನಿಲ್ಲಿಸಲಾಯ್ತು. ಇದೇ ವೇಳೆ ದಲಿತರಿಗೆ ಷರತ್ತಿನ ಮಾರ್ಗವನ್ನು ಸೂಚಿಸಿದ ಕಾಂಗ್ರೆಸ್ ಸಮಿತಿಯ ಸದಸ್ಯರೊಬ್ಬರು, ‘‘ದಲಿತರು ಪೂಜೆ ಮಾಡಬೇಕಾದರೆ ಮಂತ್ರಗಳನ್ನು ಕಲಿತು ‘ಅಖಂಡ ಪಾಂಡಿತ್ಯ’ ಪಡೆದು ಪೂಜೆ ಸಲ್ಲಿಸಲಿ ಎಂದು ಸಲಹೆ ನೀಡಿದ್ದಾರೆ. ನೀವು ಈ ವಿಷಯವನ್ನು ಏಕೆ ತೆಗೆದುಕೊಂಡು ಜಗಳ ಕಾಯುತ್ತಿದ್ದೀರಿ..? ಭೂಮಿ ಪೂಜೆಯ ಸಮಯದಲ್ಲಿ, ದಲಿತ ಕರಸೇವಕ ಕಾಮೇಶ್ವರ ಚೌಪಾಲ್ ಎಂಬುವರು ಉಪಸ್ಥಿತರಿದ್ದರು ಎಂದಿದ್ದಾರೆ.

ಡಾ.ಬಿ.ಆರ್.ಅಂಬೇಡ್ಕರ್ ದಂಡು ಸಲಹೆಗಾರ ಆದರ್ಶ್ ಆರ್.ಅಯ್ಯರ್ ಮಾತನಾಡಿ, ‘ಪ್ರಮುಖ ವ್ಯಕ್ತಿಗಳ ಇಂತಹ ಹೇಳಿಕೆಗಳು ದಲಿತರನ್ನು ಅವಮಾನಿಸುವಂತಿವೆ. ಈ ರೀತಿಯ ಹೇಳಿಕೆಗಳು ಬೇರೆಯವರನ್ನು ಪ್ರೇರೇಪಿಸುತ್ತದೆ ಎಂದಿದ್ದಾರೆ. ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ಕೊಡಲಾಗಿದೆ. ದೂರಿನ ಸ್ವೀಕೃತಿಯನ್ನು ಮಾತ್ರ ನೀಡಲಾಗಿದೆ. ಇದುವರೆಗೂ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ. ಮುಂದಿನ ದಿನಗಳಲ್ಲಿ ಎಫ್‌ಐಆರ್‌ ದಾಖಲು ಮಾಡಿಕೊಂಡು ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹ ಮಾಡಿದ್ದಾರೆ.

Previous Post

ಸಂಕ್ರಾಂತಿ ಹಬ್ಬಕ್ಕೆ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ, ದಿನಕರ್ ತೂಗುದೀಪ ನಿರ್ದೇಶನದ ನೂತನ ಚಿತ್ರದ ಪೋಸ್ಟರ್ ಬಿಡುಗಡೆ

Next Post

ನನ್ನದು ವೈಯಕ್ತಿಕ ಹೇಳಿಕೆ : ಅನಂತ್ ಕುಮಾರ್ ಹೆಗಡೆ

Related Posts

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ
ಕರ್ನಾಟಕ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ...

Read moreDetails
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ನನ್ನದು ವೈಯಕ್ತಿಕ ಹೇಳಿಕೆ : ಅನಂತ್ ಕುಮಾರ್ ಹೆಗಡೆ

ನನ್ನದು ವೈಯಕ್ತಿಕ ಹೇಳಿಕೆ : ಅನಂತ್ ಕುಮಾರ್ ಹೆಗಡೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada