• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ವಿಜಯಪುರದಲ್ಲಿ ₹300 ಕೋಟಿ ವೆಚ್ಚದ ಲುಲು ಆಹಾರ‌ ಸಂಸ್ಕರಣಾ ಘಟಕ ಸ್ಥಾಪನೆ: 22 ಸಾವಿರ ಕೋಟಿ ರೂ. ಹೂಡಿಕೆ ಪ್ರಸ್ತಾವನೆ ಅಂಕಿತ

Any Mind by Any Mind
January 17, 2024
in ದೇಶ, ವಾಣಿಜ್ಯ
0
ವಿಜಯಪುರದಲ್ಲಿ ₹300 ಕೋಟಿ ವೆಚ್ಚದ ಲುಲು ಆಹಾರ‌ ಸಂಸ್ಕರಣಾ ಘಟಕ ಸ್ಥಾಪನೆ: 22 ಸಾವಿರ ಕೋಟಿ ರೂ. ಹೂಡಿಕೆ ಪ್ರಸ್ತಾವನೆ ಅಂಕಿತ
Share on WhatsAppShare on FacebookShare on Telegram

ದಾವೋಸ್: ರಾಜ್ಯದಲ್ಲಿ ಕೈಗಾರಿಕೆ ನಿರ್ಮಾಣ ಹಾಗೂ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಚಿಂತನೆ ನಡೆಸಿರುವ ರಾಜ್ಯ ಸರ್ಕಾರ, ವಿವಿಧ ಕಂಪನಿಗಳೊಂದಿಗೆ 22 ಸಾವಿರ ಕೋಟಿ ರೂ. ಹೂಡಿಕೆ ಪ್ರಸ್ತಾವನೆಗಳಿಗೆ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಿದೆ.

ಸ್ವಿಟ್ಜರ್ಲೆಂಡಿನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಸಮಾವೇಶದಲ್ಲಿ ಪಾಲ್ಗೊಂಡಿರುವ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ನೇತೃತ್ವದ ನಿಯೋಗ, ಸಮಾವೇಶದ ಎರಡನೇ ದಿನದಂದು ಸಾವಿರಾರು ಕೋಟಿ ರೂ.ಗಳ ಉದ್ಯಮ ಆರಂಭಕ್ಕೆ ಒಡಂಬಡಿಕೆ ಮಾಡಿಕೊಂಡಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಸಚಿವರು, `ಈ ಯೋಜನೆಗಳಲ್ಲಿ ವೆಬ್ ವರ್ಕ್ಸ್ ಕಂಪನಿಯು ಬೆಂಗಳೂರಿನಲ್ಲಿ ಸ್ಥಾಪಿಸಲಿರುವ 100 ಮೆಗಾವ್ಯಾಟ್ ಸಾಮರ್ಥ್ಯದ, 20 ಸಾವಿರ ಕೋಟಿ ರೂ. ಬಂಡವಾಳ ಹೂಡಿಕೆಯ ಡೇಟಾ ಸೆಂಟರ್ ಪಾರ್ಕ್ ಯೋಜನೆ ಕೂಡ ಸೇರಿದೆ. ಇದಲ್ಲದೆ ಮೈಕ್ರೋಸಾಫ್ಟ್, ಹಿಟಾಚಿ, ಲುಲು ಗ್ರೂಪ್, ಹ್ಯೂಲೆಟ್ ಪೆಕಾರ್ಡ್ (ಎಚ್.ಪಿ), ಹನಿವೆಲ್, ಐನಾಕ್ಸ್, ವೋಲ್ವೋ, ನೆಸ್ಲೆ, ಕಾಯಿನ್ ಬೇಸ್, ಟಕೇಡಾ ಫಾರ್ಮಾ, ಬಿಎಲ್ ಆಗ್ರೋ ಇತ್ಯಾದಿ ಕಂಪನಿಗಳೊಂದಿಗೆ 2,000 ಕೋಟಿ ರೂ. ಮೌಲ್ಯದ ಹೂಡಿಕೆಗಳಿಗೆ ತಿಳಿವಳಿಕೆ ಪತ್ರಗಳಿಗೆ ಸಹಿ ಹಾಕಲಾಗಿದೆ’ ಎಂದು ತಿಳಿಸಿದ್ದಾರೆ.

ADVERTISEMENT

ರಾಜ್ಯದಲ್ಲಿ ಹೂಡಿಕೆಗೆ ಮುಂದಾಗಿರುವ ಮೈಕ್ರೋಸಾಫ್ಟ್ ಕಂಪನಿಯು ಕೌಶಲ್ಯಾಭಿವೃದ್ಧಿ ಮತ್ತು ಸುಗಮ ಆಡಳಿತ ಉಪಕ್ರಮಗಳ ತರಬೇತಿ ಕೊಡಲಿದೆ. ಹಿಟಾಚಿ ಕಂಪನಿಯು ಕರ್ನಾಟಕದ ಗ್ರಾಮೀಣ ಭಾಗಗಳಲ್ಲಿ ಆರೋಗ್ಯ ಸೇವೆ, ಶಿಕ್ಷಣ ಮತ್ತು ಇ-ಗವರ್ನೆನ್ಸ್ ಕ್ಷೇತ್ರಗಳಲ್ಲಿ ಬಂಡವಾಳ ತೊಡಗಿಸಲಿದೆ. ಇದರಿಂದಾಗಿ ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ. ಲುಲು ಸಮೂಹವು ಹಣ್ಣು ಮತ್ತು ತರಕಾರಿ ಸಂಸ್ಕರಣೆ ಕ್ಷೇತ್ರದಲ್ಲಿ ಹೆಜ್ಜೆ ಗುರುತು ಮೂಡಿಸಲು ಉತ್ಸುಕವಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಈ ಒಡಂಬಡಿಕೆಗಳು ಕಾರ್ಯರೂಪಕ್ಕೆ ಬರುವ ಮೂಲಕ ರಾಜ್ಯವು ತಂತ್ರಜ್ಞಾನ ಮತ್ತು ಆರ್ಥಿಕ ಅಭಿವೃದ್ಧಿಯ ಹೊಸ ಯುಗವನ್ನು ಕಾಣಲಿದೆ. ಜೊತೆಗೆ, ಮಾರುಕಟ್ಟೆಯಲ್ಲಿ ಇರುವ ಅವಕಾಶಗಳನ್ನು ಅತ್ಯಾಧುನಿಕ ಮೂಲಸೌಲಭ್ಯಗಳ ಮೂಲಕ ಗರಿಷ್ಠ ಮಟ್ಟದಲ್ಲಿ ಸದ್ಬಳಕೆ ಮಾಡಿಕೊಳ್ಳಲು ಇದರಿಂದ ಸಾಧ್ಯವಾಗಲಿದೆ. ಈ ಹೂಡಿಕೆಗಳಿಂದ ಉತ್ತರ ಕರ್ನಾಟಕದ ವಿಜಯಪುರ, ಕಲಬುರಗಿ ಸೇರಿದಂತೆ ಹಲವು ಭಾಗಗಳು ಮುಂಚೂಣಿಗೆ ಬರಲಿದ್ದು, ಈ ಯೋಜನೆಗಳಿಗೆ ಸರಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಅವರು ವಿವರಿಸಿದ್ದಾರೆ.

ಮೈಕ್ರೋಸಾಫ್ಟ್ ಕಂಪನಿಯು ಡಿಜಿಟಲ್ ಉತ್ಪಾದಕತೆ, ಉದ್ಯಮಶೀಲತೆ ಮತ್ತು ಸಂವಹನಕ್ಕೆ ಸಂಬಂಧಿಸಿದಂತೆ ತನ್ನ `ಮೈಕ್ರೋಸಾಫ್ಟ್ ರೈಸ್’ ಡಿಜಿಟಲ್ ಸ್ಕಿಲ್ಲಿಂಗ್ ಸೌಲಭ್ಯದ ಮೂಲಕ 70 ಗಂಟೆಗಳ ವರ್ಚುಯಲ್ ತರಬೇತಿ ಕೊಡಲಿದೆ. ಜೊತೆಗೆ ಅಭ್ಯರ್ಥಿಗಳಿಗೆ ಮೈಕ್ರೋಸಾಫ್ಟ್ ಟ್ರೈನಿಂಗ್ ಪ್ಲಾಟ್ ಫಾರಂ ಮೂಲಕ 150 ಗಂಟೆಗಳ ಹೆಚ್ಚುವರಿ ಕೌಶಲ್ಯಾಭಿವೃದ್ಧಿ ಪಠ್ಯ ಸಾಮಗ್ರಿ ಸಿಗಲಿದೆ. ಇದರಿಂದ ರಾಜ್ಯದ ಯುವಜನರಿಗೆ ಕ್ಲೌಡ್, ಎಐ, ಸೈಬರ್ ಸೆಕ್ಯುರಿಟಿ ಕ್ಷೇತ್ರಗಳಲ್ಲಿ ಅವಕಾಶಗಳು ಸಿಗಲಿವೆ ಎಂದು ಸಚಿವರು ಹೇಳಿದ್ದಾರೆ.

ಹನಿವೆಲ್ ಕಂಪನಿಯು ಐಒಟಿ (ಇಂಟರ್ನೆಟ್ ಆಫ್ ಥಿಂಗ್ಸ್) ಮೂಲಕ ಸಂಚಾರ ನಿರ್ವಹಣೆ, ತ್ಯಾಜ್ಯ ನಿರ್ವಹಣೆ ಮುಂತಾದುವುಗಳನ್ನು ನಿಭಾಯಿಸಲಿದೆ. ಲುಲು ಸಮೂಹವು 300 ಕೋಟಿ ರೂ. ಹೂಡಿಕೆಯೊಂದಿಗೆ ವಿಜಯಪುರ ಜಿಲ್ಲೆಯಲ್ಲಿ ಆಹಾರ ಸಂಸ್ಕರಣೆಯಲ್ಲಿ ತೊಡಗಿಕೊಳ್ಳಲು ಉತ್ಸುಕವಾಗಿದೆ. ಹಾಗೆಯೇ ಟಕೇಡಾ ಫಾರ್ಮಾ, ಬೆಂಗಳೂರಿನಲ್ಲಿ ತನ್ನ ಗ್ಲೋಬಲ್ ಕೆಪಾಸಿಟಿ ಸೆಂಟರ್ ತೆರೆಯಲು ಮುಂದೆ ಬಂದಿದೆ ಎಂದು ಪಾಟೀಲ ತಿಳಿಸಿದ್ದಾರೆ. ಈ ಶೃಂಗಸಭೆಯಲ್ಲಿ ತಾವು ವೆಬ್ ವರ್ಕ್ಸ್ ಸಂಸ್ಥಾಪಕ ನಿಖಿಲ್ ರತಿ, ಐನಾಕ್ಸ್ ಕಂಪನಿಯ ಸಿದ್ಧಾರ್ಥ ಜೈನ್, ಹನಿವೆಲ್ ಕಂಪನಿಯ ಮುಖ್ಯಸ್ಥ ಅನಂತ್ ಮಹೇಶ್ವರಿ, ಲುಲು ಗ್ರೂಪ್ ವ್ಯವಸ್ಥಾಪಕ ನಿರ್ದೇಶಕ ಯೂಸುಫ್ ಅಲಿ ಮುಂತಾದವರೊಂದಿಗೆ ವಿಸ್ತೃತ ಮಾತುಕತೆ ನಡೆಸಿರುವುದಾಗಿ ಪ್ರಕಟಣೆಯಲ್ಲಿ ಹೇಳಿದ್ದಾರೆ.

ದಾವೋಸ್ ಗೆ ತೆರಳಿರುವ ನಿಯೋಗದಲ್ಲಿ ಹಣಕಾಸು ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್,ಕೆ.ಅತೀಕ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಐಟಿಬಿಟಿ ಕಾರ್ಯದರ್ಶಿ ಏಕ್ ರೂಪ್ ಕೌರ್, ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ್ ಇದ್ದರು.

Previous Post

ಸಿದ್ದರಾಮಯ್ಯ ಟೀಕಿಸುವ ನೈತಿಕತೆ ಅನಂತ್ ಕುಮಾರ್ ಗೆ ಇಲ್ಲ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Next Post

ಆರ್‌.ಆರ್.ನಗರದಲ್ಲಿ ಶಾಸಕರ ಸಮ್ಮುಖದಲ್ಲೇ ಬೆಂಬಲಿಗರಿಂದ ಸಾರಾಯಿ ಹಂಚಿಕೆ?

Related Posts

Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
0

ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಂತಿಮ ಅಧಿಸೂಚನೆಯಾಗಿದ್ದು, ಈ ಬಗ್ಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸಿ ರೈತರ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು...

Read moreDetails

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025
Next Post
ಆರ್‌.ಆರ್.ನಗರದಲ್ಲಿ ಶಾಸಕರ ಸಮ್ಮುಖದಲ್ಲೇ ಬೆಂಬಲಿಗರಿಂದ ಸಾರಾಯಿ ಹಂಚಿಕೆ?

ಆರ್‌.ಆರ್.ನಗರದಲ್ಲಿ ಶಾಸಕರ ಸಮ್ಮುಖದಲ್ಲೇ ಬೆಂಬಲಿಗರಿಂದ ಸಾರಾಯಿ ಹಂಚಿಕೆ?

Please login to join discussion

Recent News

Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 
Top Story

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

by Chetan
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada